Homeಕರ್ನಾಟಕರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

- Advertisement -
- Advertisement -

ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಇಲ್ಲ ಎಂದು ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಈ ಬಾರಿಯ ಬಜೆಟ್‌ ಜನಪರವಾಗಿರಬೇಕು ಎಂದು ಹಲವು ಬೇಡಿಕೆಗಳನ್ನು ಇಟ್ಟಿದ್ದರು. ಆದರೆ, ಎಲ್ಲವೂ ಈಡೇರಿದೆ ಎಂದು ಅನಿಸುತ್ತಿಲ್ಲ” ಎಂದು ಹೇಳಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ರೈತರಿಗೆ ಇನ್ನಷ್ಟು ಹೆಚ್ಚು ಒತ್ತು ಕೊಡಬಹುದಿತ್ತು; ಮುಂದಿನ ದಿನಗಳಲ್ಲಿ ಬಜೆಟ್‌ನಲ್ಲಿ ರೈತರಿಗೆ, ಕೃಷಿಕರಿಗೆ ಮೀಸಲಿಡಬೇಕಾದಂತಹ ಹಣ ನಿಗಧಿ ಮಾಡಬೇಕು. ದೇಶದ ಮತ್ತು ರಾಜ್ಯದ ಜಿಡಿಪಿ ಅಭಿವೃದ್ಧಿಯಾಗಬೇಕೆಂದರೆ, ರೈತರ ಆದಾಯ ಹೆಚ್ಚಾಗಬೇಕು. ರೈತರ ಆದಾಯ ಹೆಚ್ಚಾಗದೇ ದೇಶದ ಅಭಿವೃದ್ದಿ ಸಾಧ್ಯವಿಲ್ಲ. ರೈತರನ್ನು ನಗರಗಳಿಗೆ ಕರೆತಂದು ಕೆಲಸ ಕೊಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ನೀರಾವರಿಗೆ ಅನುದಾನ ಹೆಚ್ಚು ಮಾಡಬೇಕಿತ್ತು; ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮೊದಲೇ ರೈತರಿಗೆ ವಿದ್ಯುತ್‌, ಟ್ರಾನ್ಸ್‌ಫಾರ್ಮ್‌ಗಳಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಇನ್ನು ಸಂಪೂರ್ಣವಾಗಿ ಬೇಸಿಗೆ ಪ್ರಾರಂಭವಾದರೆ ರೈತರ ಪರಿಸ್ಥಿತಿ ಏನು ಅನ್ನುವುದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕಿತ್ತು. ನೀರಾವರಿಗೆ ಬಜೆಟ್‌ ಜಾಸ್ತಿ ಮಾಡಬೇಕು. ಸರ್ಕಾರ ರೈತರಿಗೆ, ಕಾರ್ಮಿಕರಿಗೆ ಬೆಂಬಲ ಕೊಡವ ರೀತಿಯಲ್ಲಿ ಬಜೆಟ್‌ಗಳನ್ನು ಮಂಡಿಸಬೇಕು” ಎಂದು ಹೇಳಿದರು.

ಕಾರ್ಮಿಕ ಮುಖಂಡರಾದ ಮೈತ್ರೇಯಿ ಕೃಷ್ಣನ್ ಮಾತನಾಡಿ, “ವರ್ಡ್‌ ಇನ್ ಇಕ್ವಾಲಿಟಿ ಲ್ಯಾಬ್’ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವುದಕ್ಕೆ ಮೊದಲಿದ್ದ ಪರಿಸ್ಥಿತಿಯೇ ಈಗಲೂ ಇದೆ. ಕಳೆದ 15 ವರ್ಷಗಳಲ್ಲಿ ಅಸಮಾನತೆ ಇನ್ನೂ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ 271 ಜನ ಬಿಲೇನಿಯರ್‌ಗಳಿದ್ದಾರೆ. ದೇಶದ ಬಡತನ ಕೂಡ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ” ಎಂದರು.

“ಶೇ. 10 ಜನರಲ್ಲಿ ಬಳಿ ಶೇ.77ರಷ್ಟು ಆಸ್ತಿ ಇದೆ. ಶೇ.73 ರಷ್ಟು ಜನರ ಬಳಿ ಉಳಿದ ಆಸ್ತಿ ಇದೆ. ಈ ಬಗ್ಗೆ ಸರ್ಕಾರದ ಕ್ರಮಗಳು ಏನಿರಬೇಕು ಎಂಬುದು ಮುಖ್ಯವಾಗುತ್ತದೆ. ಅಸಮಾನತೆಯನ್ನು ಹೆಚ್ಚು ಮಾಡುವ ನೀತಿಗಳನ್ನು ಜಾರಿ ಮಾಡಲಾಗುತ್ತದೆ. ‘ಬ್ಲೂಮ್ ವರದಿ’ ಪ್ರಕಾರ, ದೇಶದ ಒಂದು ಬಿಲಿಯನ್ ಜನರಿಗೆ ಅತ್ಯವಶ್ಯಕ ವಸ್ತುಗಗಳನ್ನು ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಅಂದರೆಮ ದೇಶದ 10 ಜನರಲ್ಲಿ 9 ಜನರಿಗೆ ತಮಗೆ ಬೇಕಾಗಿರುವದನ್ನು ಕೊಳ್ಳುವ ಶಕ್ತಿ ಇಲ್ಲ” ಎಂದು ವಿವರಿಸಿದರು.

ಮೈತ್ರೇಯಿ ಕೃಷ್ಣನ್

“ಕೇಂದ್ರ ಸರ್ಕಾರದ ಬಜೆಟ್‌ನ ಆರ್ಥಿಕ ಸಮೀಕ್ಷೆ ಪ್ರಕಾರ, ದೇಶದ ಕಂಪನಿಗಳು ನೆಲದ ಕಾನೂನುಗಳನ್ನು ಪಾಲನೆ ಮಾಡಿ ಬೆಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಾರೆ. ಕಾರ್ಮಿಕ ಕಾನೂನುಗಳನ್ನು ಇನ್ನಷ್ಟು ಸಡಿಲಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಹೊಸ 4 ಕಾರ್ಮಿಕ ಕಾನೂನುಗಳಲ್ಲಿ ಸಂಪೂರ್ಣವಾಗಿ ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಮುಖ್ಯವಾಗಿ, ಈವರಗೆ ಇದ್ದ ಕಾಯ್ದೆ ಪ್ರಕಾರ 100 ಜನ ಇದ್ದರೆ ಕಾನೂನು ಅನ್ವಯ ಆಗುತ್ತದೆ; ಅದನ್ನು 300 ಜನಕ್ಕೆ ಏರಿಕೆ ಮಾಡಬೇಕು ಎಂದು ಹೊಸ ಕಾನೂನು ಹೇಳುತ್ತದೆ. ಇದರಿಂದ, ಶೇ.85 ಕಂಪನಿಗಳು ಈ ಕಾನೂನಿನಿಂದ ಹೊರಬರುತ್ತವೆ” ಎಂದರು.

“ಕಳೆದ 10 ವರ್ಷಗಳಲ್ಲಿ ಖಾಯಂ ಕೆಲಸ ತುಂಬಾ ಕಡಿಮೆಯಾಗಿ, ಗುತ್ತಿಗೆ ಪದ್ಧತಿ ಹೆಚ್ಚಾಗಿದೆ. ಇದಕ್ಕೆ ಹೊಸ ಹೆಸರುಗಳನ್ನು ನೀಡಲಾಗಿದೆ. ಅವರಿಗೆ ಕೆಲಸ, ವೇತನ ಹಾಗೂ ಸಾಮಾಜಿಕ ಭದ್ರತೆ ಕೊಡುತ್ತಿಲ್ಲ. ಕೇಂದ್ರದ ಆರ್ಥಿಕ ಸಮೀಕ್ಷೆಯಲ್ಲಿ ಇಷ್ಟೆಲ್ಲಾ ಮಾಡಲಾಗುತ್ತಿದೆ” ಎಂದು ವಿವರಿಸಿದರು.

“ರಾಜ್ಯ ಬಜೆಟ್‌ ಕೂಡ ಕೇಂದ್ರಕ್ಕಿಂತ ಭಿನ್ನವಾಗೇನೂ ಇಲ್ಲ, ಪಿಪಿಪಿ (ಪಬ್ಲಿಕ್ ಫಂಡ್ಸ್‌ ಫಾರ್ ಪ್ರೈವೇಟ್) ಮೂಲಕ ಎಲ್ಲ ವಲಯದಲ್ಲಿ ಇದನ್ನೇ ಪಾಲಿಸಿದ್ದಾರೆ. ರಾಜ್ಯದಲ್ಲಿ 24 ಲಕ್ಷ ಸಂಘಟಿತ ಕಾರ್ಮಿಕರಿದ್ದಾರೆ. ಇವರ ಸಂಖ್ಯೆಯಲ್ಲಿ ಹೆಚ್ಚಳ ಆಗಿಲ್ಲ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆ ಹೇಳುತ್ತದೆ. ಇ-ಶ್ರಮ್ ಪ್ರಕಾರ ಅಸಂಘಟಿತ ಕಾರ್ಮಿಕರು  1.6 ಲಕ್ಷ ಜನರಿದ್ದಾರೆ. ಮತ್ತೊಂದು ಕಡೆ ಕೇವಲ 24 ಲಕ್ಷ ಸಂಘಟಿತ ಕಾರ್ಮಿಕರಿದ್ದಾರೆ. ಉದ್ಯೋಗ ಸೃಷ್ಠಿಯೇ ಆಗುತ್ತಿಲ್ಲ. ಆದರೆ, ಫಾಕ್ಸ್‌ಕಾನ್‌ ನಂತಹ ಕಂಪನಿಗಳಿಗೆ ಸಾಕಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಫಾಕ್ಸ್‌ಕಾನ್ ಕಂಪನಿ ರಾಜ್ಯಕ್ಕೆ ಬರಲಿ ಎಂಬ ಕಾರಣಕ್ಕೆ ಕಾರ್ಮಿಕರ ದುಡಿಯುವ ಸಮಯವನ್ನು ಎಂಟರಿಂದ ಒಂಬತ್ತು ಗಂಟೆಗೆ ಹೆಚ್ಚಿಸಲಾಯಿತು. ರಾಜ್ಯದಲ್ಲಿ ಕಾರ್ಪೊರೇಟ್‌ ನೀತಿಗಳನ್ನು ಜಾರಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಕೇಂದ್ರ ಸರ್ಕಾರ ಜನಪರ ವಿಚಾರಗಳಿಗೆ ಸ್ಪಂದಿಸುತ್ತಿಲ್ಲ

ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಕೆ.ವಿ. ಭಟ್ ಮಾತನಾಡಿ, “ಕೇಂದ್ರ ಸರ್ಕಾರದ ಬಜೆಟ್‌ ಕಾರ್ಮಿಕ, ವಿದ್ಯಾರ್ಥಿ, ಯುವಜನರ ವಿರೋಧಿ ನೀತಿಯಾಗಿದೆ. ಕಾರ್ಮಿಕರ ಅಭಿವೃದಿಗೆ ಸೇರಿದಂತೆ ಹಲವು ಜನಪರ ಯೋಜನೆಗಳಿಗೆ ಹಣ ನೀಡದೇ ಸಾವಿರಾರೂ ಕೋಟಿ ರೂಪಾಯಿ ಕಡಿತ ಮಾಡಿದ್ದಾರೆ. ವ್ಯಾಪಾರಸ್ಥರ ಅನುಕೂಲಕ್ಕಾಗಿ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಾವಿರಾರೂ ಕೋಟಿ ರೂ.ಗಳನ್ನು ಕೊಟ್ಟಿದ್ದಾರೆಯೇ ಹೊರತು, ಕೇಂದ್ರ ಸರ್ಕಾರ ಯಾವ ರೂಪದಲ್ಲೂ ಜನಪರ ವಿಚಾರಗಳಿಗೆ ಸ್ಪಂದಿಸುವ ರೀತಿಯಲ್ಲಿ ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ವಿ. ಭಟ್

“ಕರಾಳ ಕೃಷಿ ಕಾಯಿದೆಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ, ಒಂದು ವರ್ಷಗಳ ಕಾಲ ರೈತರು ದಿಲ್ಲಿಯಲ್ಲಿ ಹೋರಾಟ ಮಾಡಿದ್ದರು. ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರಾಳ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆದುಕೊಳ್ಳುತ್ತೇವೆಂದು ಹೇಳಿದ್ದಕ್ಕಾಗಿ, ಹೋರಾಟವನ್ನು ವಾಪಸ್ಸು ಪಡೆದುಕೊಂಡರು. ಆದರೆ, ಸರ್ಕಾರ ನೀಡಿದ ಭರವಸೆಯಂತೆ ಯಾವುದನ್ನು ವಾಪಸ್ಸು ಪಡೆದುಕೊಂಡಿಲ್ಲ. ಅಷ್ಟೇ ಅಲ್ಲದೇ ವಿದ್ಯುತ್‌ ಕಾಯಿದೆಯನ್ನು ಅಂಗೀಕರಿಸಿ ಹಲವು ರೈತರಿಗೆ ಕಿರುಕಳ ಕೊಡುವುದಕ್ಕೆ ಪ್ರಾರಂಭಿಸಿದ್ದಾರೆ. ಇದರ ವಿರುದ್ಧ ರೈತರು ದಂಗೇಳುತ್ತಿದ್ದಾರೆ” ಎಂದರು.

“ರಾಜ್ಯ ಸರ್ಕಾರದ ಬಜೆಟ್‌ ಕಾರ್ಮಿಕರ ಪರವಾಗಿಲ್ಲ. ಅದರಲ್ಲಿ ಯಾವುದೇ ರೀತಿಯ ಕನಿಷ್ಠ ವೇತನ ಹೆಚ್ಚಿಸುವುದಾಗಲಿ, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದರ ಬಗೆಯಾಗಲಿ ಮಾತಿಲ್ಲ. ಅಷ್ಟೇ ಅಲ್ಲದೇ ಸಾವಿರಾರು ಎಕರೆ ಜಮೀನನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಜಾಗತಿಕ ಹೂಡಿಕೆ ಮೂಲಕ ವ್ಯವಹಾರ ಮಾಡುತ್ತಿದ್ದಾರೆ. ಈ ಎಲ್ಲ ಅನ್ಯಾಯದ ವಿರುದ್ಧ ಜನ ದಂಗೇಳಬೇಕಾದ ಅವಶ್ಯಕತೆ ಇದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಅನಿವಾರ್ಯವಾಗಿದೆ” ಎಂದು ಹೇಳಿದರು.

‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುದರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...