Homeಮುಖಪುಟವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ವೇದಗಣಿತ ಎಂಬುದು ವೇದ ಕಾಲದ್ದು ಅಲ್ಲ ಮತ್ತು ಗಣಿತವೂ ಅಲ್ಲ ಎಂದು ಗಣಿತಜ್ಞರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

”ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಭಾರತದತ್ತ ಸೆಳೆಯಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯ ಆಧಾರದ ಮೇಲೆ ‘ವೇದ’ ಗಣಿತ, ಸಂಸ್ಕೃತ, ಯೋಗ, ಆಯುರ್ವೇದ, ಜ್ಯೋತಿಷ್ಯ, ಮುಂತಾದ ಕೋರ್ಸ್‌ಗಳನ್ನು ಪರಿಚಯಿಸಲು ಆದೇಶಿಸಿದೆ. ಎಲ್ಲಾ ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (HEIs) ಭಾರತೀಯ ನೀತಿಶಾಸ್ತ್ರ, ತತ್ವಶಾಸ್ತ್ರ, ಸಂಗೀತ, ನೃತ್ಯ ಮತ್ತು ಇತರ ಪ್ರಕಾರಗಳುನ್ನು ಬೋಧಿಸಲಾಗುತ್ತದೆ. ಆದರೆ ಈ ವಿಷಯಗಳ ಜೊತೆಗೆ ಜ್ಯೋತಿಷ್ಯದಂತಹ ಕೆಲವು ವಿಷಯಗಳ ಆಯ್ಕೆಯು ಅಚ್ಚರಿ ಮೂಡಿಸಿದೆ.

ಈ ಹಿಂದೆ ಕರ್ನಾಟಕ ಸರ್ಕಾರವು ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸಲು ಮುಂದಾಗಿತ್ತು. ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಗ್ರಾಮೀಣಾಭಿವೃದ್ದಿ ಇಲಾಖೆ ಆದೇಶ ಹೊರಡಿಸಿತ್ತು. ಈ ಯೋಜನೆಗೆ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದಂತೆ ಯೋಜನೆಯನ್ನು ಹಿಂದಕ್ಕೆ ಪಡೆದಿತ್ತು. ಈ ಹಿನ್ನೆಲೆಯಲ್ಲಿ ವೇದಗಣಿತ ಎಂದರೇನು? ಅದನ್ನು ಕಲಿಯುವುದರಿಂದ ಪ್ರಯೋಜನವಿದೆಯೇ? ಈ ಕುರಿತು ಚರ್ಚಿಸೋಣ.

ಗಣಿತದ ಲೆಕ್ಕಗಳನ್ನು ತ್ವರಿತವಾಗಿ ಮಾಡುವ, ಕ್ಲಿಷ್ಟಕರವಾದ ಸಮಸ್ಯೆಗಳನ್ನು ಮನಸ್ಸಿನಲ್ಲಿಯೇ ಲೆಕ್ಕಹಾಕಿ ಹೇಳುವ ಪ್ರಾಚೀನ ಗಣಿತ ಪದ್ದತಿಯನ್ನು ವೇದಗಣಿತ ಎನ್ನಲಾಗುತ್ತಿದೆ. ವೇದಗಳ ಕಾಲದ ಅಥರ್ವವೇದದಲ್ಲಿ ಈ ಬಗ್ಗೆ ಉಲ್ಲೇಖವಿದೆ ಎಂದು ಪ್ರತಿಪಾದಿಸಿ ಶ್ರೀ ಭಾರತೀ ಕೃಷ್ಣ ತೀರ್ಥಜಿ ಎಂಬುವವರು ಇದನ್ನು ಪ್ರಚಾರ ಮಾಡಿದ್ದರು. ಆತನನ್ನು ವೇದಗಣಿತದ ಪಿತಾಮಹಾ ಎಂದೆಲ್ಲ ಹೇಳಲಾಗುತ್ತದೆ. 16 ಸಂಸ್ಕೃತ ಸೂತ್ರಗಳನ್ನು ಪರಿಚಯಿಸಿದ ಅವರು 1957ರಲ್ಲಿ ಬರೆದ ಮತ್ತು ಅವರ ನಿಧನನಂತರ 1965ರಲ್ಲಿ ಪ್ರಕಟಗೊಂಡ ‘ವೇದಿಕ್ ಮ್ಯಾಥಮ್ಯಾಟಿಕ್ಸ್’ ಎಂಬ ಪುಸ್ತಕವು ಈ ಬಗ್ಗೆ ಹೆಚ್ಚು ಹೇಳುತ್ತದೆ.

ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಬಹಳಷ್ಟು ಸಂಶೋಧಕರು, ಚಿಂತಕರು ವೇದಗಣಿತ ಎಂಬುದೊಂದು ಇಲ್ಲವೇ ಇಲ್ಲ. ಯಾವ ವೇದಗಳಲ್ಲಿಯೂ ಇದರ ಬಗ್ಗೆ ಉಲ್ಲೇಖವಿಲ್ಲವೆಂದು ಬಲವಾಗಿ ವಾದಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ವೇದಗಳಿಗೂ ಈ ವೇದಗಣಿತಕ್ಕೂ ಯಾವುದೇ ಸಂಬಂಧವಿಲ್ಲ ಎಂಬ ವಾದವನ್ನು ಮುಂದಿಡಲಾಗುತ್ತದೆ. ಏಕೆಂದರೆ ಶ್ರೀ ಭಾರತೀ ಕೃಷ್ಣ ತೀರ್ಥಜಿ ವೇದಗಣಿತ ಎಂಬ ಪುಸ್ತಕ ಬರೆದ ನಂತರವಷ್ಟೇ ಇದು ಗೊಂದಲಕ್ಕೆ ಕಾರಣವಾಗಿದೆ. ಅದೇ ಪುಸ್ತಕದಲ್ಲಿ ಪ್ರಾಥಮಿಕ ಅಂಕಗಣಿತದ ಕುರಿತು ಉಲ್ಲೇಖಿಸಲಾದ ಕ್ರಮಾವಳಿಗಳಿಗೂ ವೇದಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ನಿಸ್ಸಂಶಯವಾಗಿ ಈ ಸೂತ್ರಗಳು ಅಥರ್ವವೇದದಲ್ಲಿ ಕಂಡುಬರುವುದಿಲ್ಲ ಎಂದು ಸಹ ಸ್ಪಷ್ಟಪಡಿಸಲಾಗಿದೆ.

ಅಲ್ಲದೆ ಪ್ರೊ. ಶುಕ್ಲಾ ಎಂಬುವವರು ಅಥರ್ವವೇದದಲ್ಲಿ ವೇದಗಣಿತದ ಬಗ್ಗೆ ಉಲ್ಲೇಖ ಎಲ್ಲಿದೆ ಎಂಬುದನ್ನು ತೋರಿಸಿ ಪಟ್ಟು ಹಿಡಿದ ಸಂದರ್ಭದಲ್ಲಿ ವೇದಗಳಲ್ಲಿ ಅದರ ಉಲ್ಲೇಖವಿಲ್ಲವೆಂದು, ಆ 16 ಸೂತ್ರಗಳನ್ನು ನಾನೇ ಬರೆದೆನೆಂದು ಶ್ರೀ ಭಾರತೀ ಕೃಷ್ಣ ತೀರ್ಥಜಿ ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ವೇದಗಣಿತದ ಬಗ್ಗೆ ಹಲವಾರು ತಕಾರರುಗಳು ಹುಟ್ಟಿಕೊಂಡಿವೆ.

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ಮುಂಬೈನ ಗಣಿತಶಾಸ್ತ್ರದ ಪ್ರಾಧ್ಯಾಪಕರಾದ ಎಸ್.ಜಿ.ದಾನಿಯವರು ವೇದಗಣಿತ ಎಂದು ಕರೆಯುವುದನ್ನೆ ವಿರೋಧಿಸುತ್ತಾರೆ. ಅದು ವೇದ ಕಾಲದ್ದು ಅಲ್ಲ ಮತ್ತು ಗಣಿತವೂ ಅಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ. “ವೇದಗಣಿತ ಎಂಬ ಪುಸ್ತಕದಲ್ಲಿ ಬಳಸಲಾದ ವಿಧಾನಗಳು ಪ್ರಾಚೀನ ಕಾಲದ ಅಂಕಗಣಿತದ ತಂತ್ರಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಪುಸ್ತಕದಲ್ಲಿನ ಅಂಕಗಣಿತದ ತಂತ್ರಗಳಲ್ಲಿ ಬಳಸಲಾದ ಸಂಕೇತದಿಂದ ಸ್ಪಷ್ಟವಾಗುತ್ತದೆ. ಪ್ರಪಂಚದ ಯಾವುದೇ ಶಾಲೆಗಳಲ್ಲಿಯೂ ಈ ಗಣಿತವನ್ನು ಕಲಿಸುತ್ತಿಲ್ಲ” ಎಂಬುದು ಅವರ ಅಭಿಪ್ರಾಯವಾಗಿದೆ.

ಭಾರತವು ಇಂದು ಸಕ್ರಿಯ ಮತ್ತು ಅತ್ಯುತ್ತಮವಾದ ಗಣಿತಶಾಸ್ತ್ರದ ಸಂಶೋಧನೆ ಮತ್ತು ಬೋಧನೆಯ ಶಾಲೆಗಳನ್ನು ಹೊಂದಿದೆ. ಈ ವಿಭಾಗದಲ್ಲಿ ಆಧುನಿಕ ಸಂಶೋಧನೆಯ ಮುಂಚೂಣಿಯಲ್ಲಿದೆ. ಅವುಗಳಲ್ಲಿ ಕೆಲವು ತಮ್ಮ ಸಂಶೋಧನಾ ಕ್ಷೇತ್ರಗಳಲ್ಲಿ ವಿಶ್ವದ ಅತ್ಯುತ್ತಮವೆಂದು ಗುರುತಿಸಲ್ಪಟ್ಟಿವೆ. ಶ್ರೀನಿವಾಸ ರಾಮಾನುಜಂ, ವಿ.ಕೆ.ಪಟೋಡಿ, ಎಸ್.ಮಿನಾಕ್ಷಿಸುಂದರಂ, ಹರೀಶ್ ಚಂದ್ರ, ಕೆ.ಜಿ.ರಾಮನಾಥನ್, ಹಂಸರಾಜ್ ಗುಪ್ತಾ, ಶ್ಯಾಮದಾಸ್ ಮುಖೋಪಾಧ್ಯಾಯ, ಗಣೇಶ್ ಪ್ರಸಾದ್ ಮತ್ತು ಹಲವಾರು ಭಾರತೀಯ ಗಣಿತಜ್ಞರು ಸೇರಿದಂತೆ ಅನೇಕರು ಗಣಿತ ಪರಂಪರೆಯನ್ನು ಉನ್ನತ ಮಟ್ಟಕ್ಕೇರಿದ್ದಾರೆ. ಆದರೆ ಅವರ್ಯಾರು ಈ ವೇದಗಣಿತದ ಬಗ್ಗೆ ಉಲ್ಲೇಖಿಸಿಲ್ಲ. ಏಕೆಂದರೆ ಅದು ವೈಜ್ಞಾನಿಕವಲ್ಲ ಎಂದು ಎಸ್.ಜಿ.ದಾನಿಯವರು ಪ್ರತಿಪಾದಿಸಿದ್ದಾರೆ.

ವೇದಗಣಿತದಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರುವ ಅಪಾಯವಿದೆ – ಎಸ್.ಬಾಲಚಂದ್ರ ರಾವ್

ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಈ ವೇದಗಣಿತ ಕಲಿಕೆಯಿಂದ ಮಕ್ಕಳಿ ನಿಜವಾದ ಗಣಿತ ಕಲಿಯದಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ” ಎಂದು ಅಭಿಪ್ರಾಯಪಡುತ್ತಾರೆ.

ಮುಖ್ಯವಾಗಿ ಗಣಿತ ವಿಜ್ಞಾನಕ್ಕೆ ತಾರ್ಕಿಕವಾದ ಚಿಂತನೆ, ಮನಸ್ಥಿತಿ ಬೇಕು. ಆದರೆ ವೇದಿಕ್ ಮ್ಯಾಥಮೆಟಿಕ್ಸ್‌ನಿಂದ ಅದು ಬರುವುದಿಲ್ಲ. ಅದೊಂದು ಮ್ಯಾಜಿಕ್ ಇದ್ದಹಾಗೆ ಅಷ್ಟೆ. ಇದನ್ನು ಮಕ್ಕಳಿಗೆ ಹೇಳಿಕೊಡುವುದರಿಂದ ಅದೇ ಗಣಿತ ಎಂದು ಭಾವಿಸಿ ಮಕ್ಕಳು ನಿಜವಾದ ಗಣಿತವನ್ನು ಕಲಿಯದೆ ಇರುವ ಅಪಾಯವಿದೆ. ನಿಜವಾದ ಗಣಿತದಲ್ಲಿ ಅದರಲ್ಲಿಯೂ ರೇಖಾಗಣಿತದಲ್ಲಿ ತಾರ್ಕಿಕವಾದ ಚಿಂತನೆ ಅಭಿವೃದ್ದಿಯಾಗುತ್ತದೆ. ಈ ಕಲಿಕೆಯನ್ನು ಹೆಚ್ಚು ಮಾಡಬೇಕು. ಇದರಿಂದ ಮುಂದೆ ಮುಂದೆ ಹೋದಂತೆ ತಾರ್ಕಿಕ ಚಿಂತನೆ ಆಳವಾಗಿ ಅಭಿವೃದ್ದಿಯಾಗುತ್ತದೆ. ಇದು ಯಾವುದು ಸಹ ವೇದಗಣಿತದಲ್ಲಿ ಸಾಧ್ಯವಿಲ್ಲ ಎನ್ನುತ್ತಾರೆ ಎಸ್.ಬಾಲಚಂದ್ರ ರಾವ್.

ಈ ವೇದಗಣಿತ ಕಲಿಕೆಯಿಂದ ಗಣಿತದ ಬಗ್ಗೆ ತಪ್ಪು ಅಭಿಪ್ರಾಯ ಬರುತ್ತದೆ. ಗಣಿತ ಎಂದರೆ ಕೇವಲ ಮ್ಯಾಜಿಕ್ ಎಂದು ವಿದ್ಯಾರ್ಥಿಗಳು ಭಾವಿಸುವ ಅಪಾಯವಿದೆ. ಅಲ್ಲದೆ ವೇದಗಣಿತದ ಬಗ್ಗೆ ಯಾವ ವೇದಗಳಲ್ಲಿಯೂ ಹೇಳಿಲ್ಲ. ಹಿಂದಿನ ಶತಮಾನದ ಕೆಲ ಸ್ವಾಮಿಗಳು ಮಾಡಿರುವ ಸೂತ್ರಗಳು ಇವು. ಅವು ವೇದಿಕ್ ಅಲ್ಲ ಮತ್ತು ಮ್ಯಾಥಮ್ಯಾಟಿಕ್ಸ್ ಕೂಡ ಅಲ್ಲ. ಅವುಗಳಿಗೆ ವೇದಿಕ್ ಎಂದು ಹೆಸರು ಕೊಟ್ಟು ಮಕ್ಕಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...