Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...