Homeಮುಖಪುಟದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

ದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣಕ್ಕಾಗಿ ಘೋಷಿಸಲಾದ ಲಾಕ್ ಡೌನ್ ನಿಂದಾಗಿ ಬಹಳಷ್ಟು ಬಡವರು ಮತ್ತು ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯಗಳು ಸಿಗದೇ ಸಂಕಷ್ಟದಲ್ಲಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ಮಧ್ಯೆ ಯಾರೂ ಹಸಿವಿನಿಂದ ಬಳಲುತ್ತಿಲ್ಲ ಎಂದು ಹೇಳಿಕೊಳ್ಳಲು ಸರ್ಕಾರ ಹೆಣಗಾಡುತ್ತಿದೆ. ಹಾಗಾದರೆ ವಾಸ್ತವವೇನು? ಭಾರತದಲ್ಲಿನ ಆಹಾರದ ಪ್ರಮಾಣವೆಷ್ಟು? ಹಸಿದವರ ಸಂಖ್ಯೆಯೆಷ್ಟು ಎಂಬುದನ್ನು ಅರಿತುಕೊಳ್ಳಬೇಕಿದೆ.

ಮಾರ್ಚ್ ನಲ್ಲಿ ಭಾರತದ ಆಹಾರ ನಿಗಮ ( FCI) ದಲ್ಲಿನ ದಾಸ್ತಾನು ಸುಮಾರು 770 ಲಕ್ಷ ಟನ್ ಎಂದು ಅಂದಾಜಿಸಲಾಗಿದೆ. ಇದು FCI ನ ಈ ಹಿಂದಿನ ಕಾಪು ದಾಸ್ತಾನು 210 ಲಕ್ಷ ಟನ್ ಗಿಂತ ಮೂರು ಪಟ್ಟು ಹೆಚ್ಚು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಹೆಚ್ಚುವರಿ ಆಹಾರ ಧಾನ್ಯಗಳ ಬಗ್ಗೆ ಹೇಳಿದ್ದಾರೆ.

“ಗೊಡೌನ್‌ಗಳಲ್ಲಿ ನಮಗೆ ಆಹಾರ ಧಾನ್ಯದ ದಾಸ್ತಾನು ಕೊರತೆಯಿಲ್ಲ ಮತ್ತು ಅಗತ್ಯವಿರುವದಕ್ಕಿಂತ ಎರಡು ಪಟ್ಟು ಹೆಚ್ಚು ಸಂಗ್ರಹವಿದೆ” ಎಂದು ಪಾಸ್ವಾನ್ ಹೇಳಿದ್ದರು.

ಈ ವರ್ಷ, ಭಾರತವು ಪ್ರಮುಖ ಚಳಿಗಾಳದ ಬೆಳೆಯಾದ 106.21 ಮಿಲಿಯನ್ ಟನ್ ಗೋಧಿ ಕೊಯ್ಲು ಮಾಡಲು ಸಜ್ಜಾಗಿದೆ. ಫೆಬ್ರವರಿಯಲ್ಲಿ ಬಿಡುಗಡೆಯಾದ ಸರ್ಕಾರದ ಎರಡನೇ ಮುಂಗಡ ಅಂದಾಜಿನ ಪ್ರಕಾರ, ದ್ವಿದಳ ಧಾನ್ಯಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಒಟ್ಟು ಚಳಿಗಾಳದ ಆಹಾರ ಧಾನ್ಯಗಳನ್ನು 149.60 ಮಿಲಿಯನ್ ಟನ್ ಎಂದು ನಿರೀಕ್ಷಿಸಲಾಗಿದೆ, ಇದು ಕಳೆದ ವರ್ಷಕ್ಕಿಂತ ಶೇಕಡಾ 4.10 ರಷ್ಟು ಹೆಚ್ಚಾಗಿದೆ.

“ಇದು ಹುಚ್ಚು. ಭಾರತದಲ್ಲಿ ಅಂತಹ ಶೇಖರಣಾ ಮಟ್ಟಗಳು ಎಂದಿಗೂ ಇರಲಿಲ್ಲ. FCI ಗೆ ಆ ಮಟ್ಟಿನ ಶೇಖರಣಾ ಸಾಮರ್ಥ್ಯವಿಲ್ಲ” ಎಂದು ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಜ್ಞಾನಿ ಜೀನ್ ಡ್ರೀಜ್ ಹೇಳಿದ್ದಾರೆ.

ಆಹಾರ ಮತ್ತು ವ್ಯಾಪಾರ ನೀತಿ ವಿಶ್ಲೇಷಕ ದೇವಿಂದರ್ ಶರ್ಮಾ “ಅಂದಾಜಿನ ಪ್ರಕಾರ ಜುಲೈವರೆಗೆ ಆಹಾರ ದಾಸ್ತಾನು ಇರುವ ಕಾರಣದಿಂದಾಗಿ ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಸುರಕ್ಷಿತ ಸ್ಥಾನದಲ್ಲಿದೆ” ಎಂದು ಹೇಳಿದ್ದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

“ಕನಿಷ್ಠ ಒಂದು ವರ್ಷದವರೆಗೆ ಇಡೀ ರಾಷ್ಟ್ರಕ್ಕೆ ಆಹಾರ ಸರಬರಾಜು ಮಾಡುವ ಬಗ್ಗೆ ನಾವು ಚಿಂತಿಸಬೇಕಾಗಿಲ್ಲ. ಈ ರೀತಿಯಾಗಿರದಿದ್ದರೆ ನಾವು ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದ್ದೆವು, ಒಂದು ಸಾಂಕ್ರಾಮಿಕ ಮತ್ತು ಇನ್ನೊಂದು ಹಸಿವು” ಎಂದು ಅವರು ವಿವರಿಸಿದರು.

ಆದರೆ ದುರದೃಷ್ಟವಶಾತ್, ಆಹಾರ ದಾಸ್ತಾನಿನಲ್ಲಿ ಈ ಹಿಂದಿನ ಕಾಪು ದಾಸ್ತಾನು ಇದ್ದ ಹೊರತಾಗಿಯೂ ಭಾರತ ಇನ್ನೂ ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದೆ ಎಂದು ಅವರು ಹೇಳಿದರು. “ನಾವು ಆಹಾರ ದಾಸ್ತಾನು ಹೊಂದಿರುವಾಗ ಯಾಕೆ ಚಿಂತೆ ಮಾಡಬೇಕಾಗಿದೆ? ಈ ದೇಶದಲ್ಲಿ ಹಸಿವು ಬರದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ”ಎಂದು ಶರ್ಮಾ ಹೇಳಿದ್ದಾರೆ.

ಅಸಾಧಾರಣ ಬಿಕ್ಕಟ್ಟುಗಳಿಗೆ ಅಸಾಧಾರಣ ಪರಿಹಾರಗಳು ಬೇಕಾಗುತ್ತವೆ… ಹಸಿವಿನಿಂದ ಯಾರು ಬಳಲುತ್ತಿದ್ದಾರೋ ಅವರಿಗೆ ಈ ದಾಸ್ತಾನುಗಳನ್ನು ತೆರೆಯಿರಿ. ರಾಷ್ಟ್ರವನ್ನು ಪೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ದೇವಿಂದರ್ ಶರ್ಮಾ ಹೇಳಿದ್ದಾರೆ.

ಮುಖ್ಯವಾಗಿ ಆಹಾರ-ಸಬ್ಸಿಡಿ ಅಕೌಂಟಿಂಗ್‌ಗೆ ಸಂಬಂಧಿಸಿರುವ ಅಸಂಗತತೆಯು, ಪರಿಸ್ಥಿತಿಯನ್ನು ನಿಭಾಯಿಸುವಾಗ ಕೇಂದ್ರದ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳನ್ನು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ವಿವರಿಸಿದ್ದಾರೆ. “ಆರ್ಥಿಕ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೆಚ್ಚುವರಿ ದಾಸ್ತಾನುಗಳನ್ನು ಲೋಡ್ ಮಾಡಿ ಅದನ್ನು ರಾಜ್ಯಕ್ಕೆ ಕೊಡುವುದರಿಂದ ಏನೂ ಖರ್ಚಾಗುವುದಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರಲ್ಲದೆ, “ನಾವು ಶೂನ್ಯವಾಗಿರುವ ಆರ್ಥಿಕ ವೆಚ್ಚದ ಬಗ್ಗೆ ಯೋಚಿಸಬಾರದು. ಸಾರಿಗೆಯಲ್ಲಿ ಸಣ್ಣ ಆರ್ಥಿಕ ವೆಚ್ಚವಿರಬಹುದು, ” ಎಂದಿದ್ದಾರೆ.

ಏಪ್ರಿಲ್ 13 ರಂದು ಪಾಸ್ವಾನ್ ಅವರು ಲಾಕ್ ಡೌನ್ ಮಾಡುವ ಮೊದಲು ಸುಮಾರು 30 ಲಕ್ಷ ಟನ್ ಆಹಾರ ಧಾನ್ಯವನ್ನು ರೈಲ್ವೆ ಮೂಲಕ ಲೋಡ್ ಮಾಡಿ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಜ್ಞರು ಆಹಾರ ಧಾನ್ಯಗಳ ಸಾಗಣೆಯು ಸಮಸ್ಯೆಯಲ್ಲ ಎಂದು ಸೂಚಿಸಿದ್ದಾರೆ, ವಿಶೇಷವಾಗಿ ಈಗ ಸರಕುಗಳ ಚಲನೆ ತೆರೆದುಕೊಂಡಿದೆ. ನಿಜವಾದ ಕಾಳಜಿ ಪಡಿತರ ಚೀಟಿ ಇಲ್ಲದವರ ಬಗ್ಗೆ, ವಿಶೇಷವಾಗಿ ಸಿಕ್ಕಿಬಿದ್ದ ಸಾವಿರಾರು ವಲಸೆ ಕಾರ್ಮಿಕರ ಬಗ್ಗೆ ಎಂದಿದ್ದಾರೆ.

ವಾಸ್ತವವೆಂದರೆ ಹೆಚ್ಚಿನ ಸಂಖ್ಯೆಯ ಜನರು ಇನ್ನೂ ಪಡಿತರ ಚೀಟಿಗಳನ್ನು ಹೊಂದಿಲ್ಲ. ಈ ಜನರು ಹೊಸ ಕುಟುಂಬಗಳನ್ನು ಹೊಂದಿರಬಹುದು, ಕೆಲಸದ ಹುಡುಕಾಟದಲ್ಲಿ ಇತರ ನಗರಗಳಿಗೆ ವಲಸೆ ಹೋಗಿರಬಹುದು ಅಥವಾ ಅವರ ಆಧಾರ್ ಕಾರ್ಡ್‌ಗಳೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗದ ಕಾರಣ ಅವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಿಂದಾಗಿ ಹಲಾವಾರು ಜನರು ತಮ್ಮ ಸ್ಥಿರವಾದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿಕ್ಕಿಬಿದ್ದವರಿಗೆ ರಾಜ್ಯ ವಿಪತ್ತು ನಿಧಿಯಿಂದ ಆಹಾರವನ್ನು ನೀಡಬೇಕು ಎಂದು ಪಾಸ್ವಾನ್ ಹೇಳಿದ್ದರು. “ರಾಜ್ಯ ಸರ್ಕಾರಗಳು ಎಷ್ಟು ಆಹಾರ ಧಾನ್ಯವನ್ನು ತೆಗೆದುಕೊಳ್ಳಬಹುದು – ಗೋಧಿಗೆ ಕಿಲೋಗೆ 21 ರೂ ಮತ್ತು ಅಕ್ಕಿಗೆ 22 ರೂ. – ಮತ್ತು ಜನರಿಗೆ ಮತ್ತಷ್ಟು ವಿತರಿಸಬಹುದು” ಎಂದು ಸಚಿವರು ಹೇಳಿದ್ದರು. ಮೂರು ತಿಂಗಳವರೆಗೆ ಪ್ರತಿ ಕೆ.ಜಿ.ಗೆ 2 ಅಥವಾ 3 ರೂ.ಗಳಂತೆ ವಿತರಿಸಲಾಗುವ ಉಚಿತ ಪಡಿತರವನ್ನು ನೀಡುವ ಸರ್ಕಾರದ ನಿರ್ಧಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರು ಉಲ್ಲೇಖಿಸಿದ ಬೆಲೆ ಮಾರುಕಟ್ಟೆ ಬೆಲೆಗಿಂತ ಕೆಲವೇ ರೂಪಾಯಿಗಳಷ್ಟಿದೆ ಎಂದು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ಗಮನಸೆಳೆದದಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದಂತೆಯೇ ಸಂಪನ್ಮೂಲಗಳನ್ನು ಹೊಂದಿರದ ಕಾರಣ ರಾಜ್ಯ ಸರ್ಕಾರಗಳು ಅದನ್ನು ಪಾವತಿಸುವುದಿಲ್ಲ.

ಸರ್ಕಾರವು ಕನಿಷ್ಠ ಆರು ತಿಂಗಳವರೆಗೆ ತುರ್ತು ಪಡಿತರ ಚೀಟಿಗಳನ್ನು ಒದಗಿಸಬೇಕು ಮತ್ತು ಮುಂದಿನ 12 ತಿಂಗಳುಗಳ ತಾತ್ಕಾಲಿಕ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರ ಕೊಳೆಗೇರಿಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರಿಕಗೊಳಿಸಬೇಕು ಎಂದು ಜೀನ್ ಡ್ರೀಜ್ ಸಲಹೆ ನೀಡಿದರು.

“ಇದು ಆಹಾರ ದಾಸ್ತಾನುಗಳಲ್ಲಿ ಸಣ್ಣ ಪರಿಣಾಮ ಮಾತ್ರ ಮಾಡುತ್ತದೆ. ಅಸ್ತಿತ್ವದಲ್ಲಿರುವ ಹಂಚಿಕೆಗೆ ಹೋಲಿಸಿದರೆ ಇದಕ್ಕೆ ಹೆಚ್ಚುವರಿ 200 ಲಕ್ಷ ಟನ್ ಆಹಾರ ಧಾನ್ಯಗಳು ಬೇಕಾಗುತ್ತವೆ. ಇದು ಹೆಚ್ಚುವರಿಯಾಗಿ ಇರುವ ಆಹಾರ ದಾಸ್ತಾನಿನ ಅರ್ಧದಷ್ಟು ಆಗುವುದಿಲ್ಲ” ಎಂದು ಡ್ರೋಜ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...