Homeಕರ್ನಾಟಕಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಜೆಡಿಎಸ್ ಮೈಸೂರು ಭಾಗದಲ್ಲಿ ಮಾತ್ರ ಸೀಮಿತವಾದ ಪಕ್ಷ. ಹಾಗಾಗಿ ಈ ಬಾರಿ ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಖಚಿತ.

- Advertisement -
- Advertisement -

ಬಿಜೆಪಿಯ ರಾಜೇಶ್ ಗೌಡ ಮತ್ತು ನನ್ನ ಮಗ ಯತೀಂದ್ರ ಸ್ನೇಹಿತರು. ನನಗೆ ಹೇಗೆ ಸ್ನೇಹಿತ ಆಗಲು ಸಾಧ್ಯ. ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ವಯಸ್ಸು, ರಾಜೇಶ್ ಗೌಡನ ವಯಸ್ಸು ವ್ಯತ್ಯಾಸವಿಲ್ಲವೇ? ಅದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಗೊತ್ತಿಲ್ಲವೇ? ಮಾಜಿ ಮುಖ್ಯಮಂತ್ರಿ ಜವಾಬ್ದಾರಿಯಿಂದ ಮಾತನಾಡಬೇಕು. ರಾಜಕೀಯ ಬೇರೆ, ಸ್ನೇಹ ಬೇರೆ. ಬೇಜವಾಬ್ದಾರಿ ಮಾತುಗಳು ಶೋಭೆ ತರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅಗ್ಗದ ಯೋಜನೆ ಮೂಲಕ ಜನರ ತುಟಿಗೆ ತುಪ್ಪ ಸವರಿದ್ದಾರೆ: ಕುಮಾರಸ್ವಾಮಿ

ಮಾಜಿ ಸಂಸದ ಮೂಡ್ಲಗಿರಿಯಪ್ಪ ಅವರು ಕುಮಾರಸ್ವಾಮಿ ಅವರಿಗೆ ಚನ್ನಾಗಿ ಗೊತ್ತು. ಅವರೇ ಹೇಳಿ ರಾಜೇಶ್ ಗೌಡನನ್ನು ಕಣಕ್ಕೆ ಇಳಿಸಿರಬಹುದಲ್ಲ ಎಂದು ಮಾಧ್ಯಮದವರಿಗೆ ಪ್ರಶ್ನೆ ಹಾಕಿದರು.

ಕಾಂಗ್ರೆಸ್‌‌ಗೆ ಸಿದ್ದರಾಮಯ್ಯ ಕೊನೆ ಮೊಳೆ ಹೊಡೆಯುತ್ತಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅದೊಂದು ಬೇಜವಾಬ್ದಾರಿ ಹೇಳಿಕೆ, ಅವರು ನೀಡುವ ಎಲ್ಲಾ ಹೇಳಿಕೆಗಳಿಗೂ ಪ್ರತಿಕ್ರಿಯೆ ಮಾಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಮೈಸೂರು ಭಾಗದಲ್ಲಿ ಮಾತ್ರ ಸೀಮಿತವಾದ ಪಕ್ಷ. ಹಾಗಾಗಿ ಈ ಬಾರಿ ಶಿರಾ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಖಚಿತ. ಹಿಂದೆ ಅಪಪ್ರಚಾರ ನಡೆಸಿದ್ದರಿಂದ ಜಾತಿಯ ಮೇಲಾಟ ಆಗಿ ಜಯಚಂದ್ರ ಸೋತರು. ಈ ಬಾರಿ ಎಲ್ಲಾ ನಾಯಕರು ಒಗ್ಗೂಡಿ ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಾನು ಕೂಡ ನಾಲ್ಕು ದಿನಗಳ ಕಾಲ ತುಮಕೂರಿನಲ್ಲಿ ಉಳಿದುಕೊಳ್ಳುತ್ತೇನೆ. ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇನೆ. ಜೊತೆಗೆ ಡಾ. ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ ಸೇರಿದಂತೆ ಎಲ್ಲಾ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡುಗುತ್ತಾರೆ. ಹಿಂದೆ ಅವರವರ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದರು. ಈಗ ಎಲ್ಲರೂ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಬಿಜೆಪಿ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ನಮ್ಮ ಕಾಲದಲ್ಲಿ ಆದ ಅನ್ನಭಾಗ್ಯ, ಶೂ ಭಾಗ್ಯ, ಕುಟೀರ ಭಾಗ್ಯ, ಎಲ್ಲ ಕಾರ್ಯಕ್ರಮಗಳು ಅನುಷ್ಠಾನಕ್ಕೆ ತಂದೆವು. ಆದರೆ ಬಿಜೆಪಿ ಸರ್ಕಾರದಲ್ಲಿ ಒಂದು ಕೆಲಸವೂ ಆಗುತ್ತಿಲ್ಲ. ಬಿಜೆಪಿ ಶಿರಾ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.

ಯಡಿಯೂರಪ್ಪ ಸರ್ಕಾರದಲ್ಲಿ ರಸ್ತೆ ಅಭಿವೃದ್ಧಿ ಆಗಿಲ್ಲ. ನೀರಾವರಿಗೆ ಹಣ ನೀಡಿಲ್ಲ.ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ. ಶಿರಾ ಕ್ಷೇತ್ರದ ಅಭಿವೃದ್ಧಿಗೂ ಹಣ ನೀಡಿಲ್ಲ. ಟಿ.ಬಿ.ಜಯಚಂದ್ರ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ. ಅದನ್ನೇ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದರು.

ಜಾತಿಗಳ ಸಮೀಕ್ಷೆಯಿಂದ ಅವರ ಸಾಮಾಜಿಕ ಆರ್ಥಿಕ, ರಾಜಕೀಯ ಮತ್ತು ಔದ್ಯೋಗಿ ಸ್ಥಿತಿಗತಿಗಳು ತಿಳಿಯುತ್ತದೆ. ಆಗ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ. ಅಧಿಕಾರ ಹಂಚಿಕೆಗೂ ಅನುಕೂಲವಾಗುತ್ತದೆ. ಹಾಗಾಗಿ ಜಾತಿ ಸಮೀಕ್ಷೆ ಮಾಡಲಾಯಿತು. ಜಾತಿ ಸಮೀಕ್ಷಾ ವರದಿ ನಾನು ಮುಖ್ಯಮಂತ್ರಿ ಆಗಿದ್ದಾಗ ಪೂರ್ಣಗೊಂಡಿರಲಿಲ್ಲ. ಹಾಗಾಗಿ ಅದನ್ನು ಜಾರಿ ಮಾಡಲು ಆಗಲಿಲ್ಲ.

ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾದಾಗ ವರದಿ ಪೂರ್ಣವಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ತೆಗೆದುಕೊಳ್ಳಲಿಲ್ಲ. ಬಿಜೆಪಿಯ ಯಡಿಯೂರಪ್ಪನವರೂ ಅದರ ಬಗ್ಗೆ ಗಮನಹರಿಸಲಿಲ್ಲ. ಆದರೆ ಜಾತಿ ಸಮೀಕ್ಷೆ ನಡೆಸುತ್ತಿದ್ದ ಅಧ್ಯಕ್ಷರನ್ನೇ ವಜಾ ಮಾಡಿದರು. ಹಾಗಾಗಿ ಅವರ ವರದಿಯನ್ನು ಕಾರ್ಯದರ್ಶಿಗಳಿಗೆ ನೀಡಿ ಹೋದರು ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್‌ನಿಂದ ದಿವಂಗತ ಸತ್ಯನಾರಾಯಣ ಪತ್ನಿ ಕಣಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...