Homeಮುಖಪುಟಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎನ್ನುವುದು ಸುಳ್ಳು: ಇಲ್ಲಿವೆ ನೋಡಿ ಬ್ರಾಹ್ಮಣರಿಗಿರುವ ಸರ್ಕಾರದ 15 ಯೋಜನೆಗಳು

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎನ್ನುವುದು ಸುಳ್ಳು: ಇಲ್ಲಿವೆ ನೋಡಿ ಬ್ರಾಹ್ಮಣರಿಗಿರುವ ಸರ್ಕಾರದ 15 ಯೋಜನೆಗಳು

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

- Advertisement -
- Advertisement -

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಎಲ್ಲವೂ ದಲಿತರಿಗೇ ಕೊಟ್ರು. ಮೀಸಲಾತಿಯಲ್ಲಿ ಶಿಕ್ಷಣ, ಕೆಲಸ, ಊಟ ಎಲ್ಲವೂ ದಲಿತರಿಗೇ. ಹಾಗಾದರೆ ಉಳಿದ ಹಿಂದುಗಳೂ ಏನು ಮಾಡಬೇಕು” ಎಂದು ಹಿಂದುಳಿದ ವರ್ಗದ ಹಿಂದೂಗಳನ್ನು ಎತ್ತಿಕಟ್ಟಿದ್ದೇ ಬ್ರಾಹ್ಮಣರು. ಹೀಗೆ ಹೇಳುತ್ತಲೇ ಎಲ್ಲಾ ಸರಕಾರಿ ಯೋಜನೆಗಳನ್ನು ತನ್ನದಾಗಿಸಿಕೊಂಡವರು ಬ್ರಾಹ್ಮಣರು. ಬ್ರಾಹ್ಮಣರಿಗೆ ಕರ್ನಾಟಕ ರಾಜ್ಯ ಸರ್ಕಾರವೊಂದೇ ನೀಡುವ ಯೋಜನೆಗಳೇನು ಎಂಬುದನ್ನು ನೋಡಿದರೆ ತಲೆ ತಿರುಗುತ್ತದೆ.

1. ಸುಭದ್ರ ಯೋಜನೆ
ಬ್ರಾಹ್ಮಣ ಸಮುದಾಯದ ಅನಾಥ/ನಿರಾಶ್ರಿತ ಅಂಗವಿಕಲ, ವಿಧವೆ ಮಹಿಳೆಯರು , ಹಿರಿಯ ನಾಗರೀಕರಿಗೆ ಮಾಸಿಕ ಪಿಂಚಣಿ.

2. ಸೌಖ್ಯ ಯೋಜನೆ
ನಿರಾಶ್ರಿತರಾದ ಬ್ರಾಹ್ಮಣ ವಿಧವೆ ಹಾಗೂ ಹಿರಿಯ ನಾಗರೀಕರಿಗೆ ಆಶ್ರಯ ಕಲ್ಪಿಸಲು ವೃದ್ಧಾಶ್ರಮಗಳ ಸ್ಥಾಪನೆ/ವೃದ್ಧಾಶ್ರಮ ವೆಚ್ಚ ಮರುಪಾವತಿ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವುದು.
ಅರ್ಹ ಬ್ರಾಹ್ಮಣರಿಗೆ ಉಚಿತ ವೈದ್ಯಕೀಯ ತಪಾಸಣೆ ಆಯೋಜಿಸುವುದು. ಅರ್ಹ ಬ್ರಾಹ್ಮಣರಿಗೆ ಉಚಿತ ಕಾನೂನು ಸಲಹೆ ಮತ್ತು ಮಾರ್ಗದರ್ಶನ ಪಡೆಯುವ ಸೇವೆಗಳನ್ನು ಆಯೋಜಿಸುವುದು.

3. ಕಲ್ಯಾಣ ಯೋಜನೆ:
ಬ್ರಾಹ್ಮಣರಿಗಾಗಿ ಸಾಮೂಹಿಕ ವಿವಾಹ/ಉಪನಯನಗಳನ್ನುಆಯೋಜಿಸುವುದು.
ಬಿಪಿಎಲ್ ಬ್ರಾಹ್ಮಣ ಕುಟುಂಬದ ಕೃಷಿಕರನ್ನು/ ಅಡಿಗೆಯವರನ್ನು/ ಪುರೋಹಿತರನ್ನು ಮದುವೆಯಾಗುವ ವಧುವಿನ ಹೆಸರಲ್ಲಿ ಮೂರು ಲಕ್ಷ ರೂಪಾಯಿ ಮೊತ್ತದ ವಿತ್ತಬಾಂಡ್ ವಿತರಿಸುವುದು.

4. ಚೈತನ್ಯ ಉತ್ಸವ ಯೋಜನೆ:
ಬ್ರಾಹ್ಮಣ ಸಮುದಾಯದ ಯುವ ಪೀಳಿಗೆಯ ಯುವ ಸಂಘಟನೆ ಹಾಗೂ ಅಭಿವೃದ್ಧಿಗಾಗಿ ಉತ್ಸವಗಳನ್ನು ಆಯೋಜಿಸುವುದು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬ್ರಾಹ್ಮಣ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ ಪಾವತಿ.

5. ಕಿರುಸಾಲ ಯೋಜನೆ:
ಸಣ್ಣ ಪುಟ್ಟ ಗೃಹ ಉದ್ಯಮ ಮಾಡುತ್ತಿರುವ ಬ್ರಾಹ್ಮಣ ಸಮುದಾಯಕ್ಕೆ ನೆರವು ನೀಡುವ ಉದ್ದೇಶದಿಂದ ಕಿರು ಸಾಲ ಯೋಜನೆಯನ್ನು ಮಂಡಳಿ ಜಾರಿಗೆ ತಂದಿದೆ. 50 ಸಾವಿರ ರೂ. ಸಾಲ ನೀಡಲಿದ್ದು, ಈ ಸಾಲಕ್ಕೆ ಮಂಡಳಿಯ ವತಿಯಿಂದ 10 ಸಾವಿರ ಸಹಾಯಧನ ನೀಡಲಾಗುವುದು.

6. ಸಾಂದೀಪನಿ ಶಿಷ್ಯವೇತನ ಯೋಜನೆ:
ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಕೋರ್ಸ್ ಗಳನ್ನು ಕಲಿಯುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ಪಾವತಿ ಮಾಡುವುದು.
ಭಾರತದಲ್ಲಿ ಹಾಗೂ ಹೊರ ದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅತೀ ಕಡಿಮೆ / ಶೂನ್ಯ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ಒದಗಿಸಲು ಬ್ಯಾಂಕ್‌ಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು. ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚ(Day Scholar/ hosteller Maintenance) ಹಾಗೂ ಶುಲ್ಕ ಮರುಪಾವತಿ(Fee Reimbursement) ಒದಗಿಸುವುದು.

7. ಆಚಾರ್ಯತ್ರಯ ವೇದ ಶಿಷ್ಯವೇತನ ಯೋಜನೆ :
ಬ್ರಾಹ್ಮಣ ಸಮುದಾಯದ ವೇದ ವಿದ್ಯಾರ್ಥಿಗಳಿಗೆ/ಆಗಮ ವಿದ್ಯಾರ್ಥಿಗಳಿಗೆ /ಆಗಮಿಕರಿಗೆ ಮತ್ತು ಸಂಸ್ಕೃತ ವಿದ್ಯಾರ್ಥಿಗಳಿಗೆ/ವಿದ್ವಾಂಸರಿಗೆ ಶಿಷ್ಯ ವೇತನ ನೀಡುವುದು.

8. ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಯೋಜನೆ :
ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳ ಬ್ರಾಹ್ಮಣ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುವುದು.

9. ಚಾಣಕ್ಯ ಆಡಳಿತ ತರಬೇತಿ ಯೋಜನೆ :
ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್, ಐ.ಆರ್.ಎಸ್, ಕೆ.ಎ.ಎಸ್, ಇತ್ಯಾದಿ ಪರೀಕ್ಷೆಗಳ ಪ್ರಾಥಮಿಕ ಹಂತದ ಪರೀಕ್ಷೆ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುವುದು.

10. ಸನ್ನಿಧಿ ಯೋಜನೆ :
ಅರ್ಹ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ & ಉಚಿತ ಹಾಸ್ಟಲ್ ನಿರ್ಮಾಣ/ ಹಾಸ್ಟೆಲ್‌ ಸೌಲಭ್ಯ ಕಲ್ಪಿಸುವುದು / ಹಾಸ್ಟಲ್ ಶುಲ್ಕವನ್ನು ಮರು ಪಾವತಿಸುವುದು.
ಬ್ರಾಹ್ಮಣ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟಲ್ ಗಳ ನಿರ್ಮಾಣ.

11. ಸರ್ ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಯೋಜನೆ:
ಬ್ರಾಹ್ಮಣರಿಗೆ ಉದ್ಯೋಗ/ಸ್ವಯಂ ಉದ್ಯೋಗ/ಕೌಶಲ್ಯಾಭಿವೃದ್ಧಿಗಾಗಿ ಉದ್ಯೋಗಮೇಳಗಳನ್ನು ಆಯೋಜಿಸುವುದು, ತರಬೇತಿ ಕೇಂದ್ರಗಳನ್ನು ತೆರೆಯುವುದು. ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಚಾರ್ಟೆಡ್ ಅಕೌಂಟೇನ್ಸಿ, ಕಂಪನಿ ಸೆಕ್ರೇಟರಿ ಇನ್ನಿತರ ವೃತ್ತಿಪರ ಪರೀಕ್ಷೆಗಳಿಗೆ ಉಚಿತ ಶಿಕ್ಷಣ / ತರಬೇತಿ.
ಸಿ.ಇ.ಟಿ, ಜೆ.ಇ.ಇ, ನೀಟ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ತರಬೇತಿ ನಡೆಸುವುದು.

12. ಬ್ರಾಹ್ಮಣ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿಕೆಗಾಗಿ/ಗುಡಿ ಕೈಗಾರಿಕೆಗಾಗಿ ತರಬೇತಿ, ಸಹಾಯಧನ ಪಾವತಿ ಹಾಗೂ ಮಾರುಕಟ್ಟೆ ನಿರ್ಮಾಣ.

13. ಬ್ರಾಹ್ಮಣ ಸ್ವಸಹಾಯ ಸಂಘಗಳ ಸ್ಥಾಪನೆ ಹಣಕಾಸಿನ ನೆರವು

14. ಪುರುಷೋತ್ತಮ ಯೋಜನೆ:
ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಹಾಗೂ ಸಹಾಯ. ಸ್ವಯಂ ಉದ್ಯೋಗ / ನವೋದ್ಯಮ (Start-ups) ಪ್ರಾರಂಭಿಸಲು ಇಚ್ಛಿಸುವ ಅರ್ಹ ಬ್ರಾಹ್ಮಣ ಉದ್ಯಮಿಗಳಿಗೆ ಆರಂಭಿಕ ಸಹಾಯ ಧನ ನೀಡುವುದು.
ಬ್ರಾಹ್ಮಣರಿಗಾಗಿ ಸಂಶೋಧನೆ ಮತ್ತು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು.
ಬ್ರಾಹ್ಮಣರಿಗಾಗಿ ಔದ್ಯಮಿಕ ಪೂರ್ವಪಾಲನಾ ಕೇಂದ್ರ (Business Incubation Centres)

15. ಅನ್ನದಾತ ಯೋಜನೆ:
ಕೃಷಿ ಆಧಾರಿತ ಉದ್ಯಮಗಳನ್ನು ಸ್ಥಾಪಿಸಲು ಕಡಿಮೆ ಬಡ್ಡಿ ದರಗಳಲ್ಲಿ ಅರ್ಹ ಬ್ರಾಹ್ಮಣ ರೈತರಿಗೆ ಸಾಲ ಒದಗಿಸುವುದು. ವ್ಯವಸಾಯಕ್ಕಾಗಿ ತೆರೆದ ಬಾವಿ ಅಥವಾ ಬೋರ್ ವೆಲ್ ಗಳನ್ನು ಕೊರೆಯಲು ಅರ್ಹ ಬ್ರಾಹ್ಮಣ ರೈತರಿಗೆ ಸಹಾಯ ಧನ ಒದಗಿಸುವುದು. ಹೈನುಗಾರಿಕೆ ಹಾಗೂ ಕೃಷಿಆಧಾರಿತ ಚಟುವಟಿಕೆಗಳಿಗೆ ಬ್ರಾಹ್ಮಣ ರೈತರಿಗೆ ಸಹಾಯಧನ ಮತ್ತು ತರಬೇತಿ.

ಇದ್ಯಾವುದೂ ಹಿಂದೂಗಳಿಗಾಗಿನ ಯೋಜನೆಯಲ್ಲ. ಕೇವಲ ಬ್ರಾಹ್ಮಣರಿಗಾಗಿನ ಯೋಜನೆಗಳು. ಎಲ್ಲವನ್ನೂ ದಲಿತರಿಗೇ ಮೀಸಲಿರಿಸಿದರು ಎಂದು ಬಹುಸಂಖ್ಯಾತ ಹಿಂದೂಗಳನ್ನು ಎತ್ತಿಕಟ್ಟಿ ರಾಜಕೀಯವಾಗಿ ಪ್ರಭಾವಿಗಳಾದ ಬ್ರಾಹ್ಮಣ ಸಮುದಾಯ ಪಡೆಯುತ್ತಿರುವ ಯೋಜನೆಗಳಿವು. ಖಂಡಿತವಾಗಿಯೂ ಬ್ರಾಹ್ಮಣರು ಈ ಯೋಜನೆಗಳ ಸದುಪಯೋಗ ಪಡೆಯಲಿ. ಆದರೆ ಶತಶತಮಾನಗಳಿಂದ ಹಿಂದುಳಿದ ಸಮುದಾಯಗಳು ಇದೇ ಯೋಜ‌ನೆಯನ್ನು ಪಡೆದಾಗ ಬ್ರಾಹ್ಮಣರ ಪ್ರತ್ಯಕ್ಷ ಮತ್ತು ಪರೋಕ್ಷ ಪ್ರತಿಕ್ರಿಯೆಗಳು ಎಷ್ಟು ಅಪಾಯಕಾರಿಯಾಗಿದ್ದವು ಎಂಬುದನ್ನು ಬ್ರಾಹ್ಮಣರ ಮಾತನ್ನೇ ವೇದವಾಕ್ಯ ಎಂದುಕೊಂಡ ಹಿಂದುಳಿದ ವರ್ಗಗಳು ತಿಳಿದುಕೊಳ್ಳಲಿ.

ವಿಪರ್ಯಾಸ ಎಂದರೆ, ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಿಂದಿನ ಸಿದ್ದರಾಮಯ್ಯ ಸರಕಾರ ಜಾತಿ ಜನಗಣತಿ ಮಾಡಲು ಮುಂದಾದಾಗ ಕಾಂಗ್ರೆಸ್ ಮತ್ತು ಬಿಜೆಪಿಯ ಬ್ರಾಹ್ಮಣರು ವಿರೋಧ ವ್ಯಕ್ತಪಡಿಸಿದ್ದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಮತ್ತು ದಲಿತರು ಸರಕಾರಿ ಯೋಜನೆಯನ್ನು ಪಡೆದುಕೊಳ್ಳಬಹುದು ಎಂಬ ಭಯದಿಂದ ಜಾತಿಜನಗಣತಿಯನ್ನು ವಿರೋಧಿಸಿದ್ದರು. ಬ್ರಾಹ್ಮಣರ ಮಾತುಗಳಿಗೆ ಬಲಿಯಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಹಿಂದೂ ಮುಖಂಡರೂ ಜಾತಿ ಜನಗಣತಿಯನ್ನು ವಿರೋಧಿಸಿದ್ದರು. ಇದೀಗ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ವತಿಯಿಂದ ಬ್ರಾಹ್ಮಣ ಸಮುದಾಯದ ಬಗ್ಗೆ ರಾಜ್ಯಾದ್ಯಂತ ಗಣತಿಗೆ ನಿರ್ಧರಿಸಲಾಗಿದೆ.

ಜಾತಿ ಆಧರಿತ ಮೀಸಲಾತಿಯನ್ನು ವಿರೋಧಿಸುವ ಹಿಂದೂ ಸಂಘಟನೆಗಳು ಮತ್ತು ಅದರಲ್ಲಿ ಹಿಂದುಳಿದ ವರ್ಗಗಳ ನಾಯಕರು, ಕಾರ್ಯಕರ್ತರು ಈಗ ಏನನ್ನುತ್ತಾರೆ ? ಇನ್ನಾದರೂ ಈ ಪಿತೂರಿಗಳ ಬಗ್ಗೆ ಅರಿತುಕೊಳ್ಳುವುದು ಒಳ್ಳೆಯದು.

ಕೃಪೆ: ನವೀನ್ ಸೂರಿಂಜೆಯವರ ಫೇಸ್‌ಬುಕ್ ನಿಂದ.
(ಯೋಜನೆಗಳ ಮಾಹಿತಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ)


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...