Homeಮುಖಪುಟಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು

ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು

- Advertisement -
- Advertisement -

ಮಟಮಟ ಮಧ್ಯಾಹ್ನದ ಉರಿ ಬಿಸಿಲು. ಸೂರ್ಯ ನೆತ್ತಿಯ ಮೇಲಿದ್ದ. ಕೆಲಸ ಕಳೆದುಕೊಂಡ ಆ ಹುಡುಗರು ಮೂತಿಗೆ ಕರವಸ್ತ್ರಗಳನ್ನು ಬಿಗಿದು ಬೆನ್ನಿಗೆ ಚೀಲಗಳನ್ನು ತಗಲುಹಾಕಿಕೊಂಡು ಹೆಜ್ಜೆ ಹಾಕುತ್ತ ಬರುತ್ತಿದ್ದರು. ಬಿಸಿಲಿನ ಪ್ರಖರತೆ ಹೆಚ್ಚಿದ್ದರಿಂದ ಆ ಹುಡುಗರು ನಿಧಾನವಾಗಿ ನಡೆದು ಹೋಗುತ್ತಿದ್ದರು. ನಾವು ಬರುತ್ತಿದ್ದ ಕಾರನ್ನು ನಿಲ್ಲಿಸಿ ವಿಚಾರಿಸಿದಾಗ ಮಾಲಿಕ ರಾಮು ಆ ಕಾರ್ಮಿಕರನ್ನು ನಿರ್ದಯವಾಗಿ ರೂಮುಗಳಿಂದ ಹೊರಹಾಕಿದ್ದ. ಊಟವನ್ನೂ ಕೊಡದೆ ಕೆಲಸವಿಲ್ಲ ನಡೀರಿ ಎಂದು ಹೇಳಿಕಳಿಸಿದ್ದ. ಆ ವಲಸೆ ಕಾರ್ಮಿಕರ ಮುಖದಲ್ಲಿ ತಮ್ಮ ಊರುಗಳಿಗೆ ಸೇರುವ ಧಾವಂತವಿತ್ತು. ಮಾಲಿಕನ ಧೋರಣೆಗೆ ಬೇಸರವಿತ್ತು. ಆತಂಕದ ಗೆರೆಗಳು ಅವರ ಮುಖದಲ್ಲಿ ಎದ್ದುಕಾಣುತ್ತಿದ್ದವು.

ಹೌದು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ತುಮಕೂರು ತಾಲೂಕು ಮಲ್ಲಸಂದ್ರಕ್ಕೂ ಮೊದಲೇ ಬಲಭಾಗದಲ್ಲಿ ಸಿಗುವ ಗಜೇಂದ್ರ ಹಾರ್ಡ್ ವೇರ್ ನಲ್ಲಿ ದುಡಿಯುತ್ತಿದ್ದ ವಲಸೆ ಕಾರ್ಮಿಕರು ಅವರು. 12 ಜನರಿದ್ದ ಆ ಬಿಹಾರಿ ಕಾರ್ಮಿಕರು ಕಳೆದ ಒಂದು ವರ್ಷದಿಂದ ‘ಅಡಕೆಪಟ್ಟೆ ತಟ್ಟೆ’ ತಯಾರು ಮಾಡುತ್ತಿದ್ದರು. ಅಲ್ಲಿಗೆ ಹೋಗಿ ನೋಡಿದರೆ ಪಾಳುಬಿದ್ದ ಗೋಡೋನ್ ಬಳಿಯೇ ಕೆಲಸ. ಮಾಲಿಕ ರಾಮು ಹೃದರಾಬಾದ್ ನವನು. ಇಲ್ಲಿಯವರೆಗೂ ಕಾರ್ಮಿಕರಿಂದ ದುಡಿಸಿಕೊಂಡಿದ್ದ ಮಾಲಿಕ ಮೇ 12ರಂದು ರಾತ್ರಿ ಎಲ್ಲರಿಗೂ ಸಂಬಳ ನೀಡಿ ರೂಮುಗಳಿಂದ ಹೊರಹಾಕಿದ್ದಾನೆ.

ಹಾಗಾಗಿ ಆ ಯುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ಏನೂ ತೋಚದೆ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆ ಕಾರ್ಮಿಕರಿಗೆ ಪಿಎಫ್, ಇಲ್ಲ, ಸಂಬಳ ಚೀಟಿಯೂ ನೀಡಿಲ್ಲ. ಒಂದು ವರ್ಷ ನಿರಂತರವಾಗಿ ಪ್ರತಿನಿತ್ಯ 12 ಗಂಟೆ ದುಡಿಸಿಕೊಂಡು ಅವರನ್ನು ಅಡಕೆಪಟ್ಟೆ ತಟ್ಟೆ ತಯಾರಿಕೆ ಫ್ಯಾಕ್ಟರಿಯಿಂದ ಮಾಲಿಕ ಹೊರಹಾಕಿದ್ದ. ಬೀದಿಗೆ ಬಿದ್ದ ಕಾರ್ಮಿಕರು ತಮ್ಮ ಊರಾದ ಬಿಹಾರದ ಮಾಧವ್ ಪುರ್ ಮಲಾಟುಲಕ್ಕೆ ತೆರಳುತ್ತಿದ್ದರು. ನಾವು ತಡೆದಿದ್ದಕ್ಕಾಗಿ ಮರದ ನೆರಳಲ್ಲಿ ಸ್ವಲ್ಪಕಾಲ ವಿಶ್ರಮಿಸಿದರು. ಬಿಹಾರದ 12 ಮಂದಿ ವಲಸೆ ಕಾರ್ಮಿಕರು ಸೇವಾಸಿಂಧುವಿನಲ್ಲಿ ನೋಂದಣಿ ಮಾಡಿಸಿದ್ದಾರೆ. ಅವರಲ್ಲಿ ಹಿರಿಯರೊಬ್ಬರು ಮಾತ್ರ ತಾಂತ್ರಿಕ ತೊಂದರೆ ಆಗಿ ನೋಂದಣಿ ಮಾಡಿಸಿರಲಿಲ್ಲ. ನೋಂದಣಿ ಮಾಡಿಸಿದವರಿರೂ ಇನ್ನೂ ಮೆಸೇಜ್ ಬಂದಿರಲಿಲ್ಲ.

ಇದನ್ನು ಮಾಲಿಕ ರಾಮುಗೆ ಹೇಳಿದರೆ ‘ನಾನೇನು ಮಾಡಲು ಸಾಧ್ಯವಿಲ್ಲ. ನಿಮ್ಮ ಊರಿಗೆ ತೆರಳಿ ಎಂದು ಬ್ಯಾಗ್ ಗಳನ್ನು ಹೊರ ಎಸೆದು ರೂಮುಗಳಿಗೆ ಬೀಗಹಾಕಿದ್ದಾನೆ. ಇದರಿಂದ ನೊಂದ ಆ ಯುವ ವಲಸೆ ಕಾರ್ಮಿಕರು ತುಮಕೂರಿನತ್ತ ಸಾಗುತ್ತಿದ್ದರು. ಅವರನ್ನು ತಡೆದು ನಿಲ್ಲಿಸಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಸಾಮಾಕಿ ಕಾರ್ಯಕರ್ತ ತಾಜುದ್ದೀನ್ ಷರೀಫ್ ಮತ್ತು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಸಮಸ್ಯೆ ಏನೆಂಬುದನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಲಸೆ ಕಾರ್ಮಿಕ ಪ್ಯಾರೆಲಾಲ್, ಗಜೇಂದ್ರ ಹಾರ್ಡ್ ವೇರ್ ಮಾಲಿಕ ರಾಮು ಸಂಬಳ ನೀಡಿ, ನಿಮಗೆ ಇನ್ನು ಕೆಲಸವಿಲ್ಲ. ಇಲ್ಲಿಂದ ಹೊರಡಿ ಎಂದು ಫ್ಯಾಕ್ಟರಿಯಿಂದ ಹೊರಹಾಕಿದರು. ಶೀಟ್ ಡ್ಯಾಮೇಜ್ ಮಾಡಿದ್ದಕ್ಕಾಗಿ 12 ಸಾವಿರ ರೂಪಾಯಿ ಹಿಡಿದುಕೊಂಡಿದ್ದಾರೆ. ಊಟ ಕೊಟ್ಟಿಲ್ಲ. ಸೇವಾಸಿಂಧುವಿನಲ್ಲಿ ನೋಂದಣಿ ಮಾಡಿಸಿದ್ದೇವೆ. ಅಲ್ಲಿಂದ ಖಚಿತ ಮಾಹಿತಿ ಬಂದ ಮೇಲೆ ಊರಿಗೆ ತೆರಳುತ್ತೇವೆ. ಅಲ್ಲಿಯ ವರೆಗೂ ಇಲ್ಲಿರಲು ಅವಕಾಶ ಕೊಡಿ ಎಂದು ಮನವಿ ಮಾಡಿದೆವು. ಆದರೆ ನಮ್ಮ ಮನವಿಗೆ ಸ್ಪಂದಿಸಲಿಲ್ಲ. ಹೊರಹಾಕಿದರು ಎಂದು ಅಳಲುತೋಡಿಕೊಂಡರು.

ಪಕ್ಕದಲ್ಲಿಯೇ ಇದ್ದ ಫ್ಯಾಕ್ಟರಿಗೆ ಮಾಲಿಕರನ್ನು ಕಾಣಲು ಹೋದೆವು. ಆಗ ನಮ್ಮ ಎದುರಿಗೇ ಕಾರೊಂದು ಬಂತು. ನಿಲ್ಲಿಸಿ “ಇಲ್ಲಿ ಗಜೇಂದ್ರ ಹಾರ್ಡ್ ವೇರ್ ಇದೆಯಂತೆ ಎಲ್ಲಿ? ಅದರ ಮಾಲಿಕ ರಾಮು. ಅವರನ್ನು ಭೇಟಿ ಮಾಡಬೇಕೆಂದು ಕಾರಿನಲ್ಲಿದ್ದವರನ್ನು ಕೇಳಿದೆವು. ಆ ಹೆಸರಿನ ಮಾಲಿಕರೂ ಇಲ್ಲ. ಫ್ಯಾಕ್ಟರಿಯೂ ಇಲ್ಲ ಎಂದು ಹೇಳಿ ಹೋದರು. ಸ್ಥಳಕ್ಕೆ ಹೋದರೆ ಅಡಕೆಪಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹಳೆಯ ಗೋಡನ್ ನಲ್ಲಿ ಅಡಕೆಪಟ್ಟೆಗಳನ್ನು ಸಂಗ್ರಹಿಸಿಡಲಾಗಿತ್ತು. ಅದೇ ಅಡಕೆಪಟ್ಟೆ ತಟ್ಟೆ ತಯಾರಿಸುವ ಜಾಗವೆಂದು ತಿಳಿಯಿತು. ಅಲ್ಲಿದ್ದವರನ್ನು ವಿಚಾರಿಸಿದರೆ ವಿನಯ್ ಎಂಬಾತ ಮೊದಲು ದರ್ಪದಿಂದಲೇ ಮಾತನಾಡಿದ. ನಾವು ಜೋರು ಮಾಡುತ್ತಿದ್ದಂತೆ ನಾನು ಈ ನೆಲದ ಮಾಲಿಕ. ಬಾಡಿಗೆಗೆ ನೀಡಿದ್ದೇನೆ. ರಾಮು ಎಂಬುವರು ಫ್ಯಾಕ್ಟರಿ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು..

ಮಾಲೀಕ ರಾಮು

ನಂತರ ರಾಮುಗೆ ಪೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ಮತ್ತೆ ವಲಸೆ ಕಾರ್ಮಿಕರ ಬಳಿ ಹೋಗಿ ಮಾತುಕತೆ ನಡೆಸಿದೆವೆ. ಅರ್ಧ ಗಂಟೆ ಬಳಿಕ ಮಾಲಿಕ ರಾಮ ಅಲ್ಲಿಗೆ ಬಂದು ಮಳ್ಳನಂತೆ ಮಾತುಕತೆ ಆಲಿಸುತ್ತಿದ್ದ. ಈ ನಡುವೆ ನಾನು ಕಾರ್ಮಿಕರನ್ನು ಕಳಿಸಿಲ್ಲ ಎಂದು ರಾಮು ಸುಳ್ಳು ಹೇಳಿದ. ಅಷ್ಟೊತ್ತಿಗಾಗಲೇ ತಹಶೀಲ್ದಾರ್ ಅವರನ್ನು ಸಂಪರ್ಕಿಸಿ ಆಗಿತ್ತು. ಸಾಮಾಜಿಕ ಕಾರ್ಯಕರ್ತರು ಮಾಲೀಕನನ್ನು ತರಾಟೆಗೆ ತೆಗೆದುಕೊಂಡರು. ಮಾಲೀಕ ಮಾತ್ರ ಒಂದಕ್ಕೂ ಉತ್ತರಿಸದೆ ಮೌನ ವಹಿಸಿದ್ದ. ಆದರೆ ಜಮೀನಿನ ಮಾಲೀಕ ವಿನಯ್ ‘ಸರ್ ಇರಲು ಕಾರ್ಮಿಕರಿಗೆ ಅವಕಾಶ ಕೊಡುತ್ತೇನೆ. ಕುಡಿಯಲು ನೀರು ಒದಗಿಸುತ್ತೇನೆ. ಊಟದ ವ್ಯವಸ್ಥೆ ಆಗೋಲ್ಲ’ ಅಂದ್ರು ಒಂದು ತೀರ್ಮಾನಕ್ಕೆ ಬಂದು ಕಾರ್ಮಿಕರಿಗೆ ಅಲ್ಲೇ ಇರಲು ವ್ಯವಸ್ಥೆ ಮಾಡಲಾಯಿತು.

ಆದರೂ ವಲಸೆ ಕಾರ್ಮಿಕರಲ್ಲಿ ಆತಂಕವಿತ್ತು. ಭದ್ರತೆಯ ಕೊರತೆ ಇತ್ತು. ಊಟದ ಸಮಸ್ಯೆ ಇತ್ತು. ಮಾಲೀಕರು ಏನು ಮಾಡುತ್ತಾರೋ ಎಂಬ ಭಯವಿತ್ತು. ಇದರ ನಡುವೆ ಊರಿಗೆ ಹೋಗುವ ಕಾತರವೂ ಇತ್ತು.  ಮನಸ್ಸು ಇಬ್ಬಂದಿಯಾಗಿತ್ತು. ಇರುವುದೋ, ಹೋಗುವುದೋ ಎಂಬ ಪ್ರಶ್ನೆ ಎದುರಾಗಿತ್ತು. ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ವ್ಯವಸ್ಥೆ ಏನು ಎಂಬ ಪ್ರಶ್ನೆಗಳು ಅವರ ಮನದಲ್ಲಿ ಮೂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...