Homeಮುಖಪುಟಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎನ್ನುವುದು ಸುಳ್ಳು: ಇಲ್ಲಿವೆ ನೋಡಿ ಬ್ರಾಹ್ಮಣರಿಗಿರುವ ಸರ್ಕಾರದ 15 ಯೋಜನೆಗಳು

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎನ್ನುವುದು ಸುಳ್ಳು: ಇಲ್ಲಿವೆ ನೋಡಿ ಬ್ರಾಹ್ಮಣರಿಗಿರುವ ಸರ್ಕಾರದ 15 ಯೋಜನೆಗಳು

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

- Advertisement -
- Advertisement -

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಎಲ್ಲವೂ ದಲಿತರಿಗೇ ಕೊಟ್ರು. ಮೀಸಲಾತಿಯಲ್ಲಿ ಶಿಕ್ಷಣ, ಕೆಲಸ, ಊಟ ಎಲ್ಲವೂ ದಲಿತರಿಗೇ. ಹಾಗಾದರೆ ಉಳಿದ ಹಿಂದುಗಳೂ ಏನು ಮಾಡಬೇಕು” ಎಂದು ಹಿಂದುಳಿದ ವರ್ಗದ ಹಿಂದೂಗಳನ್ನು ಎತ್ತಿಕಟ್ಟಿದ್ದೇ ಬ್ರಾಹ್ಮಣರು. ಹೀಗೆ ಹೇಳುತ್ತಲೇ ಎಲ್ಲಾ ಸರಕಾರಿ ಯೋಜನೆಗಳನ್ನು ತನ್ನದಾಗಿಸಿಕೊಂಡವರು ಬ್ರಾಹ್ಮಣರು. ಬ್ರಾಹ್ಮಣರಿಗೆ ಕರ್ನಾಟಕ ರಾಜ್ಯ ಸರ್ಕಾರವೊಂದೇ ನೀಡುವ ಯೋಜನೆಗಳೇನು ಎಂಬುದನ್ನು ನೋಡಿದರೆ ತಲೆ ತಿರುಗುತ್ತದೆ.

1. ಸುಭದ್ರ ಯೋಜನೆ
ಬ್ರಾಹ್ಮಣ ಸಮುದಾಯದ ಅನಾಥ/ನಿರಾಶ್ರಿತ ಅಂಗವಿಕಲ, ವಿಧವೆ ಮಹಿಳೆಯರು , ಹಿರಿಯ ನಾಗರೀಕರಿಗೆ ಮಾಸಿಕ ಪಿಂಚಣಿ.

2. ಸೌಖ್ಯ ಯೋಜನೆ
ನಿರಾಶ್ರಿತರಾದ ಬ್ರಾಹ್ಮಣ ವಿಧವೆ ಹಾಗೂ ಹಿರಿಯ ನಾಗರೀಕರಿಗೆ ಆಶ್ರಯ ಕಲ್ಪಿಸಲು ವೃದ್ಧಾಶ್ರಮಗಳ ಸ್ಥಾಪನೆ/ವೃದ್ಧಾಶ್ರಮ ವೆಚ್ಚ ಮರುಪಾವತಿ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವುದು.
ಅರ್ಹ ಬ್ರಾಹ್ಮಣರಿಗೆ ಉಚಿತ ವೈದ್ಯಕೀಯ ತಪಾಸಣೆ ಆಯೋಜಿಸುವುದು. ಅರ್ಹ ಬ್ರಾಹ್ಮಣರಿಗೆ ಉಚಿತ ಕಾನೂನು ಸಲಹೆ ಮತ್ತು ಮಾರ್ಗದರ್ಶನ ಪಡೆಯುವ ಸೇವೆಗಳನ್ನು ಆಯೋಜಿಸುವುದು.

3. ಕಲ್ಯಾಣ ಯೋಜನೆ:
ಬ್ರಾಹ್ಮಣರಿಗಾಗಿ ಸಾಮೂಹಿಕ ವಿವಾಹ/ಉಪನಯನಗಳನ್ನುಆಯೋಜಿಸುವುದು.
ಬಿಪಿಎಲ್ ಬ್ರಾಹ್ಮಣ ಕುಟುಂಬದ ಕೃಷಿಕರನ್ನು/ ಅಡಿಗೆಯವರನ್ನು/ ಪುರೋಹಿತರನ್ನು ಮದುವೆಯಾಗುವ ವಧುವಿನ ಹೆಸರಲ್ಲಿ ಮೂರು ಲಕ್ಷ ರೂಪಾಯಿ ಮೊತ್ತದ ವಿತ್ತಬಾಂಡ್ ವಿತರಿಸುವುದು.

4. ಚೈತನ್ಯ ಉತ್ಸವ ಯೋಜನೆ:
ಬ್ರಾಹ್ಮಣ ಸಮುದಾಯದ ಯುವ ಪೀಳಿಗೆಯ ಯುವ ಸಂಘಟನೆ ಹಾಗೂ ಅಭಿವೃದ್ಧಿಗಾಗಿ ಉತ್ಸವಗಳನ್ನು ಆಯೋಜಿಸುವುದು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬ್ರಾಹ್ಮಣ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ ಪಾವತಿ.

5. ಕಿರುಸಾಲ ಯೋಜನೆ:
ಸಣ್ಣ ಪುಟ್ಟ ಗೃಹ ಉದ್ಯಮ ಮಾಡುತ್ತಿರುವ ಬ್ರಾಹ್ಮಣ ಸಮುದಾಯಕ್ಕೆ ನೆರವು ನೀಡುವ ಉದ್ದೇಶದಿಂದ ಕಿರು ಸಾಲ ಯೋಜನೆಯನ್ನು ಮಂಡಳಿ ಜಾರಿಗೆ ತಂದಿದೆ. 50 ಸಾವಿರ ರೂ. ಸಾಲ ನೀಡಲಿದ್ದು, ಈ ಸಾಲಕ್ಕೆ ಮಂಡಳಿಯ ವತಿಯಿಂದ 10 ಸಾವಿರ ಸಹಾಯಧನ ನೀಡಲಾಗುವುದು.

6. ಸಾಂದೀಪನಿ ಶಿಷ್ಯವೇತನ ಯೋಜನೆ:
ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಕೋರ್ಸ್ ಗಳನ್ನು ಕಲಿಯುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ಪಾವತಿ ಮಾಡುವುದು.
ಭಾರತದಲ್ಲಿ ಹಾಗೂ ಹೊರ ದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅತೀ ಕಡಿಮೆ / ಶೂನ್ಯ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ಒದಗಿಸಲು ಬ್ಯಾಂಕ್‌ಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು. ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚ(Day Scholar/ hosteller Maintenance) ಹಾಗೂ ಶುಲ್ಕ ಮರುಪಾವತಿ(Fee Reimbursement) ಒದಗಿಸುವುದು.

7. ಆಚಾರ್ಯತ್ರಯ ವೇದ ಶಿಷ್ಯವೇತನ ಯೋಜನೆ :
ಬ್ರಾಹ್ಮಣ ಸಮುದಾಯದ ವೇದ ವಿದ್ಯಾರ್ಥಿಗಳಿಗೆ/ಆಗಮ ವಿದ್ಯಾರ್ಥಿಗಳಿಗೆ /ಆಗಮಿಕರಿಗೆ ಮತ್ತು ಸಂಸ್ಕೃತ ವಿದ್ಯಾರ್ಥಿಗಳಿಗೆ/ವಿದ್ವಾಂಸರಿಗೆ ಶಿಷ್ಯ ವೇತನ ನೀಡುವುದು.

8. ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಯೋಜನೆ :
ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳ ಬ್ರಾಹ್ಮಣ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುವುದು.

9. ಚಾಣಕ್ಯ ಆಡಳಿತ ತರಬೇತಿ ಯೋಜನೆ :
ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್, ಐ.ಆರ್.ಎಸ್, ಕೆ.ಎ.ಎಸ್, ಇತ್ಯಾದಿ ಪರೀಕ್ಷೆಗಳ ಪ್ರಾಥಮಿಕ ಹಂತದ ಪರೀಕ್ಷೆ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುವುದು.

10. ಸನ್ನಿಧಿ ಯೋಜನೆ :
ಅರ್ಹ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ & ಉಚಿತ ಹಾಸ್ಟಲ್ ನಿರ್ಮಾಣ/ ಹಾಸ್ಟೆಲ್‌ ಸೌಲಭ್ಯ ಕಲ್ಪಿಸುವುದು / ಹಾಸ್ಟಲ್ ಶುಲ್ಕವನ್ನು ಮರು ಪಾವತಿಸುವುದು.
ಬ್ರಾಹ್ಮಣ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟಲ್ ಗಳ ನಿರ್ಮಾಣ.

11. ಸರ್ ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಯೋಜನೆ:
ಬ್ರಾಹ್ಮಣರಿಗೆ ಉದ್ಯೋಗ/ಸ್ವಯಂ ಉದ್ಯೋಗ/ಕೌಶಲ್ಯಾಭಿವೃದ್ಧಿಗಾಗಿ ಉದ್ಯೋಗಮೇಳಗಳನ್ನು ಆಯೋಜಿಸುವುದು, ತರಬೇತಿ ಕೇಂದ್ರಗಳನ್ನು ತೆರೆಯುವುದು. ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಚಾರ್ಟೆಡ್ ಅಕೌಂಟೇನ್ಸಿ, ಕಂಪನಿ ಸೆಕ್ರೇಟರಿ ಇನ್ನಿತರ ವೃತ್ತಿಪರ ಪರೀಕ್ಷೆಗಳಿಗೆ ಉಚಿತ ಶಿಕ್ಷಣ / ತರಬೇತಿ.
ಸಿ.ಇ.ಟಿ, ಜೆ.ಇ.ಇ, ನೀಟ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ತರಬೇತಿ ನಡೆಸುವುದು.

12. ಬ್ರಾಹ್ಮಣ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿಕೆಗಾಗಿ/ಗುಡಿ ಕೈಗಾರಿಕೆಗಾಗಿ ತರಬೇತಿ, ಸಹಾಯಧನ ಪಾವತಿ ಹಾಗೂ ಮಾರುಕಟ್ಟೆ ನಿರ್ಮಾಣ.

13. ಬ್ರಾಹ್ಮಣ ಸ್ವಸಹಾಯ ಸಂಘಗಳ ಸ್ಥಾಪನೆ ಹಣಕಾಸಿನ ನೆರವು

14. ಪುರುಷೋತ್ತಮ ಯೋಜನೆ:
ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಹಾಗೂ ಸಹಾಯ. ಸ್ವಯಂ ಉದ್ಯೋಗ / ನವೋದ್ಯಮ (Start-ups) ಪ್ರಾರಂಭಿಸಲು ಇಚ್ಛಿಸುವ ಅರ್ಹ ಬ್ರಾಹ್ಮಣ ಉದ್ಯಮಿಗಳಿಗೆ ಆರಂಭಿಕ ಸಹಾಯ ಧನ ನೀಡುವುದು.
ಬ್ರಾಹ್ಮಣರಿಗಾಗಿ ಸಂಶೋಧನೆ ಮತ್ತು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು.
ಬ್ರಾಹ್ಮಣರಿಗಾಗಿ ಔದ್ಯಮಿಕ ಪೂರ್ವಪಾಲನಾ ಕೇಂದ್ರ (Business Incubation Centres)

15. ಅನ್ನದಾತ ಯೋಜನೆ:
ಕೃಷಿ ಆಧಾರಿತ ಉದ್ಯಮಗಳನ್ನು ಸ್ಥಾಪಿಸಲು ಕಡಿಮೆ ಬಡ್ಡಿ ದರಗಳಲ್ಲಿ ಅರ್ಹ ಬ್ರಾಹ್ಮಣ ರೈತರಿಗೆ ಸಾಲ ಒದಗಿಸುವುದು. ವ್ಯವಸಾಯಕ್ಕಾಗಿ ತೆರೆದ ಬಾವಿ ಅಥವಾ ಬೋರ್ ವೆಲ್ ಗಳನ್ನು ಕೊರೆಯಲು ಅರ್ಹ ಬ್ರಾಹ್ಮಣ ರೈತರಿಗೆ ಸಹಾಯ ಧನ ಒದಗಿಸುವುದು. ಹೈನುಗಾರಿಕೆ ಹಾಗೂ ಕೃಷಿಆಧಾರಿತ ಚಟುವಟಿಕೆಗಳಿಗೆ ಬ್ರಾಹ್ಮಣ ರೈತರಿಗೆ ಸಹಾಯಧನ ಮತ್ತು ತರಬೇತಿ.

ಇದ್ಯಾವುದೂ ಹಿಂದೂಗಳಿಗಾಗಿನ ಯೋಜನೆಯಲ್ಲ. ಕೇವಲ ಬ್ರಾಹ್ಮಣರಿಗಾಗಿನ ಯೋಜನೆಗಳು. ಎಲ್ಲವನ್ನೂ ದಲಿತರಿಗೇ ಮೀಸಲಿರಿಸಿದರು ಎಂದು ಬಹುಸಂಖ್ಯಾತ ಹಿಂದೂಗಳನ್ನು ಎತ್ತಿಕಟ್ಟಿ ರಾಜಕೀಯವಾಗಿ ಪ್ರಭಾವಿಗಳಾದ ಬ್ರಾಹ್ಮಣ ಸಮುದಾಯ ಪಡೆಯುತ್ತಿರುವ ಯೋಜನೆಗಳಿವು. ಖಂಡಿತವಾಗಿಯೂ ಬ್ರಾಹ್ಮಣರು ಈ ಯೋಜನೆಗಳ ಸದುಪಯೋಗ ಪಡೆಯಲಿ. ಆದರೆ ಶತಶತಮಾನಗಳಿಂದ ಹಿಂದುಳಿದ ಸಮುದಾಯಗಳು ಇದೇ ಯೋಜ‌ನೆಯನ್ನು ಪಡೆದಾಗ ಬ್ರಾಹ್ಮಣರ ಪ್ರತ್ಯಕ್ಷ ಮತ್ತು ಪರೋಕ್ಷ ಪ್ರತಿಕ್ರಿಯೆಗಳು ಎಷ್ಟು ಅಪಾಯಕಾರಿಯಾಗಿದ್ದವು ಎಂಬುದನ್ನು ಬ್ರಾಹ್ಮಣರ ಮಾತನ್ನೇ ವೇದವಾಕ್ಯ ಎಂದುಕೊಂಡ ಹಿಂದುಳಿದ ವರ್ಗಗಳು ತಿಳಿದುಕೊಳ್ಳಲಿ.

ವಿಪರ್ಯಾಸ ಎಂದರೆ, ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಿಂದಿನ ಸಿದ್ದರಾಮಯ್ಯ ಸರಕಾರ ಜಾತಿ ಜನಗಣತಿ ಮಾಡಲು ಮುಂದಾದಾಗ ಕಾಂಗ್ರೆಸ್ ಮತ್ತು ಬಿಜೆಪಿಯ ಬ್ರಾಹ್ಮಣರು ವಿರೋಧ ವ್ಯಕ್ತಪಡಿಸಿದ್ದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಮತ್ತು ದಲಿತರು ಸರಕಾರಿ ಯೋಜನೆಯನ್ನು ಪಡೆದುಕೊಳ್ಳಬಹುದು ಎಂಬ ಭಯದಿಂದ ಜಾತಿಜನಗಣತಿಯನ್ನು ವಿರೋಧಿಸಿದ್ದರು. ಬ್ರಾಹ್ಮಣರ ಮಾತುಗಳಿಗೆ ಬಲಿಯಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಹಿಂದೂ ಮುಖಂಡರೂ ಜಾತಿ ಜನಗಣತಿಯನ್ನು ವಿರೋಧಿಸಿದ್ದರು. ಇದೀಗ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ವತಿಯಿಂದ ಬ್ರಾಹ್ಮಣ ಸಮುದಾಯದ ಬಗ್ಗೆ ರಾಜ್ಯಾದ್ಯಂತ ಗಣತಿಗೆ ನಿರ್ಧರಿಸಲಾಗಿದೆ.

ಜಾತಿ ಆಧರಿತ ಮೀಸಲಾತಿಯನ್ನು ವಿರೋಧಿಸುವ ಹಿಂದೂ ಸಂಘಟನೆಗಳು ಮತ್ತು ಅದರಲ್ಲಿ ಹಿಂದುಳಿದ ವರ್ಗಗಳ ನಾಯಕರು, ಕಾರ್ಯಕರ್ತರು ಈಗ ಏನನ್ನುತ್ತಾರೆ ? ಇನ್ನಾದರೂ ಈ ಪಿತೂರಿಗಳ ಬಗ್ಗೆ ಅರಿತುಕೊಳ್ಳುವುದು ಒಳ್ಳೆಯದು.

ಕೃಪೆ: ನವೀನ್ ಸೂರಿಂಜೆಯವರ ಫೇಸ್‌ಬುಕ್ ನಿಂದ.
(ಯೋಜನೆಗಳ ಮಾಹಿತಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ)


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...