Homeಕರ್ನಾಟಕರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

- Advertisement -
- Advertisement -

ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಇಲ್ಲ ಎಂದು ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಈ ಬಾರಿಯ ಬಜೆಟ್‌ ಜನಪರವಾಗಿರಬೇಕು ಎಂದು ಹಲವು ಬೇಡಿಕೆಗಳನ್ನು ಇಟ್ಟಿದ್ದರು. ಆದರೆ, ಎಲ್ಲವೂ ಈಡೇರಿದೆ ಎಂದು ಅನಿಸುತ್ತಿಲ್ಲ” ಎಂದು ಹೇಳಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ರೈತರಿಗೆ ಇನ್ನಷ್ಟು ಹೆಚ್ಚು ಒತ್ತು ಕೊಡಬಹುದಿತ್ತು; ಮುಂದಿನ ದಿನಗಳಲ್ಲಿ ಬಜೆಟ್‌ನಲ್ಲಿ ರೈತರಿಗೆ, ಕೃಷಿಕರಿಗೆ ಮೀಸಲಿಡಬೇಕಾದಂತಹ ಹಣ ನಿಗಧಿ ಮಾಡಬೇಕು. ದೇಶದ ಮತ್ತು ರಾಜ್ಯದ ಜಿಡಿಪಿ ಅಭಿವೃದ್ಧಿಯಾಗಬೇಕೆಂದರೆ, ರೈತರ ಆದಾಯ ಹೆಚ್ಚಾಗಬೇಕು. ರೈತರ ಆದಾಯ ಹೆಚ್ಚಾಗದೇ ದೇಶದ ಅಭಿವೃದ್ದಿ ಸಾಧ್ಯವಿಲ್ಲ. ರೈತರನ್ನು ನಗರಗಳಿಗೆ ಕರೆತಂದು ಕೆಲಸ ಕೊಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ನೀರಾವರಿಗೆ ಅನುದಾನ ಹೆಚ್ಚು ಮಾಡಬೇಕಿತ್ತು; ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮೊದಲೇ ರೈತರಿಗೆ ವಿದ್ಯುತ್‌, ಟ್ರಾನ್ಸ್‌ಫಾರ್ಮ್‌ಗಳಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಇನ್ನು ಸಂಪೂರ್ಣವಾಗಿ ಬೇಸಿಗೆ ಪ್ರಾರಂಭವಾದರೆ ರೈತರ ಪರಿಸ್ಥಿತಿ ಏನು ಅನ್ನುವುದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕಿತ್ತು. ನೀರಾವರಿಗೆ ಬಜೆಟ್‌ ಜಾಸ್ತಿ ಮಾಡಬೇಕು. ಸರ್ಕಾರ ರೈತರಿಗೆ, ಕಾರ್ಮಿಕರಿಗೆ ಬೆಂಬಲ ಕೊಡವ ರೀತಿಯಲ್ಲಿ ಬಜೆಟ್‌ಗಳನ್ನು ಮಂಡಿಸಬೇಕು” ಎಂದು ಹೇಳಿದರು.

ಕಾರ್ಮಿಕ ಮುಖಂಡರಾದ ಮೈತ್ರೇಯಿ ಕೃಷ್ಣನ್ ಮಾತನಾಡಿ, “ವರ್ಡ್‌ ಇನ್ ಇಕ್ವಾಲಿಟಿ ಲ್ಯಾಬ್’ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವುದಕ್ಕೆ ಮೊದಲಿದ್ದ ಪರಿಸ್ಥಿತಿಯೇ ಈಗಲೂ ಇದೆ. ಕಳೆದ 15 ವರ್ಷಗಳಲ್ಲಿ ಅಸಮಾನತೆ ಇನ್ನೂ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ 271 ಜನ ಬಿಲೇನಿಯರ್‌ಗಳಿದ್ದಾರೆ. ದೇಶದ ಬಡತನ ಕೂಡ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ” ಎಂದರು.

“ಶೇ. 10 ಜನರಲ್ಲಿ ಬಳಿ ಶೇ.77ರಷ್ಟು ಆಸ್ತಿ ಇದೆ. ಶೇ.73 ರಷ್ಟು ಜನರ ಬಳಿ ಉಳಿದ ಆಸ್ತಿ ಇದೆ. ಈ ಬಗ್ಗೆ ಸರ್ಕಾರದ ಕ್ರಮಗಳು ಏನಿರಬೇಕು ಎಂಬುದು ಮುಖ್ಯವಾಗುತ್ತದೆ. ಅಸಮಾನತೆಯನ್ನು ಹೆಚ್ಚು ಮಾಡುವ ನೀತಿಗಳನ್ನು ಜಾರಿ ಮಾಡಲಾಗುತ್ತದೆ. ‘ಬ್ಲೂಮ್ ವರದಿ’ ಪ್ರಕಾರ, ದೇಶದ ಒಂದು ಬಿಲಿಯನ್ ಜನರಿಗೆ ಅತ್ಯವಶ್ಯಕ ವಸ್ತುಗಗಳನ್ನು ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಅಂದರೆಮ ದೇಶದ 10 ಜನರಲ್ಲಿ 9 ಜನರಿಗೆ ತಮಗೆ ಬೇಕಾಗಿರುವದನ್ನು ಕೊಳ್ಳುವ ಶಕ್ತಿ ಇಲ್ಲ” ಎಂದು ವಿವರಿಸಿದರು.

ಮೈತ್ರೇಯಿ ಕೃಷ್ಣನ್

“ಕೇಂದ್ರ ಸರ್ಕಾರದ ಬಜೆಟ್‌ನ ಆರ್ಥಿಕ ಸಮೀಕ್ಷೆ ಪ್ರಕಾರ, ದೇಶದ ಕಂಪನಿಗಳು ನೆಲದ ಕಾನೂನುಗಳನ್ನು ಪಾಲನೆ ಮಾಡಿ ಬೆಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಾರೆ. ಕಾರ್ಮಿಕ ಕಾನೂನುಗಳನ್ನು ಇನ್ನಷ್ಟು ಸಡಿಲಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಹೊಸ 4 ಕಾರ್ಮಿಕ ಕಾನೂನುಗಳಲ್ಲಿ ಸಂಪೂರ್ಣವಾಗಿ ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಮುಖ್ಯವಾಗಿ, ಈವರಗೆ ಇದ್ದ ಕಾಯ್ದೆ ಪ್ರಕಾರ 100 ಜನ ಇದ್ದರೆ ಕಾನೂನು ಅನ್ವಯ ಆಗುತ್ತದೆ; ಅದನ್ನು 300 ಜನಕ್ಕೆ ಏರಿಕೆ ಮಾಡಬೇಕು ಎಂದು ಹೊಸ ಕಾನೂನು ಹೇಳುತ್ತದೆ. ಇದರಿಂದ, ಶೇ.85 ಕಂಪನಿಗಳು ಈ ಕಾನೂನಿನಿಂದ ಹೊರಬರುತ್ತವೆ” ಎಂದರು.

“ಕಳೆದ 10 ವರ್ಷಗಳಲ್ಲಿ ಖಾಯಂ ಕೆಲಸ ತುಂಬಾ ಕಡಿಮೆಯಾಗಿ, ಗುತ್ತಿಗೆ ಪದ್ಧತಿ ಹೆಚ್ಚಾಗಿದೆ. ಇದಕ್ಕೆ ಹೊಸ ಹೆಸರುಗಳನ್ನು ನೀಡಲಾಗಿದೆ. ಅವರಿಗೆ ಕೆಲಸ, ವೇತನ ಹಾಗೂ ಸಾಮಾಜಿಕ ಭದ್ರತೆ ಕೊಡುತ್ತಿಲ್ಲ. ಕೇಂದ್ರದ ಆರ್ಥಿಕ ಸಮೀಕ್ಷೆಯಲ್ಲಿ ಇಷ್ಟೆಲ್ಲಾ ಮಾಡಲಾಗುತ್ತಿದೆ” ಎಂದು ವಿವರಿಸಿದರು.

“ರಾಜ್ಯ ಬಜೆಟ್‌ ಕೂಡ ಕೇಂದ್ರಕ್ಕಿಂತ ಭಿನ್ನವಾಗೇನೂ ಇಲ್ಲ, ಪಿಪಿಪಿ (ಪಬ್ಲಿಕ್ ಫಂಡ್ಸ್‌ ಫಾರ್ ಪ್ರೈವೇಟ್) ಮೂಲಕ ಎಲ್ಲ ವಲಯದಲ್ಲಿ ಇದನ್ನೇ ಪಾಲಿಸಿದ್ದಾರೆ. ರಾಜ್ಯದಲ್ಲಿ 24 ಲಕ್ಷ ಸಂಘಟಿತ ಕಾರ್ಮಿಕರಿದ್ದಾರೆ. ಇವರ ಸಂಖ್ಯೆಯಲ್ಲಿ ಹೆಚ್ಚಳ ಆಗಿಲ್ಲ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆ ಹೇಳುತ್ತದೆ. ಇ-ಶ್ರಮ್ ಪ್ರಕಾರ ಅಸಂಘಟಿತ ಕಾರ್ಮಿಕರು  1.6 ಲಕ್ಷ ಜನರಿದ್ದಾರೆ. ಮತ್ತೊಂದು ಕಡೆ ಕೇವಲ 24 ಲಕ್ಷ ಸಂಘಟಿತ ಕಾರ್ಮಿಕರಿದ್ದಾರೆ. ಉದ್ಯೋಗ ಸೃಷ್ಠಿಯೇ ಆಗುತ್ತಿಲ್ಲ. ಆದರೆ, ಫಾಕ್ಸ್‌ಕಾನ್‌ ನಂತಹ ಕಂಪನಿಗಳಿಗೆ ಸಾಕಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಫಾಕ್ಸ್‌ಕಾನ್ ಕಂಪನಿ ರಾಜ್ಯಕ್ಕೆ ಬರಲಿ ಎಂಬ ಕಾರಣಕ್ಕೆ ಕಾರ್ಮಿಕರ ದುಡಿಯುವ ಸಮಯವನ್ನು ಎಂಟರಿಂದ ಒಂಬತ್ತು ಗಂಟೆಗೆ ಹೆಚ್ಚಿಸಲಾಯಿತು. ರಾಜ್ಯದಲ್ಲಿ ಕಾರ್ಪೊರೇಟ್‌ ನೀತಿಗಳನ್ನು ಜಾರಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಕೇಂದ್ರ ಸರ್ಕಾರ ಜನಪರ ವಿಚಾರಗಳಿಗೆ ಸ್ಪಂದಿಸುತ್ತಿಲ್ಲ

ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಕೆ.ವಿ. ಭಟ್ ಮಾತನಾಡಿ, “ಕೇಂದ್ರ ಸರ್ಕಾರದ ಬಜೆಟ್‌ ಕಾರ್ಮಿಕ, ವಿದ್ಯಾರ್ಥಿ, ಯುವಜನರ ವಿರೋಧಿ ನೀತಿಯಾಗಿದೆ. ಕಾರ್ಮಿಕರ ಅಭಿವೃದಿಗೆ ಸೇರಿದಂತೆ ಹಲವು ಜನಪರ ಯೋಜನೆಗಳಿಗೆ ಹಣ ನೀಡದೇ ಸಾವಿರಾರೂ ಕೋಟಿ ರೂಪಾಯಿ ಕಡಿತ ಮಾಡಿದ್ದಾರೆ. ವ್ಯಾಪಾರಸ್ಥರ ಅನುಕೂಲಕ್ಕಾಗಿ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಾವಿರಾರೂ ಕೋಟಿ ರೂ.ಗಳನ್ನು ಕೊಟ್ಟಿದ್ದಾರೆಯೇ ಹೊರತು, ಕೇಂದ್ರ ಸರ್ಕಾರ ಯಾವ ರೂಪದಲ್ಲೂ ಜನಪರ ವಿಚಾರಗಳಿಗೆ ಸ್ಪಂದಿಸುವ ರೀತಿಯಲ್ಲಿ ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ವಿ. ಭಟ್

“ಕರಾಳ ಕೃಷಿ ಕಾಯಿದೆಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ, ಒಂದು ವರ್ಷಗಳ ಕಾಲ ರೈತರು ದಿಲ್ಲಿಯಲ್ಲಿ ಹೋರಾಟ ಮಾಡಿದ್ದರು. ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರಾಳ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆದುಕೊಳ್ಳುತ್ತೇವೆಂದು ಹೇಳಿದ್ದಕ್ಕಾಗಿ, ಹೋರಾಟವನ್ನು ವಾಪಸ್ಸು ಪಡೆದುಕೊಂಡರು. ಆದರೆ, ಸರ್ಕಾರ ನೀಡಿದ ಭರವಸೆಯಂತೆ ಯಾವುದನ್ನು ವಾಪಸ್ಸು ಪಡೆದುಕೊಂಡಿಲ್ಲ. ಅಷ್ಟೇ ಅಲ್ಲದೇ ವಿದ್ಯುತ್‌ ಕಾಯಿದೆಯನ್ನು ಅಂಗೀಕರಿಸಿ ಹಲವು ರೈತರಿಗೆ ಕಿರುಕಳ ಕೊಡುವುದಕ್ಕೆ ಪ್ರಾರಂಭಿಸಿದ್ದಾರೆ. ಇದರ ವಿರುದ್ಧ ರೈತರು ದಂಗೇಳುತ್ತಿದ್ದಾರೆ” ಎಂದರು.

“ರಾಜ್ಯ ಸರ್ಕಾರದ ಬಜೆಟ್‌ ಕಾರ್ಮಿಕರ ಪರವಾಗಿಲ್ಲ. ಅದರಲ್ಲಿ ಯಾವುದೇ ರೀತಿಯ ಕನಿಷ್ಠ ವೇತನ ಹೆಚ್ಚಿಸುವುದಾಗಲಿ, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದರ ಬಗೆಯಾಗಲಿ ಮಾತಿಲ್ಲ. ಅಷ್ಟೇ ಅಲ್ಲದೇ ಸಾವಿರಾರು ಎಕರೆ ಜಮೀನನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಜಾಗತಿಕ ಹೂಡಿಕೆ ಮೂಲಕ ವ್ಯವಹಾರ ಮಾಡುತ್ತಿದ್ದಾರೆ. ಈ ಎಲ್ಲ ಅನ್ಯಾಯದ ವಿರುದ್ಧ ಜನ ದಂಗೇಳಬೇಕಾದ ಅವಶ್ಯಕತೆ ಇದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಅನಿವಾರ್ಯವಾಗಿದೆ” ಎಂದು ಹೇಳಿದರು.

‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುದರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...