Homeಕರ್ನಾಟಕರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

- Advertisement -
- Advertisement -

ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಇಲ್ಲ ಎಂದು ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಈ ಬಾರಿಯ ಬಜೆಟ್‌ ಜನಪರವಾಗಿರಬೇಕು ಎಂದು ಹಲವು ಬೇಡಿಕೆಗಳನ್ನು ಇಟ್ಟಿದ್ದರು. ಆದರೆ, ಎಲ್ಲವೂ ಈಡೇರಿದೆ ಎಂದು ಅನಿಸುತ್ತಿಲ್ಲ” ಎಂದು ಹೇಳಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ರೈತರಿಗೆ ಇನ್ನಷ್ಟು ಹೆಚ್ಚು ಒತ್ತು ಕೊಡಬಹುದಿತ್ತು; ಮುಂದಿನ ದಿನಗಳಲ್ಲಿ ಬಜೆಟ್‌ನಲ್ಲಿ ರೈತರಿಗೆ, ಕೃಷಿಕರಿಗೆ ಮೀಸಲಿಡಬೇಕಾದಂತಹ ಹಣ ನಿಗಧಿ ಮಾಡಬೇಕು. ದೇಶದ ಮತ್ತು ರಾಜ್ಯದ ಜಿಡಿಪಿ ಅಭಿವೃದ್ಧಿಯಾಗಬೇಕೆಂದರೆ, ರೈತರ ಆದಾಯ ಹೆಚ್ಚಾಗಬೇಕು. ರೈತರ ಆದಾಯ ಹೆಚ್ಚಾಗದೇ ದೇಶದ ಅಭಿವೃದ್ದಿ ಸಾಧ್ಯವಿಲ್ಲ. ರೈತರನ್ನು ನಗರಗಳಿಗೆ ಕರೆತಂದು ಕೆಲಸ ಕೊಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ನೀರಾವರಿಗೆ ಅನುದಾನ ಹೆಚ್ಚು ಮಾಡಬೇಕಿತ್ತು; ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮೊದಲೇ ರೈತರಿಗೆ ವಿದ್ಯುತ್‌, ಟ್ರಾನ್ಸ್‌ಫಾರ್ಮ್‌ಗಳಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಇನ್ನು ಸಂಪೂರ್ಣವಾಗಿ ಬೇಸಿಗೆ ಪ್ರಾರಂಭವಾದರೆ ರೈತರ ಪರಿಸ್ಥಿತಿ ಏನು ಅನ್ನುವುದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕಿತ್ತು. ನೀರಾವರಿಗೆ ಬಜೆಟ್‌ ಜಾಸ್ತಿ ಮಾಡಬೇಕು. ಸರ್ಕಾರ ರೈತರಿಗೆ, ಕಾರ್ಮಿಕರಿಗೆ ಬೆಂಬಲ ಕೊಡವ ರೀತಿಯಲ್ಲಿ ಬಜೆಟ್‌ಗಳನ್ನು ಮಂಡಿಸಬೇಕು” ಎಂದು ಹೇಳಿದರು.

ಕಾರ್ಮಿಕ ಮುಖಂಡರಾದ ಮೈತ್ರೇಯಿ ಕೃಷ್ಣನ್ ಮಾತನಾಡಿ, “ವರ್ಡ್‌ ಇನ್ ಇಕ್ವಾಲಿಟಿ ಲ್ಯಾಬ್’ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವುದಕ್ಕೆ ಮೊದಲಿದ್ದ ಪರಿಸ್ಥಿತಿಯೇ ಈಗಲೂ ಇದೆ. ಕಳೆದ 15 ವರ್ಷಗಳಲ್ಲಿ ಅಸಮಾನತೆ ಇನ್ನೂ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ 271 ಜನ ಬಿಲೇನಿಯರ್‌ಗಳಿದ್ದಾರೆ. ದೇಶದ ಬಡತನ ಕೂಡ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ” ಎಂದರು.

“ಶೇ. 10 ಜನರಲ್ಲಿ ಬಳಿ ಶೇ.77ರಷ್ಟು ಆಸ್ತಿ ಇದೆ. ಶೇ.73 ರಷ್ಟು ಜನರ ಬಳಿ ಉಳಿದ ಆಸ್ತಿ ಇದೆ. ಈ ಬಗ್ಗೆ ಸರ್ಕಾರದ ಕ್ರಮಗಳು ಏನಿರಬೇಕು ಎಂಬುದು ಮುಖ್ಯವಾಗುತ್ತದೆ. ಅಸಮಾನತೆಯನ್ನು ಹೆಚ್ಚು ಮಾಡುವ ನೀತಿಗಳನ್ನು ಜಾರಿ ಮಾಡಲಾಗುತ್ತದೆ. ‘ಬ್ಲೂಮ್ ವರದಿ’ ಪ್ರಕಾರ, ದೇಶದ ಒಂದು ಬಿಲಿಯನ್ ಜನರಿಗೆ ಅತ್ಯವಶ್ಯಕ ವಸ್ತುಗಗಳನ್ನು ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಅಂದರೆಮ ದೇಶದ 10 ಜನರಲ್ಲಿ 9 ಜನರಿಗೆ ತಮಗೆ ಬೇಕಾಗಿರುವದನ್ನು ಕೊಳ್ಳುವ ಶಕ್ತಿ ಇಲ್ಲ” ಎಂದು ವಿವರಿಸಿದರು.

ಮೈತ್ರೇಯಿ ಕೃಷ್ಣನ್

“ಕೇಂದ್ರ ಸರ್ಕಾರದ ಬಜೆಟ್‌ನ ಆರ್ಥಿಕ ಸಮೀಕ್ಷೆ ಪ್ರಕಾರ, ದೇಶದ ಕಂಪನಿಗಳು ನೆಲದ ಕಾನೂನುಗಳನ್ನು ಪಾಲನೆ ಮಾಡಿ ಬೆಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಾರೆ. ಕಾರ್ಮಿಕ ಕಾನೂನುಗಳನ್ನು ಇನ್ನಷ್ಟು ಸಡಿಲಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಹೊಸ 4 ಕಾರ್ಮಿಕ ಕಾನೂನುಗಳಲ್ಲಿ ಸಂಪೂರ್ಣವಾಗಿ ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಮುಖ್ಯವಾಗಿ, ಈವರಗೆ ಇದ್ದ ಕಾಯ್ದೆ ಪ್ರಕಾರ 100 ಜನ ಇದ್ದರೆ ಕಾನೂನು ಅನ್ವಯ ಆಗುತ್ತದೆ; ಅದನ್ನು 300 ಜನಕ್ಕೆ ಏರಿಕೆ ಮಾಡಬೇಕು ಎಂದು ಹೊಸ ಕಾನೂನು ಹೇಳುತ್ತದೆ. ಇದರಿಂದ, ಶೇ.85 ಕಂಪನಿಗಳು ಈ ಕಾನೂನಿನಿಂದ ಹೊರಬರುತ್ತವೆ” ಎಂದರು.

“ಕಳೆದ 10 ವರ್ಷಗಳಲ್ಲಿ ಖಾಯಂ ಕೆಲಸ ತುಂಬಾ ಕಡಿಮೆಯಾಗಿ, ಗುತ್ತಿಗೆ ಪದ್ಧತಿ ಹೆಚ್ಚಾಗಿದೆ. ಇದಕ್ಕೆ ಹೊಸ ಹೆಸರುಗಳನ್ನು ನೀಡಲಾಗಿದೆ. ಅವರಿಗೆ ಕೆಲಸ, ವೇತನ ಹಾಗೂ ಸಾಮಾಜಿಕ ಭದ್ರತೆ ಕೊಡುತ್ತಿಲ್ಲ. ಕೇಂದ್ರದ ಆರ್ಥಿಕ ಸಮೀಕ್ಷೆಯಲ್ಲಿ ಇಷ್ಟೆಲ್ಲಾ ಮಾಡಲಾಗುತ್ತಿದೆ” ಎಂದು ವಿವರಿಸಿದರು.

“ರಾಜ್ಯ ಬಜೆಟ್‌ ಕೂಡ ಕೇಂದ್ರಕ್ಕಿಂತ ಭಿನ್ನವಾಗೇನೂ ಇಲ್ಲ, ಪಿಪಿಪಿ (ಪಬ್ಲಿಕ್ ಫಂಡ್ಸ್‌ ಫಾರ್ ಪ್ರೈವೇಟ್) ಮೂಲಕ ಎಲ್ಲ ವಲಯದಲ್ಲಿ ಇದನ್ನೇ ಪಾಲಿಸಿದ್ದಾರೆ. ರಾಜ್ಯದಲ್ಲಿ 24 ಲಕ್ಷ ಸಂಘಟಿತ ಕಾರ್ಮಿಕರಿದ್ದಾರೆ. ಇವರ ಸಂಖ್ಯೆಯಲ್ಲಿ ಹೆಚ್ಚಳ ಆಗಿಲ್ಲ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆ ಹೇಳುತ್ತದೆ. ಇ-ಶ್ರಮ್ ಪ್ರಕಾರ ಅಸಂಘಟಿತ ಕಾರ್ಮಿಕರು  1.6 ಲಕ್ಷ ಜನರಿದ್ದಾರೆ. ಮತ್ತೊಂದು ಕಡೆ ಕೇವಲ 24 ಲಕ್ಷ ಸಂಘಟಿತ ಕಾರ್ಮಿಕರಿದ್ದಾರೆ. ಉದ್ಯೋಗ ಸೃಷ್ಠಿಯೇ ಆಗುತ್ತಿಲ್ಲ. ಆದರೆ, ಫಾಕ್ಸ್‌ಕಾನ್‌ ನಂತಹ ಕಂಪನಿಗಳಿಗೆ ಸಾಕಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಫಾಕ್ಸ್‌ಕಾನ್ ಕಂಪನಿ ರಾಜ್ಯಕ್ಕೆ ಬರಲಿ ಎಂಬ ಕಾರಣಕ್ಕೆ ಕಾರ್ಮಿಕರ ದುಡಿಯುವ ಸಮಯವನ್ನು ಎಂಟರಿಂದ ಒಂಬತ್ತು ಗಂಟೆಗೆ ಹೆಚ್ಚಿಸಲಾಯಿತು. ರಾಜ್ಯದಲ್ಲಿ ಕಾರ್ಪೊರೇಟ್‌ ನೀತಿಗಳನ್ನು ಜಾರಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಕೇಂದ್ರ ಸರ್ಕಾರ ಜನಪರ ವಿಚಾರಗಳಿಗೆ ಸ್ಪಂದಿಸುತ್ತಿಲ್ಲ

ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಕೆ.ವಿ. ಭಟ್ ಮಾತನಾಡಿ, “ಕೇಂದ್ರ ಸರ್ಕಾರದ ಬಜೆಟ್‌ ಕಾರ್ಮಿಕ, ವಿದ್ಯಾರ್ಥಿ, ಯುವಜನರ ವಿರೋಧಿ ನೀತಿಯಾಗಿದೆ. ಕಾರ್ಮಿಕರ ಅಭಿವೃದಿಗೆ ಸೇರಿದಂತೆ ಹಲವು ಜನಪರ ಯೋಜನೆಗಳಿಗೆ ಹಣ ನೀಡದೇ ಸಾವಿರಾರೂ ಕೋಟಿ ರೂಪಾಯಿ ಕಡಿತ ಮಾಡಿದ್ದಾರೆ. ವ್ಯಾಪಾರಸ್ಥರ ಅನುಕೂಲಕ್ಕಾಗಿ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಾವಿರಾರೂ ಕೋಟಿ ರೂ.ಗಳನ್ನು ಕೊಟ್ಟಿದ್ದಾರೆಯೇ ಹೊರತು, ಕೇಂದ್ರ ಸರ್ಕಾರ ಯಾವ ರೂಪದಲ್ಲೂ ಜನಪರ ವಿಚಾರಗಳಿಗೆ ಸ್ಪಂದಿಸುವ ರೀತಿಯಲ್ಲಿ ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ವಿ. ಭಟ್

“ಕರಾಳ ಕೃಷಿ ಕಾಯಿದೆಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ, ಒಂದು ವರ್ಷಗಳ ಕಾಲ ರೈತರು ದಿಲ್ಲಿಯಲ್ಲಿ ಹೋರಾಟ ಮಾಡಿದ್ದರು. ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರಾಳ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆದುಕೊಳ್ಳುತ್ತೇವೆಂದು ಹೇಳಿದ್ದಕ್ಕಾಗಿ, ಹೋರಾಟವನ್ನು ವಾಪಸ್ಸು ಪಡೆದುಕೊಂಡರು. ಆದರೆ, ಸರ್ಕಾರ ನೀಡಿದ ಭರವಸೆಯಂತೆ ಯಾವುದನ್ನು ವಾಪಸ್ಸು ಪಡೆದುಕೊಂಡಿಲ್ಲ. ಅಷ್ಟೇ ಅಲ್ಲದೇ ವಿದ್ಯುತ್‌ ಕಾಯಿದೆಯನ್ನು ಅಂಗೀಕರಿಸಿ ಹಲವು ರೈತರಿಗೆ ಕಿರುಕಳ ಕೊಡುವುದಕ್ಕೆ ಪ್ರಾರಂಭಿಸಿದ್ದಾರೆ. ಇದರ ವಿರುದ್ಧ ರೈತರು ದಂಗೇಳುತ್ತಿದ್ದಾರೆ” ಎಂದರು.

“ರಾಜ್ಯ ಸರ್ಕಾರದ ಬಜೆಟ್‌ ಕಾರ್ಮಿಕರ ಪರವಾಗಿಲ್ಲ. ಅದರಲ್ಲಿ ಯಾವುದೇ ರೀತಿಯ ಕನಿಷ್ಠ ವೇತನ ಹೆಚ್ಚಿಸುವುದಾಗಲಿ, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದರ ಬಗೆಯಾಗಲಿ ಮಾತಿಲ್ಲ. ಅಷ್ಟೇ ಅಲ್ಲದೇ ಸಾವಿರಾರು ಎಕರೆ ಜಮೀನನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಜಾಗತಿಕ ಹೂಡಿಕೆ ಮೂಲಕ ವ್ಯವಹಾರ ಮಾಡುತ್ತಿದ್ದಾರೆ. ಈ ಎಲ್ಲ ಅನ್ಯಾಯದ ವಿರುದ್ಧ ಜನ ದಂಗೇಳಬೇಕಾದ ಅವಶ್ಯಕತೆ ಇದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಅನಿವಾರ್ಯವಾಗಿದೆ” ಎಂದು ಹೇಳಿದರು.

‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುದರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...