Homeಅಂಕಣಗಳುಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

ಮತ್ತೆ ಚುನಾವಣೆ ನಡೆಸಿ ಸ್ಥಿರ ಸರ್ಕಾರ ರಚಿಸುವುದೇ ಪರಿಹಾರ

- Advertisement -
- Advertisement -

ವಿಧಾನಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲಿಸಿ, ಅವರ ರಾಜೀನಾಮೆ ಒಪ್ಪಿಕೊಳ್ಳಬಹುದು. ಇಲ್ಲವೇ ಅವರನ್ನು ಅನರ್ಹಗೊಳಿಸಬಹುದು. ಇದು ಅವರ ವಿವೇಚನೆಗೆ ಬಿಟ್ಟ ವಿಷಯ ಎಂದು ಸರ್ವೋಚ್ಚ ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದೆ.

ಈ ಅತೃಪ್ತ ಶಾಸಕರ ಅರ್ಹತೆಯ ಬಗೆಗೆ ಪರಿಶೀಲಿಸುವ ಮೊದಲು, ಕರ್ನಾಟಕದಲ್ಲಿ ಈ ಒಂದು ವರ್ಷದ ಅವಧಿಯಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯನ್ನು ವಿಧಾನಸಭಾಧ್ಯಕ್ಷರು ಗಮನಿಸಬೇಕು. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಲಿಲ್ಲ. ಆ ಸಮಯದಲ್ಲಿ ಭಾಜಪದ ಯಡಿಯೂರಪ್ಪನವರು, ತಮ್ಮ ಪಕ್ಷಕ್ಕೆ ಬಹುಮತಕ್ಕಿಂತ 9 ಸ್ಥಾನಗಳು ಕಡಿಮೆ ದೊರೆತಿದ್ದರೂ, ಗೌರ್ನರ್ ಅವರನ್ನು ಸಂಧಿಸಿ ತಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕೆಂದು ವಿನಂತಿಸಿಕೊಂಡರು. ಗೌರ್ನರ್ ಅವರು, ಅವರಿಗೆ ಬಹುಮತವಿದೆಯೇ ಎಂಬುದನ್ನು ವಿಚಾರಿಸದೆ ಯಡಿಯೂರಪ್ಪನವರ ಕೋರಿಕೆಗೆ ಅನುಮತಿ ಇತ್ತರು. ಅವರಿಗೆ ಮುಖ್ಯಮಂತ್ರಿ ಪದವಿಯ ಪ್ರತಿಜ್ಞಾವಿಧಿಗಳನ್ನು ಬೋಧಿಸಿದರು.

ಯಡಿಯೂರಪ್ಪನವರು ಬಹುಮತ ಸಂಪಾದಿಸಿಕೊಳ್ಳಲು ಶಾಸಕ ಶ್ರೀರಾಮುಲು ಅವರ ಸಹಕಾರ ಕೋರಿದರು. ಶ್ರೀರಾಮುಲು ಕಾಂಗ್ರೆಸ್ ಶಾಸಕರಲ್ಲಿ ಕೆಲವರನ್ನು ಹಣಕೊಟ್ಟೋ, ಮಂತ್ರಿ ಪದವಿಯ ಆಮಿಷ ಒಡ್ಡಿಯೋ ಶಾಸಕ ಸ್ಥಾನಕ್ಕೆ ಬೇರೆ ಪಕ್ಷದವರಿಂದ ರಾಜೀನಾಮೆ ಕೊಡಿಸಿ, ಆ ಮೂಲಕ ಯಡಿಯೂರಪ್ಪನವರಿಗೆ ಬಹುಮತ ದೊರೆಯುವಂತೆ ಮಾಡಿ, ಅವರನ್ನು ಖಾಯಂ ಆಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಸ್ಥಾಪಿಸಲು ಭಾರಿ ಪ್ರಯತ್ನ ಮಾಡಿದರು. ಅದು ಆಗ ಫಲಿಸಲಿಲ್ಲ. ತಮಗೆ ಬಹುಮತ ಇಲ್ಲದ ಕಾರಣದಿಂದ ಯಡಿಯೂರಪ್ಪನವರು ಗೌರ್ನರಿಗೆ ರಾಜೀನಾಮೆ ಪತ್ರ ಇತ್ತು, ಮುಖ್ಯಮಂತ್ರಿ ಸ್ಥಾನವನ್ನು ಖಾಲಿ ಮಾಡಿದರು.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವಲ್ಲಾ ಎಂದು ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಯಡಿಯೂರಪ್ಪನವರು ಅಧಿಕಾರ ಪಡೆಯುವ ದೃಷ್ಟಿಯಿಂದ ಅಂದಿನಿಂದ ಇಂದಿನವರೆಗೂ ಪ್ರಯತ್ನ ಪಡುತ್ತಲೇ ಇದ್ದಾರೆ. ವಿರೋಧ ಪಕ್ಷದ ಶಾಸಕರನ್ನು ತಮ್ಮ ಬಲೆಗೆ ಬೀಳಿಸಿ, ಅವರಿಂದ ಶಾಸನಸಭೆಗೆ ರಾಜೀನಾಮೆ ನೀಡಿಸಿ ಆ ಮೂಲಕ, ಭಾಜಪಕ್ಕೆ ಬಹುಮತ ದೊರಕಿಸಿಕೊಳ್ಳಲು ಅಹರ್ನಿಶಿ ದುಡಿಯುತ್ತಿದ್ದಾರೆ. ಈ ಸತ್ಯಸಂಗತಿ ರಮೇಶ್ ಕುಮಾರ್ ಅವರಿಗೆ ತಿಳಿಯದ್ದೇನು ಅಲ್ಲ. ಈ ಮಧ್ಯೆ ಕುಮಾರಸ್ವಾಮಿಯವರ ಮಂತ್ರಿಮಂಡಲದಲ್ಲಿ ಕೂಡಿಕೊಳ್ಳಲು ಕೆಲ ಶಾಸಕರು ಹರಸಾಹಸ ಮಾಡಿದರು. ಅವರಿಗೆ ಅದು ದೊರಕಲಿಲ್ಲ. ಅವರನ್ನು ಭಾಜಪದ ಯಡಿಯೂರಪ್ಪನವರು ಮತ್ತು ಇತರ ನಾಯಕರು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಬೇಕೆಂದು ಚುನಾವಣೆ ಮಾಡಹತ್ತಿದರು. ಈ ಅತೃಪ್ತರು ಒಂದುಗೂಡಿದರು. ರೆಸಾರ್ಟ್ ರಾಜಕೀಯ ಮಾಡಲು ಪ್ರಾರಂಭಿಸಿದರು. ಅವರನ್ನು ಸಂತೃಪ್ತಿಗೊಳಿಸಲು ಕಾಂಗ್ರೆಸ್ ಪಕ್ಷ ಎಷ್ಟೇ ಪ್ರಯತ್ನಪಟ್ಟರೂ ಅತೃಪ್ತರು ಅದಕ್ಕೆ ಸೊಪ್ಪು ಹಾಕಲಿಲ್ಲ.

ಬಿಜೆಪಿಗೆ ಇದರಿಂದ ಹುರುಪು ಬಂತು. ಮುಖ್ಯಮಂತ್ರಿ ಗದ್ದುಗೆ ಮತ್ತು ತಮಗಾಗುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿದು, ಅವರು ಆನಂದಪಟ್ಟರು. ಕಾಂಗ್ರೆಸ್ಸಿನಿಂದ ಈ ಅತೃಪ್ತರನ್ನು ಬೇರ್ಪಡಿಸುವ ಕೆಲಸಕ್ಕೆ ಕೈಹಾಕಿದರು. ಈ ತಿಂಗಳು ಬೊಂಬಾಯಿ ಹೋಟೆಲುಗಳಲ್ಲಿ ವಾಸ್ತವ್ಯ ಹೂಡಿದ ಭಿನ್ನಮತೀಯರ ಜೊತೆಗಿರಲು ಬಿಜೆಪಿ ಶಾಸಕರಾದ ಅಶ್ವತ್ಥನಾರಾಯಣ ಮತ್ತು ಅಶೋಕ್ ಧಾವಿಸಿದರು. ಭಿನ್ನಮತೀಯರ ಮನವೊಲಿಸಿ, ಅವರನ್ನು ರಾಜೀನಾಮೆ ನೀಡುವಂತೆ ಚಿತಾವಣೆ ಮಾಡಲು ಅವರು ಅಲ್ಲಿಗೆ ಹೋಗಿರಬಹುದು.
ಈ ಮಧ್ಯೆ ಒಂದು ಹೊಸ ಬೆಳವಣಿಗೆ ಕರ್ನಾಟಕದಲ್ಲಿ ಆಯಿತು. 2018ರ ಲೋಕಸಭಾ ಚುನಾವಣೆ ಘೋಷಿತವಾಯಿತು. ಚುನಾವಣೆಯಲ್ಲಿ ಭಾಜಪ ಕರ್ನಾಟಕದಲ್ಲಿ ಪ್ರಚಂಡ ಬಹುಮತ ಪಡೆಯಿತು. ಇದರಿಂದ ಭಿನ್ನಮತೀಯ ಸ್ವಾರ್ಥಿಗಳಿಗೆ ನಡುಕಬಂತು. ಕಾಂಗ್ರೆಸ್ಸಿನೊಳಗೆ ಇದ್ದರೆ ನಮಗೆ ಭವಿಷ್ಯವಿಲ್ಲ. ಆದ್ದರಿಂದ ನಾವು ನಮ್ಮ ಹಿತದೃಷ್ಟಿಯಿಂದ ಕಾಂಗ್ರೆಸ್ ತೊರೆದು ಭಾಜಪಗೆ ಸೇರುವುದು ಅನಿವಾರ್ಯ ಎಂದು ತಿಳಿದು, ರಾಜೀನಾಮೆ ಪ್ರಹಸನ ಆರಂಭಿಸಿದರು. ಮೊದಲು ಈ ಸಂಖ್ಯೆ ನಾಲ್ಕಾರು ಇದ್ದದ್ದು ಹನ್ನೆರಡಕ್ಕೇರಿತು.

ಸಂಸ್ಥೆಯ ನಿಷ್ಠೆ ಇಲ್ಲದವರು, ಆಸೆಬುರುಕರು, ಭ್ರಷ್ಟರು, ಅಧಿಕಾರಕ್ಕೆ ಅಂಟಿಕೊಳ್ಳುವ ಪ್ರವೃತ್ತಿಯುಳ್ಳವರು, ಸಮಯ ಸಾಧಕರು ತುಂಬಿರುವ ರಾಜಕೀಯ ಪಕ್ಷಗಳ ಭಾಗ್ಯವೇನು? ಈ ಪಕ್ಷಗಳಿಂದ ನೈಜ ಪ್ರಜಾಪ್ರಭುತ್ವ ಸ್ಥಾಪನೆ ಸಾಧ್ಯವಾದೀತೆಂದು ನಿರೀಕ್ಷಿಸಬಹುದೇ?
ಇನ್ನೊಂದು ಹೊಸ ಬೆಳವಣಿಗೆ ಈ ಅತೃಪ್ತರ ಕಡೆಯಿಂದ ಆಗುತ್ತಿದೆ. ಪಕ್ಷಾಂತರ ಕಾಯಿದೆ ಮೂಲಕ ಈ ಸ್ವಾರ್ಥಿ ಅತೃಪ್ತರನ್ನು ಹತೋಟಿಗೆ ತರುವ ಕೆಲಸವನ್ನು ಅಂದಿನ ಸರ್ಕಾರಗಳು ಮಾಡಿದವು. ಆದರೆ ಈ ಸಮಯ ಸಾಧಕರು, ಪಕ್ಷಾಂತರ ಕಾಯ್ದೆ ತಮಗೆ ಮುಳುವಾಗುವುದೆಂದು ತಿಳಿದು, ಶಾಸನಸಭೆಗೆ, ಮಂತ್ರಿಮಂಡಲಕ್ಕೆ ರಾಜೀನಾಮೆ ನೀಡುವ ಹೂಟ ಹೂಡಿದ್ದಾರೆ. ಇವರೆಲ್ಲ ‘ನಾವು ಸನ್ಯಾಸಿಗಳಲ್ಲ, ನಮಗೂ ಅಧಿಕಾರ ಬೇಕು’ ಎಂದು ಹೇಳುತ್ತಾ ಬಂದಿದ್ದಾರೆ. ಇಂತಹವರು ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕಾರ ದಾಹದಿಂದ ಮತ್ತೊಂದು ಲಾಭದಾಯಕ ಸಂಸ್ಥೆಗೆ ಸೇರುವವರಿದ್ದಾರೆ. ಇವರನ್ನು ಅನರ್ಹಗೊಳಿಸಬೇಕು. ಇಂದು ಆಮಿಷ, ಒತ್ತಡಗಳಿಗೆ ಮಣಿದು ಸ್ವಹಿತಸಾಧನೆಗಾಗಿ ಪಕ್ಷ ಬದಲಾಯಿಸಲು ಹೊರಟಿರುವ ಇವರು ಮತ ಹಾಕಿ ಗೆಲ್ಲಿಸಿದ ಮತದಾರರಿಗೆಲ್ಲ ದ್ರೋಹ ಬಗೆದಿದ್ದಾರೆಂದು ಧಾರಾಳವಾಗಿ ಹೇಳಬಹುದು. ಈ ಸ್ವಾರ್ಥಿ ಅತೃಪ್ತರು ಪಕ್ಷಾಂತರ ಕಾಯಿದೆಯ ಬುಡಕ್ಕೆ ಕೊಡಲಿಪೆಟ್ಟು ಕೊಟ್ಟು ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವುದು ಅಕ್ಷಮ್ಯ ಅಪರಾಧ.

ಮುಂದೇನು?
ವಿಧಾನಸಭೆ ಅಧಿವೇಶನ ಗುರುವಾರದಿಂದ ಆರಂಭವಾಯಿತು. ಸರ್ವೋಚ್ಚ ನ್ಯಾಯಾಲಯ ಸಭಾಧ್ಯಕ್ಷ ರಮೇಶ್ ಕುಮಾರ್‍ಗೆ ಯಾವ ಅಡಚಣೆಯೂ ಇಲ್ಲದೆ ಅಧಿವೇಶನ ನಡೆಸಲು ಸೂಚನೆ ನೀಡಿತು. ಈ ಮಧ್ಯೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ರಾಜ್ಯಪಾಲರು ವಿಶ್ವಾಸಮತವನ್ನು ಒಂದು ಕಾಲಮಿತಿಯೊಳಗೆ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಈ ಒಂದು ವರ್ಷದಲ್ಲಿ ಆಗಿರುವ ರಾಜಕೀಯ ಬೆಳವಣಿಗೆ ಬಗೆಗೆ ಪ್ರಸ್ತಾಪ ಮಾಡಿದರು. ಸಿದ್ದರಾಮಯ್ಯನವರು ಅತೃಪ್ತ ಶಾಸಕರಿಗೆ ವಿಪ್ ಕೊಟ್ಟಿದ್ದು, ಅವರು ಅಧಿವೇಶನಕ್ಕೆ ಬರದೇ ಇರುವುದರಿಂದ ಸಭಾಧ್ಯಕ್ಷರು ಕ್ರಮ ತೆಗೆದುಕೊಳ್ಳಬೇಕೆಂದು ನಿಲುವಳಿ ಸೂಚನೆ ನೀಡಿದರು. ಇದರ ಬಗೆಗೆ ಸಭಾಧ್ಯಕ್ಷರು ರೂಲಿಂಗ್ ಕೊಡುವುದು ಬಾಕಿ ಇದೆ ಸೋಮವಾರಕ್ಕೆ ಮುಂದೂಡಲಾಗಿದ್ದು ಅಂದು ಸ್ಪೀಕರ್ ನಿರ್ಣಯ ಹೇಳುತ್ತಾರೆ.

ಆ ನಂತರ ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸಮತ ನಿರ್ಣಯವನ್ನು ಸಭೆಯ ಮುಂದಿಟ್ಟು ಫಲಿತಾಂಶವನ್ನು ಪ್ರಕಟಿಸಬಹುದು.
ವಿಶ್ವಾಸ ನಿರ್ಣಯಕ್ಕೆ ಸೋಲಾಗಲಿ, ಗೆಲುವಾಗಲೀ ಭಾಜಪ ಮತ್ತು ಮೈತ್ರಿ ಕೂಟದ ಶಾಸಕರು ಇನ್ನೂ ನಾಲ್ಕು ವರ್ಷ ನಾಯಿ, ಬೆಕ್ಕುಗಳಂತೆ ಜಗಳವಾಡುತ್ತಾರೆ ಎಂಬುದರಲ್ಲಿ ಅನುಮಾನವಿಲ್ಲ. ಪ್ರಜೆ ಈಗ ಮಳೆಯ ಅಭಾವ, ಡೆಂಗ್ಯು ಮೊದಲಾದ ರೋಗಗಳ ಕಾಟ, ಕುಡಿಯುವ ನೀರಿನ ಸಮಸ್ಯೆಗಳಿಂದ ಪರದಾಡುತ್ತಿದ್ದಾರೆ. ಇವರ ಕಚ್ಚಾಟದಲ್ಲಿ ಜನಸಾಮಾನ್ಯರ ಸಮಸ್ಯೆಗಳು ನೆನೆಗುದಿಗೆ ಬೀಳುತ್ತವೆ.
ಈಗಿನ ಪರಿಸ್ಥಿತಿಯನ್ನು ನೋಡಿದರೆ ಕೂಡಲೇ ಚುನಾವಣೆಯನ್ನು ನಡೆಸಿ ಸ್ಥಿರವಾದ ಸರ್ಕಾರವನ್ನು ರಚಿಸುವುದು ಹೆಚ್ಚು ಸಮಂಜಸವೆಂದು ನನಗಾದರೂ ಅನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...