Homeಮುಖಪುಟದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

ದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣಕ್ಕಾಗಿ ಘೋಷಿಸಲಾದ ಲಾಕ್ ಡೌನ್ ನಿಂದಾಗಿ ಬಹಳಷ್ಟು ಬಡವರು ಮತ್ತು ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯಗಳು ಸಿಗದೇ ಸಂಕಷ್ಟದಲ್ಲಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ಮಧ್ಯೆ ಯಾರೂ ಹಸಿವಿನಿಂದ ಬಳಲುತ್ತಿಲ್ಲ ಎಂದು ಹೇಳಿಕೊಳ್ಳಲು ಸರ್ಕಾರ ಹೆಣಗಾಡುತ್ತಿದೆ. ಹಾಗಾದರೆ ವಾಸ್ತವವೇನು? ಭಾರತದಲ್ಲಿನ ಆಹಾರದ ಪ್ರಮಾಣವೆಷ್ಟು? ಹಸಿದವರ ಸಂಖ್ಯೆಯೆಷ್ಟು ಎಂಬುದನ್ನು ಅರಿತುಕೊಳ್ಳಬೇಕಿದೆ.

ಮಾರ್ಚ್ ನಲ್ಲಿ ಭಾರತದ ಆಹಾರ ನಿಗಮ ( FCI) ದಲ್ಲಿನ ದಾಸ್ತಾನು ಸುಮಾರು 770 ಲಕ್ಷ ಟನ್ ಎಂದು ಅಂದಾಜಿಸಲಾಗಿದೆ. ಇದು FCI ನ ಈ ಹಿಂದಿನ ಕಾಪು ದಾಸ್ತಾನು 210 ಲಕ್ಷ ಟನ್ ಗಿಂತ ಮೂರು ಪಟ್ಟು ಹೆಚ್ಚು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಹೆಚ್ಚುವರಿ ಆಹಾರ ಧಾನ್ಯಗಳ ಬಗ್ಗೆ ಹೇಳಿದ್ದಾರೆ.

“ಗೊಡೌನ್‌ಗಳಲ್ಲಿ ನಮಗೆ ಆಹಾರ ಧಾನ್ಯದ ದಾಸ್ತಾನು ಕೊರತೆಯಿಲ್ಲ ಮತ್ತು ಅಗತ್ಯವಿರುವದಕ್ಕಿಂತ ಎರಡು ಪಟ್ಟು ಹೆಚ್ಚು ಸಂಗ್ರಹವಿದೆ” ಎಂದು ಪಾಸ್ವಾನ್ ಹೇಳಿದ್ದರು.

ಈ ವರ್ಷ, ಭಾರತವು ಪ್ರಮುಖ ಚಳಿಗಾಳದ ಬೆಳೆಯಾದ 106.21 ಮಿಲಿಯನ್ ಟನ್ ಗೋಧಿ ಕೊಯ್ಲು ಮಾಡಲು ಸಜ್ಜಾಗಿದೆ. ಫೆಬ್ರವರಿಯಲ್ಲಿ ಬಿಡುಗಡೆಯಾದ ಸರ್ಕಾರದ ಎರಡನೇ ಮುಂಗಡ ಅಂದಾಜಿನ ಪ್ರಕಾರ, ದ್ವಿದಳ ಧಾನ್ಯಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಒಟ್ಟು ಚಳಿಗಾಳದ ಆಹಾರ ಧಾನ್ಯಗಳನ್ನು 149.60 ಮಿಲಿಯನ್ ಟನ್ ಎಂದು ನಿರೀಕ್ಷಿಸಲಾಗಿದೆ, ಇದು ಕಳೆದ ವರ್ಷಕ್ಕಿಂತ ಶೇಕಡಾ 4.10 ರಷ್ಟು ಹೆಚ್ಚಾಗಿದೆ.

“ಇದು ಹುಚ್ಚು. ಭಾರತದಲ್ಲಿ ಅಂತಹ ಶೇಖರಣಾ ಮಟ್ಟಗಳು ಎಂದಿಗೂ ಇರಲಿಲ್ಲ. FCI ಗೆ ಆ ಮಟ್ಟಿನ ಶೇಖರಣಾ ಸಾಮರ್ಥ್ಯವಿಲ್ಲ” ಎಂದು ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಜ್ಞಾನಿ ಜೀನ್ ಡ್ರೀಜ್ ಹೇಳಿದ್ದಾರೆ.

ಆಹಾರ ಮತ್ತು ವ್ಯಾಪಾರ ನೀತಿ ವಿಶ್ಲೇಷಕ ದೇವಿಂದರ್ ಶರ್ಮಾ “ಅಂದಾಜಿನ ಪ್ರಕಾರ ಜುಲೈವರೆಗೆ ಆಹಾರ ದಾಸ್ತಾನು ಇರುವ ಕಾರಣದಿಂದಾಗಿ ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಸುರಕ್ಷಿತ ಸ್ಥಾನದಲ್ಲಿದೆ” ಎಂದು ಹೇಳಿದ್ದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

“ಕನಿಷ್ಠ ಒಂದು ವರ್ಷದವರೆಗೆ ಇಡೀ ರಾಷ್ಟ್ರಕ್ಕೆ ಆಹಾರ ಸರಬರಾಜು ಮಾಡುವ ಬಗ್ಗೆ ನಾವು ಚಿಂತಿಸಬೇಕಾಗಿಲ್ಲ. ಈ ರೀತಿಯಾಗಿರದಿದ್ದರೆ ನಾವು ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದ್ದೆವು, ಒಂದು ಸಾಂಕ್ರಾಮಿಕ ಮತ್ತು ಇನ್ನೊಂದು ಹಸಿವು” ಎಂದು ಅವರು ವಿವರಿಸಿದರು.

ಆದರೆ ದುರದೃಷ್ಟವಶಾತ್, ಆಹಾರ ದಾಸ್ತಾನಿನಲ್ಲಿ ಈ ಹಿಂದಿನ ಕಾಪು ದಾಸ್ತಾನು ಇದ್ದ ಹೊರತಾಗಿಯೂ ಭಾರತ ಇನ್ನೂ ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದೆ ಎಂದು ಅವರು ಹೇಳಿದರು. “ನಾವು ಆಹಾರ ದಾಸ್ತಾನು ಹೊಂದಿರುವಾಗ ಯಾಕೆ ಚಿಂತೆ ಮಾಡಬೇಕಾಗಿದೆ? ಈ ದೇಶದಲ್ಲಿ ಹಸಿವು ಬರದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ”ಎಂದು ಶರ್ಮಾ ಹೇಳಿದ್ದಾರೆ.

ಅಸಾಧಾರಣ ಬಿಕ್ಕಟ್ಟುಗಳಿಗೆ ಅಸಾಧಾರಣ ಪರಿಹಾರಗಳು ಬೇಕಾಗುತ್ತವೆ… ಹಸಿವಿನಿಂದ ಯಾರು ಬಳಲುತ್ತಿದ್ದಾರೋ ಅವರಿಗೆ ಈ ದಾಸ್ತಾನುಗಳನ್ನು ತೆರೆಯಿರಿ. ರಾಷ್ಟ್ರವನ್ನು ಪೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ದೇವಿಂದರ್ ಶರ್ಮಾ ಹೇಳಿದ್ದಾರೆ.

ಮುಖ್ಯವಾಗಿ ಆಹಾರ-ಸಬ್ಸಿಡಿ ಅಕೌಂಟಿಂಗ್‌ಗೆ ಸಂಬಂಧಿಸಿರುವ ಅಸಂಗತತೆಯು, ಪರಿಸ್ಥಿತಿಯನ್ನು ನಿಭಾಯಿಸುವಾಗ ಕೇಂದ್ರದ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳನ್ನು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ವಿವರಿಸಿದ್ದಾರೆ. “ಆರ್ಥಿಕ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೆಚ್ಚುವರಿ ದಾಸ್ತಾನುಗಳನ್ನು ಲೋಡ್ ಮಾಡಿ ಅದನ್ನು ರಾಜ್ಯಕ್ಕೆ ಕೊಡುವುದರಿಂದ ಏನೂ ಖರ್ಚಾಗುವುದಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರಲ್ಲದೆ, “ನಾವು ಶೂನ್ಯವಾಗಿರುವ ಆರ್ಥಿಕ ವೆಚ್ಚದ ಬಗ್ಗೆ ಯೋಚಿಸಬಾರದು. ಸಾರಿಗೆಯಲ್ಲಿ ಸಣ್ಣ ಆರ್ಥಿಕ ವೆಚ್ಚವಿರಬಹುದು, ” ಎಂದಿದ್ದಾರೆ.

ಏಪ್ರಿಲ್ 13 ರಂದು ಪಾಸ್ವಾನ್ ಅವರು ಲಾಕ್ ಡೌನ್ ಮಾಡುವ ಮೊದಲು ಸುಮಾರು 30 ಲಕ್ಷ ಟನ್ ಆಹಾರ ಧಾನ್ಯವನ್ನು ರೈಲ್ವೆ ಮೂಲಕ ಲೋಡ್ ಮಾಡಿ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಜ್ಞರು ಆಹಾರ ಧಾನ್ಯಗಳ ಸಾಗಣೆಯು ಸಮಸ್ಯೆಯಲ್ಲ ಎಂದು ಸೂಚಿಸಿದ್ದಾರೆ, ವಿಶೇಷವಾಗಿ ಈಗ ಸರಕುಗಳ ಚಲನೆ ತೆರೆದುಕೊಂಡಿದೆ. ನಿಜವಾದ ಕಾಳಜಿ ಪಡಿತರ ಚೀಟಿ ಇಲ್ಲದವರ ಬಗ್ಗೆ, ವಿಶೇಷವಾಗಿ ಸಿಕ್ಕಿಬಿದ್ದ ಸಾವಿರಾರು ವಲಸೆ ಕಾರ್ಮಿಕರ ಬಗ್ಗೆ ಎಂದಿದ್ದಾರೆ.

ವಾಸ್ತವವೆಂದರೆ ಹೆಚ್ಚಿನ ಸಂಖ್ಯೆಯ ಜನರು ಇನ್ನೂ ಪಡಿತರ ಚೀಟಿಗಳನ್ನು ಹೊಂದಿಲ್ಲ. ಈ ಜನರು ಹೊಸ ಕುಟುಂಬಗಳನ್ನು ಹೊಂದಿರಬಹುದು, ಕೆಲಸದ ಹುಡುಕಾಟದಲ್ಲಿ ಇತರ ನಗರಗಳಿಗೆ ವಲಸೆ ಹೋಗಿರಬಹುದು ಅಥವಾ ಅವರ ಆಧಾರ್ ಕಾರ್ಡ್‌ಗಳೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗದ ಕಾರಣ ಅವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಿಂದಾಗಿ ಹಲಾವಾರು ಜನರು ತಮ್ಮ ಸ್ಥಿರವಾದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿಕ್ಕಿಬಿದ್ದವರಿಗೆ ರಾಜ್ಯ ವಿಪತ್ತು ನಿಧಿಯಿಂದ ಆಹಾರವನ್ನು ನೀಡಬೇಕು ಎಂದು ಪಾಸ್ವಾನ್ ಹೇಳಿದ್ದರು. “ರಾಜ್ಯ ಸರ್ಕಾರಗಳು ಎಷ್ಟು ಆಹಾರ ಧಾನ್ಯವನ್ನು ತೆಗೆದುಕೊಳ್ಳಬಹುದು – ಗೋಧಿಗೆ ಕಿಲೋಗೆ 21 ರೂ ಮತ್ತು ಅಕ್ಕಿಗೆ 22 ರೂ. – ಮತ್ತು ಜನರಿಗೆ ಮತ್ತಷ್ಟು ವಿತರಿಸಬಹುದು” ಎಂದು ಸಚಿವರು ಹೇಳಿದ್ದರು. ಮೂರು ತಿಂಗಳವರೆಗೆ ಪ್ರತಿ ಕೆ.ಜಿ.ಗೆ 2 ಅಥವಾ 3 ರೂ.ಗಳಂತೆ ವಿತರಿಸಲಾಗುವ ಉಚಿತ ಪಡಿತರವನ್ನು ನೀಡುವ ಸರ್ಕಾರದ ನಿರ್ಧಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರು ಉಲ್ಲೇಖಿಸಿದ ಬೆಲೆ ಮಾರುಕಟ್ಟೆ ಬೆಲೆಗಿಂತ ಕೆಲವೇ ರೂಪಾಯಿಗಳಷ್ಟಿದೆ ಎಂದು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ಗಮನಸೆಳೆದದಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದಂತೆಯೇ ಸಂಪನ್ಮೂಲಗಳನ್ನು ಹೊಂದಿರದ ಕಾರಣ ರಾಜ್ಯ ಸರ್ಕಾರಗಳು ಅದನ್ನು ಪಾವತಿಸುವುದಿಲ್ಲ.

ಸರ್ಕಾರವು ಕನಿಷ್ಠ ಆರು ತಿಂಗಳವರೆಗೆ ತುರ್ತು ಪಡಿತರ ಚೀಟಿಗಳನ್ನು ಒದಗಿಸಬೇಕು ಮತ್ತು ಮುಂದಿನ 12 ತಿಂಗಳುಗಳ ತಾತ್ಕಾಲಿಕ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರ ಕೊಳೆಗೇರಿಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರಿಕಗೊಳಿಸಬೇಕು ಎಂದು ಜೀನ್ ಡ್ರೀಜ್ ಸಲಹೆ ನೀಡಿದರು.

“ಇದು ಆಹಾರ ದಾಸ್ತಾನುಗಳಲ್ಲಿ ಸಣ್ಣ ಪರಿಣಾಮ ಮಾತ್ರ ಮಾಡುತ್ತದೆ. ಅಸ್ತಿತ್ವದಲ್ಲಿರುವ ಹಂಚಿಕೆಗೆ ಹೋಲಿಸಿದರೆ ಇದಕ್ಕೆ ಹೆಚ್ಚುವರಿ 200 ಲಕ್ಷ ಟನ್ ಆಹಾರ ಧಾನ್ಯಗಳು ಬೇಕಾಗುತ್ತವೆ. ಇದು ಹೆಚ್ಚುವರಿಯಾಗಿ ಇರುವ ಆಹಾರ ದಾಸ್ತಾನಿನ ಅರ್ಧದಷ್ಟು ಆಗುವುದಿಲ್ಲ” ಎಂದು ಡ್ರೋಜ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...