Homeಮುಖಪುಟಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎನ್ನುವುದು ಸುಳ್ಳು: ಇಲ್ಲಿವೆ ನೋಡಿ ಬ್ರಾಹ್ಮಣರಿಗಿರುವ ಸರ್ಕಾರದ 15 ಯೋಜನೆಗಳು

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎನ್ನುವುದು ಸುಳ್ಳು: ಇಲ್ಲಿವೆ ನೋಡಿ ಬ್ರಾಹ್ಮಣರಿಗಿರುವ ಸರ್ಕಾರದ 15 ಯೋಜನೆಗಳು

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

- Advertisement -
- Advertisement -

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಎಲ್ಲವೂ ದಲಿತರಿಗೇ ಕೊಟ್ರು. ಮೀಸಲಾತಿಯಲ್ಲಿ ಶಿಕ್ಷಣ, ಕೆಲಸ, ಊಟ ಎಲ್ಲವೂ ದಲಿತರಿಗೇ. ಹಾಗಾದರೆ ಉಳಿದ ಹಿಂದುಗಳೂ ಏನು ಮಾಡಬೇಕು” ಎಂದು ಹಿಂದುಳಿದ ವರ್ಗದ ಹಿಂದೂಗಳನ್ನು ಎತ್ತಿಕಟ್ಟಿದ್ದೇ ಬ್ರಾಹ್ಮಣರು. ಹೀಗೆ ಹೇಳುತ್ತಲೇ ಎಲ್ಲಾ ಸರಕಾರಿ ಯೋಜನೆಗಳನ್ನು ತನ್ನದಾಗಿಸಿಕೊಂಡವರು ಬ್ರಾಹ್ಮಣರು. ಬ್ರಾಹ್ಮಣರಿಗೆ ಕರ್ನಾಟಕ ರಾಜ್ಯ ಸರ್ಕಾರವೊಂದೇ ನೀಡುವ ಯೋಜನೆಗಳೇನು ಎಂಬುದನ್ನು ನೋಡಿದರೆ ತಲೆ ತಿರುಗುತ್ತದೆ.

1. ಸುಭದ್ರ ಯೋಜನೆ
ಬ್ರಾಹ್ಮಣ ಸಮುದಾಯದ ಅನಾಥ/ನಿರಾಶ್ರಿತ ಅಂಗವಿಕಲ, ವಿಧವೆ ಮಹಿಳೆಯರು , ಹಿರಿಯ ನಾಗರೀಕರಿಗೆ ಮಾಸಿಕ ಪಿಂಚಣಿ.

2. ಸೌಖ್ಯ ಯೋಜನೆ
ನಿರಾಶ್ರಿತರಾದ ಬ್ರಾಹ್ಮಣ ವಿಧವೆ ಹಾಗೂ ಹಿರಿಯ ನಾಗರೀಕರಿಗೆ ಆಶ್ರಯ ಕಲ್ಪಿಸಲು ವೃದ್ಧಾಶ್ರಮಗಳ ಸ್ಥಾಪನೆ/ವೃದ್ಧಾಶ್ರಮ ವೆಚ್ಚ ಮರುಪಾವತಿ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವುದು.
ಅರ್ಹ ಬ್ರಾಹ್ಮಣರಿಗೆ ಉಚಿತ ವೈದ್ಯಕೀಯ ತಪಾಸಣೆ ಆಯೋಜಿಸುವುದು. ಅರ್ಹ ಬ್ರಾಹ್ಮಣರಿಗೆ ಉಚಿತ ಕಾನೂನು ಸಲಹೆ ಮತ್ತು ಮಾರ್ಗದರ್ಶನ ಪಡೆಯುವ ಸೇವೆಗಳನ್ನು ಆಯೋಜಿಸುವುದು.

3. ಕಲ್ಯಾಣ ಯೋಜನೆ:
ಬ್ರಾಹ್ಮಣರಿಗಾಗಿ ಸಾಮೂಹಿಕ ವಿವಾಹ/ಉಪನಯನಗಳನ್ನುಆಯೋಜಿಸುವುದು.
ಬಿಪಿಎಲ್ ಬ್ರಾಹ್ಮಣ ಕುಟುಂಬದ ಕೃಷಿಕರನ್ನು/ ಅಡಿಗೆಯವರನ್ನು/ ಪುರೋಹಿತರನ್ನು ಮದುವೆಯಾಗುವ ವಧುವಿನ ಹೆಸರಲ್ಲಿ ಮೂರು ಲಕ್ಷ ರೂಪಾಯಿ ಮೊತ್ತದ ವಿತ್ತಬಾಂಡ್ ವಿತರಿಸುವುದು.

4. ಚೈತನ್ಯ ಉತ್ಸವ ಯೋಜನೆ:
ಬ್ರಾಹ್ಮಣ ಸಮುದಾಯದ ಯುವ ಪೀಳಿಗೆಯ ಯುವ ಸಂಘಟನೆ ಹಾಗೂ ಅಭಿವೃದ್ಧಿಗಾಗಿ ಉತ್ಸವಗಳನ್ನು ಆಯೋಜಿಸುವುದು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬ್ರಾಹ್ಮಣ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ ಪಾವತಿ.

5. ಕಿರುಸಾಲ ಯೋಜನೆ:
ಸಣ್ಣ ಪುಟ್ಟ ಗೃಹ ಉದ್ಯಮ ಮಾಡುತ್ತಿರುವ ಬ್ರಾಹ್ಮಣ ಸಮುದಾಯಕ್ಕೆ ನೆರವು ನೀಡುವ ಉದ್ದೇಶದಿಂದ ಕಿರು ಸಾಲ ಯೋಜನೆಯನ್ನು ಮಂಡಳಿ ಜಾರಿಗೆ ತಂದಿದೆ. 50 ಸಾವಿರ ರೂ. ಸಾಲ ನೀಡಲಿದ್ದು, ಈ ಸಾಲಕ್ಕೆ ಮಂಡಳಿಯ ವತಿಯಿಂದ 10 ಸಾವಿರ ಸಹಾಯಧನ ನೀಡಲಾಗುವುದು.

6. ಸಾಂದೀಪನಿ ಶಿಷ್ಯವೇತನ ಯೋಜನೆ:
ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಕೋರ್ಸ್ ಗಳನ್ನು ಕಲಿಯುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ಪಾವತಿ ಮಾಡುವುದು.
ಭಾರತದಲ್ಲಿ ಹಾಗೂ ಹೊರ ದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅತೀ ಕಡಿಮೆ / ಶೂನ್ಯ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ಒದಗಿಸಲು ಬ್ಯಾಂಕ್‌ಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು. ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚ(Day Scholar/ hosteller Maintenance) ಹಾಗೂ ಶುಲ್ಕ ಮರುಪಾವತಿ(Fee Reimbursement) ಒದಗಿಸುವುದು.

7. ಆಚಾರ್ಯತ್ರಯ ವೇದ ಶಿಷ್ಯವೇತನ ಯೋಜನೆ :
ಬ್ರಾಹ್ಮಣ ಸಮುದಾಯದ ವೇದ ವಿದ್ಯಾರ್ಥಿಗಳಿಗೆ/ಆಗಮ ವಿದ್ಯಾರ್ಥಿಗಳಿಗೆ /ಆಗಮಿಕರಿಗೆ ಮತ್ತು ಸಂಸ್ಕೃತ ವಿದ್ಯಾರ್ಥಿಗಳಿಗೆ/ವಿದ್ವಾಂಸರಿಗೆ ಶಿಷ್ಯ ವೇತನ ನೀಡುವುದು.

8. ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಯೋಜನೆ :
ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳ ಬ್ರಾಹ್ಮಣ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುವುದು.

9. ಚಾಣಕ್ಯ ಆಡಳಿತ ತರಬೇತಿ ಯೋಜನೆ :
ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್, ಐ.ಆರ್.ಎಸ್, ಕೆ.ಎ.ಎಸ್, ಇತ್ಯಾದಿ ಪರೀಕ್ಷೆಗಳ ಪ್ರಾಥಮಿಕ ಹಂತದ ಪರೀಕ್ಷೆ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುವುದು.

10. ಸನ್ನಿಧಿ ಯೋಜನೆ :
ಅರ್ಹ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ & ಉಚಿತ ಹಾಸ್ಟಲ್ ನಿರ್ಮಾಣ/ ಹಾಸ್ಟೆಲ್‌ ಸೌಲಭ್ಯ ಕಲ್ಪಿಸುವುದು / ಹಾಸ್ಟಲ್ ಶುಲ್ಕವನ್ನು ಮರು ಪಾವತಿಸುವುದು.
ಬ್ರಾಹ್ಮಣ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟಲ್ ಗಳ ನಿರ್ಮಾಣ.

11. ಸರ್ ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಯೋಜನೆ:
ಬ್ರಾಹ್ಮಣರಿಗೆ ಉದ್ಯೋಗ/ಸ್ವಯಂ ಉದ್ಯೋಗ/ಕೌಶಲ್ಯಾಭಿವೃದ್ಧಿಗಾಗಿ ಉದ್ಯೋಗಮೇಳಗಳನ್ನು ಆಯೋಜಿಸುವುದು, ತರಬೇತಿ ಕೇಂದ್ರಗಳನ್ನು ತೆರೆಯುವುದು. ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಚಾರ್ಟೆಡ್ ಅಕೌಂಟೇನ್ಸಿ, ಕಂಪನಿ ಸೆಕ್ರೇಟರಿ ಇನ್ನಿತರ ವೃತ್ತಿಪರ ಪರೀಕ್ಷೆಗಳಿಗೆ ಉಚಿತ ಶಿಕ್ಷಣ / ತರಬೇತಿ.
ಸಿ.ಇ.ಟಿ, ಜೆ.ಇ.ಇ, ನೀಟ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ತರಬೇತಿ ನಡೆಸುವುದು.

12. ಬ್ರಾಹ್ಮಣ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿಕೆಗಾಗಿ/ಗುಡಿ ಕೈಗಾರಿಕೆಗಾಗಿ ತರಬೇತಿ, ಸಹಾಯಧನ ಪಾವತಿ ಹಾಗೂ ಮಾರುಕಟ್ಟೆ ನಿರ್ಮಾಣ.

13. ಬ್ರಾಹ್ಮಣ ಸ್ವಸಹಾಯ ಸಂಘಗಳ ಸ್ಥಾಪನೆ ಹಣಕಾಸಿನ ನೆರವು

14. ಪುರುಷೋತ್ತಮ ಯೋಜನೆ:
ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಹಾಗೂ ಸಹಾಯ. ಸ್ವಯಂ ಉದ್ಯೋಗ / ನವೋದ್ಯಮ (Start-ups) ಪ್ರಾರಂಭಿಸಲು ಇಚ್ಛಿಸುವ ಅರ್ಹ ಬ್ರಾಹ್ಮಣ ಉದ್ಯಮಿಗಳಿಗೆ ಆರಂಭಿಕ ಸಹಾಯ ಧನ ನೀಡುವುದು.
ಬ್ರಾಹ್ಮಣರಿಗಾಗಿ ಸಂಶೋಧನೆ ಮತ್ತು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು.
ಬ್ರಾಹ್ಮಣರಿಗಾಗಿ ಔದ್ಯಮಿಕ ಪೂರ್ವಪಾಲನಾ ಕೇಂದ್ರ (Business Incubation Centres)

15. ಅನ್ನದಾತ ಯೋಜನೆ:
ಕೃಷಿ ಆಧಾರಿತ ಉದ್ಯಮಗಳನ್ನು ಸ್ಥಾಪಿಸಲು ಕಡಿಮೆ ಬಡ್ಡಿ ದರಗಳಲ್ಲಿ ಅರ್ಹ ಬ್ರಾಹ್ಮಣ ರೈತರಿಗೆ ಸಾಲ ಒದಗಿಸುವುದು. ವ್ಯವಸಾಯಕ್ಕಾಗಿ ತೆರೆದ ಬಾವಿ ಅಥವಾ ಬೋರ್ ವೆಲ್ ಗಳನ್ನು ಕೊರೆಯಲು ಅರ್ಹ ಬ್ರಾಹ್ಮಣ ರೈತರಿಗೆ ಸಹಾಯ ಧನ ಒದಗಿಸುವುದು. ಹೈನುಗಾರಿಕೆ ಹಾಗೂ ಕೃಷಿಆಧಾರಿತ ಚಟುವಟಿಕೆಗಳಿಗೆ ಬ್ರಾಹ್ಮಣ ರೈತರಿಗೆ ಸಹಾಯಧನ ಮತ್ತು ತರಬೇತಿ.

ಇದ್ಯಾವುದೂ ಹಿಂದೂಗಳಿಗಾಗಿನ ಯೋಜನೆಯಲ್ಲ. ಕೇವಲ ಬ್ರಾಹ್ಮಣರಿಗಾಗಿನ ಯೋಜನೆಗಳು. ಎಲ್ಲವನ್ನೂ ದಲಿತರಿಗೇ ಮೀಸಲಿರಿಸಿದರು ಎಂದು ಬಹುಸಂಖ್ಯಾತ ಹಿಂದೂಗಳನ್ನು ಎತ್ತಿಕಟ್ಟಿ ರಾಜಕೀಯವಾಗಿ ಪ್ರಭಾವಿಗಳಾದ ಬ್ರಾಹ್ಮಣ ಸಮುದಾಯ ಪಡೆಯುತ್ತಿರುವ ಯೋಜನೆಗಳಿವು. ಖಂಡಿತವಾಗಿಯೂ ಬ್ರಾಹ್ಮಣರು ಈ ಯೋಜನೆಗಳ ಸದುಪಯೋಗ ಪಡೆಯಲಿ. ಆದರೆ ಶತಶತಮಾನಗಳಿಂದ ಹಿಂದುಳಿದ ಸಮುದಾಯಗಳು ಇದೇ ಯೋಜ‌ನೆಯನ್ನು ಪಡೆದಾಗ ಬ್ರಾಹ್ಮಣರ ಪ್ರತ್ಯಕ್ಷ ಮತ್ತು ಪರೋಕ್ಷ ಪ್ರತಿಕ್ರಿಯೆಗಳು ಎಷ್ಟು ಅಪಾಯಕಾರಿಯಾಗಿದ್ದವು ಎಂಬುದನ್ನು ಬ್ರಾಹ್ಮಣರ ಮಾತನ್ನೇ ವೇದವಾಕ್ಯ ಎಂದುಕೊಂಡ ಹಿಂದುಳಿದ ವರ್ಗಗಳು ತಿಳಿದುಕೊಳ್ಳಲಿ.

ವಿಪರ್ಯಾಸ ಎಂದರೆ, ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಿಂದಿನ ಸಿದ್ದರಾಮಯ್ಯ ಸರಕಾರ ಜಾತಿ ಜನಗಣತಿ ಮಾಡಲು ಮುಂದಾದಾಗ ಕಾಂಗ್ರೆಸ್ ಮತ್ತು ಬಿಜೆಪಿಯ ಬ್ರಾಹ್ಮಣರು ವಿರೋಧ ವ್ಯಕ್ತಪಡಿಸಿದ್ದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಮತ್ತು ದಲಿತರು ಸರಕಾರಿ ಯೋಜನೆಯನ್ನು ಪಡೆದುಕೊಳ್ಳಬಹುದು ಎಂಬ ಭಯದಿಂದ ಜಾತಿಜನಗಣತಿಯನ್ನು ವಿರೋಧಿಸಿದ್ದರು. ಬ್ರಾಹ್ಮಣರ ಮಾತುಗಳಿಗೆ ಬಲಿಯಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಹಿಂದೂ ಮುಖಂಡರೂ ಜಾತಿ ಜನಗಣತಿಯನ್ನು ವಿರೋಧಿಸಿದ್ದರು. ಇದೀಗ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ವತಿಯಿಂದ ಬ್ರಾಹ್ಮಣ ಸಮುದಾಯದ ಬಗ್ಗೆ ರಾಜ್ಯಾದ್ಯಂತ ಗಣತಿಗೆ ನಿರ್ಧರಿಸಲಾಗಿದೆ.

ಜಾತಿ ಆಧರಿತ ಮೀಸಲಾತಿಯನ್ನು ವಿರೋಧಿಸುವ ಹಿಂದೂ ಸಂಘಟನೆಗಳು ಮತ್ತು ಅದರಲ್ಲಿ ಹಿಂದುಳಿದ ವರ್ಗಗಳ ನಾಯಕರು, ಕಾರ್ಯಕರ್ತರು ಈಗ ಏನನ್ನುತ್ತಾರೆ ? ಇನ್ನಾದರೂ ಈ ಪಿತೂರಿಗಳ ಬಗ್ಗೆ ಅರಿತುಕೊಳ್ಳುವುದು ಒಳ್ಳೆಯದು.

ಕೃಪೆ: ನವೀನ್ ಸೂರಿಂಜೆಯವರ ಫೇಸ್‌ಬುಕ್ ನಿಂದ.
(ಯೋಜನೆಗಳ ಮಾಹಿತಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ)


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...