Homeನ್ಯಾಯ ಪಥಸಾಧ್ಯವಿರಲಿಲ್ಲವೇ ಮಂದಿರ-ಮಸೀದಿ ಸಹಬಾಳ್ವೆ? : ಡಿ.ಉಮಾಪತಿ

ಸಾಧ್ಯವಿರಲಿಲ್ಲವೇ ಮಂದಿರ-ಮಸೀದಿ ಸಹಬಾಳ್ವೆ? : ಡಿ.ಉಮಾಪತಿ

ಮಂಡಲ'ವನ್ನು ದಶಕಗಟ್ಟಲೆ ' ಕುದಿಸಿ ಮಾಡಿದ 'ಕಮಂಡಲ'ದ ಕಡುಪಾಕವನ್ನು ದಿನ ಬೆಳಗಾಗುವುದರ ಒಳಗೆ ಬದಲಾಯಿಸುವುದು ಸಾಧ್ಯವಿಲ್ಲ. ಈ ನಗ್ನ ವಾಸ್ತವ ಖುದ್ದು ಆಳುವ ಪಕ್ಷ ಮತ್ತು ಪರಿವಾರಕ್ಕೆ ಚೆನ್ನಾಗಿ ಗೊತ್ತು.

- Advertisement -
- Advertisement -

ದೇಶದ ಸಾಮಾಜಿಕ ಮತ್ತು ಜಾತ್ಯತೀತ ನೇಯ್ಗೆಯನ್ನು ಇತ್ತೀಚಿನ ದಶಕಗಳಲ್ಲಿ ಛಿದ್ರಗೊಳಿಸಿದ್ದ ಅಯೋಧ್ಯೆಯ ಬಾಬರಿ ಮಸೀದಿ-ರಾಮಮಂದಿರ ವಿವಾದಕ್ಕೆ ತೆರೆ ಎಳೆದಿದೆ ಸುಪ್ರೀಮ್ ಕೋರ್ಟು.

”1949ರ ಡಿಸೆಂಬರ್ 22-23ರ ನಡುವಣ ರಾತ್ರಿ ಹಿಂದೂ ದೇವತೆಗಳ ಮೂರ್ತಿಗಳನ್ನು ಒಳಪ್ರಾಂಗಣದಲ್ಲಿ ತಂದಿಟ್ಟು ಮಸೀದಿಯನ್ನು ಅಪವಿತ್ರಗೊಳಿಸಲಾಯಿತು. ಆ ಸಂದರ್ಭದಲ್ಲಿ ಮುಸಲ್ಮಾನರನ್ನು ಅಲ್ಲಿಂದ ಹೊರದಬ್ಬಿದ್ದು ಕಾನೂನುಬಾಹಿರವಾಗಿತ್ತು. ಅವರ ಧಾರ್ಮಿಕ ತಾಣವನ್ನು ಅವರ ಕೈ ತಪ್ಪಿಸುವ ಲೆಕ್ಕಾಚಾರದ ಕೃತ್ಯವಾಗಿತ್ತು”.

”ಕ್ರಿಮಿನಲ್ ಪ್ರಕರಣವೊಂದನ್ನು ದಾಖಲು ಮಾಡಿಕೊಂಡ ನಂತರ ರಿಸೀವರ್ ನೇಮಕ ಮಾಡಿ ಒಳಪ್ರಾಂಗಣವನ್ನು ಮುಟ್ಟುಗೋಲು ಹಾಕಿಕೊಂಡ ನಂತರ ಹಿಂದೂ ದೇವತಾ ಮೂರ್ತಿಗಳ ಪೂಜೆಗೆ ಅವಕಾಶ ಮಾಡಿಕೊಡಲಾಯಿತು. ತಕರಾರು ಅರ್ಜಿಗಳ ವಿಚಾರಣೆ ಬಾಕಿ ಇರುವಂತೆಯೇ ಇಡೀ ಮಸೀದಿಯನ್ನು ನೆಲಸಮ ಮಾಡಲಾಯಿತು. ಸಾರ್ವಜನಿಕ ಪೂಜಾ ಸ್ಥಳವನ್ನು ನಾಶ ಮಾಡಿದ ಲೆಕ್ಕಾಚಾರದ ಕೃತ್ಯವದು. 450 ವರ್ಷಗಳ ಹಿಂದೆ ಕಟ್ಟಲಾಗಿದ್ದ ಮಸೀದಿಯೊಂದನ್ನು ಮುಸಲ್ಮಾನರ ಕೈ ತಪ್ಪಿಸಿದ್ದು ತಪ್ಪು” ಎಂದು ನ್ಯಾಯಾಲಯ ನಿಚ್ಚಳವಾಗಿ ಸಾರಿದೆ.

ಈ ಮಾತುಗಳನ್ನು ಹೇಳಿದ ನಂತರವೂ ವಿವಾದಿತ ಜಮೀನನ್ನು ಮಂದಿರ ನಿರ್ಮಾಣಕ್ಕೆ ಮಾತ್ರವೇ ಕೊಡಬೇಕಾಗಿ ಬಂದಿತಲ್ಲ ಅದು ಹೇಗೆ ಎಂಬ ಪ್ರಶ್ನೆಗಳನ್ನು ಸುಪ್ರೀಮ್ ಕೋರ್ಟಿನ ಹಲವು ನಿವೃತ್ತ ನ್ಯಾಯಮೂರ್ತಿಗಳು ಎತ್ತಿದ್ದಾರೆ. ಈ ಸಂದೇಹಕ್ಕೆ ನ್ಯಾಯಾಲಯ 799ನೆಯ ಪ್ಯಾರಾದಲ್ಲಿ ನೀಡಿರುವ ಸಮಾಧಾನ ಹೀಗಿದೆ- ‘ಸಾರ್ವಜನಿಕ ಶಾಂತಿ ಸಾಮರಸ್ಯ ಕಾಪಾಡುವ ಉದ್ದೇಶದಿಂದ 2010ರ ತೀರ್ಪಿನಲ್ಲಿ ಅಲಹಾಬಾದ್ ಹೈಕೋರ್ಟು ವಿವಾದಿತ ಜಾಗವನ್ನು ಮೂರೂ ಅರ್ಜಿದಾರರಿಗೆ (ಸುನ್ನಿ ವಕ್ಫ್ ಮಂಡಳಿ, ರಾಮಲಲ್ಲಾ ವಿರಾಜಮಾನ್ ಹಾಗೂ ನಿರ್ಮೋಹಿ ಅಖಾಡ) ಹಂಚಿಕೊಟ್ಟಿದೆಯಾದರೂ, ಈ ಪರಿಹಾರ ಕಾರ್ಯಸಾಧ್ಯ ಅಲ್ಲ. ವಿವಾದಿತ ಜಾಗದ ಒಟ್ಟು ವಿಸ್ತೀರ್ಣ ಕೇವಲ 1500 ಚದರ ಗಜಗಳು. ಈ ಜಾಗವನ್ನು ವಿಭಾಗಿಸಿ ಹಂಚಿಕೊಡುವುದರಿಂದ ಯಾರ ಹಿತದ ಸಾಧನೆಯೂ ಆಗುವುದಿಲ್ಲ. ಅಷ್ಟೇ ಅಲ್ಲ, ಇಂತಹ ಕ್ರಮದಿಂದ ಶಾಂತಿ ಸಾಮರಸ್ಯ ಕಾಯಮ್ಮಾಗಿ ನೆಲೆಸುತ್ತದೆಂದು ಹೇಳುವುದು ಸಾಧ್ಯವಿಲ್ಲ’.

ನ್ಯಾಯಾಲಯದ ಮುಂದಿರುವ ನಿರ್ದಿಷ್ಟ ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಹೊರಗೆ ನಡೆಯುವ ಘಟನಾವಳಿಗಳು ನಮಗೆ ಅಪ್ರಸ್ತುತ. ಕಾಯಿದೆ ಮತ್ತು ಸಂವಿಧಾನವೇ ನಮಗೆ ಪರಮ ಒರೆಗಲ್ಲುಗಳು. ನಮ್ಮ ನ್ಯಾಯ ನಿರ್ಣಯ ಪ್ರಕ್ರಿಯೆ ಈ ಎರಡು ಅಂಶಗಳನ್ನು ಮಾತ್ರವೇ ಆಧರಿಸಿರುತ್ತದೆ ಎಂದು ಸುಪ್ರೀಮ್ ಕೋರ್ಟ್ ನೂರಾರು ಪ್ರಕರಣಗಳಲ್ಲಿ ಸಾರಿರುವುದು ಉಂಟು.

ಆದರೆ ಸುಪ್ರೀಮ್ ಕೋರ್ಟಿನ ನಿಲುವಿಗೆ ಅಲ್ಲಲ್ಲಿ ಬಹುದೊಡ್ಡ ಅಪವಾದಗಳು ಕಾಣಸಿಗುತ್ತವೆ. ಉದಾಹರಣೆಗೆ ಇಂದಿರಾಗಾಂಧೀ ಅವರು ಹೇರಿದ್ದ ತುರ್ತುಪರಿಸ್ಥಿತಿಯ ಕಾಲ. ಹೊರಗಿನ ವಾತಾವರಣದ ಪ್ರಭಾವದಿಂದ ನ್ಯಾಯಾಲಯವೂ ತಪ್ಪಿಸಿಕೊಳ್ಳದೆ ಹೋಯಿತು ಎಂಬ ಮಾತಿಗೆ ಜ್ವಲಂತ ನಿದರ್ಶನವೊಂದು ಇತಿಹಾಸದಲ್ಲಿ ಸದಾ ಕಾಲಕ್ಕೆ ದಾಖಲಾಗಿಬಿಟ್ಟಿತು. ವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಪ್ರಾಣದ ಹಕ್ಕು ಸಂವಿಧಾನವೇ ನೀಡಿರುವ ಮೂಲಭೂತ ಹಕ್ಕುಗಳು (ಈ ಹಕ್ಕುಗಳು ಅನಿರ್ಬಂಧಿತ ಅಲ್ಲ). ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಈ ಎರಡು ಹಕ್ಕುಗಳನ್ನು ಅಮಾನತುಗೊಳಿಸಬಹುದು ಎಂದು ಐವರು ಸದಸ್ಯರ ನ್ಯಾಯಪೀಠ ಬಹುಮತದ ತೀರ್ಪು ನೀಡಿಬಿಟ್ಟಿತ್ತು. ನ್ಯಾಯಮೂರ್ತಿ ಎಚ್.ಆರ್. ಖನ್ನಾ ಭಿನ್ನಮತದ ತೀರ್ಪು ಬರೆದರು. ನಾಗರಿಕ ಸಮಾಜಗಳಲ್ಲಿ ಪ್ರಾಣದ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳು ಮಾನವ ಜೀವಿಗಳ ಅತ್ಯಮೂಲ್ಯ ಹಕ್ಕುಗಳು?. ಈ ಹಕ್ಕುಗಳನ್ನು ಕಾರ್ಯಾಂಗದ ಪದತಲಕ್ಕೆ ಶರಣಾಗಿಸುವುದನ್ನು ಭಾರತದ ಸಂವಿಧಾನ ಮತ್ತು ಕಾಯಿದೆ ಕಾನೂನುಗಳು ಒಪ್ಪುವುದಿಲ್ಲ ಎಂದು ಸಾರಿದರು. ಈ ಭಿನ್ನಮತದ ತೀರ್ಪಿನ ಕಾರಣ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಹುದ್ದೆಗೆ ಬಡ್ತಿಯನ್ನು ನಿರಾಕರಿಸಲಾಯಿತು. ಸೇವಾ ಜ್ಯೇಷ್ಠತೆಯನ್ನು ಅವಗಣಿಸಿ ಅವರಿಗಿಂತ ಕಿರಿಯ ನ್ಯಾಯಮೂರ್ತಿಗೆ ಬಡ್ತಿ ನೀಡಿದ್ದು ತುರ್ತುಪರಿಸ್ಥಿತಿಯ ಅತಿರೇಕಗಳಲ್ಲೊಂದು.

ಮುಂದೊಂದು ದಿನ ಸುಪ್ರೀಮ್ ಕೋರ್ಟ್ ಮುಖ್ಯನ್ಯಾಯಮೂರ್ತಿಯಾದ ಚಂದ್ರಚೂಡ್ ಅವರು ಈ ತೀರ್ಪಿಗಾಗಿ ಕ್ಷಮೆ ಯಾಚಿಸಿದರು. ಪಿ.ಎನ್.ಭಗವತಿ ಪಶ್ಚಾತ್ತಾಪಪಟ್ಟರು. ಇಂತಹ ತೀರ್ಪಿನಲ್ಲಿ ಭಾಗಿಯಾಗುವುದರ ಬದಲು ತಾವು ರಾಜೀನಾಮೆ ನೀಡುವುದೇ ಲೇಸಿತ್ತು ಎಂದರು.

ನ್ಯಾಯಾಲಯದ ಹೊರಗಿನ ವಾತಾವರಣವೂ ನ್ಯಾಯಾಲಯದ ತೀರ್ಪಿನ ಮೇಲೆ ಪರಿಣಾಮ ಬೀರಬಲ್ಲದು ಎಂಬ ಮಾತಿಗೆ ಉದಾಹರಣೆಯಾಗಿ ಮಾತ್ರವೇ ಈ ತೀರ್ಪನ್ನು ಇಲ್ಲಿ ಉಲ್ಲೇಖಿಸಲಾಗಿದೆ.

ಮಂದಿರ-ಮಸೀದಿ ವಿವಾದದ ತೀರ್ಪಿನಲ್ಲೂ ಬಾಹ್ಯ ವಾತಾವರಣ ಪ್ರಭಾವ ಬೀರಿರುವ ಸಾಧ್ಯತೆಗಳನ್ನು ತಳ್ಳಿ ಹಾಕಲು ಬರುವುದಿಲ್ಲ. ಆದರೆ ಹಾಲಿ ಪ್ರಭಾವದ ಹಿಂದೆ ಸಾಮಾಜಿಕ ಶಾಂತಿ ಸಾಮರಸ್ಯಗಳನ್ನು ಕಾಪಾಡುವ ‘ಸದಾಶಯ’ದ ಹಿರಿಯ ಉದ್ದೇಶ ಇದ್ದೀತು. ನ್ಯಾಯಾಲಯದ ಹೊರಗಿನ ಇಂದಿನ ವಾತಾವರಣ ಹಿಂದುಸ್ತಾನ ಹಿಂದೆಂದೂ ಕಾಣದಂತಹುದು. ಉಗ್ರ ಹಿಂದುತ್ವ ಮತ್ತು ಆಕ್ರಮಣಕಾರಿ ರಾಷ್ಟ್ರವಾದಗಳು, ದೈತ್ಯ ಮತ್ತು ನಿರ್ದಯೀ ಬಹುಸಂಖ್ಯಾತ ವಾದವನ್ನು ಕಟೆದು ನಿಲ್ಲಿಸಿವೆ. ಈ ವಿವಾದವು 1989ರಿಂದ ದೇಶವನ್ನು ಉದ್ದಗಲಕ್ಕೆ ಹರಿಯಬಿಟ್ಟ ಹಿಂಸೆ ದ್ವೇಷ ತಿರಸ್ಕಾರ ಕೋಮು ಧೃವೀಕರಣದ ಹೆದ್ದೆರೆಗಳ ಭಯಾನಕ ಇತಿಹಾಸ ಪ್ರಾಯಶಃ ನ್ಯಾಯಾಲಯದ ಗಮನದಲ್ಲಿ ಇದ್ದಿರಬೇಕು. ಅಂತಹ ಮತ್ತೊಂದು ಉತ್ಕಟ ಸಂಕಟವನ್ನು ದೇಶ ಹಾದುಹೋಗುವುದು ಬೇಡ ಎಂಬ ಸದಾಶಯ ಕೆಲಸ ಮಾಡಿದ್ದೀತು. ತೀರ್ಪು ಯಾರ ಪರವಾಗಿ ಬಂದರೂ ಒಬ್ಬರು ಸೋತರು ಮತ್ತೊಬ್ಬರು ಗೆದ್ದರು ಎಂದು ಭಾವಿಸುವುದು ಬೇಡ ಎಂಬ ವಿವೇಕದ ಮಾತುಗಳನ್ನು ಆಳುವ ಪಕ್ಷ ಮತ್ತು ಅದರ ಹಿಂದಿನ ಪರಿವಾರ ಆಡಿದ್ದು ಮೇಲ್ನೋಟಕ್ಕೆ ಪ್ರಶಂಸನೀಯ. ಆದರೆ ಆಳುವ ಪಕ್ಷ ಮತ್ತು ಅದರ ಬೆನ್ನಿಗಿರುವ ಪರಿವಾರ 1989ರಿಂದ ದೇಶದ ಬಹುಸಂಖ್ಯಾತರ ಸಾಮೂಹಿಕ ಮನಸ್ಥಿತಿಯನ್ನು ಬಹುತೇಕ ಹಿಂದೂರಾಷ್ಟ್ರದ ಪರಿಕಲ್ಪನೆಯ ಪರವಾಗಿ ಪ್ರಚೋದಿಸಿ ತಿದ್ದಿ ತೀಡಿ ರೂಪಿಸಿಬಿಟ್ಟಿದೆ. ದಶಕಗಟ್ಟಲೆ ‘ಮಂಡಲ’ವನ್ನು ಕುದಿಸಿ ಮಾಡಿದ ‘ಕಮಂಡಲ’ದ ಕಡುಪಾಕವನ್ನು ದಿನ ಬೆಳಗಾಗುವುದರ ಒಳಗೆ ಬದಲಾಯಿಸುವುದು ಸಾಧ್ಯವಿಲ್ಲ. ಈ ನಗ್ನ ವಾಸ್ತವ ಖುದ್ದು ಆಳುವ ಪಕ್ಷ ಮತ್ತು ಪರಿವಾರಕ್ಕೆ ಚೆನ್ನಾಗಿ ಗೊತ್ತು. ಇನ್ನು ಈ ನಿಷ್ಠುರ ಸತ್ಯ ದೇಶದ ಅತ್ಯುನ್ನತ ನ್ಯಾಯಸ್ಥಾನಕ್ಕೆ ತಿಳಿಯದೆ ಇದ್ದೀತೇ? ಹೀಗಾಗಿ ಮತ್ತೊಂದು ಕಡುದ್ವೇಷದ ಹೀನ ಹಿಂಸೆಯ ಹೆದ್ದೆರೆ ದೇಶದ ಸಮಾಜಜೀವನವನ್ನು ಅಪ್ಪಳಿಸುವ ಸಾಧಕ ಬಾಧಕಗಳು ನ್ಯಾಯಮೂರ್ತಿಗಳ ಕಣ್ಣ ಮುಂದೆ ಸುಳಿದಿರಲೇಬೇಕು. ಹೀಗಾಗಿಯೇ ನ್ಯಾಯ ನೀಡಿಕೆಯ ಉದಾತ್ತ ತತ್ವವು, ಕೇವಲ ವಿವಾದ ಇತ್ಯರ್ಥದ ಅನುಸಂಧಾನಕ್ಕೆ ಇಳಿದಿರಬೇಕು. ನ್ಯಾಯ ನೀಡಿಕೆ ಬೇರೆ. ವಿವಾದದ ಇತ್ಯರ್ಥ ಬೇರೆ ಎಂಬುದನ್ನು ಗಮನಿಸಬೇಕಿದೆ. ನ್ಯಾಯ ನೀಡಿಕೆಗೆ ಆದ್ಯತೆ ದೊರೆತಿದ್ದರೆ 2.77 ಎಕರೆ ಜಾಗದಲ್ಲಿ ಮಂದಿರ-ಮಸೀದಿಗಳೆರಡೂ ಸಹಬಾಳ್ವೆ ನಡೆಸಬೇಕಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...