Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...