Homeನ್ಯಾಯ ಪಥಸಾಧ್ಯವಿರಲಿಲ್ಲವೇ ಮಂದಿರ-ಮಸೀದಿ ಸಹಬಾಳ್ವೆ? : ಡಿ.ಉಮಾಪತಿ

ಸಾಧ್ಯವಿರಲಿಲ್ಲವೇ ಮಂದಿರ-ಮಸೀದಿ ಸಹಬಾಳ್ವೆ? : ಡಿ.ಉಮಾಪತಿ

ಮಂಡಲ'ವನ್ನು ದಶಕಗಟ್ಟಲೆ ' ಕುದಿಸಿ ಮಾಡಿದ 'ಕಮಂಡಲ'ದ ಕಡುಪಾಕವನ್ನು ದಿನ ಬೆಳಗಾಗುವುದರ ಒಳಗೆ ಬದಲಾಯಿಸುವುದು ಸಾಧ್ಯವಿಲ್ಲ. ಈ ನಗ್ನ ವಾಸ್ತವ ಖುದ್ದು ಆಳುವ ಪಕ್ಷ ಮತ್ತು ಪರಿವಾರಕ್ಕೆ ಚೆನ್ನಾಗಿ ಗೊತ್ತು.

- Advertisement -
- Advertisement -

ದೇಶದ ಸಾಮಾಜಿಕ ಮತ್ತು ಜಾತ್ಯತೀತ ನೇಯ್ಗೆಯನ್ನು ಇತ್ತೀಚಿನ ದಶಕಗಳಲ್ಲಿ ಛಿದ್ರಗೊಳಿಸಿದ್ದ ಅಯೋಧ್ಯೆಯ ಬಾಬರಿ ಮಸೀದಿ-ರಾಮಮಂದಿರ ವಿವಾದಕ್ಕೆ ತೆರೆ ಎಳೆದಿದೆ ಸುಪ್ರೀಮ್ ಕೋರ್ಟು.

”1949ರ ಡಿಸೆಂಬರ್ 22-23ರ ನಡುವಣ ರಾತ್ರಿ ಹಿಂದೂ ದೇವತೆಗಳ ಮೂರ್ತಿಗಳನ್ನು ಒಳಪ್ರಾಂಗಣದಲ್ಲಿ ತಂದಿಟ್ಟು ಮಸೀದಿಯನ್ನು ಅಪವಿತ್ರಗೊಳಿಸಲಾಯಿತು. ಆ ಸಂದರ್ಭದಲ್ಲಿ ಮುಸಲ್ಮಾನರನ್ನು ಅಲ್ಲಿಂದ ಹೊರದಬ್ಬಿದ್ದು ಕಾನೂನುಬಾಹಿರವಾಗಿತ್ತು. ಅವರ ಧಾರ್ಮಿಕ ತಾಣವನ್ನು ಅವರ ಕೈ ತಪ್ಪಿಸುವ ಲೆಕ್ಕಾಚಾರದ ಕೃತ್ಯವಾಗಿತ್ತು”.

”ಕ್ರಿಮಿನಲ್ ಪ್ರಕರಣವೊಂದನ್ನು ದಾಖಲು ಮಾಡಿಕೊಂಡ ನಂತರ ರಿಸೀವರ್ ನೇಮಕ ಮಾಡಿ ಒಳಪ್ರಾಂಗಣವನ್ನು ಮುಟ್ಟುಗೋಲು ಹಾಕಿಕೊಂಡ ನಂತರ ಹಿಂದೂ ದೇವತಾ ಮೂರ್ತಿಗಳ ಪೂಜೆಗೆ ಅವಕಾಶ ಮಾಡಿಕೊಡಲಾಯಿತು. ತಕರಾರು ಅರ್ಜಿಗಳ ವಿಚಾರಣೆ ಬಾಕಿ ಇರುವಂತೆಯೇ ಇಡೀ ಮಸೀದಿಯನ್ನು ನೆಲಸಮ ಮಾಡಲಾಯಿತು. ಸಾರ್ವಜನಿಕ ಪೂಜಾ ಸ್ಥಳವನ್ನು ನಾಶ ಮಾಡಿದ ಲೆಕ್ಕಾಚಾರದ ಕೃತ್ಯವದು. 450 ವರ್ಷಗಳ ಹಿಂದೆ ಕಟ್ಟಲಾಗಿದ್ದ ಮಸೀದಿಯೊಂದನ್ನು ಮುಸಲ್ಮಾನರ ಕೈ ತಪ್ಪಿಸಿದ್ದು ತಪ್ಪು” ಎಂದು ನ್ಯಾಯಾಲಯ ನಿಚ್ಚಳವಾಗಿ ಸಾರಿದೆ.

ಈ ಮಾತುಗಳನ್ನು ಹೇಳಿದ ನಂತರವೂ ವಿವಾದಿತ ಜಮೀನನ್ನು ಮಂದಿರ ನಿರ್ಮಾಣಕ್ಕೆ ಮಾತ್ರವೇ ಕೊಡಬೇಕಾಗಿ ಬಂದಿತಲ್ಲ ಅದು ಹೇಗೆ ಎಂಬ ಪ್ರಶ್ನೆಗಳನ್ನು ಸುಪ್ರೀಮ್ ಕೋರ್ಟಿನ ಹಲವು ನಿವೃತ್ತ ನ್ಯಾಯಮೂರ್ತಿಗಳು ಎತ್ತಿದ್ದಾರೆ. ಈ ಸಂದೇಹಕ್ಕೆ ನ್ಯಾಯಾಲಯ 799ನೆಯ ಪ್ಯಾರಾದಲ್ಲಿ ನೀಡಿರುವ ಸಮಾಧಾನ ಹೀಗಿದೆ- ‘ಸಾರ್ವಜನಿಕ ಶಾಂತಿ ಸಾಮರಸ್ಯ ಕಾಪಾಡುವ ಉದ್ದೇಶದಿಂದ 2010ರ ತೀರ್ಪಿನಲ್ಲಿ ಅಲಹಾಬಾದ್ ಹೈಕೋರ್ಟು ವಿವಾದಿತ ಜಾಗವನ್ನು ಮೂರೂ ಅರ್ಜಿದಾರರಿಗೆ (ಸುನ್ನಿ ವಕ್ಫ್ ಮಂಡಳಿ, ರಾಮಲಲ್ಲಾ ವಿರಾಜಮಾನ್ ಹಾಗೂ ನಿರ್ಮೋಹಿ ಅಖಾಡ) ಹಂಚಿಕೊಟ್ಟಿದೆಯಾದರೂ, ಈ ಪರಿಹಾರ ಕಾರ್ಯಸಾಧ್ಯ ಅಲ್ಲ. ವಿವಾದಿತ ಜಾಗದ ಒಟ್ಟು ವಿಸ್ತೀರ್ಣ ಕೇವಲ 1500 ಚದರ ಗಜಗಳು. ಈ ಜಾಗವನ್ನು ವಿಭಾಗಿಸಿ ಹಂಚಿಕೊಡುವುದರಿಂದ ಯಾರ ಹಿತದ ಸಾಧನೆಯೂ ಆಗುವುದಿಲ್ಲ. ಅಷ್ಟೇ ಅಲ್ಲ, ಇಂತಹ ಕ್ರಮದಿಂದ ಶಾಂತಿ ಸಾಮರಸ್ಯ ಕಾಯಮ್ಮಾಗಿ ನೆಲೆಸುತ್ತದೆಂದು ಹೇಳುವುದು ಸಾಧ್ಯವಿಲ್ಲ’.

ನ್ಯಾಯಾಲಯದ ಮುಂದಿರುವ ನಿರ್ದಿಷ್ಟ ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಹೊರಗೆ ನಡೆಯುವ ಘಟನಾವಳಿಗಳು ನಮಗೆ ಅಪ್ರಸ್ತುತ. ಕಾಯಿದೆ ಮತ್ತು ಸಂವಿಧಾನವೇ ನಮಗೆ ಪರಮ ಒರೆಗಲ್ಲುಗಳು. ನಮ್ಮ ನ್ಯಾಯ ನಿರ್ಣಯ ಪ್ರಕ್ರಿಯೆ ಈ ಎರಡು ಅಂಶಗಳನ್ನು ಮಾತ್ರವೇ ಆಧರಿಸಿರುತ್ತದೆ ಎಂದು ಸುಪ್ರೀಮ್ ಕೋರ್ಟ್ ನೂರಾರು ಪ್ರಕರಣಗಳಲ್ಲಿ ಸಾರಿರುವುದು ಉಂಟು.

ಆದರೆ ಸುಪ್ರೀಮ್ ಕೋರ್ಟಿನ ನಿಲುವಿಗೆ ಅಲ್ಲಲ್ಲಿ ಬಹುದೊಡ್ಡ ಅಪವಾದಗಳು ಕಾಣಸಿಗುತ್ತವೆ. ಉದಾಹರಣೆಗೆ ಇಂದಿರಾಗಾಂಧೀ ಅವರು ಹೇರಿದ್ದ ತುರ್ತುಪರಿಸ್ಥಿತಿಯ ಕಾಲ. ಹೊರಗಿನ ವಾತಾವರಣದ ಪ್ರಭಾವದಿಂದ ನ್ಯಾಯಾಲಯವೂ ತಪ್ಪಿಸಿಕೊಳ್ಳದೆ ಹೋಯಿತು ಎಂಬ ಮಾತಿಗೆ ಜ್ವಲಂತ ನಿದರ್ಶನವೊಂದು ಇತಿಹಾಸದಲ್ಲಿ ಸದಾ ಕಾಲಕ್ಕೆ ದಾಖಲಾಗಿಬಿಟ್ಟಿತು. ವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಪ್ರಾಣದ ಹಕ್ಕು ಸಂವಿಧಾನವೇ ನೀಡಿರುವ ಮೂಲಭೂತ ಹಕ್ಕುಗಳು (ಈ ಹಕ್ಕುಗಳು ಅನಿರ್ಬಂಧಿತ ಅಲ್ಲ). ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಈ ಎರಡು ಹಕ್ಕುಗಳನ್ನು ಅಮಾನತುಗೊಳಿಸಬಹುದು ಎಂದು ಐವರು ಸದಸ್ಯರ ನ್ಯಾಯಪೀಠ ಬಹುಮತದ ತೀರ್ಪು ನೀಡಿಬಿಟ್ಟಿತ್ತು. ನ್ಯಾಯಮೂರ್ತಿ ಎಚ್.ಆರ್. ಖನ್ನಾ ಭಿನ್ನಮತದ ತೀರ್ಪು ಬರೆದರು. ನಾಗರಿಕ ಸಮಾಜಗಳಲ್ಲಿ ಪ್ರಾಣದ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳು ಮಾನವ ಜೀವಿಗಳ ಅತ್ಯಮೂಲ್ಯ ಹಕ್ಕುಗಳು?. ಈ ಹಕ್ಕುಗಳನ್ನು ಕಾರ್ಯಾಂಗದ ಪದತಲಕ್ಕೆ ಶರಣಾಗಿಸುವುದನ್ನು ಭಾರತದ ಸಂವಿಧಾನ ಮತ್ತು ಕಾಯಿದೆ ಕಾನೂನುಗಳು ಒಪ್ಪುವುದಿಲ್ಲ ಎಂದು ಸಾರಿದರು. ಈ ಭಿನ್ನಮತದ ತೀರ್ಪಿನ ಕಾರಣ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಹುದ್ದೆಗೆ ಬಡ್ತಿಯನ್ನು ನಿರಾಕರಿಸಲಾಯಿತು. ಸೇವಾ ಜ್ಯೇಷ್ಠತೆಯನ್ನು ಅವಗಣಿಸಿ ಅವರಿಗಿಂತ ಕಿರಿಯ ನ್ಯಾಯಮೂರ್ತಿಗೆ ಬಡ್ತಿ ನೀಡಿದ್ದು ತುರ್ತುಪರಿಸ್ಥಿತಿಯ ಅತಿರೇಕಗಳಲ್ಲೊಂದು.

ಮುಂದೊಂದು ದಿನ ಸುಪ್ರೀಮ್ ಕೋರ್ಟ್ ಮುಖ್ಯನ್ಯಾಯಮೂರ್ತಿಯಾದ ಚಂದ್ರಚೂಡ್ ಅವರು ಈ ತೀರ್ಪಿಗಾಗಿ ಕ್ಷಮೆ ಯಾಚಿಸಿದರು. ಪಿ.ಎನ್.ಭಗವತಿ ಪಶ್ಚಾತ್ತಾಪಪಟ್ಟರು. ಇಂತಹ ತೀರ್ಪಿನಲ್ಲಿ ಭಾಗಿಯಾಗುವುದರ ಬದಲು ತಾವು ರಾಜೀನಾಮೆ ನೀಡುವುದೇ ಲೇಸಿತ್ತು ಎಂದರು.

ನ್ಯಾಯಾಲಯದ ಹೊರಗಿನ ವಾತಾವರಣವೂ ನ್ಯಾಯಾಲಯದ ತೀರ್ಪಿನ ಮೇಲೆ ಪರಿಣಾಮ ಬೀರಬಲ್ಲದು ಎಂಬ ಮಾತಿಗೆ ಉದಾಹರಣೆಯಾಗಿ ಮಾತ್ರವೇ ಈ ತೀರ್ಪನ್ನು ಇಲ್ಲಿ ಉಲ್ಲೇಖಿಸಲಾಗಿದೆ.

ಮಂದಿರ-ಮಸೀದಿ ವಿವಾದದ ತೀರ್ಪಿನಲ್ಲೂ ಬಾಹ್ಯ ವಾತಾವರಣ ಪ್ರಭಾವ ಬೀರಿರುವ ಸಾಧ್ಯತೆಗಳನ್ನು ತಳ್ಳಿ ಹಾಕಲು ಬರುವುದಿಲ್ಲ. ಆದರೆ ಹಾಲಿ ಪ್ರಭಾವದ ಹಿಂದೆ ಸಾಮಾಜಿಕ ಶಾಂತಿ ಸಾಮರಸ್ಯಗಳನ್ನು ಕಾಪಾಡುವ ‘ಸದಾಶಯ’ದ ಹಿರಿಯ ಉದ್ದೇಶ ಇದ್ದೀತು. ನ್ಯಾಯಾಲಯದ ಹೊರಗಿನ ಇಂದಿನ ವಾತಾವರಣ ಹಿಂದುಸ್ತಾನ ಹಿಂದೆಂದೂ ಕಾಣದಂತಹುದು. ಉಗ್ರ ಹಿಂದುತ್ವ ಮತ್ತು ಆಕ್ರಮಣಕಾರಿ ರಾಷ್ಟ್ರವಾದಗಳು, ದೈತ್ಯ ಮತ್ತು ನಿರ್ದಯೀ ಬಹುಸಂಖ್ಯಾತ ವಾದವನ್ನು ಕಟೆದು ನಿಲ್ಲಿಸಿವೆ. ಈ ವಿವಾದವು 1989ರಿಂದ ದೇಶವನ್ನು ಉದ್ದಗಲಕ್ಕೆ ಹರಿಯಬಿಟ್ಟ ಹಿಂಸೆ ದ್ವೇಷ ತಿರಸ್ಕಾರ ಕೋಮು ಧೃವೀಕರಣದ ಹೆದ್ದೆರೆಗಳ ಭಯಾನಕ ಇತಿಹಾಸ ಪ್ರಾಯಶಃ ನ್ಯಾಯಾಲಯದ ಗಮನದಲ್ಲಿ ಇದ್ದಿರಬೇಕು. ಅಂತಹ ಮತ್ತೊಂದು ಉತ್ಕಟ ಸಂಕಟವನ್ನು ದೇಶ ಹಾದುಹೋಗುವುದು ಬೇಡ ಎಂಬ ಸದಾಶಯ ಕೆಲಸ ಮಾಡಿದ್ದೀತು. ತೀರ್ಪು ಯಾರ ಪರವಾಗಿ ಬಂದರೂ ಒಬ್ಬರು ಸೋತರು ಮತ್ತೊಬ್ಬರು ಗೆದ್ದರು ಎಂದು ಭಾವಿಸುವುದು ಬೇಡ ಎಂಬ ವಿವೇಕದ ಮಾತುಗಳನ್ನು ಆಳುವ ಪಕ್ಷ ಮತ್ತು ಅದರ ಹಿಂದಿನ ಪರಿವಾರ ಆಡಿದ್ದು ಮೇಲ್ನೋಟಕ್ಕೆ ಪ್ರಶಂಸನೀಯ. ಆದರೆ ಆಳುವ ಪಕ್ಷ ಮತ್ತು ಅದರ ಬೆನ್ನಿಗಿರುವ ಪರಿವಾರ 1989ರಿಂದ ದೇಶದ ಬಹುಸಂಖ್ಯಾತರ ಸಾಮೂಹಿಕ ಮನಸ್ಥಿತಿಯನ್ನು ಬಹುತೇಕ ಹಿಂದೂರಾಷ್ಟ್ರದ ಪರಿಕಲ್ಪನೆಯ ಪರವಾಗಿ ಪ್ರಚೋದಿಸಿ ತಿದ್ದಿ ತೀಡಿ ರೂಪಿಸಿಬಿಟ್ಟಿದೆ. ದಶಕಗಟ್ಟಲೆ ‘ಮಂಡಲ’ವನ್ನು ಕುದಿಸಿ ಮಾಡಿದ ‘ಕಮಂಡಲ’ದ ಕಡುಪಾಕವನ್ನು ದಿನ ಬೆಳಗಾಗುವುದರ ಒಳಗೆ ಬದಲಾಯಿಸುವುದು ಸಾಧ್ಯವಿಲ್ಲ. ಈ ನಗ್ನ ವಾಸ್ತವ ಖುದ್ದು ಆಳುವ ಪಕ್ಷ ಮತ್ತು ಪರಿವಾರಕ್ಕೆ ಚೆನ್ನಾಗಿ ಗೊತ್ತು. ಇನ್ನು ಈ ನಿಷ್ಠುರ ಸತ್ಯ ದೇಶದ ಅತ್ಯುನ್ನತ ನ್ಯಾಯಸ್ಥಾನಕ್ಕೆ ತಿಳಿಯದೆ ಇದ್ದೀತೇ? ಹೀಗಾಗಿ ಮತ್ತೊಂದು ಕಡುದ್ವೇಷದ ಹೀನ ಹಿಂಸೆಯ ಹೆದ್ದೆರೆ ದೇಶದ ಸಮಾಜಜೀವನವನ್ನು ಅಪ್ಪಳಿಸುವ ಸಾಧಕ ಬಾಧಕಗಳು ನ್ಯಾಯಮೂರ್ತಿಗಳ ಕಣ್ಣ ಮುಂದೆ ಸುಳಿದಿರಲೇಬೇಕು. ಹೀಗಾಗಿಯೇ ನ್ಯಾಯ ನೀಡಿಕೆಯ ಉದಾತ್ತ ತತ್ವವು, ಕೇವಲ ವಿವಾದ ಇತ್ಯರ್ಥದ ಅನುಸಂಧಾನಕ್ಕೆ ಇಳಿದಿರಬೇಕು. ನ್ಯಾಯ ನೀಡಿಕೆ ಬೇರೆ. ವಿವಾದದ ಇತ್ಯರ್ಥ ಬೇರೆ ಎಂಬುದನ್ನು ಗಮನಿಸಬೇಕಿದೆ. ನ್ಯಾಯ ನೀಡಿಕೆಗೆ ಆದ್ಯತೆ ದೊರೆತಿದ್ದರೆ 2.77 ಎಕರೆ ಜಾಗದಲ್ಲಿ ಮಂದಿರ-ಮಸೀದಿಗಳೆರಡೂ ಸಹಬಾಳ್ವೆ ನಡೆಸಬೇಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...