Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...