Homeಅಂಕಣಗಳುಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

ಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

- Advertisement -
- Advertisement -

ವಿಧಾನಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲಿಸಿ, ಅವರ ರಾಜೀನಾಮೆ ಒಪ್ಪಿಕೊಳ್ಳಬಹುದು. ಇಲ್ಲವೇ ಅವರನ್ನು ಅನರ್ಹಗೊಳಿಸಬಹುದು. ಇದು ಅವರ ವಿವೇಚನೆಗೆ ಬಿಟ್ಟ ವಿಷಯ ಎಂದು ಸರ್ವೋಚ್ಚ ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದೆ.

ಈ ಅತೃಪ್ತ ಶಾಸಕರ ಅರ್ಹತೆಯ ಬಗೆಗೆ ಪರಿಶೀಲಿಸುವ ಮೊದಲು, ಕರ್ನಾಟಕದಲ್ಲಿ ಈ ಒಂದು ವರ್ಷದ ಅವಧಿಯಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯನ್ನು ವಿಧಾನಸಭಾಧ್ಯಕ್ಷರು ಗಮನಿಸಬೇಕು. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಲಿಲ್ಲ. ಆ ಸಮಯದಲ್ಲಿ ಭಾಜಪದ ಯಡಿಯೂರಪ್ಪನವರು, ತಮ್ಮ ಪಕ್ಷಕ್ಕೆ ಬಹುಮತಕ್ಕಿಂತ 9 ಸ್ಥಾನಗಳು ಕಡಿಮೆ ದೊರೆತಿದ್ದರೂ, ಗೌರ್ನರ್ ಅವರನ್ನು ಸಂಧಿಸಿ ತಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕೆಂದು ವಿನಂತಿಸಿಕೊಂಡರು. ಗೌರ್ನರ್ ಅವರು, ಅವರಿಗೆ ಬಹುಮತವಿದೆಯೇ ಎಂಬುದನ್ನು ವಿಚಾರಿಸದೆ ಯಡಿಯೂರಪ್ಪನವರ ಕೋರಿಕೆಗೆ ಅನುಮತಿ ಇತ್ತರು. ಅವರಿಗೆ ಮುಖ್ಯಮಂತ್ರಿ ಪದವಿಯ ಪ್ರತಿಜ್ಞಾವಿಧಿಗಳನ್ನು ಬೋಧಿಸಿದರು.

ಯಡಿಯೂರಪ್ಪನವರು ಬಹುಮತ ಸಂಪಾದಿಸಿಕೊಳ್ಳಲು ಶಾಸಕ ಶ್ರೀರಾಮುಲು ಅವರ ಸಹಕಾರ ಕೋರಿದರು. ಶ್ರೀರಾಮುಲು ಕಾಂಗ್ರೆಸ್ ಶಾಸಕರಲ್ಲಿ ಕೆಲವರನ್ನು ಹಣಕೊಟ್ಟೋ, ಮಂತ್ರಿ ಪದವಿಯ ಆಮಿಷ ಒಡ್ಡಿಯೋ ಶಾಸಕ ಸ್ಥಾನಕ್ಕೆ ಬೇರೆ ಪಕ್ಷದವರಿಂದ ರಾಜೀನಾಮೆ ಕೊಡಿಸಿ, ಆ ಮೂಲಕ ಯಡಿಯೂರಪ್ಪನವರಿಗೆ ಬಹುಮತ ದೊರೆಯುವಂತೆ ಮಾಡಿ, ಅವರನ್ನು ಖಾಯಂ ಆಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಸ್ಥಾಪಿಸಲು ಭಾರಿ ಪ್ರಯತ್ನ ಮಾಡಿದರು. ಅದು ಆಗ ಫಲಿಸಲಿಲ್ಲ. ತಮಗೆ ಬಹುಮತ ಇಲ್ಲದ ಕಾರಣದಿಂದ ಯಡಿಯೂರಪ್ಪನವರು ಗೌರ್ನರಿಗೆ ರಾಜೀನಾಮೆ ಪತ್ರ ಇತ್ತು, ಮುಖ್ಯಮಂತ್ರಿ ಸ್ಥಾನವನ್ನು ಖಾಲಿ ಮಾಡಿದರು.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವಲ್ಲಾ ಎಂದು ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಯಡಿಯೂರಪ್ಪನವರು ಅಧಿಕಾರ ಪಡೆಯುವ ದೃಷ್ಟಿಯಿಂದ ಅಂದಿನಿಂದ ಇಂದಿನವರೆಗೂ ಪ್ರಯತ್ನ ಪಡುತ್ತಲೇ ಇದ್ದಾರೆ. ವಿರೋಧ ಪಕ್ಷದ ಶಾಸಕರನ್ನು ತಮ್ಮ ಬಲೆಗೆ ಬೀಳಿಸಿ, ಅವರಿಂದ ಶಾಸನಸಭೆಗೆ ರಾಜೀನಾಮೆ ನೀಡಿಸಿ ಆ ಮೂಲಕ, ಭಾಜಪಕ್ಕೆ ಬಹುಮತ ದೊರಕಿಸಿಕೊಳ್ಳಲು ಅಹರ್ನಿಶಿ ದುಡಿಯುತ್ತಿದ್ದಾರೆ. ಈ ಸತ್ಯಸಂಗತಿ ರಮೇಶ್ ಕುಮಾರ್ ಅವರಿಗೆ ತಿಳಿಯದ್ದೇನು ಅಲ್ಲ. ಈ ಮಧ್ಯೆ ಕುಮಾರಸ್ವಾಮಿಯವರ ಮಂತ್ರಿಮಂಡಲದಲ್ಲಿ ಕೂಡಿಕೊಳ್ಳಲು ಕೆಲ ಶಾಸಕರು ಹರಸಾಹಸ ಮಾಡಿದರು. ಅವರಿಗೆ ಅದು ದೊರಕಲಿಲ್ಲ. ಅವರನ್ನು ಭಾಜಪದ ಯಡಿಯೂರಪ್ಪನವರು ಮತ್ತು ಇತರ ನಾಯಕರು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಬೇಕೆಂದು ಚುನಾವಣೆ ಮಾಡಹತ್ತಿದರು. ಈ ಅತೃಪ್ತರು ಒಂದುಗೂಡಿದರು. ರೆಸಾರ್ಟ್ ರಾಜಕೀಯ ಮಾಡಲು ಪ್ರಾರಂಭಿಸಿದರು. ಅವರನ್ನು ಸಂತೃಪ್ತಿಗೊಳಿಸಲು ಕಾಂಗ್ರೆಸ್ ಪಕ್ಷ ಎಷ್ಟೇ ಪ್ರಯತ್ನಪಟ್ಟರೂ ಅತೃಪ್ತರು ಅದಕ್ಕೆ ಸೊಪ್ಪು ಹಾಕಲಿಲ್ಲ.

ಬಿಜೆಪಿಗೆ ಇದರಿಂದ ಹುರುಪು ಬಂತು. ಮುಖ್ಯಮಂತ್ರಿ ಗದ್ದುಗೆ ಮತ್ತು ತಮಗಾಗುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿದು, ಅವರು ಆನಂದಪಟ್ಟರು. ಕಾಂಗ್ರೆಸ್ಸಿನಿಂದ ಈ ಅತೃಪ್ತರನ್ನು ಬೇರ್ಪಡಿಸುವ ಕೆಲಸಕ್ಕೆ ಕೈಹಾಕಿದರು. ಈ ತಿಂಗಳು ಬೊಂಬಾಯಿ ಹೋಟೆಲುಗಳಲ್ಲಿ ವಾಸ್ತವ್ಯ ಹೂಡಿದ ಭಿನ್ನಮತೀಯರ ಜೊತೆಗಿರಲು ಬಿಜೆಪಿ ಶಾಸಕರಾದ ಅಶ್ವತ್ಥನಾರಾಯಣ ಮತ್ತು ಅಶೋಕ್ ಧಾವಿಸಿದರು. ಭಿನ್ನಮತೀಯರ ಮನವೊಲಿಸಿ, ಅವರನ್ನು ರಾಜೀನಾಮೆ ನೀಡುವಂತೆ ಚಿತಾವಣೆ ಮಾಡಲು ಅವರು ಅಲ್ಲಿಗೆ ಹೋಗಿರಬಹುದು.
ಈ ಮಧ್ಯೆ ಒಂದು ಹೊಸ ಬೆಳವಣಿಗೆ ಕರ್ನಾಟಕದಲ್ಲಿ ಆಯಿತು. 2018ರ ಲೋಕಸಭಾ ಚುನಾವಣೆ ಘೋಷಿತವಾಯಿತು. ಚುನಾವಣೆಯಲ್ಲಿ ಭಾಜಪ ಕರ್ನಾಟಕದಲ್ಲಿ ಪ್ರಚಂಡ ಬಹುಮತ ಪಡೆಯಿತು. ಇದರಿಂದ ಭಿನ್ನಮತೀಯ ಸ್ವಾರ್ಥಿಗಳಿಗೆ ನಡುಕಬಂತು. ಕಾಂಗ್ರೆಸ್ಸಿನೊಳಗೆ ಇದ್ದರೆ ನಮಗೆ ಭವಿಷ್ಯವಿಲ್ಲ. ಆದ್ದರಿಂದ ನಾವು ನಮ್ಮ ಹಿತದೃಷ್ಟಿಯಿಂದ ಕಾಂಗ್ರೆಸ್ ತೊರೆದು ಭಾಜಪಗೆ ಸೇರುವುದು ಅನಿವಾರ್ಯ ಎಂದು ತಿಳಿದು, ರಾಜೀನಾಮೆ ಪ್ರಹಸನ ಆರಂಭಿಸಿದರು. ಮೊದಲು ಈ ಸಂಖ್ಯೆ ನಾಲ್ಕಾರು ಇದ್ದದ್ದು ಹನ್ನೆರಡಕ್ಕೇರಿತು.

ಸಂಸ್ಥೆಯ ನಿಷ್ಠೆ ಇಲ್ಲದವರು, ಆಸೆಬುರುಕರು, ಭ್ರಷ್ಟರು, ಅಧಿಕಾರಕ್ಕೆ ಅಂಟಿಕೊಳ್ಳುವ ಪ್ರವೃತ್ತಿಯುಳ್ಳವರು, ಸಮಯ ಸಾಧಕರು ತುಂಬಿರುವ ರಾಜಕೀಯ ಪಕ್ಷಗಳ ಭಾಗ್ಯವೇನು? ಈ ಪಕ್ಷಗಳಿಂದ ನೈಜ ಪ್ರಜಾಪ್ರಭುತ್ವ ಸ್ಥಾಪನೆ ಸಾಧ್ಯವಾದೀತೆಂದು ನಿರೀಕ್ಷಿಸಬಹುದೇ?
ಇನ್ನೊಂದು ಹೊಸ ಬೆಳವಣಿಗೆ ಈ ಅತೃಪ್ತರ ಕಡೆಯಿಂದ ಆಗುತ್ತಿದೆ. ಪಕ್ಷಾಂತರ ಕಾಯಿದೆ ಮೂಲಕ ಈ ಸ್ವಾರ್ಥಿ ಅತೃಪ್ತರನ್ನು ಹತೋಟಿಗೆ ತರುವ ಕೆಲಸವನ್ನು ಅಂದಿನ ಸರ್ಕಾರಗಳು ಮಾಡಿದವು. ಆದರೆ ಈ ಸಮಯ ಸಾಧಕರು, ಪಕ್ಷಾಂತರ ಕಾಯ್ದೆ ತಮಗೆ ಮುಳುವಾಗುವುದೆಂದು ತಿಳಿದು, ಶಾಸನಸಭೆಗೆ, ಮಂತ್ರಿಮಂಡಲಕ್ಕೆ ರಾಜೀನಾಮೆ ನೀಡುವ ಹೂಟ ಹೂಡಿದ್ದಾರೆ. ಇವರೆಲ್ಲ ‘ನಾವು ಸನ್ಯಾಸಿಗಳಲ್ಲ, ನಮಗೂ ಅಧಿಕಾರ ಬೇಕು’ ಎಂದು ಹೇಳುತ್ತಾ ಬಂದಿದ್ದಾರೆ. ಇಂತಹವರು ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕಾರ ದಾಹದಿಂದ ಮತ್ತೊಂದು ಲಾಭದಾಯಕ ಸಂಸ್ಥೆಗೆ ಸೇರುವವರಿದ್ದಾರೆ. ಇವರನ್ನು ಅನರ್ಹಗೊಳಿಸಬೇಕು. ಇಂದು ಆಮಿಷ, ಒತ್ತಡಗಳಿಗೆ ಮಣಿದು ಸ್ವಹಿತಸಾಧನೆಗಾಗಿ ಪಕ್ಷ ಬದಲಾಯಿಸಲು ಹೊರಟಿರುವ ಇವರು ಮತ ಹಾಕಿ ಗೆಲ್ಲಿಸಿದ ಮತದಾರರಿಗೆಲ್ಲ ದ್ರೋಹ ಬಗೆದಿದ್ದಾರೆಂದು ಧಾರಾಳವಾಗಿ ಹೇಳಬಹುದು. ಈ ಸ್ವಾರ್ಥಿ ಅತೃಪ್ತರು ಪಕ್ಷಾಂತರ ಕಾಯಿದೆಯ ಬುಡಕ್ಕೆ ಕೊಡಲಿಪೆಟ್ಟು ಕೊಟ್ಟು ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವುದು ಅಕ್ಷಮ್ಯ ಅಪರಾಧ.

ಮುಂದೇನು?
ವಿಧಾನಸಭೆ ಅಧಿವೇಶನ ಗುರುವಾರದಿಂದ ಆರಂಭವಾಯಿತು. ಸರ್ವೋಚ್ಚ ನ್ಯಾಯಾಲಯ ಸಭಾಧ್ಯಕ್ಷ ರಮೇಶ್ ಕುಮಾರ್‍ಗೆ ಯಾವ ಅಡಚಣೆಯೂ ಇಲ್ಲದೆ ಅಧಿವೇಶನ ನಡೆಸಲು ಸೂಚನೆ ನೀಡಿತು. ಈ ಮಧ್ಯೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ರಾಜ್ಯಪಾಲರು ವಿಶ್ವಾಸಮತವನ್ನು ಒಂದು ಕಾಲಮಿತಿಯೊಳಗೆ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಈ ಒಂದು ವರ್ಷದಲ್ಲಿ ಆಗಿರುವ ರಾಜಕೀಯ ಬೆಳವಣಿಗೆ ಬಗೆಗೆ ಪ್ರಸ್ತಾಪ ಮಾಡಿದರು. ಸಿದ್ದರಾಮಯ್ಯನವರು ಅತೃಪ್ತ ಶಾಸಕರಿಗೆ ವಿಪ್ ಕೊಟ್ಟಿದ್ದು, ಅವರು ಅಧಿವೇಶನಕ್ಕೆ ಬರದೇ ಇರುವುದರಿಂದ ಸಭಾಧ್ಯಕ್ಷರು ಕ್ರಮ ತೆಗೆದುಕೊಳ್ಳಬೇಕೆಂದು ನಿಲುವಳಿ ಸೂಚನೆ ನೀಡಿದರು. ಇದರ ಬಗೆಗೆ ಸಭಾಧ್ಯಕ್ಷರು ರೂಲಿಂಗ್ ಕೊಡುವುದು ಬಾಕಿ ಇದೆ ಸೋಮವಾರಕ್ಕೆ ಮುಂದೂಡಲಾಗಿದ್ದು ಅಂದು ಸ್ಪೀಕರ್ ನಿರ್ಣಯ ಹೇಳುತ್ತಾರೆ.

ಆ ನಂತರ ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸಮತ ನಿರ್ಣಯವನ್ನು ಸಭೆಯ ಮುಂದಿಟ್ಟು ಫಲಿತಾಂಶವನ್ನು ಪ್ರಕಟಿಸಬಹುದು.
ವಿಶ್ವಾಸ ನಿರ್ಣಯಕ್ಕೆ ಸೋಲಾಗಲಿ, ಗೆಲುವಾಗಲೀ ಭಾಜಪ ಮತ್ತು ಮೈತ್ರಿ ಕೂಟದ ಶಾಸಕರು ಇನ್ನೂ ನಾಲ್ಕು ವರ್ಷ ನಾಯಿ, ಬೆಕ್ಕುಗಳಂತೆ ಜಗಳವಾಡುತ್ತಾರೆ ಎಂಬುದರಲ್ಲಿ ಅನುಮಾನವಿಲ್ಲ. ಪ್ರಜೆ ಈಗ ಮಳೆಯ ಅಭಾವ, ಡೆಂಗ್ಯು ಮೊದಲಾದ ರೋಗಗಳ ಕಾಟ, ಕುಡಿಯುವ ನೀರಿನ ಸಮಸ್ಯೆಗಳಿಂದ ಪರದಾಡುತ್ತಿದ್ದಾರೆ. ಇವರ ಕಚ್ಚಾಟದಲ್ಲಿ ಜನಸಾಮಾನ್ಯರ ಸಮಸ್ಯೆಗಳು ನೆನೆಗುದಿಗೆ ಬೀಳುತ್ತವೆ.
ಈಗಿನ ಪರಿಸ್ಥಿತಿಯನ್ನು ನೋಡಿದರೆ ಕೂಡಲೇ ಚುನಾವಣೆಯನ್ನು ನಡೆಸಿ ಸ್ಥಿರವಾದ ಸರ್ಕಾರವನ್ನು ರಚಿಸುವುದು ಹೆಚ್ಚು ಸಮಂಜಸವೆಂದು ನನಗಾದರೂ ಅನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...