Homeಮುಖಪುಟದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

ದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣಕ್ಕಾಗಿ ಘೋಷಿಸಲಾದ ಲಾಕ್ ಡೌನ್ ನಿಂದಾಗಿ ಬಹಳಷ್ಟು ಬಡವರು ಮತ್ತು ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯಗಳು ಸಿಗದೇ ಸಂಕಷ್ಟದಲ್ಲಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ಮಧ್ಯೆ ಯಾರೂ ಹಸಿವಿನಿಂದ ಬಳಲುತ್ತಿಲ್ಲ ಎಂದು ಹೇಳಿಕೊಳ್ಳಲು ಸರ್ಕಾರ ಹೆಣಗಾಡುತ್ತಿದೆ. ಹಾಗಾದರೆ ವಾಸ್ತವವೇನು? ಭಾರತದಲ್ಲಿನ ಆಹಾರದ ಪ್ರಮಾಣವೆಷ್ಟು? ಹಸಿದವರ ಸಂಖ್ಯೆಯೆಷ್ಟು ಎಂಬುದನ್ನು ಅರಿತುಕೊಳ್ಳಬೇಕಿದೆ.

ಮಾರ್ಚ್ ನಲ್ಲಿ ಭಾರತದ ಆಹಾರ ನಿಗಮ ( FCI) ದಲ್ಲಿನ ದಾಸ್ತಾನು ಸುಮಾರು 770 ಲಕ್ಷ ಟನ್ ಎಂದು ಅಂದಾಜಿಸಲಾಗಿದೆ. ಇದು FCI ನ ಈ ಹಿಂದಿನ ಕಾಪು ದಾಸ್ತಾನು 210 ಲಕ್ಷ ಟನ್ ಗಿಂತ ಮೂರು ಪಟ್ಟು ಹೆಚ್ಚು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಹೆಚ್ಚುವರಿ ಆಹಾರ ಧಾನ್ಯಗಳ ಬಗ್ಗೆ ಹೇಳಿದ್ದಾರೆ.

“ಗೊಡೌನ್‌ಗಳಲ್ಲಿ ನಮಗೆ ಆಹಾರ ಧಾನ್ಯದ ದಾಸ್ತಾನು ಕೊರತೆಯಿಲ್ಲ ಮತ್ತು ಅಗತ್ಯವಿರುವದಕ್ಕಿಂತ ಎರಡು ಪಟ್ಟು ಹೆಚ್ಚು ಸಂಗ್ರಹವಿದೆ” ಎಂದು ಪಾಸ್ವಾನ್ ಹೇಳಿದ್ದರು.

ಈ ವರ್ಷ, ಭಾರತವು ಪ್ರಮುಖ ಚಳಿಗಾಳದ ಬೆಳೆಯಾದ 106.21 ಮಿಲಿಯನ್ ಟನ್ ಗೋಧಿ ಕೊಯ್ಲು ಮಾಡಲು ಸಜ್ಜಾಗಿದೆ. ಫೆಬ್ರವರಿಯಲ್ಲಿ ಬಿಡುಗಡೆಯಾದ ಸರ್ಕಾರದ ಎರಡನೇ ಮುಂಗಡ ಅಂದಾಜಿನ ಪ್ರಕಾರ, ದ್ವಿದಳ ಧಾನ್ಯಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಒಟ್ಟು ಚಳಿಗಾಳದ ಆಹಾರ ಧಾನ್ಯಗಳನ್ನು 149.60 ಮಿಲಿಯನ್ ಟನ್ ಎಂದು ನಿರೀಕ್ಷಿಸಲಾಗಿದೆ, ಇದು ಕಳೆದ ವರ್ಷಕ್ಕಿಂತ ಶೇಕಡಾ 4.10 ರಷ್ಟು ಹೆಚ್ಚಾಗಿದೆ.

“ಇದು ಹುಚ್ಚು. ಭಾರತದಲ್ಲಿ ಅಂತಹ ಶೇಖರಣಾ ಮಟ್ಟಗಳು ಎಂದಿಗೂ ಇರಲಿಲ್ಲ. FCI ಗೆ ಆ ಮಟ್ಟಿನ ಶೇಖರಣಾ ಸಾಮರ್ಥ್ಯವಿಲ್ಲ” ಎಂದು ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಜ್ಞಾನಿ ಜೀನ್ ಡ್ರೀಜ್ ಹೇಳಿದ್ದಾರೆ.

ಆಹಾರ ಮತ್ತು ವ್ಯಾಪಾರ ನೀತಿ ವಿಶ್ಲೇಷಕ ದೇವಿಂದರ್ ಶರ್ಮಾ “ಅಂದಾಜಿನ ಪ್ರಕಾರ ಜುಲೈವರೆಗೆ ಆಹಾರ ದಾಸ್ತಾನು ಇರುವ ಕಾರಣದಿಂದಾಗಿ ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಸುರಕ್ಷಿತ ಸ್ಥಾನದಲ್ಲಿದೆ” ಎಂದು ಹೇಳಿದ್ದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

“ಕನಿಷ್ಠ ಒಂದು ವರ್ಷದವರೆಗೆ ಇಡೀ ರಾಷ್ಟ್ರಕ್ಕೆ ಆಹಾರ ಸರಬರಾಜು ಮಾಡುವ ಬಗ್ಗೆ ನಾವು ಚಿಂತಿಸಬೇಕಾಗಿಲ್ಲ. ಈ ರೀತಿಯಾಗಿರದಿದ್ದರೆ ನಾವು ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದ್ದೆವು, ಒಂದು ಸಾಂಕ್ರಾಮಿಕ ಮತ್ತು ಇನ್ನೊಂದು ಹಸಿವು” ಎಂದು ಅವರು ವಿವರಿಸಿದರು.

ಆದರೆ ದುರದೃಷ್ಟವಶಾತ್, ಆಹಾರ ದಾಸ್ತಾನಿನಲ್ಲಿ ಈ ಹಿಂದಿನ ಕಾಪು ದಾಸ್ತಾನು ಇದ್ದ ಹೊರತಾಗಿಯೂ ಭಾರತ ಇನ್ನೂ ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದೆ ಎಂದು ಅವರು ಹೇಳಿದರು. “ನಾವು ಆಹಾರ ದಾಸ್ತಾನು ಹೊಂದಿರುವಾಗ ಯಾಕೆ ಚಿಂತೆ ಮಾಡಬೇಕಾಗಿದೆ? ಈ ದೇಶದಲ್ಲಿ ಹಸಿವು ಬರದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ”ಎಂದು ಶರ್ಮಾ ಹೇಳಿದ್ದಾರೆ.

ಅಸಾಧಾರಣ ಬಿಕ್ಕಟ್ಟುಗಳಿಗೆ ಅಸಾಧಾರಣ ಪರಿಹಾರಗಳು ಬೇಕಾಗುತ್ತವೆ… ಹಸಿವಿನಿಂದ ಯಾರು ಬಳಲುತ್ತಿದ್ದಾರೋ ಅವರಿಗೆ ಈ ದಾಸ್ತಾನುಗಳನ್ನು ತೆರೆಯಿರಿ. ರಾಷ್ಟ್ರವನ್ನು ಪೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ದೇವಿಂದರ್ ಶರ್ಮಾ ಹೇಳಿದ್ದಾರೆ.

ಮುಖ್ಯವಾಗಿ ಆಹಾರ-ಸಬ್ಸಿಡಿ ಅಕೌಂಟಿಂಗ್‌ಗೆ ಸಂಬಂಧಿಸಿರುವ ಅಸಂಗತತೆಯು, ಪರಿಸ್ಥಿತಿಯನ್ನು ನಿಭಾಯಿಸುವಾಗ ಕೇಂದ್ರದ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳನ್ನು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ವಿವರಿಸಿದ್ದಾರೆ. “ಆರ್ಥಿಕ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೆಚ್ಚುವರಿ ದಾಸ್ತಾನುಗಳನ್ನು ಲೋಡ್ ಮಾಡಿ ಅದನ್ನು ರಾಜ್ಯಕ್ಕೆ ಕೊಡುವುದರಿಂದ ಏನೂ ಖರ್ಚಾಗುವುದಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರಲ್ಲದೆ, “ನಾವು ಶೂನ್ಯವಾಗಿರುವ ಆರ್ಥಿಕ ವೆಚ್ಚದ ಬಗ್ಗೆ ಯೋಚಿಸಬಾರದು. ಸಾರಿಗೆಯಲ್ಲಿ ಸಣ್ಣ ಆರ್ಥಿಕ ವೆಚ್ಚವಿರಬಹುದು, ” ಎಂದಿದ್ದಾರೆ.

ಏಪ್ರಿಲ್ 13 ರಂದು ಪಾಸ್ವಾನ್ ಅವರು ಲಾಕ್ ಡೌನ್ ಮಾಡುವ ಮೊದಲು ಸುಮಾರು 30 ಲಕ್ಷ ಟನ್ ಆಹಾರ ಧಾನ್ಯವನ್ನು ರೈಲ್ವೆ ಮೂಲಕ ಲೋಡ್ ಮಾಡಿ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಜ್ಞರು ಆಹಾರ ಧಾನ್ಯಗಳ ಸಾಗಣೆಯು ಸಮಸ್ಯೆಯಲ್ಲ ಎಂದು ಸೂಚಿಸಿದ್ದಾರೆ, ವಿಶೇಷವಾಗಿ ಈಗ ಸರಕುಗಳ ಚಲನೆ ತೆರೆದುಕೊಂಡಿದೆ. ನಿಜವಾದ ಕಾಳಜಿ ಪಡಿತರ ಚೀಟಿ ಇಲ್ಲದವರ ಬಗ್ಗೆ, ವಿಶೇಷವಾಗಿ ಸಿಕ್ಕಿಬಿದ್ದ ಸಾವಿರಾರು ವಲಸೆ ಕಾರ್ಮಿಕರ ಬಗ್ಗೆ ಎಂದಿದ್ದಾರೆ.

ವಾಸ್ತವವೆಂದರೆ ಹೆಚ್ಚಿನ ಸಂಖ್ಯೆಯ ಜನರು ಇನ್ನೂ ಪಡಿತರ ಚೀಟಿಗಳನ್ನು ಹೊಂದಿಲ್ಲ. ಈ ಜನರು ಹೊಸ ಕುಟುಂಬಗಳನ್ನು ಹೊಂದಿರಬಹುದು, ಕೆಲಸದ ಹುಡುಕಾಟದಲ್ಲಿ ಇತರ ನಗರಗಳಿಗೆ ವಲಸೆ ಹೋಗಿರಬಹುದು ಅಥವಾ ಅವರ ಆಧಾರ್ ಕಾರ್ಡ್‌ಗಳೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗದ ಕಾರಣ ಅವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಿಂದಾಗಿ ಹಲಾವಾರು ಜನರು ತಮ್ಮ ಸ್ಥಿರವಾದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿಕ್ಕಿಬಿದ್ದವರಿಗೆ ರಾಜ್ಯ ವಿಪತ್ತು ನಿಧಿಯಿಂದ ಆಹಾರವನ್ನು ನೀಡಬೇಕು ಎಂದು ಪಾಸ್ವಾನ್ ಹೇಳಿದ್ದರು. “ರಾಜ್ಯ ಸರ್ಕಾರಗಳು ಎಷ್ಟು ಆಹಾರ ಧಾನ್ಯವನ್ನು ತೆಗೆದುಕೊಳ್ಳಬಹುದು – ಗೋಧಿಗೆ ಕಿಲೋಗೆ 21 ರೂ ಮತ್ತು ಅಕ್ಕಿಗೆ 22 ರೂ. – ಮತ್ತು ಜನರಿಗೆ ಮತ್ತಷ್ಟು ವಿತರಿಸಬಹುದು” ಎಂದು ಸಚಿವರು ಹೇಳಿದ್ದರು. ಮೂರು ತಿಂಗಳವರೆಗೆ ಪ್ರತಿ ಕೆ.ಜಿ.ಗೆ 2 ಅಥವಾ 3 ರೂ.ಗಳಂತೆ ವಿತರಿಸಲಾಗುವ ಉಚಿತ ಪಡಿತರವನ್ನು ನೀಡುವ ಸರ್ಕಾರದ ನಿರ್ಧಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರು ಉಲ್ಲೇಖಿಸಿದ ಬೆಲೆ ಮಾರುಕಟ್ಟೆ ಬೆಲೆಗಿಂತ ಕೆಲವೇ ರೂಪಾಯಿಗಳಷ್ಟಿದೆ ಎಂದು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ಗಮನಸೆಳೆದದಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದಂತೆಯೇ ಸಂಪನ್ಮೂಲಗಳನ್ನು ಹೊಂದಿರದ ಕಾರಣ ರಾಜ್ಯ ಸರ್ಕಾರಗಳು ಅದನ್ನು ಪಾವತಿಸುವುದಿಲ್ಲ.

ಸರ್ಕಾರವು ಕನಿಷ್ಠ ಆರು ತಿಂಗಳವರೆಗೆ ತುರ್ತು ಪಡಿತರ ಚೀಟಿಗಳನ್ನು ಒದಗಿಸಬೇಕು ಮತ್ತು ಮುಂದಿನ 12 ತಿಂಗಳುಗಳ ತಾತ್ಕಾಲಿಕ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರ ಕೊಳೆಗೇರಿಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರಿಕಗೊಳಿಸಬೇಕು ಎಂದು ಜೀನ್ ಡ್ರೀಜ್ ಸಲಹೆ ನೀಡಿದರು.

“ಇದು ಆಹಾರ ದಾಸ್ತಾನುಗಳಲ್ಲಿ ಸಣ್ಣ ಪರಿಣಾಮ ಮಾತ್ರ ಮಾಡುತ್ತದೆ. ಅಸ್ತಿತ್ವದಲ್ಲಿರುವ ಹಂಚಿಕೆಗೆ ಹೋಲಿಸಿದರೆ ಇದಕ್ಕೆ ಹೆಚ್ಚುವರಿ 200 ಲಕ್ಷ ಟನ್ ಆಹಾರ ಧಾನ್ಯಗಳು ಬೇಕಾಗುತ್ತವೆ. ಇದು ಹೆಚ್ಚುವರಿಯಾಗಿ ಇರುವ ಆಹಾರ ದಾಸ್ತಾನಿನ ಅರ್ಧದಷ್ಟು ಆಗುವುದಿಲ್ಲ” ಎಂದು ಡ್ರೋಜ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...