Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...