Homeಅಂಕಣಗಳುಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

ಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

- Advertisement -
- Advertisement -

ವಿಧಾನಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲಿಸಿ, ಅವರ ರಾಜೀನಾಮೆ ಒಪ್ಪಿಕೊಳ್ಳಬಹುದು. ಇಲ್ಲವೇ ಅವರನ್ನು ಅನರ್ಹಗೊಳಿಸಬಹುದು. ಇದು ಅವರ ವಿವೇಚನೆಗೆ ಬಿಟ್ಟ ವಿಷಯ ಎಂದು ಸರ್ವೋಚ್ಚ ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದೆ.

ಈ ಅತೃಪ್ತ ಶಾಸಕರ ಅರ್ಹತೆಯ ಬಗೆಗೆ ಪರಿಶೀಲಿಸುವ ಮೊದಲು, ಕರ್ನಾಟಕದಲ್ಲಿ ಈ ಒಂದು ವರ್ಷದ ಅವಧಿಯಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯನ್ನು ವಿಧಾನಸಭಾಧ್ಯಕ್ಷರು ಗಮನಿಸಬೇಕು. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಲಿಲ್ಲ. ಆ ಸಮಯದಲ್ಲಿ ಭಾಜಪದ ಯಡಿಯೂರಪ್ಪನವರು, ತಮ್ಮ ಪಕ್ಷಕ್ಕೆ ಬಹುಮತಕ್ಕಿಂತ 9 ಸ್ಥಾನಗಳು ಕಡಿಮೆ ದೊರೆತಿದ್ದರೂ, ಗೌರ್ನರ್ ಅವರನ್ನು ಸಂಧಿಸಿ ತಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕೆಂದು ವಿನಂತಿಸಿಕೊಂಡರು. ಗೌರ್ನರ್ ಅವರು, ಅವರಿಗೆ ಬಹುಮತವಿದೆಯೇ ಎಂಬುದನ್ನು ವಿಚಾರಿಸದೆ ಯಡಿಯೂರಪ್ಪನವರ ಕೋರಿಕೆಗೆ ಅನುಮತಿ ಇತ್ತರು. ಅವರಿಗೆ ಮುಖ್ಯಮಂತ್ರಿ ಪದವಿಯ ಪ್ರತಿಜ್ಞಾವಿಧಿಗಳನ್ನು ಬೋಧಿಸಿದರು.

ಯಡಿಯೂರಪ್ಪನವರು ಬಹುಮತ ಸಂಪಾದಿಸಿಕೊಳ್ಳಲು ಶಾಸಕ ಶ್ರೀರಾಮುಲು ಅವರ ಸಹಕಾರ ಕೋರಿದರು. ಶ್ರೀರಾಮುಲು ಕಾಂಗ್ರೆಸ್ ಶಾಸಕರಲ್ಲಿ ಕೆಲವರನ್ನು ಹಣಕೊಟ್ಟೋ, ಮಂತ್ರಿ ಪದವಿಯ ಆಮಿಷ ಒಡ್ಡಿಯೋ ಶಾಸಕ ಸ್ಥಾನಕ್ಕೆ ಬೇರೆ ಪಕ್ಷದವರಿಂದ ರಾಜೀನಾಮೆ ಕೊಡಿಸಿ, ಆ ಮೂಲಕ ಯಡಿಯೂರಪ್ಪನವರಿಗೆ ಬಹುಮತ ದೊರೆಯುವಂತೆ ಮಾಡಿ, ಅವರನ್ನು ಖಾಯಂ ಆಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಸ್ಥಾಪಿಸಲು ಭಾರಿ ಪ್ರಯತ್ನ ಮಾಡಿದರು. ಅದು ಆಗ ಫಲಿಸಲಿಲ್ಲ. ತಮಗೆ ಬಹುಮತ ಇಲ್ಲದ ಕಾರಣದಿಂದ ಯಡಿಯೂರಪ್ಪನವರು ಗೌರ್ನರಿಗೆ ರಾಜೀನಾಮೆ ಪತ್ರ ಇತ್ತು, ಮುಖ್ಯಮಂತ್ರಿ ಸ್ಥಾನವನ್ನು ಖಾಲಿ ಮಾಡಿದರು.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವಲ್ಲಾ ಎಂದು ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಯಡಿಯೂರಪ್ಪನವರು ಅಧಿಕಾರ ಪಡೆಯುವ ದೃಷ್ಟಿಯಿಂದ ಅಂದಿನಿಂದ ಇಂದಿನವರೆಗೂ ಪ್ರಯತ್ನ ಪಡುತ್ತಲೇ ಇದ್ದಾರೆ. ವಿರೋಧ ಪಕ್ಷದ ಶಾಸಕರನ್ನು ತಮ್ಮ ಬಲೆಗೆ ಬೀಳಿಸಿ, ಅವರಿಂದ ಶಾಸನಸಭೆಗೆ ರಾಜೀನಾಮೆ ನೀಡಿಸಿ ಆ ಮೂಲಕ, ಭಾಜಪಕ್ಕೆ ಬಹುಮತ ದೊರಕಿಸಿಕೊಳ್ಳಲು ಅಹರ್ನಿಶಿ ದುಡಿಯುತ್ತಿದ್ದಾರೆ. ಈ ಸತ್ಯಸಂಗತಿ ರಮೇಶ್ ಕುಮಾರ್ ಅವರಿಗೆ ತಿಳಿಯದ್ದೇನು ಅಲ್ಲ. ಈ ಮಧ್ಯೆ ಕುಮಾರಸ್ವಾಮಿಯವರ ಮಂತ್ರಿಮಂಡಲದಲ್ಲಿ ಕೂಡಿಕೊಳ್ಳಲು ಕೆಲ ಶಾಸಕರು ಹರಸಾಹಸ ಮಾಡಿದರು. ಅವರಿಗೆ ಅದು ದೊರಕಲಿಲ್ಲ. ಅವರನ್ನು ಭಾಜಪದ ಯಡಿಯೂರಪ್ಪನವರು ಮತ್ತು ಇತರ ನಾಯಕರು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಬೇಕೆಂದು ಚುನಾವಣೆ ಮಾಡಹತ್ತಿದರು. ಈ ಅತೃಪ್ತರು ಒಂದುಗೂಡಿದರು. ರೆಸಾರ್ಟ್ ರಾಜಕೀಯ ಮಾಡಲು ಪ್ರಾರಂಭಿಸಿದರು. ಅವರನ್ನು ಸಂತೃಪ್ತಿಗೊಳಿಸಲು ಕಾಂಗ್ರೆಸ್ ಪಕ್ಷ ಎಷ್ಟೇ ಪ್ರಯತ್ನಪಟ್ಟರೂ ಅತೃಪ್ತರು ಅದಕ್ಕೆ ಸೊಪ್ಪು ಹಾಕಲಿಲ್ಲ.

ಬಿಜೆಪಿಗೆ ಇದರಿಂದ ಹುರುಪು ಬಂತು. ಮುಖ್ಯಮಂತ್ರಿ ಗದ್ದುಗೆ ಮತ್ತು ತಮಗಾಗುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿದು, ಅವರು ಆನಂದಪಟ್ಟರು. ಕಾಂಗ್ರೆಸ್ಸಿನಿಂದ ಈ ಅತೃಪ್ತರನ್ನು ಬೇರ್ಪಡಿಸುವ ಕೆಲಸಕ್ಕೆ ಕೈಹಾಕಿದರು. ಈ ತಿಂಗಳು ಬೊಂಬಾಯಿ ಹೋಟೆಲುಗಳಲ್ಲಿ ವಾಸ್ತವ್ಯ ಹೂಡಿದ ಭಿನ್ನಮತೀಯರ ಜೊತೆಗಿರಲು ಬಿಜೆಪಿ ಶಾಸಕರಾದ ಅಶ್ವತ್ಥನಾರಾಯಣ ಮತ್ತು ಅಶೋಕ್ ಧಾವಿಸಿದರು. ಭಿನ್ನಮತೀಯರ ಮನವೊಲಿಸಿ, ಅವರನ್ನು ರಾಜೀನಾಮೆ ನೀಡುವಂತೆ ಚಿತಾವಣೆ ಮಾಡಲು ಅವರು ಅಲ್ಲಿಗೆ ಹೋಗಿರಬಹುದು.
ಈ ಮಧ್ಯೆ ಒಂದು ಹೊಸ ಬೆಳವಣಿಗೆ ಕರ್ನಾಟಕದಲ್ಲಿ ಆಯಿತು. 2018ರ ಲೋಕಸಭಾ ಚುನಾವಣೆ ಘೋಷಿತವಾಯಿತು. ಚುನಾವಣೆಯಲ್ಲಿ ಭಾಜಪ ಕರ್ನಾಟಕದಲ್ಲಿ ಪ್ರಚಂಡ ಬಹುಮತ ಪಡೆಯಿತು. ಇದರಿಂದ ಭಿನ್ನಮತೀಯ ಸ್ವಾರ್ಥಿಗಳಿಗೆ ನಡುಕಬಂತು. ಕಾಂಗ್ರೆಸ್ಸಿನೊಳಗೆ ಇದ್ದರೆ ನಮಗೆ ಭವಿಷ್ಯವಿಲ್ಲ. ಆದ್ದರಿಂದ ನಾವು ನಮ್ಮ ಹಿತದೃಷ್ಟಿಯಿಂದ ಕಾಂಗ್ರೆಸ್ ತೊರೆದು ಭಾಜಪಗೆ ಸೇರುವುದು ಅನಿವಾರ್ಯ ಎಂದು ತಿಳಿದು, ರಾಜೀನಾಮೆ ಪ್ರಹಸನ ಆರಂಭಿಸಿದರು. ಮೊದಲು ಈ ಸಂಖ್ಯೆ ನಾಲ್ಕಾರು ಇದ್ದದ್ದು ಹನ್ನೆರಡಕ್ಕೇರಿತು.

ಸಂಸ್ಥೆಯ ನಿಷ್ಠೆ ಇಲ್ಲದವರು, ಆಸೆಬುರುಕರು, ಭ್ರಷ್ಟರು, ಅಧಿಕಾರಕ್ಕೆ ಅಂಟಿಕೊಳ್ಳುವ ಪ್ರವೃತ್ತಿಯುಳ್ಳವರು, ಸಮಯ ಸಾಧಕರು ತುಂಬಿರುವ ರಾಜಕೀಯ ಪಕ್ಷಗಳ ಭಾಗ್ಯವೇನು? ಈ ಪಕ್ಷಗಳಿಂದ ನೈಜ ಪ್ರಜಾಪ್ರಭುತ್ವ ಸ್ಥಾಪನೆ ಸಾಧ್ಯವಾದೀತೆಂದು ನಿರೀಕ್ಷಿಸಬಹುದೇ?
ಇನ್ನೊಂದು ಹೊಸ ಬೆಳವಣಿಗೆ ಈ ಅತೃಪ್ತರ ಕಡೆಯಿಂದ ಆಗುತ್ತಿದೆ. ಪಕ್ಷಾಂತರ ಕಾಯಿದೆ ಮೂಲಕ ಈ ಸ್ವಾರ್ಥಿ ಅತೃಪ್ತರನ್ನು ಹತೋಟಿಗೆ ತರುವ ಕೆಲಸವನ್ನು ಅಂದಿನ ಸರ್ಕಾರಗಳು ಮಾಡಿದವು. ಆದರೆ ಈ ಸಮಯ ಸಾಧಕರು, ಪಕ್ಷಾಂತರ ಕಾಯ್ದೆ ತಮಗೆ ಮುಳುವಾಗುವುದೆಂದು ತಿಳಿದು, ಶಾಸನಸಭೆಗೆ, ಮಂತ್ರಿಮಂಡಲಕ್ಕೆ ರಾಜೀನಾಮೆ ನೀಡುವ ಹೂಟ ಹೂಡಿದ್ದಾರೆ. ಇವರೆಲ್ಲ ‘ನಾವು ಸನ್ಯಾಸಿಗಳಲ್ಲ, ನಮಗೂ ಅಧಿಕಾರ ಬೇಕು’ ಎಂದು ಹೇಳುತ್ತಾ ಬಂದಿದ್ದಾರೆ. ಇಂತಹವರು ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕಾರ ದಾಹದಿಂದ ಮತ್ತೊಂದು ಲಾಭದಾಯಕ ಸಂಸ್ಥೆಗೆ ಸೇರುವವರಿದ್ದಾರೆ. ಇವರನ್ನು ಅನರ್ಹಗೊಳಿಸಬೇಕು. ಇಂದು ಆಮಿಷ, ಒತ್ತಡಗಳಿಗೆ ಮಣಿದು ಸ್ವಹಿತಸಾಧನೆಗಾಗಿ ಪಕ್ಷ ಬದಲಾಯಿಸಲು ಹೊರಟಿರುವ ಇವರು ಮತ ಹಾಕಿ ಗೆಲ್ಲಿಸಿದ ಮತದಾರರಿಗೆಲ್ಲ ದ್ರೋಹ ಬಗೆದಿದ್ದಾರೆಂದು ಧಾರಾಳವಾಗಿ ಹೇಳಬಹುದು. ಈ ಸ್ವಾರ್ಥಿ ಅತೃಪ್ತರು ಪಕ್ಷಾಂತರ ಕಾಯಿದೆಯ ಬುಡಕ್ಕೆ ಕೊಡಲಿಪೆಟ್ಟು ಕೊಟ್ಟು ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವುದು ಅಕ್ಷಮ್ಯ ಅಪರಾಧ.

ಮುಂದೇನು?
ವಿಧಾನಸಭೆ ಅಧಿವೇಶನ ಗುರುವಾರದಿಂದ ಆರಂಭವಾಯಿತು. ಸರ್ವೋಚ್ಚ ನ್ಯಾಯಾಲಯ ಸಭಾಧ್ಯಕ್ಷ ರಮೇಶ್ ಕುಮಾರ್‍ಗೆ ಯಾವ ಅಡಚಣೆಯೂ ಇಲ್ಲದೆ ಅಧಿವೇಶನ ನಡೆಸಲು ಸೂಚನೆ ನೀಡಿತು. ಈ ಮಧ್ಯೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ರಾಜ್ಯಪಾಲರು ವಿಶ್ವಾಸಮತವನ್ನು ಒಂದು ಕಾಲಮಿತಿಯೊಳಗೆ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಈ ಒಂದು ವರ್ಷದಲ್ಲಿ ಆಗಿರುವ ರಾಜಕೀಯ ಬೆಳವಣಿಗೆ ಬಗೆಗೆ ಪ್ರಸ್ತಾಪ ಮಾಡಿದರು. ಸಿದ್ದರಾಮಯ್ಯನವರು ಅತೃಪ್ತ ಶಾಸಕರಿಗೆ ವಿಪ್ ಕೊಟ್ಟಿದ್ದು, ಅವರು ಅಧಿವೇಶನಕ್ಕೆ ಬರದೇ ಇರುವುದರಿಂದ ಸಭಾಧ್ಯಕ್ಷರು ಕ್ರಮ ತೆಗೆದುಕೊಳ್ಳಬೇಕೆಂದು ನಿಲುವಳಿ ಸೂಚನೆ ನೀಡಿದರು. ಇದರ ಬಗೆಗೆ ಸಭಾಧ್ಯಕ್ಷರು ರೂಲಿಂಗ್ ಕೊಡುವುದು ಬಾಕಿ ಇದೆ ಸೋಮವಾರಕ್ಕೆ ಮುಂದೂಡಲಾಗಿದ್ದು ಅಂದು ಸ್ಪೀಕರ್ ನಿರ್ಣಯ ಹೇಳುತ್ತಾರೆ.

ಆ ನಂತರ ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸಮತ ನಿರ್ಣಯವನ್ನು ಸಭೆಯ ಮುಂದಿಟ್ಟು ಫಲಿತಾಂಶವನ್ನು ಪ್ರಕಟಿಸಬಹುದು.
ವಿಶ್ವಾಸ ನಿರ್ಣಯಕ್ಕೆ ಸೋಲಾಗಲಿ, ಗೆಲುವಾಗಲೀ ಭಾಜಪ ಮತ್ತು ಮೈತ್ರಿ ಕೂಟದ ಶಾಸಕರು ಇನ್ನೂ ನಾಲ್ಕು ವರ್ಷ ನಾಯಿ, ಬೆಕ್ಕುಗಳಂತೆ ಜಗಳವಾಡುತ್ತಾರೆ ಎಂಬುದರಲ್ಲಿ ಅನುಮಾನವಿಲ್ಲ. ಪ್ರಜೆ ಈಗ ಮಳೆಯ ಅಭಾವ, ಡೆಂಗ್ಯು ಮೊದಲಾದ ರೋಗಗಳ ಕಾಟ, ಕುಡಿಯುವ ನೀರಿನ ಸಮಸ್ಯೆಗಳಿಂದ ಪರದಾಡುತ್ತಿದ್ದಾರೆ. ಇವರ ಕಚ್ಚಾಟದಲ್ಲಿ ಜನಸಾಮಾನ್ಯರ ಸಮಸ್ಯೆಗಳು ನೆನೆಗುದಿಗೆ ಬೀಳುತ್ತವೆ.
ಈಗಿನ ಪರಿಸ್ಥಿತಿಯನ್ನು ನೋಡಿದರೆ ಕೂಡಲೇ ಚುನಾವಣೆಯನ್ನು ನಡೆಸಿ ಸ್ಥಿರವಾದ ಸರ್ಕಾರವನ್ನು ರಚಿಸುವುದು ಹೆಚ್ಚು ಸಮಂಜಸವೆಂದು ನನಗಾದರೂ ಅನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...