ರಾಜ್ಯದಲ್ಲಿ ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಬೌದ್ಧಿಕ ದಿವಾಳಿತನದಿಂದ ಕೂಡಿದೆ. ಪಕೋಡ ತಯಾರಿಸಲು ಕೂಡ ಈರುಳ್ಳಿ ಕೊಳ್ಳಲೂ ಆರ್ಥಿಕವಾಗಿ ನಿಶಕ್ತರಾಗಿರುವ ನಿರುದ್ಯೋಗಿಗಳ ಕಣ್ಣಲ್ಲೇಕೆ ನೀರು ತರಿಸುವಿರಿ? ಎಂದು ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ರಾಜ್ಯ ಸೇರಿದಂತೆ ದೇಶದಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹೊಸ ಉದ್ಯೋಗ ಸೃಷ್ಟಿ ಒತ್ತಟ್ಟಿಗಿರಲಿ. ಇರುವ ಉದ್ಯೋಗ ಕಳೆದುಕೊಂಡು ಉದ್ಯೋಗಸ್ಥರು ಬೀದಿಗೆ ಬಿದ್ದಿದ್ದಾರೆ. ಉದ್ಯೋಗಾಕಾಂಕ್ಷಿಗಳು ಕಂಗಾಲಾಗಿದ್ದಾರೆ ಎಂದು ಎಂದು ಮಾಜಿ ಸಿಎಂ ದೂರಿದ್ದಾರೆ.
ರಾಜ್ಯದಲ್ಲಿ ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಬೌದ್ಧಿಕ ದಿವಾಳಿತನದಿಂದ ಕೂಡಿದೆ. ಪಕೋಡ ತಯಾರಿಸಲು ಕೂಡ ಈರುಳ್ಳಿ ಕೊಳ್ಳಲೂ ಆರ್ಥಿಕವಾಗಿ ನಿಶಕ್ತರಾಗಿರುವ ನಿರುದ್ಯೋಗಿಗಳ ಕಣ್ಣಲ್ಲೇಕೆ ನೀರು ತರಿಸುವಿರಿ?
1/3 pic.twitter.com/pSrWPnD8IE— H D Kumaraswamy (@hd_kumaraswamy) January 11, 2020
ಇಂತಹ ಹಸಿ ಸುಳ್ಳುಗಳನ್ನು ಯಾರನ್ನು ಮೆಚ್ಚಿಸಲು ಹೇಳುತ್ತೀರಿ? ನಾಚಿಕೆ ಆಗಬೇಕು ನಿಮಗೆ. ಯೋಗ್ಯ ಉದ್ಯೋಗಾಕಾಂಕ್ಷಿಗಳನ್ನು ನಿಮ್ಮ ಮನೆಗೆ ಕಳುಹಿಸಲೇ? ಕಚೇರಿಗೆ ಕಳುಹಿಸಲೇ? ಕೆಲಸ ಕೊಡಿಸುತ್ತೀರಾ? ಎಂದು ಡಿಸಿಎಂ ಅಶ್ವಥನಾರಾಯಣರಿಗೆ ಸವಾಲು ಹಾಕಿದ್ದಾರೆ.
ಸುಳ್ಳು ಹೇಳುವುದನ್ನು ಮನುವಾದಿಗಳಿಂದ ಕಲಿಯಬೇಕು.