Homeಮುಖಪುಟಗಾಂಧಿ ಮಾರ್ಗಕ್ಕಿಂತ ಶಕ್ತಿಯುತವಾದ ಪರ್ಯಾಯ ಮತ್ತೊಂದಿಲ್ಲ: ನಟ ಕಮಲ ಹಾಸನ್

ಗಾಂಧಿ ಮಾರ್ಗಕ್ಕಿಂತ ಶಕ್ತಿಯುತವಾದ ಪರ್ಯಾಯ ಮತ್ತೊಂದಿಲ್ಲ: ನಟ ಕಮಲ ಹಾಸನ್

- Advertisement -
- Advertisement -

“ಉನ್ನತ ಗುರಿ ಸಾಧನೆಗೆ ಗಾಂಧಿ ಮಾರ್ಗಕ್ಕಿಂತ ಉತ್ತಮವಾದುದು ಮತ್ತೊಂದಿಲ್ಲ” ಎಂದು ತಮಿಳು ನಟ ಮತ್ತು ರಾಜಕಾರಣಿ ಕಮಲ ಹಾಸನ್ ಹೇಳಿದ್ದಾರೆ. ಮಹಾತ್ಮ ಗಾಂಧಿಯ ಹುತಾತ್ಮ ದಿನದಂದು (ಜನವರಿ 30) ಅವರನ್ನು ಸ್ಮರಿಸಿರುವ ಕಮಲ ಹಾಸನ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಜೀವನವೇ ನನ್ನ ಸಂದೇಶ ಎಂದು ಬದುಕಿ, ಅದನ್ನು ಜಗತ್ತಿಗೆ ಸಾರಿದ ಗಾಂಧೀಜಿಯವರನ್ನು ಸ್ಮರಿಸೋಣ. ಉನ್ನತವಾದದನ್ನು ಸಾಧಿಸಲು ಗಾಂಧಿ ಮಾರ್ಗಕ್ಕಿಂತ ಬಲವಾದ ಮತ್ತೊಂದು ಪರ್ಯಾಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ಬಗ್ಗೆ ಸಂಘಪರಿವಾರ ಮತ್ತು ಜರ್ಮನಿಯ ಗೊಬೆಲ್ಸ್‌ಗೆ ಒಂದೇ ತರಹದ ಅಸಹನೆ ಏಕಿತ್ತು?

ಗಾಂಧೀಜಿಯವರ ಹುತಾತ್ಮ ದಿನವನ್ನು ಸ್ಮರಿಸುತ್ತಾ ಹಲವು ನಾಯಕರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ವಿರುದ್ಧ ಕರಪತ್ರ ಹಂಚಿಲು ಹೋಗಿ ಸಿಕ್ಕಿಬಿದ್ದ ನಾಲ್ವರು ಹಿಂದೂ ಮಹಾಸಭಾದ ಕಾರ್ಯಕರ್ತರು.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, “ಗಾಂಧೀಜಿಗೆ ಅವರ ಪುಣ್ಯತಿಥಿಯಂದು ನನ್ನ ನಮನಗಳು. ಅವರ ಆದರ್ಶಗಳು ಲಕ್ಷಾಂತರ ಜನರಿಗೆ ಸ್ಪೂರ್ತಿ. ಹುತಾತ್ಮರ ದಿನದಂದು, ಭಾರತದ ಸ್ವಾಂತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಎಲ್ಲ ಮಹಿಳೆಯರು ಮತ್ತು ಪುರಷರನ್ನು ಸ್ಮರಿಸಬೇಕಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿ, “ಜನರ ಬೆಂಬಲವಿಲ್ಲದೆ ಸತ್ಯ ಇನ್ನೂ ನಿಂತಿದೆ. ಈಗ ಅದು ಆತ್ಮನಿರ್ಭರವಾಗಿದೆ” ಎಂದು ಸಂಗೀತ ಸಾಮ್ರಾಜ್ಞೆ ಎಂ ಎಸ್ ಸುಬ್ಬಲಕ್ಷ್ಮಿಯವರ ಹಾಡಿನ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಕೋಮು ಸೌಹಾರ್ದತೆಗಾಗಿ ತನ್ನ ಜೀವವನ್ನು ಬಲಿದಾನಗೈದ ಮಹಾತ್ಮ ಗಾಂಧೀಜಿ ಬದುಕಿನಲ್ಲಿ ಮಾತ್ರವಲ್ಲ ಸಾವಿನಲ್ಲಿಯೂ ಹೇಳಿಹೋಗಿರುವ ಪಾಠವನ್ನು ಮರೆಯದಿರೋಣ. ಗಾಂಧೀಜಿ ಎಂಬ ಜಗದ್ಗರುವಿನ ತತ್ವಾದರ್ಶಗಳ ಅನುಷ್ಠಾನ ನಮ್ಮ ಗುರಿಯಾಗಿರಲಿ. ರಾಷ್ಟ್ರಪಿತನಿಗೆ ಗೌರವದ ಶ್ರದ್ಧಾಂಜಲಿ” ಎಂದು ನಮನ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ, “ಸತ್ಯ, ಅಹಿಂಸೆಯ ಆದರ್ಶಗಳ ಸಾಕಾರ ಮೂರ್ತಿಯಂತಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುಣ್ಯತಿಥಿಯಂದು ಅವರಿಗೆ ಭಕ್ತಿಪೂರ್ವಕ ಪ್ರಣಾಮಗಳು. ನಮ್ಮನ್ನು ಸದಾ ಎಚ್ಚರಿಸುವ ಗಾಂಧೀಜಿಯವರ ಜೀವನ, ಅವರ ನಡೆ ಮತ್ತು ನುಡಿಗಳ ಬೆಳಕಿನಲ್ಲಿ ಸಮೃದ್ಧ, ಸಶಕ್ತ ಭಾರತ ನಿರ್ಮಾಣದ ಹಾದಿಯಲ್ಲಿ ಮುನ್ನಡೆಯೋಣ” ಎಂದು ಗೌರವ ಸಲ್ಲಿಸಿದ್ದಾರೆ.


ಇದನ್ನೂ ಓದಿ: ನೀವು ಯುದ್ಧದಲ್ಲಿ ಗೆದ್ದರೂ ಅದು ಸರಿಯೆಂದೇನೂ ಸಾಬೀತಾಗುವುದಿಲ್ಲ: ಹಿಟ್ಲರ್‌ಗೆ ಗಾಂಧಿ ಬರೆದಿದ್ದ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...