Homeಮುಖಪುಟಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು

ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ; ತುಮಕೂರಿನಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರ ಗೋಳು

- Advertisement -
- Advertisement -

ಮಟಮಟ ಮಧ್ಯಾಹ್ನದ ಉರಿ ಬಿಸಿಲು. ಸೂರ್ಯ ನೆತ್ತಿಯ ಮೇಲಿದ್ದ. ಕೆಲಸ ಕಳೆದುಕೊಂಡ ಆ ಹುಡುಗರು ಮೂತಿಗೆ ಕರವಸ್ತ್ರಗಳನ್ನು ಬಿಗಿದು ಬೆನ್ನಿಗೆ ಚೀಲಗಳನ್ನು ತಗಲುಹಾಕಿಕೊಂಡು ಹೆಜ್ಜೆ ಹಾಕುತ್ತ ಬರುತ್ತಿದ್ದರು. ಬಿಸಿಲಿನ ಪ್ರಖರತೆ ಹೆಚ್ಚಿದ್ದರಿಂದ ಆ ಹುಡುಗರು ನಿಧಾನವಾಗಿ ನಡೆದು ಹೋಗುತ್ತಿದ್ದರು. ನಾವು ಬರುತ್ತಿದ್ದ ಕಾರನ್ನು ನಿಲ್ಲಿಸಿ ವಿಚಾರಿಸಿದಾಗ ಮಾಲಿಕ ರಾಮು ಆ ಕಾರ್ಮಿಕರನ್ನು ನಿರ್ದಯವಾಗಿ ರೂಮುಗಳಿಂದ ಹೊರಹಾಕಿದ್ದ. ಊಟವನ್ನೂ ಕೊಡದೆ ಕೆಲಸವಿಲ್ಲ ನಡೀರಿ ಎಂದು ಹೇಳಿಕಳಿಸಿದ್ದ. ಆ ವಲಸೆ ಕಾರ್ಮಿಕರ ಮುಖದಲ್ಲಿ ತಮ್ಮ ಊರುಗಳಿಗೆ ಸೇರುವ ಧಾವಂತವಿತ್ತು. ಮಾಲಿಕನ ಧೋರಣೆಗೆ ಬೇಸರವಿತ್ತು. ಆತಂಕದ ಗೆರೆಗಳು ಅವರ ಮುಖದಲ್ಲಿ ಎದ್ದುಕಾಣುತ್ತಿದ್ದವು.

ಹೌದು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ತುಮಕೂರು ತಾಲೂಕು ಮಲ್ಲಸಂದ್ರಕ್ಕೂ ಮೊದಲೇ ಬಲಭಾಗದಲ್ಲಿ ಸಿಗುವ ಗಜೇಂದ್ರ ಹಾರ್ಡ್ ವೇರ್ ನಲ್ಲಿ ದುಡಿಯುತ್ತಿದ್ದ ವಲಸೆ ಕಾರ್ಮಿಕರು ಅವರು. 12 ಜನರಿದ್ದ ಆ ಬಿಹಾರಿ ಕಾರ್ಮಿಕರು ಕಳೆದ ಒಂದು ವರ್ಷದಿಂದ ‘ಅಡಕೆಪಟ್ಟೆ ತಟ್ಟೆ’ ತಯಾರು ಮಾಡುತ್ತಿದ್ದರು. ಅಲ್ಲಿಗೆ ಹೋಗಿ ನೋಡಿದರೆ ಪಾಳುಬಿದ್ದ ಗೋಡೋನ್ ಬಳಿಯೇ ಕೆಲಸ. ಮಾಲಿಕ ರಾಮು ಹೃದರಾಬಾದ್ ನವನು. ಇಲ್ಲಿಯವರೆಗೂ ಕಾರ್ಮಿಕರಿಂದ ದುಡಿಸಿಕೊಂಡಿದ್ದ ಮಾಲಿಕ ಮೇ 12ರಂದು ರಾತ್ರಿ ಎಲ್ಲರಿಗೂ ಸಂಬಳ ನೀಡಿ ರೂಮುಗಳಿಂದ ಹೊರಹಾಕಿದ್ದಾನೆ.

ಹಾಗಾಗಿ ಆ ಯುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ಏನೂ ತೋಚದೆ ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಆ ಕಾರ್ಮಿಕರಿಗೆ ಪಿಎಫ್, ಇಲ್ಲ, ಸಂಬಳ ಚೀಟಿಯೂ ನೀಡಿಲ್ಲ. ಒಂದು ವರ್ಷ ನಿರಂತರವಾಗಿ ಪ್ರತಿನಿತ್ಯ 12 ಗಂಟೆ ದುಡಿಸಿಕೊಂಡು ಅವರನ್ನು ಅಡಕೆಪಟ್ಟೆ ತಟ್ಟೆ ತಯಾರಿಕೆ ಫ್ಯಾಕ್ಟರಿಯಿಂದ ಮಾಲಿಕ ಹೊರಹಾಕಿದ್ದ. ಬೀದಿಗೆ ಬಿದ್ದ ಕಾರ್ಮಿಕರು ತಮ್ಮ ಊರಾದ ಬಿಹಾರದ ಮಾಧವ್ ಪುರ್ ಮಲಾಟುಲಕ್ಕೆ ತೆರಳುತ್ತಿದ್ದರು. ನಾವು ತಡೆದಿದ್ದಕ್ಕಾಗಿ ಮರದ ನೆರಳಲ್ಲಿ ಸ್ವಲ್ಪಕಾಲ ವಿಶ್ರಮಿಸಿದರು. ಬಿಹಾರದ 12 ಮಂದಿ ವಲಸೆ ಕಾರ್ಮಿಕರು ಸೇವಾಸಿಂಧುವಿನಲ್ಲಿ ನೋಂದಣಿ ಮಾಡಿಸಿದ್ದಾರೆ. ಅವರಲ್ಲಿ ಹಿರಿಯರೊಬ್ಬರು ಮಾತ್ರ ತಾಂತ್ರಿಕ ತೊಂದರೆ ಆಗಿ ನೋಂದಣಿ ಮಾಡಿಸಿರಲಿಲ್ಲ. ನೋಂದಣಿ ಮಾಡಿಸಿದವರಿರೂ ಇನ್ನೂ ಮೆಸೇಜ್ ಬಂದಿರಲಿಲ್ಲ.

ಇದನ್ನು ಮಾಲಿಕ ರಾಮುಗೆ ಹೇಳಿದರೆ ‘ನಾನೇನು ಮಾಡಲು ಸಾಧ್ಯವಿಲ್ಲ. ನಿಮ್ಮ ಊರಿಗೆ ತೆರಳಿ ಎಂದು ಬ್ಯಾಗ್ ಗಳನ್ನು ಹೊರ ಎಸೆದು ರೂಮುಗಳಿಗೆ ಬೀಗಹಾಕಿದ್ದಾನೆ. ಇದರಿಂದ ನೊಂದ ಆ ಯುವ ವಲಸೆ ಕಾರ್ಮಿಕರು ತುಮಕೂರಿನತ್ತ ಸಾಗುತ್ತಿದ್ದರು. ಅವರನ್ನು ತಡೆದು ನಿಲ್ಲಿಸಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಸಾಮಾಕಿ ಕಾರ್ಯಕರ್ತ ತಾಜುದ್ದೀನ್ ಷರೀಫ್ ಮತ್ತು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಸಮಸ್ಯೆ ಏನೆಂಬುದನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಲಸೆ ಕಾರ್ಮಿಕ ಪ್ಯಾರೆಲಾಲ್, ಗಜೇಂದ್ರ ಹಾರ್ಡ್ ವೇರ್ ಮಾಲಿಕ ರಾಮು ಸಂಬಳ ನೀಡಿ, ನಿಮಗೆ ಇನ್ನು ಕೆಲಸವಿಲ್ಲ. ಇಲ್ಲಿಂದ ಹೊರಡಿ ಎಂದು ಫ್ಯಾಕ್ಟರಿಯಿಂದ ಹೊರಹಾಕಿದರು. ಶೀಟ್ ಡ್ಯಾಮೇಜ್ ಮಾಡಿದ್ದಕ್ಕಾಗಿ 12 ಸಾವಿರ ರೂಪಾಯಿ ಹಿಡಿದುಕೊಂಡಿದ್ದಾರೆ. ಊಟ ಕೊಟ್ಟಿಲ್ಲ. ಸೇವಾಸಿಂಧುವಿನಲ್ಲಿ ನೋಂದಣಿ ಮಾಡಿಸಿದ್ದೇವೆ. ಅಲ್ಲಿಂದ ಖಚಿತ ಮಾಹಿತಿ ಬಂದ ಮೇಲೆ ಊರಿಗೆ ತೆರಳುತ್ತೇವೆ. ಅಲ್ಲಿಯ ವರೆಗೂ ಇಲ್ಲಿರಲು ಅವಕಾಶ ಕೊಡಿ ಎಂದು ಮನವಿ ಮಾಡಿದೆವು. ಆದರೆ ನಮ್ಮ ಮನವಿಗೆ ಸ್ಪಂದಿಸಲಿಲ್ಲ. ಹೊರಹಾಕಿದರು ಎಂದು ಅಳಲುತೋಡಿಕೊಂಡರು.

ಪಕ್ಕದಲ್ಲಿಯೇ ಇದ್ದ ಫ್ಯಾಕ್ಟರಿಗೆ ಮಾಲಿಕರನ್ನು ಕಾಣಲು ಹೋದೆವು. ಆಗ ನಮ್ಮ ಎದುರಿಗೇ ಕಾರೊಂದು ಬಂತು. ನಿಲ್ಲಿಸಿ “ಇಲ್ಲಿ ಗಜೇಂದ್ರ ಹಾರ್ಡ್ ವೇರ್ ಇದೆಯಂತೆ ಎಲ್ಲಿ? ಅದರ ಮಾಲಿಕ ರಾಮು. ಅವರನ್ನು ಭೇಟಿ ಮಾಡಬೇಕೆಂದು ಕಾರಿನಲ್ಲಿದ್ದವರನ್ನು ಕೇಳಿದೆವು. ಆ ಹೆಸರಿನ ಮಾಲಿಕರೂ ಇಲ್ಲ. ಫ್ಯಾಕ್ಟರಿಯೂ ಇಲ್ಲ ಎಂದು ಹೇಳಿ ಹೋದರು. ಸ್ಥಳಕ್ಕೆ ಹೋದರೆ ಅಡಕೆಪಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹಳೆಯ ಗೋಡನ್ ನಲ್ಲಿ ಅಡಕೆಪಟ್ಟೆಗಳನ್ನು ಸಂಗ್ರಹಿಸಿಡಲಾಗಿತ್ತು. ಅದೇ ಅಡಕೆಪಟ್ಟೆ ತಟ್ಟೆ ತಯಾರಿಸುವ ಜಾಗವೆಂದು ತಿಳಿಯಿತು. ಅಲ್ಲಿದ್ದವರನ್ನು ವಿಚಾರಿಸಿದರೆ ವಿನಯ್ ಎಂಬಾತ ಮೊದಲು ದರ್ಪದಿಂದಲೇ ಮಾತನಾಡಿದ. ನಾವು ಜೋರು ಮಾಡುತ್ತಿದ್ದಂತೆ ನಾನು ಈ ನೆಲದ ಮಾಲಿಕ. ಬಾಡಿಗೆಗೆ ನೀಡಿದ್ದೇನೆ. ರಾಮು ಎಂಬುವರು ಫ್ಯಾಕ್ಟರಿ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು..

ಮಾಲೀಕ ರಾಮು

ನಂತರ ರಾಮುಗೆ ಪೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ಮತ್ತೆ ವಲಸೆ ಕಾರ್ಮಿಕರ ಬಳಿ ಹೋಗಿ ಮಾತುಕತೆ ನಡೆಸಿದೆವೆ. ಅರ್ಧ ಗಂಟೆ ಬಳಿಕ ಮಾಲಿಕ ರಾಮ ಅಲ್ಲಿಗೆ ಬಂದು ಮಳ್ಳನಂತೆ ಮಾತುಕತೆ ಆಲಿಸುತ್ತಿದ್ದ. ಈ ನಡುವೆ ನಾನು ಕಾರ್ಮಿಕರನ್ನು ಕಳಿಸಿಲ್ಲ ಎಂದು ರಾಮು ಸುಳ್ಳು ಹೇಳಿದ. ಅಷ್ಟೊತ್ತಿಗಾಗಲೇ ತಹಶೀಲ್ದಾರ್ ಅವರನ್ನು ಸಂಪರ್ಕಿಸಿ ಆಗಿತ್ತು. ಸಾಮಾಜಿಕ ಕಾರ್ಯಕರ್ತರು ಮಾಲೀಕನನ್ನು ತರಾಟೆಗೆ ತೆಗೆದುಕೊಂಡರು. ಮಾಲೀಕ ಮಾತ್ರ ಒಂದಕ್ಕೂ ಉತ್ತರಿಸದೆ ಮೌನ ವಹಿಸಿದ್ದ. ಆದರೆ ಜಮೀನಿನ ಮಾಲೀಕ ವಿನಯ್ ‘ಸರ್ ಇರಲು ಕಾರ್ಮಿಕರಿಗೆ ಅವಕಾಶ ಕೊಡುತ್ತೇನೆ. ಕುಡಿಯಲು ನೀರು ಒದಗಿಸುತ್ತೇನೆ. ಊಟದ ವ್ಯವಸ್ಥೆ ಆಗೋಲ್ಲ’ ಅಂದ್ರು ಒಂದು ತೀರ್ಮಾನಕ್ಕೆ ಬಂದು ಕಾರ್ಮಿಕರಿಗೆ ಅಲ್ಲೇ ಇರಲು ವ್ಯವಸ್ಥೆ ಮಾಡಲಾಯಿತು.

ಆದರೂ ವಲಸೆ ಕಾರ್ಮಿಕರಲ್ಲಿ ಆತಂಕವಿತ್ತು. ಭದ್ರತೆಯ ಕೊರತೆ ಇತ್ತು. ಊಟದ ಸಮಸ್ಯೆ ಇತ್ತು. ಮಾಲೀಕರು ಏನು ಮಾಡುತ್ತಾರೋ ಎಂಬ ಭಯವಿತ್ತು. ಇದರ ನಡುವೆ ಊರಿಗೆ ಹೋಗುವ ಕಾತರವೂ ಇತ್ತು.  ಮನಸ್ಸು ಇಬ್ಬಂದಿಯಾಗಿತ್ತು. ಇರುವುದೋ, ಹೋಗುವುದೋ ಎಂಬ ಪ್ರಶ್ನೆ ಎದುರಾಗಿತ್ತು. ಹೋಗುವುದಾದರೆ ಎಲ್ಲಿಗೆ? ಇರುವುದಾದರೆ ಹೇಗೆ? ವ್ಯವಸ್ಥೆ ಏನು ಎಂಬ ಪ್ರಶ್ನೆಗಳು ಅವರ ಮನದಲ್ಲಿ ಮೂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...