Homeಮುಖಪುಟದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

ದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣಕ್ಕಾಗಿ ಘೋಷಿಸಲಾದ ಲಾಕ್ ಡೌನ್ ನಿಂದಾಗಿ ಬಹಳಷ್ಟು ಬಡವರು ಮತ್ತು ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯಗಳು ಸಿಗದೇ ಸಂಕಷ್ಟದಲ್ಲಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ಮಧ್ಯೆ ಯಾರೂ ಹಸಿವಿನಿಂದ ಬಳಲುತ್ತಿಲ್ಲ ಎಂದು ಹೇಳಿಕೊಳ್ಳಲು ಸರ್ಕಾರ ಹೆಣಗಾಡುತ್ತಿದೆ. ಹಾಗಾದರೆ ವಾಸ್ತವವೇನು? ಭಾರತದಲ್ಲಿನ ಆಹಾರದ ಪ್ರಮಾಣವೆಷ್ಟು? ಹಸಿದವರ ಸಂಖ್ಯೆಯೆಷ್ಟು ಎಂಬುದನ್ನು ಅರಿತುಕೊಳ್ಳಬೇಕಿದೆ.

ಮಾರ್ಚ್ ನಲ್ಲಿ ಭಾರತದ ಆಹಾರ ನಿಗಮ ( FCI) ದಲ್ಲಿನ ದಾಸ್ತಾನು ಸುಮಾರು 770 ಲಕ್ಷ ಟನ್ ಎಂದು ಅಂದಾಜಿಸಲಾಗಿದೆ. ಇದು FCI ನ ಈ ಹಿಂದಿನ ಕಾಪು ದಾಸ್ತಾನು 210 ಲಕ್ಷ ಟನ್ ಗಿಂತ ಮೂರು ಪಟ್ಟು ಹೆಚ್ಚು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಹೆಚ್ಚುವರಿ ಆಹಾರ ಧಾನ್ಯಗಳ ಬಗ್ಗೆ ಹೇಳಿದ್ದಾರೆ.

“ಗೊಡೌನ್‌ಗಳಲ್ಲಿ ನಮಗೆ ಆಹಾರ ಧಾನ್ಯದ ದಾಸ್ತಾನು ಕೊರತೆಯಿಲ್ಲ ಮತ್ತು ಅಗತ್ಯವಿರುವದಕ್ಕಿಂತ ಎರಡು ಪಟ್ಟು ಹೆಚ್ಚು ಸಂಗ್ರಹವಿದೆ” ಎಂದು ಪಾಸ್ವಾನ್ ಹೇಳಿದ್ದರು.

ಈ ವರ್ಷ, ಭಾರತವು ಪ್ರಮುಖ ಚಳಿಗಾಳದ ಬೆಳೆಯಾದ 106.21 ಮಿಲಿಯನ್ ಟನ್ ಗೋಧಿ ಕೊಯ್ಲು ಮಾಡಲು ಸಜ್ಜಾಗಿದೆ. ಫೆಬ್ರವರಿಯಲ್ಲಿ ಬಿಡುಗಡೆಯಾದ ಸರ್ಕಾರದ ಎರಡನೇ ಮುಂಗಡ ಅಂದಾಜಿನ ಪ್ರಕಾರ, ದ್ವಿದಳ ಧಾನ್ಯಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಒಟ್ಟು ಚಳಿಗಾಳದ ಆಹಾರ ಧಾನ್ಯಗಳನ್ನು 149.60 ಮಿಲಿಯನ್ ಟನ್ ಎಂದು ನಿರೀಕ್ಷಿಸಲಾಗಿದೆ, ಇದು ಕಳೆದ ವರ್ಷಕ್ಕಿಂತ ಶೇಕಡಾ 4.10 ರಷ್ಟು ಹೆಚ್ಚಾಗಿದೆ.

“ಇದು ಹುಚ್ಚು. ಭಾರತದಲ್ಲಿ ಅಂತಹ ಶೇಖರಣಾ ಮಟ್ಟಗಳು ಎಂದಿಗೂ ಇರಲಿಲ್ಲ. FCI ಗೆ ಆ ಮಟ್ಟಿನ ಶೇಖರಣಾ ಸಾಮರ್ಥ್ಯವಿಲ್ಲ” ಎಂದು ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಜ್ಞಾನಿ ಜೀನ್ ಡ್ರೀಜ್ ಹೇಳಿದ್ದಾರೆ.

ಆಹಾರ ಮತ್ತು ವ್ಯಾಪಾರ ನೀತಿ ವಿಶ್ಲೇಷಕ ದೇವಿಂದರ್ ಶರ್ಮಾ “ಅಂದಾಜಿನ ಪ್ರಕಾರ ಜುಲೈವರೆಗೆ ಆಹಾರ ದಾಸ್ತಾನು ಇರುವ ಕಾರಣದಿಂದಾಗಿ ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಸುರಕ್ಷಿತ ಸ್ಥಾನದಲ್ಲಿದೆ” ಎಂದು ಹೇಳಿದ್ದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

“ಕನಿಷ್ಠ ಒಂದು ವರ್ಷದವರೆಗೆ ಇಡೀ ರಾಷ್ಟ್ರಕ್ಕೆ ಆಹಾರ ಸರಬರಾಜು ಮಾಡುವ ಬಗ್ಗೆ ನಾವು ಚಿಂತಿಸಬೇಕಾಗಿಲ್ಲ. ಈ ರೀತಿಯಾಗಿರದಿದ್ದರೆ ನಾವು ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದ್ದೆವು, ಒಂದು ಸಾಂಕ್ರಾಮಿಕ ಮತ್ತು ಇನ್ನೊಂದು ಹಸಿವು” ಎಂದು ಅವರು ವಿವರಿಸಿದರು.

ಆದರೆ ದುರದೃಷ್ಟವಶಾತ್, ಆಹಾರ ದಾಸ್ತಾನಿನಲ್ಲಿ ಈ ಹಿಂದಿನ ಕಾಪು ದಾಸ್ತಾನು ಇದ್ದ ಹೊರತಾಗಿಯೂ ಭಾರತ ಇನ್ನೂ ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದೆ ಎಂದು ಅವರು ಹೇಳಿದರು. “ನಾವು ಆಹಾರ ದಾಸ್ತಾನು ಹೊಂದಿರುವಾಗ ಯಾಕೆ ಚಿಂತೆ ಮಾಡಬೇಕಾಗಿದೆ? ಈ ದೇಶದಲ್ಲಿ ಹಸಿವು ಬರದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ”ಎಂದು ಶರ್ಮಾ ಹೇಳಿದ್ದಾರೆ.

ಅಸಾಧಾರಣ ಬಿಕ್ಕಟ್ಟುಗಳಿಗೆ ಅಸಾಧಾರಣ ಪರಿಹಾರಗಳು ಬೇಕಾಗುತ್ತವೆ… ಹಸಿವಿನಿಂದ ಯಾರು ಬಳಲುತ್ತಿದ್ದಾರೋ ಅವರಿಗೆ ಈ ದಾಸ್ತಾನುಗಳನ್ನು ತೆರೆಯಿರಿ. ರಾಷ್ಟ್ರವನ್ನು ಪೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ದೇವಿಂದರ್ ಶರ್ಮಾ ಹೇಳಿದ್ದಾರೆ.

ಮುಖ್ಯವಾಗಿ ಆಹಾರ-ಸಬ್ಸಿಡಿ ಅಕೌಂಟಿಂಗ್‌ಗೆ ಸಂಬಂಧಿಸಿರುವ ಅಸಂಗತತೆಯು, ಪರಿಸ್ಥಿತಿಯನ್ನು ನಿಭಾಯಿಸುವಾಗ ಕೇಂದ್ರದ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳನ್ನು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ವಿವರಿಸಿದ್ದಾರೆ. “ಆರ್ಥಿಕ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೆಚ್ಚುವರಿ ದಾಸ್ತಾನುಗಳನ್ನು ಲೋಡ್ ಮಾಡಿ ಅದನ್ನು ರಾಜ್ಯಕ್ಕೆ ಕೊಡುವುದರಿಂದ ಏನೂ ಖರ್ಚಾಗುವುದಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರಲ್ಲದೆ, “ನಾವು ಶೂನ್ಯವಾಗಿರುವ ಆರ್ಥಿಕ ವೆಚ್ಚದ ಬಗ್ಗೆ ಯೋಚಿಸಬಾರದು. ಸಾರಿಗೆಯಲ್ಲಿ ಸಣ್ಣ ಆರ್ಥಿಕ ವೆಚ್ಚವಿರಬಹುದು, ” ಎಂದಿದ್ದಾರೆ.

ಏಪ್ರಿಲ್ 13 ರಂದು ಪಾಸ್ವಾನ್ ಅವರು ಲಾಕ್ ಡೌನ್ ಮಾಡುವ ಮೊದಲು ಸುಮಾರು 30 ಲಕ್ಷ ಟನ್ ಆಹಾರ ಧಾನ್ಯವನ್ನು ರೈಲ್ವೆ ಮೂಲಕ ಲೋಡ್ ಮಾಡಿ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಜ್ಞರು ಆಹಾರ ಧಾನ್ಯಗಳ ಸಾಗಣೆಯು ಸಮಸ್ಯೆಯಲ್ಲ ಎಂದು ಸೂಚಿಸಿದ್ದಾರೆ, ವಿಶೇಷವಾಗಿ ಈಗ ಸರಕುಗಳ ಚಲನೆ ತೆರೆದುಕೊಂಡಿದೆ. ನಿಜವಾದ ಕಾಳಜಿ ಪಡಿತರ ಚೀಟಿ ಇಲ್ಲದವರ ಬಗ್ಗೆ, ವಿಶೇಷವಾಗಿ ಸಿಕ್ಕಿಬಿದ್ದ ಸಾವಿರಾರು ವಲಸೆ ಕಾರ್ಮಿಕರ ಬಗ್ಗೆ ಎಂದಿದ್ದಾರೆ.

ವಾಸ್ತವವೆಂದರೆ ಹೆಚ್ಚಿನ ಸಂಖ್ಯೆಯ ಜನರು ಇನ್ನೂ ಪಡಿತರ ಚೀಟಿಗಳನ್ನು ಹೊಂದಿಲ್ಲ. ಈ ಜನರು ಹೊಸ ಕುಟುಂಬಗಳನ್ನು ಹೊಂದಿರಬಹುದು, ಕೆಲಸದ ಹುಡುಕಾಟದಲ್ಲಿ ಇತರ ನಗರಗಳಿಗೆ ವಲಸೆ ಹೋಗಿರಬಹುದು ಅಥವಾ ಅವರ ಆಧಾರ್ ಕಾರ್ಡ್‌ಗಳೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗದ ಕಾರಣ ಅವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಿಂದಾಗಿ ಹಲಾವಾರು ಜನರು ತಮ್ಮ ಸ್ಥಿರವಾದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿಕ್ಕಿಬಿದ್ದವರಿಗೆ ರಾಜ್ಯ ವಿಪತ್ತು ನಿಧಿಯಿಂದ ಆಹಾರವನ್ನು ನೀಡಬೇಕು ಎಂದು ಪಾಸ್ವಾನ್ ಹೇಳಿದ್ದರು. “ರಾಜ್ಯ ಸರ್ಕಾರಗಳು ಎಷ್ಟು ಆಹಾರ ಧಾನ್ಯವನ್ನು ತೆಗೆದುಕೊಳ್ಳಬಹುದು – ಗೋಧಿಗೆ ಕಿಲೋಗೆ 21 ರೂ ಮತ್ತು ಅಕ್ಕಿಗೆ 22 ರೂ. – ಮತ್ತು ಜನರಿಗೆ ಮತ್ತಷ್ಟು ವಿತರಿಸಬಹುದು” ಎಂದು ಸಚಿವರು ಹೇಳಿದ್ದರು. ಮೂರು ತಿಂಗಳವರೆಗೆ ಪ್ರತಿ ಕೆ.ಜಿ.ಗೆ 2 ಅಥವಾ 3 ರೂ.ಗಳಂತೆ ವಿತರಿಸಲಾಗುವ ಉಚಿತ ಪಡಿತರವನ್ನು ನೀಡುವ ಸರ್ಕಾರದ ನಿರ್ಧಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರು ಉಲ್ಲೇಖಿಸಿದ ಬೆಲೆ ಮಾರುಕಟ್ಟೆ ಬೆಲೆಗಿಂತ ಕೆಲವೇ ರೂಪಾಯಿಗಳಷ್ಟಿದೆ ಎಂದು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ಗಮನಸೆಳೆದದಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದಂತೆಯೇ ಸಂಪನ್ಮೂಲಗಳನ್ನು ಹೊಂದಿರದ ಕಾರಣ ರಾಜ್ಯ ಸರ್ಕಾರಗಳು ಅದನ್ನು ಪಾವತಿಸುವುದಿಲ್ಲ.

ಸರ್ಕಾರವು ಕನಿಷ್ಠ ಆರು ತಿಂಗಳವರೆಗೆ ತುರ್ತು ಪಡಿತರ ಚೀಟಿಗಳನ್ನು ಒದಗಿಸಬೇಕು ಮತ್ತು ಮುಂದಿನ 12 ತಿಂಗಳುಗಳ ತಾತ್ಕಾಲಿಕ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರ ಕೊಳೆಗೇರಿಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರಿಕಗೊಳಿಸಬೇಕು ಎಂದು ಜೀನ್ ಡ್ರೀಜ್ ಸಲಹೆ ನೀಡಿದರು.

“ಇದು ಆಹಾರ ದಾಸ್ತಾನುಗಳಲ್ಲಿ ಸಣ್ಣ ಪರಿಣಾಮ ಮಾತ್ರ ಮಾಡುತ್ತದೆ. ಅಸ್ತಿತ್ವದಲ್ಲಿರುವ ಹಂಚಿಕೆಗೆ ಹೋಲಿಸಿದರೆ ಇದಕ್ಕೆ ಹೆಚ್ಚುವರಿ 200 ಲಕ್ಷ ಟನ್ ಆಹಾರ ಧಾನ್ಯಗಳು ಬೇಕಾಗುತ್ತವೆ. ಇದು ಹೆಚ್ಚುವರಿಯಾಗಿ ಇರುವ ಆಹಾರ ದಾಸ್ತಾನಿನ ಅರ್ಧದಷ್ಟು ಆಗುವುದಿಲ್ಲ” ಎಂದು ಡ್ರೋಜ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...