Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...