Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...