Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...