Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....