Homeಮುಖಪುಟಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು

ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು

- Advertisement -
- Advertisement -

ಮಟಮಟ ಮಧ್ಯಾಹ್ನದ ಉರಿ ಬಿಸಿಲು. ಸೂರ್ಯ ನೆತ್ತಿಯ ಮೇಲಿದ್ದ. ಕೆಲಸ ಕಳೆದುಕೊಂಡ ಆ ಹುಡುಗರು ಮೂತಿಗೆ ಕರವಸ್ತ್ರಗಳನ್ನು ಬಿಗಿದು ಬೆನ್ನಿಗೆ ಚೀಲಗಳನ್ನು ತಗಲುಹಾಕಿಕೊಂಡು ಹೆಜ್ಜೆ ಹಾಕುತ್ತ ಬರುತ್ತಿದ್ದರು. ಬಿಸಿಲಿನ ಪ್ರಖರತೆ ಹೆಚ್ಚಿದ್ದರಿಂದ ಆ ಹುಡುಗರು ನಿಧಾನವಾಗಿ ನಡೆದು ಹೋಗುತ್ತಿದ್ದರು. ನಾವು ಬರುತ್ತಿದ್ದ ಕಾರನ್ನು ನಿಲ್ಲಿಸಿ ವಿಚಾರಿಸಿದಾಗ ಮಾಲಿಕ ರಾಮು ಆ ಕಾರ್ಮಿಕರನ್ನು ನಿರ್ದಯವಾಗಿ ರೂಮುಗಳಿಂದ ಹೊರಹಾಕಿದ್ದ. ಊಟವನ್ನೂ ಕೊಡದೆ ಕೆಲಸವಿಲ್ಲ ನಡೀರಿ ಎಂದು ಹೇಳಿಕಳಿಸಿದ್ದ. ಆ ವಲಸೆ ಕಾರ್ಮಿಕರ ಮುಖದಲ್ಲಿ ತಮ್ಮ ಊರುಗಳಿಗೆ ಸೇರುವ ಧಾವಂತವಿತ್ತು. ಮಾಲಿಕನ ಧೋರಣೆಗೆ ಬೇಸರವಿತ್ತು. ಆತಂಕದ ಗೆರೆಗಳು ಅವರ ಮುಖದಲ್ಲಿ ಎದ್ದುಕಾಣುತ್ತಿದ್ದವು.

ಹೌದು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ತುಮಕೂರು ತಾಲೂಕು ಮಲ್ಲಸಂದ್ರಕ್ಕೂ ಮೊದಲೇ ಬಲಭಾಗದಲ್ಲಿ ಸಿಗುವ ಗಜೇಂದ್ರ ಹಾರ್ಡ್ ವೇರ್ ನಲ್ಲಿ ದುಡಿಯುತ್ತಿದ್ದ ವಲಸೆ ಕಾರ್ಮಿಕರು ಅವರು. 12 ಜನರಿದ್ದ ಆ ಬಿಹಾರಿ ಕಾರ್ಮಿಕರು ಕಳೆದ ಒಂದು ವರ್ಷದಿಂದ ‘ಅಡಕೆಪಟ್ಟೆ ತಟ್ಟೆ’ ತಯಾರು ಮಾಡುತ್ತಿದ್ದರು. ಅಲ್ಲಿಗೆ ಹೋಗಿ ನೋಡಿದರೆ ಪಾಳುಬಿದ್ದ ಗೋಡೋನ್ ಬಳಿಯೇ ಕೆಲಸ. ಮಾಲಿಕ ರಾಮು ಹೃದರಾಬಾದ್ ನವನು. ಇಲ್ಲಿಯವರೆಗೂ ಕಾರ್ಮಿಕರಿಂದ ದುಡಿಸಿಕೊಂಡಿದ್ದ ಮಾಲಿಕ ಮೇ 12ರಂದು ರಾತ್ರಿ ಎಲ್ಲರಿಗೂ ಸಂಬಳ ನೀಡಿ ರೂಮುಗಳಿಂದ ಹೊರಹಾಕಿದ್ದಾನೆ.

ಹಾಗಾಗಿ ಆ ಯುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ಏನೂ ತೋಚದೆ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆ ಕಾರ್ಮಿಕರಿಗೆ ಪಿಎಫ್, ಇಲ್ಲ, ಸಂಬಳ ಚೀಟಿಯೂ ನೀಡಿಲ್ಲ. ಒಂದು ವರ್ಷ ನಿರಂತರವಾಗಿ ಪ್ರತಿನಿತ್ಯ 12 ಗಂಟೆ ದುಡಿಸಿಕೊಂಡು ಅವರನ್ನು ಅಡಕೆಪಟ್ಟೆ ತಟ್ಟೆ ತಯಾರಿಕೆ ಫ್ಯಾಕ್ಟರಿಯಿಂದ ಮಾಲಿಕ ಹೊರಹಾಕಿದ್ದ. ಬೀದಿಗೆ ಬಿದ್ದ ಕಾರ್ಮಿಕರು ತಮ್ಮ ಊರಾದ ಬಿಹಾರದ ಮಾಧವ್ ಪುರ್ ಮಲಾಟುಲಕ್ಕೆ ತೆರಳುತ್ತಿದ್ದರು. ನಾವು ತಡೆದಿದ್ದಕ್ಕಾಗಿ ಮರದ ನೆರಳಲ್ಲಿ ಸ್ವಲ್ಪಕಾಲ ವಿಶ್ರಮಿಸಿದರು. ಬಿಹಾರದ 12 ಮಂದಿ ವಲಸೆ ಕಾರ್ಮಿಕರು ಸೇವಾಸಿಂಧುವಿನಲ್ಲಿ ನೋಂದಣಿ ಮಾಡಿಸಿದ್ದಾರೆ. ಅವರಲ್ಲಿ ಹಿರಿಯರೊಬ್ಬರು ಮಾತ್ರ ತಾಂತ್ರಿಕ ತೊಂದರೆ ಆಗಿ ನೋಂದಣಿ ಮಾಡಿಸಿರಲಿಲ್ಲ. ನೋಂದಣಿ ಮಾಡಿಸಿದವರಿರೂ ಇನ್ನೂ ಮೆಸೇಜ್ ಬಂದಿರಲಿಲ್ಲ.

ಇದನ್ನು ಮಾಲಿಕ ರಾಮುಗೆ ಹೇಳಿದರೆ ‘ನಾನೇನು ಮಾಡಲು ಸಾಧ್ಯವಿಲ್ಲ. ನಿಮ್ಮ ಊರಿಗೆ ತೆರಳಿ ಎಂದು ಬ್ಯಾಗ್ ಗಳನ್ನು ಹೊರ ಎಸೆದು ರೂಮುಗಳಿಗೆ ಬೀಗಹಾಕಿದ್ದಾನೆ. ಇದರಿಂದ ನೊಂದ ಆ ಯುವ ವಲಸೆ ಕಾರ್ಮಿಕರು ತುಮಕೂರಿನತ್ತ ಸಾಗುತ್ತಿದ್ದರು. ಅವರನ್ನು ತಡೆದು ನಿಲ್ಲಿಸಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಸಾಮಾಕಿ ಕಾರ್ಯಕರ್ತ ತಾಜುದ್ದೀನ್ ಷರೀಫ್ ಮತ್ತು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಸಮಸ್ಯೆ ಏನೆಂಬುದನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಲಸೆ ಕಾರ್ಮಿಕ ಪ್ಯಾರೆಲಾಲ್, ಗಜೇಂದ್ರ ಹಾರ್ಡ್ ವೇರ್ ಮಾಲಿಕ ರಾಮು ಸಂಬಳ ನೀಡಿ, ನಿಮಗೆ ಇನ್ನು ಕೆಲಸವಿಲ್ಲ. ಇಲ್ಲಿಂದ ಹೊರಡಿ ಎಂದು ಫ್ಯಾಕ್ಟರಿಯಿಂದ ಹೊರಹಾಕಿದರು. ಶೀಟ್ ಡ್ಯಾಮೇಜ್ ಮಾಡಿದ್ದಕ್ಕಾಗಿ 12 ಸಾವಿರ ರೂಪಾಯಿ ಹಿಡಿದುಕೊಂಡಿದ್ದಾರೆ. ಊಟ ಕೊಟ್ಟಿಲ್ಲ. ಸೇವಾಸಿಂಧುವಿನಲ್ಲಿ ನೋಂದಣಿ ಮಾಡಿಸಿದ್ದೇವೆ. ಅಲ್ಲಿಂದ ಖಚಿತ ಮಾಹಿತಿ ಬಂದ ಮೇಲೆ ಊರಿಗೆ ತೆರಳುತ್ತೇವೆ. ಅಲ್ಲಿಯ ವರೆಗೂ ಇಲ್ಲಿರಲು ಅವಕಾಶ ಕೊಡಿ ಎಂದು ಮನವಿ ಮಾಡಿದೆವು. ಆದರೆ ನಮ್ಮ ಮನವಿಗೆ ಸ್ಪಂದಿಸಲಿಲ್ಲ. ಹೊರಹಾಕಿದರು ಎಂದು ಅಳಲುತೋಡಿಕೊಂಡರು.

ಪಕ್ಕದಲ್ಲಿಯೇ ಇದ್ದ ಫ್ಯಾಕ್ಟರಿಗೆ ಮಾಲಿಕರನ್ನು ಕಾಣಲು ಹೋದೆವು. ಆಗ ನಮ್ಮ ಎದುರಿಗೇ ಕಾರೊಂದು ಬಂತು. ನಿಲ್ಲಿಸಿ “ಇಲ್ಲಿ ಗಜೇಂದ್ರ ಹಾರ್ಡ್ ವೇರ್ ಇದೆಯಂತೆ ಎಲ್ಲಿ? ಅದರ ಮಾಲಿಕ ರಾಮು. ಅವರನ್ನು ಭೇಟಿ ಮಾಡಬೇಕೆಂದು ಕಾರಿನಲ್ಲಿದ್ದವರನ್ನು ಕೇಳಿದೆವು. ಆ ಹೆಸರಿನ ಮಾಲಿಕರೂ ಇಲ್ಲ. ಫ್ಯಾಕ್ಟರಿಯೂ ಇಲ್ಲ ಎಂದು ಹೇಳಿ ಹೋದರು. ಸ್ಥಳಕ್ಕೆ ಹೋದರೆ ಅಡಕೆಪಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹಳೆಯ ಗೋಡನ್ ನಲ್ಲಿ ಅಡಕೆಪಟ್ಟೆಗಳನ್ನು ಸಂಗ್ರಹಿಸಿಡಲಾಗಿತ್ತು. ಅದೇ ಅಡಕೆಪಟ್ಟೆ ತಟ್ಟೆ ತಯಾರಿಸುವ ಜಾಗವೆಂದು ತಿಳಿಯಿತು. ಅಲ್ಲಿದ್ದವರನ್ನು ವಿಚಾರಿಸಿದರೆ ವಿನಯ್ ಎಂಬಾತ ಮೊದಲು ದರ್ಪದಿಂದಲೇ ಮಾತನಾಡಿದ. ನಾವು ಜೋರು ಮಾಡುತ್ತಿದ್ದಂತೆ ನಾನು ಈ ನೆಲದ ಮಾಲಿಕ. ಬಾಡಿಗೆಗೆ ನೀಡಿದ್ದೇನೆ. ರಾಮು ಎಂಬುವರು ಫ್ಯಾಕ್ಟರಿ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು..

ಮಾಲೀಕ ರಾಮು

ನಂತರ ರಾಮುಗೆ ಪೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ಮತ್ತೆ ವಲಸೆ ಕಾರ್ಮಿಕರ ಬಳಿ ಹೋಗಿ ಮಾತುಕತೆ ನಡೆಸಿದೆವೆ. ಅರ್ಧ ಗಂಟೆ ಬಳಿಕ ಮಾಲಿಕ ರಾಮ ಅಲ್ಲಿಗೆ ಬಂದು ಮಳ್ಳನಂತೆ ಮಾತುಕತೆ ಆಲಿಸುತ್ತಿದ್ದ. ಈ ನಡುವೆ ನಾನು ಕಾರ್ಮಿಕರನ್ನು ಕಳಿಸಿಲ್ಲ ಎಂದು ರಾಮು ಸುಳ್ಳು ಹೇಳಿದ. ಅಷ್ಟೊತ್ತಿಗಾಗಲೇ ತಹಶೀಲ್ದಾರ್ ಅವರನ್ನು ಸಂಪರ್ಕಿಸಿ ಆಗಿತ್ತು. ಸಾಮಾಜಿಕ ಕಾರ್ಯಕರ್ತರು ಮಾಲೀಕನನ್ನು ತರಾಟೆಗೆ ತೆಗೆದುಕೊಂಡರು. ಮಾಲೀಕ ಮಾತ್ರ ಒಂದಕ್ಕೂ ಉತ್ತರಿಸದೆ ಮೌನ ವಹಿಸಿದ್ದ. ಆದರೆ ಜಮೀನಿನ ಮಾಲೀಕ ವಿನಯ್ ‘ಸರ್ ಇರಲು ಕಾರ್ಮಿಕರಿಗೆ ಅವಕಾಶ ಕೊಡುತ್ತೇನೆ. ಕುಡಿಯಲು ನೀರು ಒದಗಿಸುತ್ತೇನೆ. ಊಟದ ವ್ಯವಸ್ಥೆ ಆಗೋಲ್ಲ’ ಅಂದ್ರು ಒಂದು ತೀರ್ಮಾನಕ್ಕೆ ಬಂದು ಕಾರ್ಮಿಕರಿಗೆ ಅಲ್ಲೇ ಇರಲು ವ್ಯವಸ್ಥೆ ಮಾಡಲಾಯಿತು.

ಆದರೂ ವಲಸೆ ಕಾರ್ಮಿಕರಲ್ಲಿ ಆತಂಕವಿತ್ತು. ಭದ್ರತೆಯ ಕೊರತೆ ಇತ್ತು. ಊಟದ ಸಮಸ್ಯೆ ಇತ್ತು. ಮಾಲೀಕರು ಏನು ಮಾಡುತ್ತಾರೋ ಎಂಬ ಭಯವಿತ್ತು. ಇದರ ನಡುವೆ ಊರಿಗೆ ಹೋಗುವ ಕಾತರವೂ ಇತ್ತು.  ಮನಸ್ಸು ಇಬ್ಬಂದಿಯಾಗಿತ್ತು. ಇರುವುದೋ, ಹೋಗುವುದೋ ಎಂಬ ಪ್ರಶ್ನೆ ಎದುರಾಗಿತ್ತು. ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ವ್ಯವಸ್ಥೆ ಏನು ಎಂಬ ಪ್ರಶ್ನೆಗಳು ಅವರ ಮನದಲ್ಲಿ ಮೂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...