Homeಮುಖಪುಟಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

ಶೇ.90ರಷ್ಟು ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಇಲ್ಲ ರೋಹಿಂಗ್ಯನ್ನರಿಗೆ ಆಶ್ರಯ

- Advertisement -
- Advertisement -

ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರಿರುವ ಇಂಡೋನೇಷ್ಯಾದಲ್ಲೂ ಮ್ಯಾನ್ಮಾರ್‌ನ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರಿಗೆ ನೆಲೆ ಸಿಕ್ಕಿಲ್ಲ. ಇಂಡೋನೇಷ್ಯಾದ ಜನರು ರೋಹಿಂಗ್ಯನ್ನರು ದೇಶ ತೊರೆಯುವಂತೆ ಆಗ್ರಹಿಸಿ ತಿರುಗಿ ಬಿದ್ದಿದ್ದಾರೆ.

ಕಳೆದ ಬುಧವಾರ ಇಂಡೋನೇಷ್ಯಾದ ಅಚೆ ಪ್ರಾಂತ್ಯದ ರಾಜಧಾನಿ ಬಂದಾ ಅಚೆಯಲ್ಲಿ ಸುಮಾರು 137 ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸ್ಥಳೀಯ ಸಮುದಾಯ ಭವನದ ನೆಲಮಾಳಿಗೆಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಾಳಿ ನಡೆಸಿದೆ.

ದಿ ಅಸೋಸಿಯೇಟೆಡ್ ಪ್ರೆಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪೊಲೀಸ್‌ ಭದ್ರತೆಯನ್ನು ಬೇಧಿಸಿ ಹಸಿರು ಜಾಕೆಟ್‌ ಧರಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ರೋಹಿಂಗ್ಯಾಗಳು ಆಶ್ರಯ ಪಡೆದಿದ್ದ ಸಮುದಾಯ ಭವನಕ್ಕೆ ನುಗ್ಗಿರುವುದು ಮತ್ತು ಈ ವೇಳೆ ರಕ್ಷಣೆಗಾಗಿ ಗೋಗರೆಯುತ್ತಿದ್ದ ಮಕ್ಕಳು, ಮಹಿಳೆಯರನ್ನು ಭದ್ರತಾ ಅಧಿಕಾರಿಗಳು ಟ್ರಕ್‌ಗೆ ಹತ್ತಿಸಿ ಬೇರೆಡೆಗೆ ಕರೆದೊಯ್ದಿರುವುದನ್ನು ಕಾಣಬಹುದು.

ಈ ಘಟನೆಗೆ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಏಜೆನ್ಸಿ ದುಖಃ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದ ಜನತೆ ರೋಹಿಂಗ್ಯಾಗಳ ಮೇಲೆ ತಿರುಗಿಬಿದ್ದ ಕಾರಣ ಸಂಘರ್ಷ ತಪ್ಪಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ರೋಹಿಂಗ್ಯಾಗಳನ್ನು ಹೊತ್ತು ಇಂಡೋನೇಷ್ಯಾ ಕಡೆ ಬರುವ ದೋಣಿಗಳನ್ನು ಸಮುದ್ರದಲ್ಲೇ ತಡೆದು ವಾಪಸ್ ಕಳುಹಿಸುತ್ತಿದೆ.

ಇಂಡೋನೇಷ್ಯಾದ ನೌಕಾಪಡೆ ಗುರುವಾರ ಅಚೆ ಪ್ರಾಂತ್ಯದ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದ ರೋಹಿಂಗ್ಯಾ ನಿರಾಶ್ರಿತರಿಂದ ತುಂಬಿದ್ದ ದೋಣಿಯನ್ನು ಬಲವಂತವಾಗಿ ಅಂತಾರಾಷ್ಟ್ರೀಯ ಜಲ ಗಡಿಯಿಂದ ಹೊರಗೆ ಕಳುಹಿಸಿದೆ.

ಸುಮಾತ್ರಾ ದ್ವೀಪದ ಭಾಗವಾಗಿರುವ ಅಚೆ ಪ್ರಾಂತ್ಯಕ್ಕೆ ನಿರಾಶ್ರಿತರನ್ನು ಹೊತ್ತ ಹೆಚ್ಚಿನ ದೋಣಿಗಳು ಆಗಮಿಸುತ್ತಿವೆ. ಎಲ್ಲಾ ದೋಣಿಗಳು ಬಾಂಗ್ಲಾದೇಶದ ಕಡೆಯಿಂದ ಬರುತ್ತಿವೆ ಎಂದು ವರದಿಗಳು ಹೇಳಿವೆ. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ರೋಹಿಂಗ್ಯನ್ನರು ತುಂಬಿ ತುಳುಕುತ್ತಿದ್ದಾರೆ. ಪರಿಣಾಮ ಕಳೆದ ನವೆಂಬರ್‌ನಿಂದ ಅನೇಕ ಜನರು ದೋಣಿಗಳ ಮೂಲಕ ಆಳ ಸಾಗರದಲ್ಲಿ ಅಪಾಯಕಾರಿ ಪ್ರಯಾಣ ಮಾಡಿ ಮಲೇಶ್ಯಾ, ಇಂಡೋನೇಷ್ಯಾಗಳಿಗೆ ತೆರಳುತ್ತಿದ್ದಾರೆ.

2027ರಲ್ಲಿ ತಮ್ಮ ಜನ್ಮ ನಾಡು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದಬ್ಬಾಳಿಕೆ ತಡೆಯಲಾಗದೆ ಸಾವಿರಾರು ರೋಹಿಂಗ್ಯನ್ನರು ತಮ್ಮದೆಲ್ಲವನ್ನೂ ತೊರೆದು ಬಾಂಗ್ಲಾದೇಶ, ಭಾರತದಂತಹ ಕೆಲ ರಾಷ್ಟ್ರಗಳಿಗೆ ತೆರಳಿ ನೆಲೆಸಿದ್ದಾರೆ.

ಬಾಂಗ್ಲಾದಿಂದ 1,500ಕ್ಕೂ ಹೆಚ್ಚು ರೋಹಿಂಗ್ಯನ್ನರು ಇಂಡೋನೇಷ್ಯಾಕ್ಕೆ ತೆರಳಿದ್ದಾರೆ. ಅವರಿಗೆ ಆಶ್ರಯ ನೀಡಲು ಅಲ್ಲಿನ ಜನರಿಂದ ವಿರೋಧವಿರುವ ಕಾರಣ ಸರ್ಕಾರ ಹೆದರುತ್ತಿದೆ. ಜನರು ತಿರುಗಿಬಿದ್ದರೆ ನಿಭಾಯಿಸುವುದು ಕಷ್ಟ ಎಂದರಿತಿರುವ ಇಂಡೋನೇಷ್ಯಾ ಸರ್ಕಾರ, ನಮ್ಮಲ್ಲಿ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಸಾಧ್ಯವಾಗುತ್ತಿಲ್ಲ. ಬೇರೆ ಯಾವುದಾದರು ದೇಶಗಳು ಅವರಿಗೆ ಆಶ್ರಯ ನೀಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಥೈಲ್ಯಾಂಡ್ ಮತ್ತು ಮಲೇಷಿಯಾದಂತೆ ವಿಶ್ವಸಂಸ್ಥೆಯ 1951ರ ನಿರಾಶ್ರಿತರಿಗೆ ಆಶ್ರಯ ನೀಡುವ ಒಪ್ಪಂದಕ್ಕೆ ಇಂಡೋನೇಷ್ಯಾ ಸಹಿ ಹಾಕಿಲ್ಲ. ಆದ್ದರಿಂದ, ಬಾಂಗ್ಲಾದೇಶದಿಂದ ಬರುವ ರೋಹಿಂಗ್ಯಾಗಳನ್ನು ಸ್ವೀಕರಿಸಲು ಅದು ಬಾಧ್ಯತೆ ಹೊಂದಿಲ್ಲ. ಇಲ್ಲಿಯವರೆಗೆ, ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಇಂಡೋನೇಷ್ಯಾ ನೀಡಿದೆ.

ಇಂಡೋನೇಷ್ಯಾದ 277 ಮಿಲಿಯನ್ ಜನ ಸಂಖ್ಯೆಯಲ್ಲಿ ಮುಸ್ಲಿಮರು ಶೇ. 90ರಷ್ಟಿದ್ದಾರೆ. ಆದರೂ, ಮುಸ್ಲಿಮರೇ ಆದ ರೋಹಿಂಗ್ಯನ್ನರಿಗೆ ಆಶ್ರಯ ನೀಡಲು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ರೋಹಿಂಗ್ಯನ್ನರು ನಮ್ಮ ದೇಶಕ್ಕೆ ಹೊರೆ, ಅವರ ನಡವಳಿಕೆ ಸರಿಯಿಲ್ಲ, ಇತ್ಯಾದಿ ಕಾರಣಗಳನ್ನು ಇಂಡೋನೇಷ್ಯಾದ ಜನತೆ ಮುಂದಿಟ್ಟಿದ್ದಾರೆ. ಒಟ್ಟಿನಲ್ಲಿ ಅತ್ತ ಜನ್ಮ ನಾಡು, ಇತ್ತ ಅನ್ಯ ನಾಡಿನಲ್ಲೂ ನೆಲೆಯಿಲ್ಲದೆ ಸಾವಿರಾರು ಬಡ ಜೀವಗಳು ಈ ಭೂಮಿಯಲ್ಲೇ ನೆಲೆ ಕಳೆದುಕೊಂಡಂತಾಗಿದೆ.

ಫೋಟೋ ಕೃಪೆ : ಸಿಎನ್‌ಎನ್‌

ಇದನ್ನೂ ಓದಿ : ಇಸ್ರೇಲ್‌ ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ದಕ್ಷಿಣ ಆಫ್ರಿಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...