Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...