Homeಮುಖಪುಟಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

- Advertisement -
- Advertisement -

ರೈತರ ಚಳವಳಿಯ ವಿರುದ್ಧ ಪೊಲೀಸರು ಮತ್ತು ಆಡಳಿತವು ನೀಡುತ್ತಿರುವ ವಿವಿಧ ರೀತಿಯ ಕಿರುಕುಳಗಳನ್ನು ನಿಲ್ಲಿಸುವವರೆಗೆ ಸರ್ಕಾರದೊಂದಿಗೆ ಯಾವುದೇ ಔಪಚಾರಿಕ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಸ್ಪಷ್ಟಪಡಿಸಿದೆ.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ಧರಣಿ ಮುಂದುವರಿಸಿದ್ದರಿಂದ, ಹರಿಯಾಣ ಮತ್ತು ಉತ್ತರ ಪ್ರದೇಶದ ಗಡಿಯ ಸಮೀಪವಿರುವ ಪ್ರತಿಭಟನಾ ಸ್ಥಳಗಳಲ್ಲಿ ಅನೇಕ ಬ್ಯಾರಿಕೇಡ್‌ಗಳು ಮತ್ತು ಮುಳ್ಳುತಂತಿ ಬೇಲಿಗಳನ್ನು ಹಾಕಲಾಗಿದೆ. ರಸ್ತೆಗಳಲ್ಲಿ ಕಂದಕ ಅಗೆಯಲಾಗಿದ್ದು, ಮೊಳೆಗಳನ್ನು ನೆಡಲಾಗಿದೆ ಮತ್ತು ತಾತ್ಕಾಲಿಕವಾಗಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ- ಇವೆಲ್ಲ ಸರ್ಕಾರವು ಆಯೋಜಿಸುತ್ತಿರುವ “ದಾಳಿಯ” ಭಾಗವಾಗಿವೆ ಎಂದು ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿಕೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ರೈತರ ಚಳವಳಿಯ ವಿರುದ್ಧ ಪೊಲೀಸರು ಮತ್ತು ಆಡಳಿತವು ವಿವಿಧ ರೀತಿಯ ಕಿರುಕುಳಗಳನ್ನು ನಿಲ್ಲಿಸುವವರೆಗೆ ಸರ್ಕಾರದೊಂದಿಗೆ ಯಾವುದೇ ಔಪಚಾರಿಕ ಮಾತುಕತೆ ನಡೆಸಲು ಸಾಧ್ಯವಿಲ್ಲ. ಪ್ರತಿಭಟನಾ ರೈತರು ಮೂರು ಕಾನೂನುಗಳನ್ನು ರದ್ದುಪಡಿಸುವುದಕ್ಕಿಂತ ಕಡಿಮೆ ಏನನ್ನೂ ಬಯಸುವುದಿಲ್ಲ” ಎಂದು ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಗಣರಾಜ್ಯೋತ್ಸವದಂದು ರೈತರು ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ಕೈಗೊಂಡ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ಅಹಿತಕರ ಘಟನೆ ನೆಡೆದ ನಂತರ, ಮೂರು ಪ್ರತಿಭಟನಾ ಕೇಂದ್ರಗಳಾದ ಸಿಂಘು, ಗಾಜಿಪುರ ಮತ್ತು ಟಿಕ್ರಿಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ದೆಹಲಿ-ಹರಿಯಾಣ ಗಡಿಯ ಬಳಿಯ ಸಿಂಘುವಿನಲ್ಲಿ ಹೆಚ್ಚಿನ ಭದ್ರತೆಯ ಕಾರಣದಿಂದ ನೀರಿನ ಕೊರತೆ ಉಂಟಾಗುತ್ತಿದೆ. ಹಾಗಾಗಿ ಸರ್ಕಾರದ ಈ ತೀವ್ರ ಜನವಿರೋಧಿ ಕ್ರಮಗಳನ್ನು ರೈತರು ಖಂಡಿಸಿದ್ದಾರೆ.

ಆಂದೋಲನ ನಡೆಯುತ್ತಿರುವ ಪ್ರದೇಶವನ್ನು ಐದು ವಲಯಗಳಾಗಿ ವಿಂಗಡಿಸಿ, ಅಲ್ಲಿ ವಾಹನ ಸಂಚಾರ ನಿಬಂಧಿಸಲಾಗಿದೆ. ಹಾಗಾಗಿ ನೀರಿನ ಟ್ಯಾಂಕರ್‌ಗಳು ಪ್ರತಿಭಟನೆಯ ಸ್ಥಳಗಳನ್ನು ತಲುಪಲು ಸಾಧ್ಯವಿಲ್ಲ ಎಂದು ರೈತರು ಹೇಳಿದ್ದಾರೆ.

ಇದನ್ನೂ ಓದಿ: ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ನವೆಂಬರ್ ಅಂತ್ಯದಿಂದ ರಾಷ್ಟ್ರ ರಾಜಧಾನಿಯ ಹೊರವಲಯದಲ್ಲಿ ಪ್ರತಿಭಟನೆ ಮಾಡುತ್ತಿರುವ ಪ್ರತಿಭಟನಾಕಾರರು,  ಲಂಗರ್‌ಗಳನ್ನು ನಡೆಸಲು ತಮ್ಮ ಬಳಿ ನೀರಿಲ್ಲ, ಸ್ನಾನ ಮತ್ತು ದೈನಂದಿನ ಕೆಲಸಗಳಿಗೂ ನೀರಿನ ಕೊರತೆಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಾಗ್ಗೆ ವಿದ್ಯುತ್ ಕಡಿತಗೊಳಿಸುತ್ತಿರುವುದು ನಮ್ಮ ತೊಂದರೆಗಳನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಪೊಲೀಸರೊಂದಿಗೆ, ಗಾಜಿಪುರದ ದೆಹಲಿ-ಯುಪಿ ಗಡಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಎಎನ್‌ಐ ಜೊತೆ ಮಾತನಾಡಿ, “ನಮ್ಮನ್ನು ಬೆಂಬಲಿಸಲು ಪ್ರತಿಪಕ್ಷಗಳು ಬಂದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಅದನ್ನು ರಾಜಕೀಯಗೊಳಿಸಬಾರದು. ನಾಯಕರು ಬಂದರೆ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ಸಂಚಾರವನ್ನು ರೈತರು ನಿರ್ಬಂಧಿಸಿಲ್ಲ. ಈ ನಿರ್ಬಂಧಕ್ಕೆ ಕಾರಣ ಪೊಲೀಸ್ ಬ್ಯಾರಿಕೇಡಿಂಗ್” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...