Homeಕರ್ನಾಟಕಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಜೆಡಿಎಸ್ ಮೈಸೂರು ಭಾಗದಲ್ಲಿ ಮಾತ್ರ ಸೀಮಿತವಾದ ಪಕ್ಷ. ಹಾಗಾಗಿ ಈ ಬಾರಿ ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಖಚಿತ.

- Advertisement -
- Advertisement -

ಬಿಜೆಪಿಯ ರಾಜೇಶ್ ಗೌಡ ಮತ್ತು ನನ್ನ ಮಗ ಯತೀಂದ್ರ ಸ್ನೇಹಿತರು. ನನಗೆ ಹೇಗೆ ಸ್ನೇಹಿತ ಆಗಲು ಸಾಧ್ಯ. ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ವಯಸ್ಸು, ರಾಜೇಶ್ ಗೌಡನ ವಯಸ್ಸು ವ್ಯತ್ಯಾಸವಿಲ್ಲವೇ? ಅದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಗೊತ್ತಿಲ್ಲವೇ? ಮಾಜಿ ಮುಖ್ಯಮಂತ್ರಿ ಜವಾಬ್ದಾರಿಯಿಂದ ಮಾತನಾಡಬೇಕು. ರಾಜಕೀಯ ಬೇರೆ, ಸ್ನೇಹ ಬೇರೆ. ಬೇಜವಾಬ್ದಾರಿ ಮಾತುಗಳು ಶೋಭೆ ತರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅಗ್ಗದ ಯೋಜನೆ ಮೂಲಕ ಜನರ ತುಟಿಗೆ ತುಪ್ಪ ಸವರಿದ್ದಾರೆ: ಕುಮಾರಸ್ವಾಮಿ

ಮಾಜಿ ಸಂಸದ ಮೂಡ್ಲಗಿರಿಯಪ್ಪ ಅವರು ಕುಮಾರಸ್ವಾಮಿ ಅವರಿಗೆ ಚನ್ನಾಗಿ ಗೊತ್ತು. ಅವರೇ ಹೇಳಿ ರಾಜೇಶ್ ಗೌಡನನ್ನು ಕಣಕ್ಕೆ ಇಳಿಸಿರಬಹುದಲ್ಲ ಎಂದು ಮಾಧ್ಯಮದವರಿಗೆ ಪ್ರಶ್ನೆ ಹಾಕಿದರು.

ಕಾಂಗ್ರೆಸ್‌‌ಗೆ ಸಿದ್ದರಾಮಯ್ಯ ಕೊನೆ ಮೊಳೆ ಹೊಡೆಯುತ್ತಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅದೊಂದು ಬೇಜವಾಬ್ದಾರಿ ಹೇಳಿಕೆ, ಅವರು ನೀಡುವ ಎಲ್ಲಾ ಹೇಳಿಕೆಗಳಿಗೂ ಪ್ರತಿಕ್ರಿಯೆ ಮಾಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಮೈಸೂರು ಭಾಗದಲ್ಲಿ ಮಾತ್ರ ಸೀಮಿತವಾದ ಪಕ್ಷ. ಹಾಗಾಗಿ ಈ ಬಾರಿ ಶಿರಾ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ನೂರರಷ್ಟು ಖಚಿತ. ಹಿಂದೆ ಅಪಪ್ರಚಾರ ನಡೆಸಿದ್ದರಿಂದ ಜಾತಿಯ ಮೇಲಾಟ ಆಗಿ ಜಯಚಂದ್ರ ಸೋತರು. ಈ ಬಾರಿ ಎಲ್ಲಾ ನಾಯಕರು ಒಗ್ಗೂಡಿ ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಾನು ಕೂಡ ನಾಲ್ಕು ದಿನಗಳ ಕಾಲ ತುಮಕೂರಿನಲ್ಲಿ ಉಳಿದುಕೊಳ್ಳುತ್ತೇನೆ. ಶಿರಾ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇನೆ. ಜೊತೆಗೆ ಡಾ. ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ ಸೇರಿದಂತೆ ಎಲ್ಲಾ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡುಗುತ್ತಾರೆ. ಹಿಂದೆ ಅವರವರ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದರು. ಈಗ ಎಲ್ಲರೂ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಬಿಜೆಪಿ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ನಮ್ಮ ಕಾಲದಲ್ಲಿ ಆದ ಅನ್ನಭಾಗ್ಯ, ಶೂ ಭಾಗ್ಯ, ಕುಟೀರ ಭಾಗ್ಯ, ಎಲ್ಲ ಕಾರ್ಯಕ್ರಮಗಳು ಅನುಷ್ಠಾನಕ್ಕೆ ತಂದೆವು. ಆದರೆ ಬಿಜೆಪಿ ಸರ್ಕಾರದಲ್ಲಿ ಒಂದು ಕೆಲಸವೂ ಆಗುತ್ತಿಲ್ಲ. ಬಿಜೆಪಿ ಶಿರಾ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.

ಯಡಿಯೂರಪ್ಪ ಸರ್ಕಾರದಲ್ಲಿ ರಸ್ತೆ ಅಭಿವೃದ್ಧಿ ಆಗಿಲ್ಲ. ನೀರಾವರಿಗೆ ಹಣ ನೀಡಿಲ್ಲ.ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ. ಶಿರಾ ಕ್ಷೇತ್ರದ ಅಭಿವೃದ್ಧಿಗೂ ಹಣ ನೀಡಿಲ್ಲ. ಟಿ.ಬಿ.ಜಯಚಂದ್ರ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ. ಅದನ್ನೇ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದರು.

ಜಾತಿಗಳ ಸಮೀಕ್ಷೆಯಿಂದ ಅವರ ಸಾಮಾಜಿಕ ಆರ್ಥಿಕ, ರಾಜಕೀಯ ಮತ್ತು ಔದ್ಯೋಗಿ ಸ್ಥಿತಿಗತಿಗಳು ತಿಳಿಯುತ್ತದೆ. ಆಗ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ. ಅಧಿಕಾರ ಹಂಚಿಕೆಗೂ ಅನುಕೂಲವಾಗುತ್ತದೆ. ಹಾಗಾಗಿ ಜಾತಿ ಸಮೀಕ್ಷೆ ಮಾಡಲಾಯಿತು. ಜಾತಿ ಸಮೀಕ್ಷಾ ವರದಿ ನಾನು ಮುಖ್ಯಮಂತ್ರಿ ಆಗಿದ್ದಾಗ ಪೂರ್ಣಗೊಂಡಿರಲಿಲ್ಲ. ಹಾಗಾಗಿ ಅದನ್ನು ಜಾರಿ ಮಾಡಲು ಆಗಲಿಲ್ಲ.

ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾದಾಗ ವರದಿ ಪೂರ್ಣವಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ತೆಗೆದುಕೊಳ್ಳಲಿಲ್ಲ. ಬಿಜೆಪಿಯ ಯಡಿಯೂರಪ್ಪನವರೂ ಅದರ ಬಗ್ಗೆ ಗಮನಹರಿಸಲಿಲ್ಲ. ಆದರೆ ಜಾತಿ ಸಮೀಕ್ಷೆ ನಡೆಸುತ್ತಿದ್ದ ಅಧ್ಯಕ್ಷರನ್ನೇ ವಜಾ ಮಾಡಿದರು. ಹಾಗಾಗಿ ಅವರ ವರದಿಯನ್ನು ಕಾರ್ಯದರ್ಶಿಗಳಿಗೆ ನೀಡಿ ಹೋದರು ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್‌ನಿಂದ ದಿವಂಗತ ಸತ್ಯನಾರಾಯಣ ಪತ್ನಿ ಕಣಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...