Homeಕರ್ನಾಟಕಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಜೆಡಿಎಸ್ ಮೈಸೂರು ಭಾಗದಲ್ಲಿ ಮಾತ್ರ ಸೀಮಿತವಾದ ಪಕ್ಷ. ಹಾಗಾಗಿ ಈ ಬಾರಿ ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಖಚಿತ.

- Advertisement -
- Advertisement -

ಬಿಜೆಪಿಯ ರಾಜೇಶ್ ಗೌಡ ಮತ್ತು ನನ್ನ ಮಗ ಯತೀಂದ್ರ ಸ್ನೇಹಿತರು. ನನಗೆ ಹೇಗೆ ಸ್ನೇಹಿತ ಆಗಲು ಸಾಧ್ಯ. ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ವಯಸ್ಸು, ರಾಜೇಶ್ ಗೌಡನ ವಯಸ್ಸು ವ್ಯತ್ಯಾಸವಿಲ್ಲವೇ? ಅದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಗೊತ್ತಿಲ್ಲವೇ? ಮಾಜಿ ಮುಖ್ಯಮಂತ್ರಿ ಜವಾಬ್ದಾರಿಯಿಂದ ಮಾತನಾಡಬೇಕು. ರಾಜಕೀಯ ಬೇರೆ, ಸ್ನೇಹ ಬೇರೆ. ಬೇಜವಾಬ್ದಾರಿ ಮಾತುಗಳು ಶೋಭೆ ತರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅಗ್ಗದ ಯೋಜನೆ ಮೂಲಕ ಜನರ ತುಟಿಗೆ ತುಪ್ಪ ಸವರಿದ್ದಾರೆ: ಕುಮಾರಸ್ವಾಮಿ

ಮಾಜಿ ಸಂಸದ ಮೂಡ್ಲಗಿರಿಯಪ್ಪ ಅವರು ಕುಮಾರಸ್ವಾಮಿ ಅವರಿಗೆ ಚನ್ನಾಗಿ ಗೊತ್ತು. ಅವರೇ ಹೇಳಿ ರಾಜೇಶ್ ಗೌಡನನ್ನು ಕಣಕ್ಕೆ ಇಳಿಸಿರಬಹುದಲ್ಲ ಎಂದು ಮಾಧ್ಯಮದವರಿಗೆ ಪ್ರಶ್ನೆ ಹಾಕಿದರು.

ಕಾಂಗ್ರೆಸ್‌‌ಗೆ ಸಿದ್ದರಾಮಯ್ಯ ಕೊನೆ ಮೊಳೆ ಹೊಡೆಯುತ್ತಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅದೊಂದು ಬೇಜವಾಬ್ದಾರಿ ಹೇಳಿಕೆ, ಅವರು ನೀಡುವ ಎಲ್ಲಾ ಹೇಳಿಕೆಗಳಿಗೂ ಪ್ರತಿಕ್ರಿಯೆ ಮಾಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಮೈಸೂರು ಭಾಗದಲ್ಲಿ ಮಾತ್ರ ಸೀಮಿತವಾದ ಪಕ್ಷ. ಹಾಗಾಗಿ ಈ ಬಾರಿ ಶಿರಾ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಖಚಿತ. ಹಿಂದೆ ಅಪಪ್ರಚಾರ ನಡೆಸಿದ್ದರಿಂದ ಜಾತಿಯ ಮೇಲಾಟ ಆಗಿ ಜಯಚಂದ್ರ ಸೋತರು. ಈ ಬಾರಿ ಎಲ್ಲಾ ನಾಯಕರು ಒಗ್ಗೂಡಿ ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಾನು ಕೂಡ ನಾಲ್ಕು ದಿನಗಳ ಕಾಲ ತುಮಕೂರಿನಲ್ಲಿ ಉಳಿದುಕೊಳ್ಳುತ್ತೇನೆ. ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇನೆ. ಜೊತೆಗೆ ಡಾ. ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ ಸೇರಿದಂತೆ ಎಲ್ಲಾ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡುಗುತ್ತಾರೆ. ಹಿಂದೆ ಅವರವರ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದರು. ಈಗ ಎಲ್ಲರೂ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಬಿಜೆಪಿ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ನಮ್ಮ ಕಾಲದಲ್ಲಿ ಆದ ಅನ್ನಭಾಗ್ಯ, ಶೂ ಭಾಗ್ಯ, ಕುಟೀರ ಭಾಗ್ಯ, ಎಲ್ಲ ಕಾರ್ಯಕ್ರಮಗಳು ಅನುಷ್ಠಾನಕ್ಕೆ ತಂದೆವು. ಆದರೆ ಬಿಜೆಪಿ ಸರ್ಕಾರದಲ್ಲಿ ಒಂದು ಕೆಲಸವೂ ಆಗುತ್ತಿಲ್ಲ. ಬಿಜೆಪಿ ಶಿರಾ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.

ಯಡಿಯೂರಪ್ಪ ಸರ್ಕಾರದಲ್ಲಿ ರಸ್ತೆ ಅಭಿವೃದ್ಧಿ ಆಗಿಲ್ಲ. ನೀರಾವರಿಗೆ ಹಣ ನೀಡಿಲ್ಲ.ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ. ಶಿರಾ ಕ್ಷೇತ್ರದ ಅಭಿವೃದ್ಧಿಗೂ ಹಣ ನೀಡಿಲ್ಲ. ಟಿ.ಬಿ.ಜಯಚಂದ್ರ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ. ಅದನ್ನೇ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದರು.

ಜಾತಿಗಳ ಸಮೀಕ್ಷೆಯಿಂದ ಅವರ ಸಾಮಾಜಿಕ ಆರ್ಥಿಕ, ರಾಜಕೀಯ ಮತ್ತು ಔದ್ಯೋಗಿ ಸ್ಥಿತಿಗತಿಗಳು ತಿಳಿಯುತ್ತದೆ. ಆಗ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ. ಅಧಿಕಾರ ಹಂಚಿಕೆಗೂ ಅನುಕೂಲವಾಗುತ್ತದೆ. ಹಾಗಾಗಿ ಜಾತಿ ಸಮೀಕ್ಷೆ ಮಾಡಲಾಯಿತು. ಜಾತಿ ಸಮೀಕ್ಷಾ ವರದಿ ನಾನು ಮುಖ್ಯಮಂತ್ರಿ ಆಗಿದ್ದಾಗ ಪೂರ್ಣಗೊಂಡಿರಲಿಲ್ಲ. ಹಾಗಾಗಿ ಅದನ್ನು ಜಾರಿ ಮಾಡಲು ಆಗಲಿಲ್ಲ.

ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾದಾಗ ವರದಿ ಪೂರ್ಣವಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ತೆಗೆದುಕೊಳ್ಳಲಿಲ್ಲ. ಬಿಜೆಪಿಯ ಯಡಿಯೂರಪ್ಪನವರೂ ಅದರ ಬಗ್ಗೆ ಗಮನಹರಿಸಲಿಲ್ಲ. ಆದರೆ ಜಾತಿ ಸಮೀಕ್ಷೆ ನಡೆಸುತ್ತಿದ್ದ ಅಧ್ಯಕ್ಷರನ್ನೇ ವಜಾ ಮಾಡಿದರು. ಹಾಗಾಗಿ ಅವರ ವರದಿಯನ್ನು ಕಾರ್ಯದರ್ಶಿಗಳಿಗೆ ನೀಡಿ ಹೋದರು ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್‌ನಿಂದ ದಿವಂಗತ ಸತ್ಯನಾರಾಯಣ ಪತ್ನಿ ಕಣಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...