Homeಮುಖಪುಟಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎನ್ನುವುದು ಸುಳ್ಳು: ಇಲ್ಲಿವೆ ನೋಡಿ ಬ್ರಾಹ್ಮಣರಿಗಿರುವ ಸರ್ಕಾರದ 15 ಯೋಜನೆಗಳು

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎನ್ನುವುದು ಸುಳ್ಳು: ಇಲ್ಲಿವೆ ನೋಡಿ ಬ್ರಾಹ್ಮಣರಿಗಿರುವ ಸರ್ಕಾರದ 15 ಯೋಜನೆಗಳು

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

- Advertisement -
- Advertisement -

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಎಲ್ಲವೂ ದಲಿತರಿಗೇ ಕೊಟ್ರು. ಮೀಸಲಾತಿಯಲ್ಲಿ ಶಿಕ್ಷಣ, ಕೆಲಸ, ಊಟ ಎಲ್ಲವೂ ದಲಿತರಿಗೇ. ಹಾಗಾದರೆ ಉಳಿದ ಹಿಂದುಗಳೂ ಏನು ಮಾಡಬೇಕು” ಎಂದು ಹಿಂದುಳಿದ ವರ್ಗದ ಹಿಂದೂಗಳನ್ನು ಎತ್ತಿಕಟ್ಟಿದ್ದೇ ಬ್ರಾಹ್ಮಣರು. ಹೀಗೆ ಹೇಳುತ್ತಲೇ ಎಲ್ಲಾ ಸರಕಾರಿ ಯೋಜನೆಗಳನ್ನು ತನ್ನದಾಗಿಸಿಕೊಂಡವರು ಬ್ರಾಹ್ಮಣರು. ಬ್ರಾಹ್ಮಣರಿಗೆ ಕರ್ನಾಟಕ ರಾಜ್ಯ ಸರ್ಕಾರವೊಂದೇ ನೀಡುವ ಯೋಜನೆಗಳೇನು ಎಂಬುದನ್ನು ನೋಡಿದರೆ ತಲೆ ತಿರುಗುತ್ತದೆ.

1. ಸುಭದ್ರ ಯೋಜನೆ
ಬ್ರಾಹ್ಮಣ ಸಮುದಾಯದ ಅನಾಥ/ನಿರಾಶ್ರಿತ ಅಂಗವಿಕಲ, ವಿಧವೆ ಮಹಿಳೆಯರು , ಹಿರಿಯ ನಾಗರೀಕರಿಗೆ ಮಾಸಿಕ ಪಿಂಚಣಿ.

2. ಸೌಖ್ಯ ಯೋಜನೆ
ನಿರಾಶ್ರಿತರಾದ ಬ್ರಾಹ್ಮಣ ವಿಧವೆ ಹಾಗೂ ಹಿರಿಯ ನಾಗರೀಕರಿಗೆ ಆಶ್ರಯ ಕಲ್ಪಿಸಲು ವೃದ್ಧಾಶ್ರಮಗಳ ಸ್ಥಾಪನೆ/ವೃದ್ಧಾಶ್ರಮ ವೆಚ್ಚ ಮರುಪಾವತಿ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವುದು.
ಅರ್ಹ ಬ್ರಾಹ್ಮಣರಿಗೆ ಉಚಿತ ವೈದ್ಯಕೀಯ ತಪಾಸಣೆ ಆಯೋಜಿಸುವುದು. ಅರ್ಹ ಬ್ರಾಹ್ಮಣರಿಗೆ ಉಚಿತ ಕಾನೂನು ಸಲಹೆ ಮತ್ತು ಮಾರ್ಗದರ್ಶನ ಪಡೆಯುವ ಸೇವೆಗಳನ್ನು ಆಯೋಜಿಸುವುದು.

3. ಕಲ್ಯಾಣ ಯೋಜನೆ:
ಬ್ರಾಹ್ಮಣರಿಗಾಗಿ ಸಾಮೂಹಿಕ ವಿವಾಹ/ಉಪನಯನಗಳನ್ನುಆಯೋಜಿಸುವುದು.
ಬಿಪಿಎಲ್ ಬ್ರಾಹ್ಮಣ ಕುಟುಂಬದ ಕೃಷಿಕರನ್ನು/ ಅಡಿಗೆಯವರನ್ನು/ ಪುರೋಹಿತರನ್ನು ಮದುವೆಯಾಗುವ ವಧುವಿನ ಹೆಸರಲ್ಲಿ ಮೂರು ಲಕ್ಷ ರೂಪಾಯಿ ಮೊತ್ತದ ವಿತ್ತಬಾಂಡ್ ವಿತರಿಸುವುದು.

4. ಚೈತನ್ಯ ಉತ್ಸವ ಯೋಜನೆ:
ಬ್ರಾಹ್ಮಣ ಸಮುದಾಯದ ಯುವ ಪೀಳಿಗೆಯ ಯುವ ಸಂಘಟನೆ ಹಾಗೂ ಅಭಿವೃದ್ಧಿಗಾಗಿ ಉತ್ಸವಗಳನ್ನು ಆಯೋಜಿಸುವುದು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬ್ರಾಹ್ಮಣ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ ಪಾವತಿ.

5. ಕಿರುಸಾಲ ಯೋಜನೆ:
ಸಣ್ಣ ಪುಟ್ಟ ಗೃಹ ಉದ್ಯಮ ಮಾಡುತ್ತಿರುವ ಬ್ರಾಹ್ಮಣ ಸಮುದಾಯಕ್ಕೆ ನೆರವು ನೀಡುವ ಉದ್ದೇಶದಿಂದ ಕಿರು ಸಾಲ ಯೋಜನೆಯನ್ನು ಮಂಡಳಿ ಜಾರಿಗೆ ತಂದಿದೆ. 50 ಸಾವಿರ ರೂ. ಸಾಲ ನೀಡಲಿದ್ದು, ಈ ಸಾಲಕ್ಕೆ ಮಂಡಳಿಯ ವತಿಯಿಂದ 10 ಸಾವಿರ ಸಹಾಯಧನ ನೀಡಲಾಗುವುದು.

6. ಸಾಂದೀಪನಿ ಶಿಷ್ಯವೇತನ ಯೋಜನೆ:
ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಕೋರ್ಸ್ ಗಳನ್ನು ಕಲಿಯುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ಪಾವತಿ ಮಾಡುವುದು.
ಭಾರತದಲ್ಲಿ ಹಾಗೂ ಹೊರ ದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅತೀ ಕಡಿಮೆ / ಶೂನ್ಯ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ಒದಗಿಸಲು ಬ್ಯಾಂಕ್‌ಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು. ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚ(Day Scholar/ hosteller Maintenance) ಹಾಗೂ ಶುಲ್ಕ ಮರುಪಾವತಿ(Fee Reimbursement) ಒದಗಿಸುವುದು.

7. ಆಚಾರ್ಯತ್ರಯ ವೇದ ಶಿಷ್ಯವೇತನ ಯೋಜನೆ :
ಬ್ರಾಹ್ಮಣ ಸಮುದಾಯದ ವೇದ ವಿದ್ಯಾರ್ಥಿಗಳಿಗೆ/ಆಗಮ ವಿದ್ಯಾರ್ಥಿಗಳಿಗೆ /ಆಗಮಿಕರಿಗೆ ಮತ್ತು ಸಂಸ್ಕೃತ ವಿದ್ಯಾರ್ಥಿಗಳಿಗೆ/ವಿದ್ವಾಂಸರಿಗೆ ಶಿಷ್ಯ ವೇತನ ನೀಡುವುದು.

8. ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಯೋಜನೆ :
ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳ ಬ್ರಾಹ್ಮಣ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುವುದು.

9. ಚಾಣಕ್ಯ ಆಡಳಿತ ತರಬೇತಿ ಯೋಜನೆ :
ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್, ಐ.ಆರ್.ಎಸ್, ಕೆ.ಎ.ಎಸ್, ಇತ್ಯಾದಿ ಪರೀಕ್ಷೆಗಳ ಪ್ರಾಥಮಿಕ ಹಂತದ ಪರೀಕ್ಷೆ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುವುದು.

10. ಸನ್ನಿಧಿ ಯೋಜನೆ :
ಅರ್ಹ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ & ಉಚಿತ ಹಾಸ್ಟಲ್ ನಿರ್ಮಾಣ/ ಹಾಸ್ಟೆಲ್‌ ಸೌಲಭ್ಯ ಕಲ್ಪಿಸುವುದು / ಹಾಸ್ಟಲ್ ಶುಲ್ಕವನ್ನು ಮರು ಪಾವತಿಸುವುದು.
ಬ್ರಾಹ್ಮಣ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟಲ್ ಗಳ ನಿರ್ಮಾಣ.

11. ಸರ್ ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಯೋಜನೆ:
ಬ್ರಾಹ್ಮಣರಿಗೆ ಉದ್ಯೋಗ/ಸ್ವಯಂ ಉದ್ಯೋಗ/ಕೌಶಲ್ಯಾಭಿವೃದ್ಧಿಗಾಗಿ ಉದ್ಯೋಗಮೇಳಗಳನ್ನು ಆಯೋಜಿಸುವುದು, ತರಬೇತಿ ಕೇಂದ್ರಗಳನ್ನು ತೆರೆಯುವುದು. ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಚಾರ್ಟೆಡ್ ಅಕೌಂಟೇನ್ಸಿ, ಕಂಪನಿ ಸೆಕ್ರೇಟರಿ ಇನ್ನಿತರ ವೃತ್ತಿಪರ ಪರೀಕ್ಷೆಗಳಿಗೆ ಉಚಿತ ಶಿಕ್ಷಣ / ತರಬೇತಿ.
ಸಿ.ಇ.ಟಿ, ಜೆ.ಇ.ಇ, ನೀಟ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ತರಬೇತಿ ನಡೆಸುವುದು.

12. ಬ್ರಾಹ್ಮಣ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿಕೆಗಾಗಿ/ಗುಡಿ ಕೈಗಾರಿಕೆಗಾಗಿ ತರಬೇತಿ, ಸಹಾಯಧನ ಪಾವತಿ ಹಾಗೂ ಮಾರುಕಟ್ಟೆ ನಿರ್ಮಾಣ.

13. ಬ್ರಾಹ್ಮಣ ಸ್ವಸಹಾಯ ಸಂಘಗಳ ಸ್ಥಾಪನೆ ಹಣಕಾಸಿನ ನೆರವು

14. ಪುರುಷೋತ್ತಮ ಯೋಜನೆ:
ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಹಾಗೂ ಸಹಾಯ. ಸ್ವಯಂ ಉದ್ಯೋಗ / ನವೋದ್ಯಮ (Start-ups) ಪ್ರಾರಂಭಿಸಲು ಇಚ್ಛಿಸುವ ಅರ್ಹ ಬ್ರಾಹ್ಮಣ ಉದ್ಯಮಿಗಳಿಗೆ ಆರಂಭಿಕ ಸಹಾಯ ಧನ ನೀಡುವುದು.
ಬ್ರಾಹ್ಮಣರಿಗಾಗಿ ಸಂಶೋಧನೆ ಮತ್ತು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು.
ಬ್ರಾಹ್ಮಣರಿಗಾಗಿ ಔದ್ಯಮಿಕ ಪೂರ್ವಪಾಲನಾ ಕೇಂದ್ರ (Business Incubation Centres)

15. ಅನ್ನದಾತ ಯೋಜನೆ:
ಕೃಷಿ ಆಧಾರಿತ ಉದ್ಯಮಗಳನ್ನು ಸ್ಥಾಪಿಸಲು ಕಡಿಮೆ ಬಡ್ಡಿ ದರಗಳಲ್ಲಿ ಅರ್ಹ ಬ್ರಾಹ್ಮಣ ರೈತರಿಗೆ ಸಾಲ ಒದಗಿಸುವುದು. ವ್ಯವಸಾಯಕ್ಕಾಗಿ ತೆರೆದ ಬಾವಿ ಅಥವಾ ಬೋರ್ ವೆಲ್ ಗಳನ್ನು ಕೊರೆಯಲು ಅರ್ಹ ಬ್ರಾಹ್ಮಣ ರೈತರಿಗೆ ಸಹಾಯ ಧನ ಒದಗಿಸುವುದು. ಹೈನುಗಾರಿಕೆ ಹಾಗೂ ಕೃಷಿಆಧಾರಿತ ಚಟುವಟಿಕೆಗಳಿಗೆ ಬ್ರಾಹ್ಮಣ ರೈತರಿಗೆ ಸಹಾಯಧನ ಮತ್ತು ತರಬೇತಿ.

ಇದ್ಯಾವುದೂ ಹಿಂದೂಗಳಿಗಾಗಿನ ಯೋಜನೆಯಲ್ಲ. ಕೇವಲ ಬ್ರಾಹ್ಮಣರಿಗಾಗಿನ ಯೋಜನೆಗಳು. ಎಲ್ಲವನ್ನೂ ದಲಿತರಿಗೇ ಮೀಸಲಿರಿಸಿದರು ಎಂದು ಬಹುಸಂಖ್ಯಾತ ಹಿಂದೂಗಳನ್ನು ಎತ್ತಿಕಟ್ಟಿ ರಾಜಕೀಯವಾಗಿ ಪ್ರಭಾವಿಗಳಾದ ಬ್ರಾಹ್ಮಣ ಸಮುದಾಯ ಪಡೆಯುತ್ತಿರುವ ಯೋಜನೆಗಳಿವು. ಖಂಡಿತವಾಗಿಯೂ ಬ್ರಾಹ್ಮಣರು ಈ ಯೋಜನೆಗಳ ಸದುಪಯೋಗ ಪಡೆಯಲಿ. ಆದರೆ ಶತಶತಮಾನಗಳಿಂದ ಹಿಂದುಳಿದ ಸಮುದಾಯಗಳು ಇದೇ ಯೋಜ‌ನೆಯನ್ನು ಪಡೆದಾಗ ಬ್ರಾಹ್ಮಣರ ಪ್ರತ್ಯಕ್ಷ ಮತ್ತು ಪರೋಕ್ಷ ಪ್ರತಿಕ್ರಿಯೆಗಳು ಎಷ್ಟು ಅಪಾಯಕಾರಿಯಾಗಿದ್ದವು ಎಂಬುದನ್ನು ಬ್ರಾಹ್ಮಣರ ಮಾತನ್ನೇ ವೇದವಾಕ್ಯ ಎಂದುಕೊಂಡ ಹಿಂದುಳಿದ ವರ್ಗಗಳು ತಿಳಿದುಕೊಳ್ಳಲಿ.

ವಿಪರ್ಯಾಸ ಎಂದರೆ, ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಿಂದಿನ ಸಿದ್ದರಾಮಯ್ಯ ಸರಕಾರ ಜಾತಿ ಜನಗಣತಿ ಮಾಡಲು ಮುಂದಾದಾಗ ಕಾಂಗ್ರೆಸ್ ಮತ್ತು ಬಿಜೆಪಿಯ ಬ್ರಾಹ್ಮಣರು ವಿರೋಧ ವ್ಯಕ್ತಪಡಿಸಿದ್ದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಮತ್ತು ದಲಿತರು ಸರಕಾರಿ ಯೋಜನೆಯನ್ನು ಪಡೆದುಕೊಳ್ಳಬಹುದು ಎಂಬ ಭಯದಿಂದ ಜಾತಿಜನಗಣತಿಯನ್ನು ವಿರೋಧಿಸಿದ್ದರು. ಬ್ರಾಹ್ಮಣರ ಮಾತುಗಳಿಗೆ ಬಲಿಯಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಹಿಂದೂ ಮುಖಂಡರೂ ಜಾತಿ ಜನಗಣತಿಯನ್ನು ವಿರೋಧಿಸಿದ್ದರು. ಇದೀಗ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ವತಿಯಿಂದ ಬ್ರಾಹ್ಮಣ ಸಮುದಾಯದ ಬಗ್ಗೆ ರಾಜ್ಯಾದ್ಯಂತ ಗಣತಿಗೆ ನಿರ್ಧರಿಸಲಾಗಿದೆ.

ಜಾತಿ ಆಧರಿತ ಮೀಸಲಾತಿಯನ್ನು ವಿರೋಧಿಸುವ ಹಿಂದೂ ಸಂಘಟನೆಗಳು ಮತ್ತು ಅದರಲ್ಲಿ ಹಿಂದುಳಿದ ವರ್ಗಗಳ ನಾಯಕರು, ಕಾರ್ಯಕರ್ತರು ಈಗ ಏನನ್ನುತ್ತಾರೆ ? ಇನ್ನಾದರೂ ಈ ಪಿತೂರಿಗಳ ಬಗ್ಗೆ ಅರಿತುಕೊಳ್ಳುವುದು ಒಳ್ಳೆಯದು.

ಕೃಪೆ: ನವೀನ್ ಸೂರಿಂಜೆಯವರ ಫೇಸ್‌ಬುಕ್ ನಿಂದ.
(ಯೋಜನೆಗಳ ಮಾಹಿತಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ)


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...