Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...