Homeಕರ್ನಾಟಕಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಜೆಡಿಎಸ್ ಮೈಸೂರು ಭಾಗದಲ್ಲಿ ಮಾತ್ರ ಸೀಮಿತವಾದ ಪಕ್ಷ. ಹಾಗಾಗಿ ಈ ಬಾರಿ ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಖಚಿತ.

- Advertisement -
- Advertisement -

ಬಿಜೆಪಿಯ ರಾಜೇಶ್ ಗೌಡ ಮತ್ತು ನನ್ನ ಮಗ ಯತೀಂದ್ರ ಸ್ನೇಹಿತರು. ನನಗೆ ಹೇಗೆ ಸ್ನೇಹಿತ ಆಗಲು ಸಾಧ್ಯ. ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ವಯಸ್ಸು, ರಾಜೇಶ್ ಗೌಡನ ವಯಸ್ಸು ವ್ಯತ್ಯಾಸವಿಲ್ಲವೇ? ಅದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಗೊತ್ತಿಲ್ಲವೇ? ಮಾಜಿ ಮುಖ್ಯಮಂತ್ರಿ ಜವಾಬ್ದಾರಿಯಿಂದ ಮಾತನಾಡಬೇಕು. ರಾಜಕೀಯ ಬೇರೆ, ಸ್ನೇಹ ಬೇರೆ. ಬೇಜವಾಬ್ದಾರಿ ಮಾತುಗಳು ಶೋಭೆ ತರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅಗ್ಗದ ಯೋಜನೆ ಮೂಲಕ ಜನರ ತುಟಿಗೆ ತುಪ್ಪ ಸವರಿದ್ದಾರೆ: ಕುಮಾರಸ್ವಾಮಿ

ಮಾಜಿ ಸಂಸದ ಮೂಡ್ಲಗಿರಿಯಪ್ಪ ಅವರು ಕುಮಾರಸ್ವಾಮಿ ಅವರಿಗೆ ಚನ್ನಾಗಿ ಗೊತ್ತು. ಅವರೇ ಹೇಳಿ ರಾಜೇಶ್ ಗೌಡನನ್ನು ಕಣಕ್ಕೆ ಇಳಿಸಿರಬಹುದಲ್ಲ ಎಂದು ಮಾಧ್ಯಮದವರಿಗೆ ಪ್ರಶ್ನೆ ಹಾಕಿದರು.

ಕಾಂಗ್ರೆಸ್‌‌ಗೆ ಸಿದ್ದರಾಮಯ್ಯ ಕೊನೆ ಮೊಳೆ ಹೊಡೆಯುತ್ತಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅದೊಂದು ಬೇಜವಾಬ್ದಾರಿ ಹೇಳಿಕೆ, ಅವರು ನೀಡುವ ಎಲ್ಲಾ ಹೇಳಿಕೆಗಳಿಗೂ ಪ್ರತಿಕ್ರಿಯೆ ಮಾಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಮೈಸೂರು ಭಾಗದಲ್ಲಿ ಮಾತ್ರ ಸೀಮಿತವಾದ ಪಕ್ಷ. ಹಾಗಾಗಿ ಈ ಬಾರಿ ಶಿರಾ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಖಚಿತ. ಹಿಂದೆ ಅಪಪ್ರಚಾರ ನಡೆಸಿದ್ದರಿಂದ ಜಾತಿಯ ಮೇಲಾಟ ಆಗಿ ಜಯಚಂದ್ರ ಸೋತರು. ಈ ಬಾರಿ ಎಲ್ಲಾ ನಾಯಕರು ಒಗ್ಗೂಡಿ ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಾನು ಕೂಡ ನಾಲ್ಕು ದಿನಗಳ ಕಾಲ ತುಮಕೂರಿನಲ್ಲಿ ಉಳಿದುಕೊಳ್ಳುತ್ತೇನೆ. ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇನೆ. ಜೊತೆಗೆ ಡಾ. ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ ಸೇರಿದಂತೆ ಎಲ್ಲಾ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡುಗುತ್ತಾರೆ. ಹಿಂದೆ ಅವರವರ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದರು. ಈಗ ಎಲ್ಲರೂ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಬಿಜೆಪಿ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ನಮ್ಮ ಕಾಲದಲ್ಲಿ ಆದ ಅನ್ನಭಾಗ್ಯ, ಶೂ ಭಾಗ್ಯ, ಕುಟೀರ ಭಾಗ್ಯ, ಎಲ್ಲ ಕಾರ್ಯಕ್ರಮಗಳು ಅನುಷ್ಠಾನಕ್ಕೆ ತಂದೆವು. ಆದರೆ ಬಿಜೆಪಿ ಸರ್ಕಾರದಲ್ಲಿ ಒಂದು ಕೆಲಸವೂ ಆಗುತ್ತಿಲ್ಲ. ಬಿಜೆಪಿ ಶಿರಾ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.

ಯಡಿಯೂರಪ್ಪ ಸರ್ಕಾರದಲ್ಲಿ ರಸ್ತೆ ಅಭಿವೃದ್ಧಿ ಆಗಿಲ್ಲ. ನೀರಾವರಿಗೆ ಹಣ ನೀಡಿಲ್ಲ.ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ. ಶಿರಾ ಕ್ಷೇತ್ರದ ಅಭಿವೃದ್ಧಿಗೂ ಹಣ ನೀಡಿಲ್ಲ. ಟಿ.ಬಿ.ಜಯಚಂದ್ರ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ. ಅದನ್ನೇ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದರು.

ಜಾತಿಗಳ ಸಮೀಕ್ಷೆಯಿಂದ ಅವರ ಸಾಮಾಜಿಕ ಆರ್ಥಿಕ, ರಾಜಕೀಯ ಮತ್ತು ಔದ್ಯೋಗಿ ಸ್ಥಿತಿಗತಿಗಳು ತಿಳಿಯುತ್ತದೆ. ಆಗ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ. ಅಧಿಕಾರ ಹಂಚಿಕೆಗೂ ಅನುಕೂಲವಾಗುತ್ತದೆ. ಹಾಗಾಗಿ ಜಾತಿ ಸಮೀಕ್ಷೆ ಮಾಡಲಾಯಿತು. ಜಾತಿ ಸಮೀಕ್ಷಾ ವರದಿ ನಾನು ಮುಖ್ಯಮಂತ್ರಿ ಆಗಿದ್ದಾಗ ಪೂರ್ಣಗೊಂಡಿರಲಿಲ್ಲ. ಹಾಗಾಗಿ ಅದನ್ನು ಜಾರಿ ಮಾಡಲು ಆಗಲಿಲ್ಲ.

ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾದಾಗ ವರದಿ ಪೂರ್ಣವಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ತೆಗೆದುಕೊಳ್ಳಲಿಲ್ಲ. ಬಿಜೆಪಿಯ ಯಡಿಯೂರಪ್ಪನವರೂ ಅದರ ಬಗ್ಗೆ ಗಮನಹರಿಸಲಿಲ್ಲ. ಆದರೆ ಜಾತಿ ಸಮೀಕ್ಷೆ ನಡೆಸುತ್ತಿದ್ದ ಅಧ್ಯಕ್ಷರನ್ನೇ ವಜಾ ಮಾಡಿದರು. ಹಾಗಾಗಿ ಅವರ ವರದಿಯನ್ನು ಕಾರ್ಯದರ್ಶಿಗಳಿಗೆ ನೀಡಿ ಹೋದರು ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್‌ನಿಂದ ದಿವಂಗತ ಸತ್ಯನಾರಾಯಣ ಪತ್ನಿ ಕಣಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...