Homeಮುಖಪುಟವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ವೇದಗಣಿತ ಎಂಬುದು ವೇದ ಕಾಲದ್ದು ಅಲ್ಲ ಮತ್ತು ಗಣಿತವೂ ಅಲ್ಲ ಎಂದು ಗಣಿತಜ್ಞರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

”ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಭಾರತದತ್ತ ಸೆಳೆಯಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯ ಆಧಾರದ ಮೇಲೆ ‘ವೇದ’ ಗಣಿತ, ಸಂಸ್ಕೃತ, ಯೋಗ, ಆಯುರ್ವೇದ, ಜ್ಯೋತಿಷ್ಯ, ಮುಂತಾದ ಕೋರ್ಸ್‌ಗಳನ್ನು ಪರಿಚಯಿಸಲು ಆದೇಶಿಸಿದೆ. ಎಲ್ಲಾ ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (HEIs) ಭಾರತೀಯ ನೀತಿಶಾಸ್ತ್ರ, ತತ್ವಶಾಸ್ತ್ರ, ಸಂಗೀತ, ನೃತ್ಯ ಮತ್ತು ಇತರ ಪ್ರಕಾರಗಳುನ್ನು ಬೋಧಿಸಲಾಗುತ್ತದೆ. ಆದರೆ ಈ ವಿಷಯಗಳ ಜೊತೆಗೆ ಜ್ಯೋತಿಷ್ಯದಂತಹ ಕೆಲವು ವಿಷಯಗಳ ಆಯ್ಕೆಯು ಅಚ್ಚರಿ ಮೂಡಿಸಿದೆ.

ಈ ಹಿಂದೆ ಕರ್ನಾಟಕ ಸರ್ಕಾರವು ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸಲು ಮುಂದಾಗಿತ್ತು. ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಗ್ರಾಮೀಣಾಭಿವೃದ್ದಿ ಇಲಾಖೆ ಆದೇಶ ಹೊರಡಿಸಿತ್ತು. ಈ ಯೋಜನೆಗೆ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದಂತೆ ಯೋಜನೆಯನ್ನು ಹಿಂದಕ್ಕೆ ಪಡೆದಿತ್ತು. ಈ ಹಿನ್ನೆಲೆಯಲ್ಲಿ ವೇದಗಣಿತ ಎಂದರೇನು? ಅದನ್ನು ಕಲಿಯುವುದರಿಂದ ಪ್ರಯೋಜನವಿದೆಯೇ? ಈ ಕುರಿತು ಚರ್ಚಿಸೋಣ.

ಗಣಿತದ ಲೆಕ್ಕಗಳನ್ನು ತ್ವರಿತವಾಗಿ ಮಾಡುವ, ಕ್ಲಿಷ್ಟಕರವಾದ ಸಮಸ್ಯೆಗಳನ್ನು ಮನಸ್ಸಿನಲ್ಲಿಯೇ ಲೆಕ್ಕಹಾಕಿ ಹೇಳುವ ಪ್ರಾಚೀನ ಗಣಿತ ಪದ್ದತಿಯನ್ನು ವೇದಗಣಿತ ಎನ್ನಲಾಗುತ್ತಿದೆ. ವೇದಗಳ ಕಾಲದ ಅಥರ್ವವೇದದಲ್ಲಿ ಈ ಬಗ್ಗೆ ಉಲ್ಲೇಖವಿದೆ ಎಂದು ಪ್ರತಿಪಾದಿಸಿ ಶ್ರೀ ಭಾರತೀ ಕೃಷ್ಣ ತೀರ್ಥಜಿ ಎಂಬುವವರು ಇದನ್ನು ಪ್ರಚಾರ ಮಾಡಿದ್ದರು. ಆತನನ್ನು ವೇದಗಣಿತದ ಪಿತಾಮಹಾ ಎಂದೆಲ್ಲ ಹೇಳಲಾಗುತ್ತದೆ. 16 ಸಂಸ್ಕೃತ ಸೂತ್ರಗಳನ್ನು ಪರಿಚಯಿಸಿದ ಅವರು 1957ರಲ್ಲಿ ಬರೆದ ಮತ್ತು ಅವರ ನಿಧನನಂತರ 1965ರಲ್ಲಿ ಪ್ರಕಟಗೊಂಡ ‘ವೇದಿಕ್ ಮ್ಯಾಥಮ್ಯಾಟಿಕ್ಸ್’ ಎಂಬ ಪುಸ್ತಕವು ಈ ಬಗ್ಗೆ ಹೆಚ್ಚು ಹೇಳುತ್ತದೆ.

ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಬಹಳಷ್ಟು ಸಂಶೋಧಕರು, ಚಿಂತಕರು ವೇದಗಣಿತ ಎಂಬುದೊಂದು ಇಲ್ಲವೇ ಇಲ್ಲ. ಯಾವ ವೇದಗಳಲ್ಲಿಯೂ ಇದರ ಬಗ್ಗೆ ಉಲ್ಲೇಖವಿಲ್ಲವೆಂದು ಬಲವಾಗಿ ವಾದಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ವೇದಗಳಿಗೂ ಈ ವೇದಗಣಿತಕ್ಕೂ ಯಾವುದೇ ಸಂಬಂಧವಿಲ್ಲ ಎಂಬ ವಾದವನ್ನು ಮುಂದಿಡಲಾಗುತ್ತದೆ. ಏಕೆಂದರೆ ಶ್ರೀ ಭಾರತೀ ಕೃಷ್ಣ ತೀರ್ಥಜಿ ವೇದಗಣಿತ ಎಂಬ ಪುಸ್ತಕ ಬರೆದ ನಂತರವಷ್ಟೇ ಇದು ಗೊಂದಲಕ್ಕೆ ಕಾರಣವಾಗಿದೆ. ಅದೇ ಪುಸ್ತಕದಲ್ಲಿ ಪ್ರಾಥಮಿಕ ಅಂಕಗಣಿತದ ಕುರಿತು ಉಲ್ಲೇಖಿಸಲಾದ ಕ್ರಮಾವಳಿಗಳಿಗೂ ವೇದಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ನಿಸ್ಸಂಶಯವಾಗಿ ಈ ಸೂತ್ರಗಳು ಅಥರ್ವವೇದದಲ್ಲಿ ಕಂಡುಬರುವುದಿಲ್ಲ ಎಂದು ಸಹ ಸ್ಪಷ್ಟಪಡಿಸಲಾಗಿದೆ.

ಅಲ್ಲದೆ ಪ್ರೊ. ಶುಕ್ಲಾ ಎಂಬುವವರು ಅಥರ್ವವೇದದಲ್ಲಿ ವೇದಗಣಿತದ ಬಗ್ಗೆ ಉಲ್ಲೇಖ ಎಲ್ಲಿದೆ ಎಂಬುದನ್ನು ತೋರಿಸಿ ಪಟ್ಟು ಹಿಡಿದ ಸಂದರ್ಭದಲ್ಲಿ ವೇದಗಳಲ್ಲಿ ಅದರ ಉಲ್ಲೇಖವಿಲ್ಲವೆಂದು, ಆ 16 ಸೂತ್ರಗಳನ್ನು ನಾನೇ ಬರೆದೆನೆಂದು ಶ್ರೀ ಭಾರತೀ ಕೃಷ್ಣ ತೀರ್ಥಜಿ ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ವೇದಗಣಿತದ ಬಗ್ಗೆ ಹಲವಾರು ತಕಾರರುಗಳು ಹುಟ್ಟಿಕೊಂಡಿವೆ.

ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ಮುಂಬೈನ ಗಣಿತಶಾಸ್ತ್ರದ ಪ್ರಾಧ್ಯಾಪಕರಾದ ಎಸ್.ಜಿ.ದಾನಿಯವರು ವೇದಗಣಿತ ಎಂದು ಕರೆಯುವುದನ್ನೆ ವಿರೋಧಿಸುತ್ತಾರೆ. ಅದು ವೇದ ಕಾಲದ್ದು ಅಲ್ಲ ಮತ್ತು ಗಣಿತವೂ ಅಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ. “ವೇದಗಣಿತ ಎಂಬ ಪುಸ್ತಕದಲ್ಲಿ ಬಳಸಲಾದ ವಿಧಾನಗಳು ಪ್ರಾಚೀನ ಕಾಲದ ಅಂಕಗಣಿತದ ತಂತ್ರಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಪುಸ್ತಕದಲ್ಲಿನ ಅಂಕಗಣಿತದ ತಂತ್ರಗಳಲ್ಲಿ ಬಳಸಲಾದ ಸಂಕೇತದಿಂದ ಸ್ಪಷ್ಟವಾಗುತ್ತದೆ. ಪ್ರಪಂಚದ ಯಾವುದೇ ಶಾಲೆಗಳಲ್ಲಿಯೂ ಈ ಗಣಿತವನ್ನು ಕಲಿಸುತ್ತಿಲ್ಲ” ಎಂಬುದು ಅವರ ಅಭಿಪ್ರಾಯವಾಗಿದೆ.

ಭಾರತವು ಇಂದು ಸಕ್ರಿಯ ಮತ್ತು ಅತ್ಯುತ್ತಮವಾದ ಗಣಿತಶಾಸ್ತ್ರದ ಸಂಶೋಧನೆ ಮತ್ತು ಬೋಧನೆಯ ಶಾಲೆಗಳನ್ನು ಹೊಂದಿದೆ. ಈ ವಿಭಾಗದಲ್ಲಿ ಆಧುನಿಕ ಸಂಶೋಧನೆಯ ಮುಂಚೂಣಿಯಲ್ಲಿದೆ. ಅವುಗಳಲ್ಲಿ ಕೆಲವು ತಮ್ಮ ಸಂಶೋಧನಾ ಕ್ಷೇತ್ರಗಳಲ್ಲಿ ವಿಶ್ವದ ಅತ್ಯುತ್ತಮವೆಂದು ಗುರುತಿಸಲ್ಪಟ್ಟಿವೆ. ಶ್ರೀನಿವಾಸ ರಾಮಾನುಜಂ, ವಿ.ಕೆ.ಪಟೋಡಿ, ಎಸ್.ಮಿನಾಕ್ಷಿಸುಂದರಂ, ಹರೀಶ್ ಚಂದ್ರ, ಕೆ.ಜಿ.ರಾಮನಾಥನ್, ಹಂಸರಾಜ್ ಗುಪ್ತಾ, ಶ್ಯಾಮದಾಸ್ ಮುಖೋಪಾಧ್ಯಾಯ, ಗಣೇಶ್ ಪ್ರಸಾದ್ ಮತ್ತು ಹಲವಾರು ಭಾರತೀಯ ಗಣಿತಜ್ಞರು ಸೇರಿದಂತೆ ಅನೇಕರು ಗಣಿತ ಪರಂಪರೆಯನ್ನು ಉನ್ನತ ಮಟ್ಟಕ್ಕೇರಿದ್ದಾರೆ. ಆದರೆ ಅವರ್ಯಾರು ಈ ವೇದಗಣಿತದ ಬಗ್ಗೆ ಉಲ್ಲೇಖಿಸಿಲ್ಲ. ಏಕೆಂದರೆ ಅದು ವೈಜ್ಞಾನಿಕವಲ್ಲ ಎಂದು ಎಸ್.ಜಿ.ದಾನಿಯವರು ಪ್ರತಿಪಾದಿಸಿದ್ದಾರೆ.

ವೇದಗಣಿತದಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರುವ ಅಪಾಯವಿದೆ – ಎಸ್.ಬಾಲಚಂದ್ರ ರಾವ್

ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಈ ವೇದಗಣಿತ ಕಲಿಕೆಯಿಂದ ಮಕ್ಕಳಿ ನಿಜವಾದ ಗಣಿತ ಕಲಿಯದಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ” ಎಂದು ಅಭಿಪ್ರಾಯಪಡುತ್ತಾರೆ.

ಮುಖ್ಯವಾಗಿ ಗಣಿತ ವಿಜ್ಞಾನಕ್ಕೆ ತಾರ್ಕಿಕವಾದ ಚಿಂತನೆ, ಮನಸ್ಥಿತಿ ಬೇಕು. ಆದರೆ ವೇದಿಕ್ ಮ್ಯಾಥಮೆಟಿಕ್ಸ್‌ನಿಂದ ಅದು ಬರುವುದಿಲ್ಲ. ಅದೊಂದು ಮ್ಯಾಜಿಕ್ ಇದ್ದಹಾಗೆ ಅಷ್ಟೆ. ಇದನ್ನು ಮಕ್ಕಳಿಗೆ ಹೇಳಿಕೊಡುವುದರಿಂದ ಅದೇ ಗಣಿತ ಎಂದು ಭಾವಿಸಿ ಮಕ್ಕಳು ನಿಜವಾದ ಗಣಿತವನ್ನು ಕಲಿಯದೆ ಇರುವ ಅಪಾಯವಿದೆ. ನಿಜವಾದ ಗಣಿತದಲ್ಲಿ ಅದರಲ್ಲಿಯೂ ರೇಖಾಗಣಿತದಲ್ಲಿ ತಾರ್ಕಿಕವಾದ ಚಿಂತನೆ ಅಭಿವೃದ್ದಿಯಾಗುತ್ತದೆ. ಈ ಕಲಿಕೆಯನ್ನು ಹೆಚ್ಚು ಮಾಡಬೇಕು. ಇದರಿಂದ ಮುಂದೆ ಮುಂದೆ ಹೋದಂತೆ ತಾರ್ಕಿಕ ಚಿಂತನೆ ಆಳವಾಗಿ ಅಭಿವೃದ್ದಿಯಾಗುತ್ತದೆ. ಇದು ಯಾವುದು ಸಹ ವೇದಗಣಿತದಲ್ಲಿ ಸಾಧ್ಯವಿಲ್ಲ ಎನ್ನುತ್ತಾರೆ ಎಸ್.ಬಾಲಚಂದ್ರ ರಾವ್.

ಈ ವೇದಗಣಿತ ಕಲಿಕೆಯಿಂದ ಗಣಿತದ ಬಗ್ಗೆ ತಪ್ಪು ಅಭಿಪ್ರಾಯ ಬರುತ್ತದೆ. ಗಣಿತ ಎಂದರೆ ಕೇವಲ ಮ್ಯಾಜಿಕ್ ಎಂದು ವಿದ್ಯಾರ್ಥಿಗಳು ಭಾವಿಸುವ ಅಪಾಯವಿದೆ. ಅಲ್ಲದೆ ವೇದಗಣಿತದ ಬಗ್ಗೆ ಯಾವ ವೇದಗಳಲ್ಲಿಯೂ ಹೇಳಿಲ್ಲ. ಹಿಂದಿನ ಶತಮಾನದ ಕೆಲ ಸ್ವಾಮಿಗಳು ಮಾಡಿರುವ ಸೂತ್ರಗಳು ಇವು. ಅವು ವೇದಿಕ್ ಅಲ್ಲ ಮತ್ತು ಮ್ಯಾಥಮ್ಯಾಟಿಕ್ಸ್ ಕೂಡ ಅಲ್ಲ. ಅವುಗಳಿಗೆ ವೇದಿಕ್ ಎಂದು ಹೆಸರು ಕೊಟ್ಟು ಮಕ್ಕಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...