Homeಅಂಕಣಗಳುಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

ಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

- Advertisement -
- Advertisement -

ವಿಧಾನಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲಿಸಿ, ಅವರ ರಾಜೀನಾಮೆ ಒಪ್ಪಿಕೊಳ್ಳಬಹುದು. ಇಲ್ಲವೇ ಅವರನ್ನು ಅನರ್ಹಗೊಳಿಸಬಹುದು. ಇದು ಅವರ ವಿವೇಚನೆಗೆ ಬಿಟ್ಟ ವಿಷಯ ಎಂದು ಸರ್ವೋಚ್ಚ ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದೆ.

ಈ ಅತೃಪ್ತ ಶಾಸಕರ ಅರ್ಹತೆಯ ಬಗೆಗೆ ಪರಿಶೀಲಿಸುವ ಮೊದಲು, ಕರ್ನಾಟಕದಲ್ಲಿ ಈ ಒಂದು ವರ್ಷದ ಅವಧಿಯಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯನ್ನು ವಿಧಾನಸಭಾಧ್ಯಕ್ಷರು ಗಮನಿಸಬೇಕು. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಲಿಲ್ಲ. ಆ ಸಮಯದಲ್ಲಿ ಭಾಜಪದ ಯಡಿಯೂರಪ್ಪನವರು, ತಮ್ಮ ಪಕ್ಷಕ್ಕೆ ಬಹುಮತಕ್ಕಿಂತ 9 ಸ್ಥಾನಗಳು ಕಡಿಮೆ ದೊರೆತಿದ್ದರೂ, ಗೌರ್ನರ್ ಅವರನ್ನು ಸಂಧಿಸಿ ತಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕೆಂದು ವಿನಂತಿಸಿಕೊಂಡರು. ಗೌರ್ನರ್ ಅವರು, ಅವರಿಗೆ ಬಹುಮತವಿದೆಯೇ ಎಂಬುದನ್ನು ವಿಚಾರಿಸದೆ ಯಡಿಯೂರಪ್ಪನವರ ಕೋರಿಕೆಗೆ ಅನುಮತಿ ಇತ್ತರು. ಅವರಿಗೆ ಮುಖ್ಯಮಂತ್ರಿ ಪದವಿಯ ಪ್ರತಿಜ್ಞಾವಿಧಿಗಳನ್ನು ಬೋಧಿಸಿದರು.

ಯಡಿಯೂರಪ್ಪನವರು ಬಹುಮತ ಸಂಪಾದಿಸಿಕೊಳ್ಳಲು ಶಾಸಕ ಶ್ರೀರಾಮುಲು ಅವರ ಸಹಕಾರ ಕೋರಿದರು. ಶ್ರೀರಾಮುಲು ಕಾಂಗ್ರೆಸ್ ಶಾಸಕರಲ್ಲಿ ಕೆಲವರನ್ನು ಹಣಕೊಟ್ಟೋ, ಮಂತ್ರಿ ಪದವಿಯ ಆಮಿಷ ಒಡ್ಡಿಯೋ ಶಾಸಕ ಸ್ಥಾನಕ್ಕೆ ಬೇರೆ ಪಕ್ಷದವರಿಂದ ರಾಜೀನಾಮೆ ಕೊಡಿಸಿ, ಆ ಮೂಲಕ ಯಡಿಯೂರಪ್ಪನವರಿಗೆ ಬಹುಮತ ದೊರೆಯುವಂತೆ ಮಾಡಿ, ಅವರನ್ನು ಖಾಯಂ ಆಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಸ್ಥಾಪಿಸಲು ಭಾರಿ ಪ್ರಯತ್ನ ಮಾಡಿದರು. ಅದು ಆಗ ಫಲಿಸಲಿಲ್ಲ. ತಮಗೆ ಬಹುಮತ ಇಲ್ಲದ ಕಾರಣದಿಂದ ಯಡಿಯೂರಪ್ಪನವರು ಗೌರ್ನರಿಗೆ ರಾಜೀನಾಮೆ ಪತ್ರ ಇತ್ತು, ಮುಖ್ಯಮಂತ್ರಿ ಸ್ಥಾನವನ್ನು ಖಾಲಿ ಮಾಡಿದರು.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವಲ್ಲಾ ಎಂದು ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಯಡಿಯೂರಪ್ಪನವರು ಅಧಿಕಾರ ಪಡೆಯುವ ದೃಷ್ಟಿಯಿಂದ ಅಂದಿನಿಂದ ಇಂದಿನವರೆಗೂ ಪ್ರಯತ್ನ ಪಡುತ್ತಲೇ ಇದ್ದಾರೆ. ವಿರೋಧ ಪಕ್ಷದ ಶಾಸಕರನ್ನು ತಮ್ಮ ಬಲೆಗೆ ಬೀಳಿಸಿ, ಅವರಿಂದ ಶಾಸನಸಭೆಗೆ ರಾಜೀನಾಮೆ ನೀಡಿಸಿ ಆ ಮೂಲಕ, ಭಾಜಪಕ್ಕೆ ಬಹುಮತ ದೊರಕಿಸಿಕೊಳ್ಳಲು ಅಹರ್ನಿಶಿ ದುಡಿಯುತ್ತಿದ್ದಾರೆ. ಈ ಸತ್ಯಸಂಗತಿ ರಮೇಶ್ ಕುಮಾರ್ ಅವರಿಗೆ ತಿಳಿಯದ್ದೇನು ಅಲ್ಲ. ಈ ಮಧ್ಯೆ ಕುಮಾರಸ್ವಾಮಿಯವರ ಮಂತ್ರಿಮಂಡಲದಲ್ಲಿ ಕೂಡಿಕೊಳ್ಳಲು ಕೆಲ ಶಾಸಕರು ಹರಸಾಹಸ ಮಾಡಿದರು. ಅವರಿಗೆ ಅದು ದೊರಕಲಿಲ್ಲ. ಅವರನ್ನು ಭಾಜಪದ ಯಡಿಯೂರಪ್ಪನವರು ಮತ್ತು ಇತರ ನಾಯಕರು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಬೇಕೆಂದು ಚುನಾವಣೆ ಮಾಡಹತ್ತಿದರು. ಈ ಅತೃಪ್ತರು ಒಂದುಗೂಡಿದರು. ರೆಸಾರ್ಟ್ ರಾಜಕೀಯ ಮಾಡಲು ಪ್ರಾರಂಭಿಸಿದರು. ಅವರನ್ನು ಸಂತೃಪ್ತಿಗೊಳಿಸಲು ಕಾಂಗ್ರೆಸ್ ಪಕ್ಷ ಎಷ್ಟೇ ಪ್ರಯತ್ನಪಟ್ಟರೂ ಅತೃಪ್ತರು ಅದಕ್ಕೆ ಸೊಪ್ಪು ಹಾಕಲಿಲ್ಲ.

ಬಿಜೆಪಿಗೆ ಇದರಿಂದ ಹುರುಪು ಬಂತು. ಮುಖ್ಯಮಂತ್ರಿ ಗದ್ದುಗೆ ಮತ್ತು ತಮಗಾಗುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿದು, ಅವರು ಆನಂದಪಟ್ಟರು. ಕಾಂಗ್ರೆಸ್ಸಿನಿಂದ ಈ ಅತೃಪ್ತರನ್ನು ಬೇರ್ಪಡಿಸುವ ಕೆಲಸಕ್ಕೆ ಕೈಹಾಕಿದರು. ಈ ತಿಂಗಳು ಬೊಂಬಾಯಿ ಹೋಟೆಲುಗಳಲ್ಲಿ ವಾಸ್ತವ್ಯ ಹೂಡಿದ ಭಿನ್ನಮತೀಯರ ಜೊತೆಗಿರಲು ಬಿಜೆಪಿ ಶಾಸಕರಾದ ಅಶ್ವತ್ಥನಾರಾಯಣ ಮತ್ತು ಅಶೋಕ್ ಧಾವಿಸಿದರು. ಭಿನ್ನಮತೀಯರ ಮನವೊಲಿಸಿ, ಅವರನ್ನು ರಾಜೀನಾಮೆ ನೀಡುವಂತೆ ಚಿತಾವಣೆ ಮಾಡಲು ಅವರು ಅಲ್ಲಿಗೆ ಹೋಗಿರಬಹುದು.
ಈ ಮಧ್ಯೆ ಒಂದು ಹೊಸ ಬೆಳವಣಿಗೆ ಕರ್ನಾಟಕದಲ್ಲಿ ಆಯಿತು. 2018ರ ಲೋಕಸಭಾ ಚುನಾವಣೆ ಘೋಷಿತವಾಯಿತು. ಚುನಾವಣೆಯಲ್ಲಿ ಭಾಜಪ ಕರ್ನಾಟಕದಲ್ಲಿ ಪ್ರಚಂಡ ಬಹುಮತ ಪಡೆಯಿತು. ಇದರಿಂದ ಭಿನ್ನಮತೀಯ ಸ್ವಾರ್ಥಿಗಳಿಗೆ ನಡುಕಬಂತು. ಕಾಂಗ್ರೆಸ್ಸಿನೊಳಗೆ ಇದ್ದರೆ ನಮಗೆ ಭವಿಷ್ಯವಿಲ್ಲ. ಆದ್ದರಿಂದ ನಾವು ನಮ್ಮ ಹಿತದೃಷ್ಟಿಯಿಂದ ಕಾಂಗ್ರೆಸ್ ತೊರೆದು ಭಾಜಪಗೆ ಸೇರುವುದು ಅನಿವಾರ್ಯ ಎಂದು ತಿಳಿದು, ರಾಜೀನಾಮೆ ಪ್ರಹಸನ ಆರಂಭಿಸಿದರು. ಮೊದಲು ಈ ಸಂಖ್ಯೆ ನಾಲ್ಕಾರು ಇದ್ದದ್ದು ಹನ್ನೆರಡಕ್ಕೇರಿತು.

ಸಂಸ್ಥೆಯ ನಿಷ್ಠೆ ಇಲ್ಲದವರು, ಆಸೆಬುರುಕರು, ಭ್ರಷ್ಟರು, ಅಧಿಕಾರಕ್ಕೆ ಅಂಟಿಕೊಳ್ಳುವ ಪ್ರವೃತ್ತಿಯುಳ್ಳವರು, ಸಮಯ ಸಾಧಕರು ತುಂಬಿರುವ ರಾಜಕೀಯ ಪಕ್ಷಗಳ ಭಾಗ್ಯವೇನು? ಈ ಪಕ್ಷಗಳಿಂದ ನೈಜ ಪ್ರಜಾಪ್ರಭುತ್ವ ಸ್ಥಾಪನೆ ಸಾಧ್ಯವಾದೀತೆಂದು ನಿರೀಕ್ಷಿಸಬಹುದೇ?
ಇನ್ನೊಂದು ಹೊಸ ಬೆಳವಣಿಗೆ ಈ ಅತೃಪ್ತರ ಕಡೆಯಿಂದ ಆಗುತ್ತಿದೆ. ಪಕ್ಷಾಂತರ ಕಾಯಿದೆ ಮೂಲಕ ಈ ಸ್ವಾರ್ಥಿ ಅತೃಪ್ತರನ್ನು ಹತೋಟಿಗೆ ತರುವ ಕೆಲಸವನ್ನು ಅಂದಿನ ಸರ್ಕಾರಗಳು ಮಾಡಿದವು. ಆದರೆ ಈ ಸಮಯ ಸಾಧಕರು, ಪಕ್ಷಾಂತರ ಕಾಯ್ದೆ ತಮಗೆ ಮುಳುವಾಗುವುದೆಂದು ತಿಳಿದು, ಶಾಸನಸಭೆಗೆ, ಮಂತ್ರಿಮಂಡಲಕ್ಕೆ ರಾಜೀನಾಮೆ ನೀಡುವ ಹೂಟ ಹೂಡಿದ್ದಾರೆ. ಇವರೆಲ್ಲ ‘ನಾವು ಸನ್ಯಾಸಿಗಳಲ್ಲ, ನಮಗೂ ಅಧಿಕಾರ ಬೇಕು’ ಎಂದು ಹೇಳುತ್ತಾ ಬಂದಿದ್ದಾರೆ. ಇಂತಹವರು ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕಾರ ದಾಹದಿಂದ ಮತ್ತೊಂದು ಲಾಭದಾಯಕ ಸಂಸ್ಥೆಗೆ ಸೇರುವವರಿದ್ದಾರೆ. ಇವರನ್ನು ಅನರ್ಹಗೊಳಿಸಬೇಕು. ಇಂದು ಆಮಿಷ, ಒತ್ತಡಗಳಿಗೆ ಮಣಿದು ಸ್ವಹಿತಸಾಧನೆಗಾಗಿ ಪಕ್ಷ ಬದಲಾಯಿಸಲು ಹೊರಟಿರುವ ಇವರು ಮತ ಹಾಕಿ ಗೆಲ್ಲಿಸಿದ ಮತದಾರರಿಗೆಲ್ಲ ದ್ರೋಹ ಬಗೆದಿದ್ದಾರೆಂದು ಧಾರಾಳವಾಗಿ ಹೇಳಬಹುದು. ಈ ಸ್ವಾರ್ಥಿ ಅತೃಪ್ತರು ಪಕ್ಷಾಂತರ ಕಾಯಿದೆಯ ಬುಡಕ್ಕೆ ಕೊಡಲಿಪೆಟ್ಟು ಕೊಟ್ಟು ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವುದು ಅಕ್ಷಮ್ಯ ಅಪರಾಧ.

ಮುಂದೇನು?
ವಿಧಾನಸಭೆ ಅಧಿವೇಶನ ಗುರುವಾರದಿಂದ ಆರಂಭವಾಯಿತು. ಸರ್ವೋಚ್ಚ ನ್ಯಾಯಾಲಯ ಸಭಾಧ್ಯಕ್ಷ ರಮೇಶ್ ಕುಮಾರ್‍ಗೆ ಯಾವ ಅಡಚಣೆಯೂ ಇಲ್ಲದೆ ಅಧಿವೇಶನ ನಡೆಸಲು ಸೂಚನೆ ನೀಡಿತು. ಈ ಮಧ್ಯೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ರಾಜ್ಯಪಾಲರು ವಿಶ್ವಾಸಮತವನ್ನು ಒಂದು ಕಾಲಮಿತಿಯೊಳಗೆ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಈ ಒಂದು ವರ್ಷದಲ್ಲಿ ಆಗಿರುವ ರಾಜಕೀಯ ಬೆಳವಣಿಗೆ ಬಗೆಗೆ ಪ್ರಸ್ತಾಪ ಮಾಡಿದರು. ಸಿದ್ದರಾಮಯ್ಯನವರು ಅತೃಪ್ತ ಶಾಸಕರಿಗೆ ವಿಪ್ ಕೊಟ್ಟಿದ್ದು, ಅವರು ಅಧಿವೇಶನಕ್ಕೆ ಬರದೇ ಇರುವುದರಿಂದ ಸಭಾಧ್ಯಕ್ಷರು ಕ್ರಮ ತೆಗೆದುಕೊಳ್ಳಬೇಕೆಂದು ನಿಲುವಳಿ ಸೂಚನೆ ನೀಡಿದರು. ಇದರ ಬಗೆಗೆ ಸಭಾಧ್ಯಕ್ಷರು ರೂಲಿಂಗ್ ಕೊಡುವುದು ಬಾಕಿ ಇದೆ ಸೋಮವಾರಕ್ಕೆ ಮುಂದೂಡಲಾಗಿದ್ದು ಅಂದು ಸ್ಪೀಕರ್ ನಿರ್ಣಯ ಹೇಳುತ್ತಾರೆ.

ಆ ನಂತರ ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸಮತ ನಿರ್ಣಯವನ್ನು ಸಭೆಯ ಮುಂದಿಟ್ಟು ಫಲಿತಾಂಶವನ್ನು ಪ್ರಕಟಿಸಬಹುದು.
ವಿಶ್ವಾಸ ನಿರ್ಣಯಕ್ಕೆ ಸೋಲಾಗಲಿ, ಗೆಲುವಾಗಲೀ ಭಾಜಪ ಮತ್ತು ಮೈತ್ರಿ ಕೂಟದ ಶಾಸಕರು ಇನ್ನೂ ನಾಲ್ಕು ವರ್ಷ ನಾಯಿ, ಬೆಕ್ಕುಗಳಂತೆ ಜಗಳವಾಡುತ್ತಾರೆ ಎಂಬುದರಲ್ಲಿ ಅನುಮಾನವಿಲ್ಲ. ಪ್ರಜೆ ಈಗ ಮಳೆಯ ಅಭಾವ, ಡೆಂಗ್ಯು ಮೊದಲಾದ ರೋಗಗಳ ಕಾಟ, ಕುಡಿಯುವ ನೀರಿನ ಸಮಸ್ಯೆಗಳಿಂದ ಪರದಾಡುತ್ತಿದ್ದಾರೆ. ಇವರ ಕಚ್ಚಾಟದಲ್ಲಿ ಜನಸಾಮಾನ್ಯರ ಸಮಸ್ಯೆಗಳು ನೆನೆಗುದಿಗೆ ಬೀಳುತ್ತವೆ.
ಈಗಿನ ಪರಿಸ್ಥಿತಿಯನ್ನು ನೋಡಿದರೆ ಕೂಡಲೇ ಚುನಾವಣೆಯನ್ನು ನಡೆಸಿ ಸ್ಥಿರವಾದ ಸರ್ಕಾರವನ್ನು ರಚಿಸುವುದು ಹೆಚ್ಚು ಸಮಂಜಸವೆಂದು ನನಗಾದರೂ ಅನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...