Homeಮುಖಪುಟಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

ಸಮರ್ಪಕ ಕಾರಣ ನೀಡದೇ ಶೇ. 40 ರಷ್ಟು ಆರ್‌ಟಿಐ ಅರ್ಜಿಗಳನ್ನು ತಿರಸ್ಕರಿಸಿದ ಕೇಂದ್ರ!

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ ವಾರ್ಷಿಕ ವರದಿಯ ಪ್ರಕಾರ, 2019-20ರಲ್ಲಿ ಕೋರಲಾದ ಎಲ್ಲಾ ಮಾಹಿತಿ ಹಕ್ಕು (ಆರ್‌ಟಿಐ) ಮನವಿಗಳಲ್ಲಿ 4.3% ರಷ್ಟು ಮನವಿಗಳಿಗೆ ಕೇಂದ್ರವು ಮಾಹಿತಿ ನೀಡಲು ನಿರಾಕರಿಸಿದೆ. ವರದಿಯ ಮಾಹಿತಿಯ ವಿಶ್ಲೇಷಣೆಯ ಪ್ರಕಾರ, ಈ ನಿರಾಕರಣೆಗಳಲ್ಲಿ ಸುಮಾರು 40% ರಷ್ಟು ಯಾವುದೇ ಮಾನ್ಯ ಕಾರಣವನ್ನು ಒಳಗೊಂಡಿಲ್ಲ. ಇವುಗಳಲ್ಲಿ 90% ರಷ್ಟು ನಿರಾಕರಣೆಗಳು ಪ್ರಧಾನಮಂತ್ರಿಯ ಕಛೇರಿಯಿಂದಲೆ ಆಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಅಧಿಕಾರಿಗಳು 2019-20ರಲ್ಲಿ 13.7 ಲಕ್ಷ ಆರ್‌ಟಿಐ ವಿನಂತಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 58,634 ವಿನಂತಿಗಳು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲ್ಪಟ್ಟಿದೆ. 2005-06ರಲ್ಲಿ 13.9% ವಿನಂತಿಗಳು ತಿರಸ್ಕರಿಸಲ್ಪಟ್ಟಿತ್ತು. 2014-15ರಲ್ಲಿ 8.4% ವಿನಂತಿಗಳು ತಿರಸ್ಕರಿಸಲ್ಪಟ್ಟಿದ್ದವು. 2019-20ರಲ್ಲಿ 4.3% ರಷ್ಟು ತಿರಸ್ಕಾರವಾಗಿವೆ. ಈ ದತ್ತಾಂಶಗಳನ್ನು ಗಮನಿಸಿದಾಗ ತಿರಸ್ಕರಿಸುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಾ ಬಂದಿದೆ.

ಸಿಐಸಿಯ ವಾರ್ಷಿಕ ವರದಿಯ ಪ್ರಕಾರ ಕೇಂದ್ರ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2,000 ಕ್ಕೂ ಹೆಚ್ಚು ಸಾರ್ವಜನಿಕ ಅಧಿಕಾರಿಗಳನ್ನು ಒಳಗೊಂಡಿದೆ. ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ, “ಕೇಂದ್ರ ಸಚಿವಾಲಯಗಳಿಂದ ಸಿಐಸಿ ಮ್ಯಾಕ್ರೋ-ಡೇಟಾದ ವಿಶ್ಲೇಷಣೆಯು ಗೃಹ ಸಚಿವಾಲಯವು ಅತಿ ಹೆಚ್ಚು ನಿರಾಕರಣೆಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಏಕೆಂದರೆ ಅದು ಪಡೆದ ಎಲ್ಲಾ ಆರ್‌ಟಿಐ ಮನವಿಗಳಲ್ಲಿ 20% ಅನ್ನು ತಿರಸ್ಕರಿಸಿದೆ. ಕೃಷಿ ಸಚಿವಾಲಯದ ನಿರಾಕರಣೆ ದರವು 2018-19ರಲ್ಲಿ 2% ರಿಂದ 2019-20ರಲ್ಲಿ 4% ಕ್ಕೆ ಏರಿದೆ. ದೆಹಲಿ ಪೊಲೀಸರು ಮತ್ತು ಸೇನಾ ಇಲಾಖೆಯ ನಿರಾಕರಣೆಯ ದರದಲ್ಲಿ ಹೆಚ್ಚಳ ಕಂಡಿದೆ” ಎಂದು ದಿ ಹಿಂದು ವರದಿ ಮಾಡಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಆರ್‌ಟಿಐ ಕಾಯ್ದೆಯು ಸಾರ್ವಜನಿಕ ಅಧಿಕಾರಿಗಳಿಗೆ ಆರ್‌ಟಿಐ ವಿನಂತಿಗಳನ್ನು ತಿರಸ್ಕರಿಸಲು ಅನುವು ಮಾಡಿಕೊಡುತ್ತದೆ. ಜೀವನ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ, ಅಪ್ರಸ್ತುತವಾದ ವೈಯಕ್ತಿಕ ಮಾಹಿತಿ, ಕ್ಯಾಬಿನೆಟ್ ಪತ್ರಿಕೆಗಳು, ವಿದೇಶಿ ಸರ್ಕಾರಗಳು, ಹಕ್ಕುಸ್ವಾಮ್ಯಗಳು ಅಥವಾ ಸಾರ್ವಭೌಮತ್ವ, ಭದ್ರತೆ ಮತ್ತು ಗುಪ್ತಚರ ವಿಷಯಗಳನ್ನು ಆರ್‌ಟಿಐ ಅಡಿಯಲ್ಲಿ ನೀಡಲಾಗುವುದಿಲ್ಲ. ಇದರಿಂದ ವಿನಾಯಿತಿ ಪಡೆಯಲು ಸಾರ್ವಜನಿಕ ಅಧಿಕಾರಿಗಳು ಕಾಯಿದೆಯ ಸಂಬಂಧಿತ ಷರತ್ತುಗಳನ್ನು ಉಲ್ಲೇಖಿಸುತ್ತಾರೆ.

ಆದರೂ, 2019-20ರಲ್ಲಿ ನಿರಾಕರಿಸಲ್ಪಟ್ಟ 38.7% ವಿನಂತಿಗಳಲ್ಲಿ, ಸಾರ್ವಜನಿಕ ಅಧಿಕಾರಿಗಳು ಈ ವಿನಾಯಿತಿಯ ಷರತ್ತುಗಳನ್ನು ಉಲ್ಲೇಖಿಸುವಲ್ಲಿ ವಿಫಲರಾಗಿದ್ದಾರೆ. ಇದು ಹಿಂದಿನ ವರ್ಷ 33% ರಷ್ಟು ಇತ್ತು. ಹಣಕಾಸು ಸಚಿವಾಲಯ ಮಾತ್ರ 10,000 ಕ್ಕೂ ಹೆಚ್ಚು ವಿನಂತಿಗಳನ್ನು (ಅದರ ಒಟ್ಟು ಆರ್‌ಟಿಐ ನಿರಾಕರಣೆಯ 40%) ಆರ್‌ಟಿಐ ಕಾಯಿದೆಯಡಿ ಮಾನ್ಯ ಕಾರಣವನ್ನು ನೀಡದೆ ತಿರಸ್ಕರಿಸಿದೆ. ಪ್ರಧಾನ ಮಂತ್ರಿಗಳ ಕಚೇರಿ, ದೆಹಲಿ ಹೈಕೋರ್ಟ್, ಸಿಎಜಿ, ರೈಲ್ವೆ, ರಸ್ತೆ ಸಾರಿಗೆ, ಆಹಾರ ಸಂಸ್ಕರಣೆ ಮತ್ತು ಪಂಚಾಯತಿ ರಾಜ್ ಸಚಿವಾಲಯಗಳು ಸೇರಿದಂತೆ ಹಲವು ಇಲಾಖೆಗಳು 90% ಕ್ಕಿಂತ ಹೆಚ್ಚು ವಿನಂತಿಗಳನ್ನು ತಿರಸ್ಕರಿಸಿವೆ ಎಂದು ವೆಂಕಟೇಶ್ ನಾಯಕ್ ಅವರ ವಿಶ್ಲೇಷಣೆ ತಿಳಿಸಿದೆ.


ಇದನ್ನೂ ಓದಿ: ‘ಸಾಕ್ಷಿಯಿಲ್ಲ’ – ಅತ್ಯಾಚಾರ ಆರೋಪದಲ್ಲಿ ಬಂಧನವಾಗಿದ್ದ ಬಿಜೆಪಿ ಮುಖಂಡನ ಪ್ರಕರಣ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...