Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...