Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...