Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...