Homeಮುಖಪುಟದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

ದೇಶದಲ್ಲಿ ಆಹಾರಗಳ ದಾಸ್ತಾನು ಸಾಕಷ್ಟಿದೆ, ಆದರೂ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ!

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣಕ್ಕಾಗಿ ಘೋಷಿಸಲಾದ ಲಾಕ್ ಡೌನ್ ನಿಂದಾಗಿ ಬಹಳಷ್ಟು ಬಡವರು ಮತ್ತು ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯಗಳು ಸಿಗದೇ ಸಂಕಷ್ಟದಲ್ಲಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ಮಧ್ಯೆ ಯಾರೂ ಹಸಿವಿನಿಂದ ಬಳಲುತ್ತಿಲ್ಲ ಎಂದು ಹೇಳಿಕೊಳ್ಳಲು ಸರ್ಕಾರ ಹೆಣಗಾಡುತ್ತಿದೆ. ಹಾಗಾದರೆ ವಾಸ್ತವವೇನು? ಭಾರತದಲ್ಲಿನ ಆಹಾರದ ಪ್ರಮಾಣವೆಷ್ಟು? ಹಸಿದವರ ಸಂಖ್ಯೆಯೆಷ್ಟು ಎಂಬುದನ್ನು ಅರಿತುಕೊಳ್ಳಬೇಕಿದೆ.

ಮಾರ್ಚ್ ನಲ್ಲಿ ಭಾರತದ ಆಹಾರ ನಿಗಮ ( FCI) ದಲ್ಲಿನ ದಾಸ್ತಾನು ಸುಮಾರು 770 ಲಕ್ಷ ಟನ್ ಎಂದು ಅಂದಾಜಿಸಲಾಗಿದೆ. ಇದು FCI ನ ಈ ಹಿಂದಿನ ಕಾಪು ದಾಸ್ತಾನು 210 ಲಕ್ಷ ಟನ್ ಗಿಂತ ಮೂರು ಪಟ್ಟು ಹೆಚ್ಚು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಹೆಚ್ಚುವರಿ ಆಹಾರ ಧಾನ್ಯಗಳ ಬಗ್ಗೆ ಹೇಳಿದ್ದಾರೆ.

“ಗೊಡೌನ್‌ಗಳಲ್ಲಿ ನಮಗೆ ಆಹಾರ ಧಾನ್ಯದ ದಾಸ್ತಾನು ಕೊರತೆಯಿಲ್ಲ ಮತ್ತು ಅಗತ್ಯವಿರುವದಕ್ಕಿಂತ ಎರಡು ಪಟ್ಟು ಹೆಚ್ಚು ಸಂಗ್ರಹವಿದೆ” ಎಂದು ಪಾಸ್ವಾನ್ ಹೇಳಿದ್ದರು.

ಈ ವರ್ಷ, ಭಾರತವು ಪ್ರಮುಖ ಚಳಿಗಾಳದ ಬೆಳೆಯಾದ 106.21 ಮಿಲಿಯನ್ ಟನ್ ಗೋಧಿ ಕೊಯ್ಲು ಮಾಡಲು ಸಜ್ಜಾಗಿದೆ. ಫೆಬ್ರವರಿಯಲ್ಲಿ ಬಿಡುಗಡೆಯಾದ ಸರ್ಕಾರದ ಎರಡನೇ ಮುಂಗಡ ಅಂದಾಜಿನ ಪ್ರಕಾರ, ದ್ವಿದಳ ಧಾನ್ಯಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಒಟ್ಟು ಚಳಿಗಾಳದ ಆಹಾರ ಧಾನ್ಯಗಳನ್ನು 149.60 ಮಿಲಿಯನ್ ಟನ್ ಎಂದು ನಿರೀಕ್ಷಿಸಲಾಗಿದೆ, ಇದು ಕಳೆದ ವರ್ಷಕ್ಕಿಂತ ಶೇಕಡಾ 4.10 ರಷ್ಟು ಹೆಚ್ಚಾಗಿದೆ.

“ಇದು ಹುಚ್ಚು. ಭಾರತದಲ್ಲಿ ಅಂತಹ ಶೇಖರಣಾ ಮಟ್ಟಗಳು ಎಂದಿಗೂ ಇರಲಿಲ್ಲ. FCI ಗೆ ಆ ಮಟ್ಟಿನ ಶೇಖರಣಾ ಸಾಮರ್ಥ್ಯವಿಲ್ಲ” ಎಂದು ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಜ್ಞಾನಿ ಜೀನ್ ಡ್ರೀಜ್ ಹೇಳಿದ್ದಾರೆ.

ಆಹಾರ ಮತ್ತು ವ್ಯಾಪಾರ ನೀತಿ ವಿಶ್ಲೇಷಕ ದೇವಿಂದರ್ ಶರ್ಮಾ “ಅಂದಾಜಿನ ಪ್ರಕಾರ ಜುಲೈವರೆಗೆ ಆಹಾರ ದಾಸ್ತಾನು ಇರುವ ಕಾರಣದಿಂದಾಗಿ ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಸುರಕ್ಷಿತ ಸ್ಥಾನದಲ್ಲಿದೆ” ಎಂದು ಹೇಳಿದ್ದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

“ಕನಿಷ್ಠ ಒಂದು ವರ್ಷದವರೆಗೆ ಇಡೀ ರಾಷ್ಟ್ರಕ್ಕೆ ಆಹಾರ ಸರಬರಾಜು ಮಾಡುವ ಬಗ್ಗೆ ನಾವು ಚಿಂತಿಸಬೇಕಾಗಿಲ್ಲ. ಈ ರೀತಿಯಾಗಿರದಿದ್ದರೆ ನಾವು ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದ್ದೆವು, ಒಂದು ಸಾಂಕ್ರಾಮಿಕ ಮತ್ತು ಇನ್ನೊಂದು ಹಸಿವು” ಎಂದು ಅವರು ವಿವರಿಸಿದರು.

ಆದರೆ ದುರದೃಷ್ಟವಶಾತ್, ಆಹಾರ ದಾಸ್ತಾನಿನಲ್ಲಿ ಈ ಹಿಂದಿನ ಕಾಪು ದಾಸ್ತಾನು ಇದ್ದ ಹೊರತಾಗಿಯೂ ಭಾರತ ಇನ್ನೂ ಎರಡು ವಿಷಯಗಳ ವಿರುದ್ಧ ಹೋರಾಡುತ್ತಿದೆ ಎಂದು ಅವರು ಹೇಳಿದರು. “ನಾವು ಆಹಾರ ದಾಸ್ತಾನು ಹೊಂದಿರುವಾಗ ಯಾಕೆ ಚಿಂತೆ ಮಾಡಬೇಕಾಗಿದೆ? ಈ ದೇಶದಲ್ಲಿ ಹಸಿವು ಬರದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ”ಎಂದು ಶರ್ಮಾ ಹೇಳಿದ್ದಾರೆ.

ಅಸಾಧಾರಣ ಬಿಕ್ಕಟ್ಟುಗಳಿಗೆ ಅಸಾಧಾರಣ ಪರಿಹಾರಗಳು ಬೇಕಾಗುತ್ತವೆ… ಹಸಿವಿನಿಂದ ಯಾರು ಬಳಲುತ್ತಿದ್ದಾರೋ ಅವರಿಗೆ ಈ ದಾಸ್ತಾನುಗಳನ್ನು ತೆರೆಯಿರಿ. ರಾಷ್ಟ್ರವನ್ನು ಪೋಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ದೇವಿಂದರ್ ಶರ್ಮಾ ಹೇಳಿದ್ದಾರೆ.

ಮುಖ್ಯವಾಗಿ ಆಹಾರ-ಸಬ್ಸಿಡಿ ಅಕೌಂಟಿಂಗ್‌ಗೆ ಸಂಬಂಧಿಸಿರುವ ಅಸಂಗತತೆಯು, ಪರಿಸ್ಥಿತಿಯನ್ನು ನಿಭಾಯಿಸುವಾಗ ಕೇಂದ್ರದ ಮೇಲೆ ಪರಿಣಾಮ ಬೀರುವ ವಿವಿಧ ಸಮಸ್ಯೆಗಳನ್ನು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ವಿವರಿಸಿದ್ದಾರೆ. “ಆರ್ಥಿಕ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೆಚ್ಚುವರಿ ದಾಸ್ತಾನುಗಳನ್ನು ಲೋಡ್ ಮಾಡಿ ಅದನ್ನು ರಾಜ್ಯಕ್ಕೆ ಕೊಡುವುದರಿಂದ ಏನೂ ಖರ್ಚಾಗುವುದಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರಲ್ಲದೆ, “ನಾವು ಶೂನ್ಯವಾಗಿರುವ ಆರ್ಥಿಕ ವೆಚ್ಚದ ಬಗ್ಗೆ ಯೋಚಿಸಬಾರದು. ಸಾರಿಗೆಯಲ್ಲಿ ಸಣ್ಣ ಆರ್ಥಿಕ ವೆಚ್ಚವಿರಬಹುದು, ” ಎಂದಿದ್ದಾರೆ.

ಏಪ್ರಿಲ್ 13 ರಂದು ಪಾಸ್ವಾನ್ ಅವರು ಲಾಕ್ ಡೌನ್ ಮಾಡುವ ಮೊದಲು ಸುಮಾರು 30 ಲಕ್ಷ ಟನ್ ಆಹಾರ ಧಾನ್ಯವನ್ನು ರೈಲ್ವೆ ಮೂಲಕ ಲೋಡ್ ಮಾಡಿ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಜ್ಞರು ಆಹಾರ ಧಾನ್ಯಗಳ ಸಾಗಣೆಯು ಸಮಸ್ಯೆಯಲ್ಲ ಎಂದು ಸೂಚಿಸಿದ್ದಾರೆ, ವಿಶೇಷವಾಗಿ ಈಗ ಸರಕುಗಳ ಚಲನೆ ತೆರೆದುಕೊಂಡಿದೆ. ನಿಜವಾದ ಕಾಳಜಿ ಪಡಿತರ ಚೀಟಿ ಇಲ್ಲದವರ ಬಗ್ಗೆ, ವಿಶೇಷವಾಗಿ ಸಿಕ್ಕಿಬಿದ್ದ ಸಾವಿರಾರು ವಲಸೆ ಕಾರ್ಮಿಕರ ಬಗ್ಗೆ ಎಂದಿದ್ದಾರೆ.

ವಾಸ್ತವವೆಂದರೆ ಹೆಚ್ಚಿನ ಸಂಖ್ಯೆಯ ಜನರು ಇನ್ನೂ ಪಡಿತರ ಚೀಟಿಗಳನ್ನು ಹೊಂದಿಲ್ಲ. ಈ ಜನರು ಹೊಸ ಕುಟುಂಬಗಳನ್ನು ಹೊಂದಿರಬಹುದು, ಕೆಲಸದ ಹುಡುಕಾಟದಲ್ಲಿ ಇತರ ನಗರಗಳಿಗೆ ವಲಸೆ ಹೋಗಿರಬಹುದು ಅಥವಾ ಅವರ ಆಧಾರ್ ಕಾರ್ಡ್‌ಗಳೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗದ ಕಾರಣ ಅವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಿಂದಾಗಿ ಹಲಾವಾರು ಜನರು ತಮ್ಮ ಸ್ಥಿರವಾದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿಕ್ಕಿಬಿದ್ದವರಿಗೆ ರಾಜ್ಯ ವಿಪತ್ತು ನಿಧಿಯಿಂದ ಆಹಾರವನ್ನು ನೀಡಬೇಕು ಎಂದು ಪಾಸ್ವಾನ್ ಹೇಳಿದ್ದರು. “ರಾಜ್ಯ ಸರ್ಕಾರಗಳು ಎಷ್ಟು ಆಹಾರ ಧಾನ್ಯವನ್ನು ತೆಗೆದುಕೊಳ್ಳಬಹುದು – ಗೋಧಿಗೆ ಕಿಲೋಗೆ 21 ರೂ ಮತ್ತು ಅಕ್ಕಿಗೆ 22 ರೂ. – ಮತ್ತು ಜನರಿಗೆ ಮತ್ತಷ್ಟು ವಿತರಿಸಬಹುದು” ಎಂದು ಸಚಿವರು ಹೇಳಿದ್ದರು. ಮೂರು ತಿಂಗಳವರೆಗೆ ಪ್ರತಿ ಕೆ.ಜಿ.ಗೆ 2 ಅಥವಾ 3 ರೂ.ಗಳಂತೆ ವಿತರಿಸಲಾಗುವ ಉಚಿತ ಪಡಿತರವನ್ನು ನೀಡುವ ಸರ್ಕಾರದ ನಿರ್ಧಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರು ಉಲ್ಲೇಖಿಸಿದ ಬೆಲೆ ಮಾರುಕಟ್ಟೆ ಬೆಲೆಗಿಂತ ಕೆಲವೇ ರೂಪಾಯಿಗಳಷ್ಟಿದೆ ಎಂದು ಅರ್ಥಶಾಸ್ತ್ರಜ್ಞ ಜೀನ್ ಡ್ರೀಜ್ ಗಮನಸೆಳೆದದಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದಂತೆಯೇ ಸಂಪನ್ಮೂಲಗಳನ್ನು ಹೊಂದಿರದ ಕಾರಣ ರಾಜ್ಯ ಸರ್ಕಾರಗಳು ಅದನ್ನು ಪಾವತಿಸುವುದಿಲ್ಲ.

ಸರ್ಕಾರವು ಕನಿಷ್ಠ ಆರು ತಿಂಗಳವರೆಗೆ ತುರ್ತು ಪಡಿತರ ಚೀಟಿಗಳನ್ನು ಒದಗಿಸಬೇಕು ಮತ್ತು ಮುಂದಿನ 12 ತಿಂಗಳುಗಳ ತಾತ್ಕಾಲಿಕ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ನಗರ ಕೊಳೆಗೇರಿಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರಿಕಗೊಳಿಸಬೇಕು ಎಂದು ಜೀನ್ ಡ್ರೀಜ್ ಸಲಹೆ ನೀಡಿದರು.

“ಇದು ಆಹಾರ ದಾಸ್ತಾನುಗಳಲ್ಲಿ ಸಣ್ಣ ಪರಿಣಾಮ ಮಾತ್ರ ಮಾಡುತ್ತದೆ. ಅಸ್ತಿತ್ವದಲ್ಲಿರುವ ಹಂಚಿಕೆಗೆ ಹೋಲಿಸಿದರೆ ಇದಕ್ಕೆ ಹೆಚ್ಚುವರಿ 200 ಲಕ್ಷ ಟನ್ ಆಹಾರ ಧಾನ್ಯಗಳು ಬೇಕಾಗುತ್ತವೆ. ಇದು ಹೆಚ್ಚುವರಿಯಾಗಿ ಇರುವ ಆಹಾರ ದಾಸ್ತಾನಿನ ಅರ್ಧದಷ್ಟು ಆಗುವುದಿಲ್ಲ” ಎಂದು ಡ್ರೋಜ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...