Homeಕರ್ನಾಟಕಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆಯಿಲ್ಲ: ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆಯಿಲ್ಲ: ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ

- Advertisement -
- Advertisement -

ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆಯಿಲ್ಲ, ಆದರೆ ಸರ್ಕರ ನೈತಿಕ ಶಿಕ್ಷಣ ನೀಡುವ ಉದ್ದೇಶವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಶಾಸಕ ಕೆ.ಎಸ್ ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಉತ್ತರಿಸಿದ ಅವರು, “ಸಾತ್ವಿಕ ಆಹಾರ ಮತ್ತು ನೈತಿಕ ಶಿಕ್ಷಣ ಎರಡನ್ನೂ ಒಟ್ಟಿಗೆ ನೋಡುವುದು ಸರಿಯಲ್ಲ. ಸರ್ವಧರ್ಮ ಚಿಂತಕರ ಸಭೆಯಲ್ಲಿ ನೈತಿಕ ಶಿಕ್ಷಣ ನೀಡಬೇಕೆಂಬ ಒಕ್ಕೊರಲ ಆಗ್ರಹ ಕೇಳಿಬಂದಿದೆ. ಕೆಲವರು ಸಾತ್ವಿಕ ಆಹಾರ ನೀಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಆಧಾರದಲ್ಲಿ ನಾವು ನೈತಿಕ ಶಿಕ್ಷಣ ನೀಡುವ ಉದ್ದೇಶ ಹೊಂದಿದ್ದೇವೆ” ಎಂದಿದ್ದಾರ.

ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದಿದ್ದ ಸಭೆಯಲ್ಲಿ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದರು. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿದ್ದವು. ಆದರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿತ್ತು.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದರು.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದರು. ಹಾಗಾಗಿ ಸರ್ಕಾರ ಸಸ್ಯಾಹಾರಿ ಆಹಾರ ಕಡ್ಡಾಯ ಮಾಡುವುದರಿಂದ ಹಿಂದೆ ಸರಿದು, ನೈತಿಕ ಶಿಕ್ಷಣ ನೀಡುವುದಾಗಿ ಹೇಳಿಕೆ ನೀಡುತ್ತಿದೆ.

ಇದನ್ನೂ ಓದಿ: ನೈತಿಕತೆಗೂ, ಮೊಟ್ಟೆ-ಮಾಂಸದಂಗಡಿಗೂ ಎತ್ತನಿಂದೆತ್ತ ಸಂಬಂಧವಯ್ಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...