Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...