Homeಮುಖಪುಟಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ "ರುದ್ರ ನರ್ತನ"

ಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ “ರುದ್ರ ನರ್ತನ”

- Advertisement -
- Advertisement -

ಆಕೆಯ ಹೆಸರು ಅಮೃತ ವರ್ಷಿಣಿ. ತೆಲಂಗಾಣದ ಮಿರಿಯಾಲಗೂಡ ನಗರದ ಆರ್ಯ-ವೈಶ್ಯ ಸಮಾಜದ ಉದ್ಯಮಿ ಟಿ. ಮಾರುತಿ ರಾವ್‍ನ ಏಕೈಕ ಮಗಳು. ತಂದೆಗೆ ಮಗಳ ಮೇಲಿನ ಪ್ರೀತಿ ಸಹಜ.

(ತನ್ನ ತಂದೆ ಮಾರುತಿ ರಾವ್ ಜೊತೆಗೆ ಅಮೃತ ವರ್ಷಿನಿ)

2018ರ ಜನವರಿಯಲ್ಲಿ ಅಮೃತ ಆಕೆಯ ಸಹಪಾಠಿ ಪ್ರಣಯ್‍ ಕುಮಾರ್ ಎಂಬ ದಲಿತ ಕ್ರಿಶ್ಚಿಯನ್ ಹುಡುಗನನ್ನು ಮನೆ ಬಿಟ್ಟು ಹೋಗಿ ಮದುವೆ ಆದಳು. ಹುಡುಗರಿಬ್ಬರೂ ಪ್ರೀತಿಸುತ್ತಿದ್ದರು, ಆಕೆಯ ಮನೆಯಲ್ಲಿ ವಿರೋಧ, ಬೆದರಿಕೆಗಳು. ದಿಟ್ಟವಾಗಿ ಎದುರಿಸಿ ಹೊರನಡೆದು ಮದುವೆ ಆದಳು. ಪ್ರಣಯ್ ಅವರ ಮನೆಯವರೇ ನಿಂತು ಮದುವೆ ಮಾಡಿದರು, ಅವರ ಜೊತೆಯೇ ಜೀವನ ನಡೆಸಲಾರಂಭಿಸಿದಳು. ಕೆಲ ತಿಂಗಳಿನಲ್ಲಿ ಆಕೆ ಬಸಿರಾದಳು. ಇದೇ ಸಂದರ್ಭದಲ್ಲಿ ಆಕೆಯ ಕುಟುಂಬ ಕೈಚಾಚಿತು. ಸಹಜವಾಗಿಯೇ ಹುಡುಗಿ ತಾಯಿಯ ಆಸರೆಗೆ ಹಾತೊರೆಯಿತು. ತಾಯಿಯ ಜೊತೆ ಬಾಂಧವ್ಯ ಮತ್ತೆ ಶುರುವಾಯಿತು. ಆದರೆ ಇದರ ಹಿಂದಿನ ವಿಷ ಅರಿಯದಾದಳು ಹುಡುಗಿ.

(ಪ್ರಣಯ್ ಮತ್ತು ಅಮೃತ ವರ್ಷಿನಿ)

ಸೆಪ್ಟೆಂಬರ್ 2018. ಪ್ರಣಯ್ ಮತ್ತು ಅಮೃತ ವೈದ್ಯರನ್ನು ಕಾಣಲು ಹೋಗಿದ್ದಾಗ ಆಕೆಯ ಮುಂದೆಯೇ ಪ್ರಿಯಕರ ಪ್ರಣಯ್‍ನನ್ನು ಭೀಕರವಾಗಿ ಕೊಚ್ಚಿ ಕೊಲೆಗೈಯ್ಯಲಾಯಿತು. ಸುಪಾರಿ ಕೊಟ್ಟಿದ್ದು ಆಕೆಯ ತಂದೆ ಮಾರುತಿರಾವ್. ತಾಯಿಯ ಜೊತೆ ಅಮೃತ ನಡೆಸಿದ್ದ ಸಂಭಾಷಣೆಗಳೇ ಆಕೆಗೆ ಮುಳುವಾದವು. ಈ ಕರೆಗಳಿಂದ ಅಮೃತ-ಪ್ರಣಯ್ ಎಲ್ಲಿದ್ದಾರೆಂಬ ಮಾಹಿತಿ ಮಾರುತಿರಾವ್ ಮತ್ತು ಕೊಲೆಗಾರರಿಗೆ ಸಿಕ್ಕಿತ್ತು. ಮಾರುತಿರಾವ್ ಪ್ರಣಯ್‍ನನ್ನು ಕೊಲ್ಲಲು ಒಂದು ಕೋಟಿ ಸುಪಾರಿ ಕೊಟ್ಟದ್ದ. ತನ್ನ ತಂದೆತಾಯಿಯೂ ಸಹ ತನ್ನ ಮದುವೆಯನ್ನು ಒಪ್ಪಿಕೊಂಡರು, ಇನ್ನೆಲ್ಲವೂ ಸರಿಹೋಗುತ್ತದೆ ಎಂದು ಕನಸಿದ್ದಳು ಹುಡುಗಿ. ತಾನೆಣಿಸಲಾರದ ದುರಂತವಾಯಿತು ಬದುಕು. ತನ್ನ ತಂದೆಯನ್ನು ಗಲ್ಲಿಗೇರಿಸಬೇಕೆಂದು ಚೀರಿದಳು ಬಸುರಿ ಹುಡುಗಿ. ಜನವರಿ 2019ರಲ್ಲಿ ಗಂಡುಮಗುವಿಗೆ ಜನ್ಮ ನೀಡಿದಳು ಅಮೃತ. ಪ್ರಣಯ್ ಅವರ ಕುಟುಂಬದ ಜೊತೆ ಅವರ ಮಗಳಾಗಿ ಜೀವನ ನಡೆಸುತ್ತಿದ್ದಾಳೆ. ಅವರ ಮನಸ್ಸು ನಿಜಕ್ಕೂ ದೊಡ್ಡದು.

ಈಗ ಜಾಮೀನಿನ ಮೇಲೆ ಹೊರಬಂದಿದ್ದ ಮಾರುತಿರಾವ್ ಹೈದರಾಬಾದಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದ ಅಮೃತ ಬಹುಶಃ ಅಪ್ಪನಿಗೆ ತಾನು ಮಾಡಿದ ತಪ್ಪಿನ ಅರಿವಾಗಿ ಪಶ್ಚಾತ್ತಾಪವಾಗಿ ಹೀಗೆ ಮಾಡಿಕೊಂಡಿರಬಹುದು ಎಂದವಳ ದನಿಯಲ್ಲಿ ದುಗುಡ, ಹತಾಶೆಯ ಜೊತೆ ಒಂದು ಸಣ್ಣ ಆಸೆಯೂ ಇದ್ದಂತಿತ್ತು. ಮಾರುತಿರಾವ್ ತನ್ನ ಜೀವನ ಅಂತ್ಯಗೊಳಿಸಿದ್ದು ಹೈದರಾಬಾದಿನ ಆರ್ಯವೈಶ್ಯ ಭವನದ ರೂಂ ನಂಬರ್ 306ರಲ್ಲಿ! ಆತ ಎರಡು ಸಾಲಿನ ಪತ್ರ ಬರೆದಿಟ್ಟು ಹೋಗಿದ್ದಾನೆ. “ಗಿರಿಜಾ ನನ್ನು ಕ್ಷಮಿಂಚು. ತಲ್ಲಿ ಅಮೃತ ಅಮ್ಮ ದೆಗ್ಗರಿಕಿ ವೆಳ್ಳಿಪೋ” – “ಗಿರಿಜಾ (ಆತನ ಪತ್ನಿ) ನನ್ನನ್ನು ಕ್ಷಮಿಸು. ತಾಯಿ ಅಮೃತ ಅಮ್ಮನ ಬಳಿ ಹೋಗಿಬಿಡು”. ಅಮೃತಳ ಆಸೆ ಹುಸಿಯಾಗಿತ್ತು. ಮಾರುತಿರಾವ್‍ಗೆ ಸಾಯುವಾಗಲೂ ಜಾತಿಯೇ ಮುಖ್ಯವಾಗಿತ್ತು, ಆತ ಸತ್ತದ್ದು ಆರ್ಯವೈಶ್ಯ ಭವನದಲ್ಲಿ ಮತ್ತು ಆ ಕಡೆಯ ಕ್ಷಣದಲ್ಲೂ ಆತನ ಮಗಳು ದಲಿತನೊಬ್ಬನ ಮನೆಯಲ್ಲಿರುವುದು ಆತನಿಗೆ ಸಹಿಸಿಕೊಳ್ಳಲಾಗಲಿಲ್ಲ!

(ತನ್ನ ಮಗುವಿನೊಂದಿಗೆ ಅಮೃತ ವರ್ಷಿನಿ)

ಮಾರುತಿರಾವ್‍ನ ಜಾತಿ ವ್ಯಾಮೋಹ ಮತ್ತು ಹಿಂಸೆಯ ಪ್ರತಿಫಲನ ಈ ದುರಂತ ಕಥೆಗೆ ಸಮಾಜ, ಮಾಧ್ಯಮ ಸ್ಪಂದಿಸಿದ ರೀತಿಯಲ್ಲೂ ಕಾಣಬಹುದು. ಬಹುತೇಕ ಟಿವಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಮೃತಳನ್ನು ವಿಲನ್ ಆಗಿ ಚಿತ್ರಿಸಲಾಗಿದೆ! ಟಿವಿ-9 ತೆಲುಗು ವಾಹಿನಿಯ ಪ್ರಮುಖ ಆಂಕರ್ ರಜನೀಕಾಂತ್ ವಲ್ಲೆಲಚೆರುವು ಟ್ವೀಟ್ ಮಾಡಿದ್ದಾರೆ: “ಆತನ ನೆಗೆಟಿವ್ ಗುಣಗಳನ್ನು ಪಕ್ಕಕ್ಕಿಟ್ಟರೆ, ಮಾರುತಿ ರಾವ್‍ಗೆ ಸಾಯಿಸೋ ಅಷ್ಟು ಮತ್ತು ಸತ್ತು ಹೋಗೋಷ್ಟು ಮಗಳ ಬಗ್ಗೆ ಪ್ರೀತಿ ಇತ್ತು”. ಸಾಮಾಜಿಕ ಮಾಧ್ಯಮಗಳಲ್ಲಿ ಇವತ್ತಲ್ಲ ಮಾರುತಿ ರಾವ್ ಪ್ರಣಯ್‍ನನ್ನು ಕೊಲ್ಲಿಸಿ ಜೈಲು ಸೇರಿದಾಗಲೇ ಆತನಿಗೆ ಅಭಿಮಾನಿ ಪೇಜುಗಳು ಹುಟ್ಟುಕೊಂಡಿದ್ದವು ಮತ್ತು ಇವರೆಲ್ಲರೂ ಆತನ ಮಗಳ ಮೇಲಿನ ಪ್ರೇಮವನ್ನೇ ಐಡಿಯಲೈಸ್ ಮಾಡುತ್ತಿದ್ದರು. ಆಗ ಇದು ಎಷ್ಟು ತಾರಕಕ್ಕೆ ಹೋಗಿತ್ತೆಂದರೆ ಅಮೃತ ತಂದೆ-ತಾಯಿಗಳು ಅವರ ಸುಖಕ್ಕೆ ಸೆಕ್ಸ್‍ನಲ್ಲಿ ಭಾಗವಹಿಸುವುದರಿಂದ ಮಕ್ಕಳಾಗುತ್ತಾರೆಯೇ ಹೊರತು ನಮ್ಮನ್ನು ಹುಟ್ಟಿಸಬೇಕೆಂದೇನೂ ಅಲ್ಲ ಅಂದಿದ್ದಳು ಮತ್ತು ಅದನ್ನು ಎಲ್ಲರೂ ಖಂಡಿಸಿ ದೊಡ್ಡ ರಾದ್ಧಾಂತ ಮಾಡಿದ್ದರು. ಮೊನ್ನೆ ಎಷ್ಟೇ ಆಗಲಿ ತಂದೆ ಅಲ್ಲವೇ ಅಮೃತ ಶವ ನೋಡಲು ಹೋದಾಗ ಜನ ಘೋಷಣೆ ಕೂಗಿ ಆಕೆಯನ್ನು ಹೊರದೂಡಿಬಿಟ್ಟರು. ಇವರೆಲ್ಲರ ಪ್ರಕಾರ ಇಡೀ ದುರಂತ ಕತೆಗೆ ಆಕೆಯೇ ಕಾರಣ! ತಂದೆತಾಯಿಯ ಪ್ರೀತಿಯನ್ನು ಮನಗಾಣದೆ, ತನ್ನ (ತೆಳು ಎಂದು ಅವರ ಭಾವನೆಯೆ?) ಪ್ರೀತಿಗೇ ಕಟ್ಟುಬಿದ್ದು ಇಡೀ ದುರಂತಕ್ಕೆ ಕಾರಣವಾಗಿಬಿಟ್ಟಳು ಎಂದು ಮಾಧ್ಯಮಗಳೂ ಹಲುಬುತ್ತಿರುವುದು ಅವರ ಜಾತಿ ಮನಸ್ಥಿತಿ ಮತ್ತು ಮುಸುಕಿಗೆ ಸ್ಪಷ್ಟ ನಿದರ್ಶನ.

ಮಾರುತಿರಾವ್‍ಗೆ ಪ್ರೀತಿ ಇದ್ದದ್ದು ತನ್ನ ಮಗಳ ಮೇಲೆಯೋ ಇಲ್ಲ ತನ್ನ ಜಾತಿ ಮತ್ತು ಅದರ ಸುತ್ತ ಆತ ಕಟ್ಟುಕೊಂಡಿದ್ದ ತಾನು ಮೇಲೆಂಬ ಹುಸಿ ಭಾವನೆಗಳಿಗೋ? ಆತ ನಿಜಕ್ಕೂ ಆತನ ಮಗಳನ್ನು ಮಾಧ್ಯಮಗಳು ಕಟ್ಟಿಕೊಡಲು ಪ್ರಯತ್ನಿಸುತ್ತಿರುವಂತೆ ಅನ್‍ಕಂಡೀಷನಲ್ ಆಗಿ ಪ್ರೀತಿಸುತ್ತಿದ್ದದ್ದೇ ನಿಜವಾದರೆ ಆಕೆಯ ಆಯ್ಕೆ ಮತ್ತು ಇಷ್ಟವನ್ನು ಗೌರವಿಸಿ ಆಕೆ ಖುಷಿಯಾಗಿರುವುದೇ ತನಗೆ ಮುಖ್ಯ ಎಂದಿರುತ್ತಿದ್ದ. ಬಸುರಿ ಮಗಳ ಮುಂದೆ ಆಕೆಯ ಗಂಡನನ್ನು ಕೊಚ್ಚಿ ಕೊಲೆಗೈಯ್ಯಿಸುತ್ತಿರಲಿಲ್ಲ. ಅದು ಮಗಳ ಮೇಲಿನ ಪ್ರೀತಿ ಅಲ್ಲ. ಅತ್ಯಂತ ಪಿತೃಪ್ರಧಾನ ರೀತಿಯಲ್ಲಿ ಆತ ಮಗಳನ್ನು ತನ್ನ ಸ್ವತ್ತು ಎಂದೇ ನೋಡಿದ್ದ. ಆತನ “ಕುಲಗೌರವ”ವನ್ನು ಆಕೆ ಹಾಳು ಮಾಡಿದಳೆಂದೆಣಿಸಿದ್ದ. ಆದರೆ ಮಗಳ ಮೇಲೆ ಕೋಪ ಬರಲಿಲ್ಲ. ಆಕೆಯನ್ನು ಈ ದಲಿತ ಹುಡುಗ ತಲೆಕೆಡಿಸಿದ್ದಾನೆ ಎಂದೆಣಿಸಿರಬೇಕು, ಆತನನ್ನು ಸಾಯಿಸಿಬಿಟ್ಟ. ಆತ ಮಗಳಿಗೆ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳಬಹುದೆಂದು ಅನ್ನಿಸಿರಲೇ ಇಲ್ಲ ಎನಿಸುತ್ತೆ. ಆಕೆಗೆ ತನ್ನ ಬಾಳಸಂಗಾತಿಯನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವೂ ಇಲ್ಲ ಮತ್ತು ಆಕೆ ಮಾಡಿದ ಆಯ್ಕೆ ಸರಿಯಾದುದಲ್ಲ, ಆಕೆಯನ್ನು ದಿಕ್ಕುತಪ್ಪಿಸಲಾಗಿದೆ ಎಂಬ ನಿರ್ಣಯಗಳು ಮಾರುತಿ ರಾವ್‍ನ ನಡವಳಿಕೆಗಳ ಹಿಂದೆ ಸ್ಪಷ್ಟವಾಗಿ ಕಾಣಿಸುತ್ತಿವೆ. ಅದು ಮಗಳ ಬಗೆಗಿನ ಆರೋಗ್ಯಕರ ಪ್ರೀತಿ ಖಂಡಿತ ಅಲ್ಲ, ಮೀರಲಾರದ ತನ್ನ ವ್ಯರ್ಥ, ಅರ್ಥವಿಲ್ಲದ ಜಾತಿ ಮತ್ತು ಪಿತೃಪ್ರಧಾನ ಗರ್ವ ಅಷ್ಟೆ.

ಮಾರಿ ಸೆಲ್ವರಾಜ್ ಅವರ ನಿರ್ದೇಶನದ ಪರಿಯೆರುಂ ಪೆರುಮಾಳ್ ಚಿತ್ರದಲ್ಲಿ ಒಂದು ವಿಲಕ್ಷಣ ಪಾತ್ರವಿದೆ. ಮೇಲ್ಜಾತಿಯ ಮಕ್ಕಳನ್ನು ಪ್ರೀತಿಸುವ ಕೆಳಜಾತಿಯವರನ್ನು ಸಾಕ್ಷಿ ಉಳಿಯದೆ ಕೊಲ್ಲುವ ಮುದುಕನ ಪಾತ್ರ. ಚಿತ್ರದುದ್ದಕ್ಕೂ ಆತ ಅನೇಕರನ್ನು ಹೀಗೆ ಕೊಲ್ಲುತ್ತಾನೆ, “ಕುಲಗೌರವರ”ದ ಹೆಸರಿನಲ್ಲಿ. ಚಿತ್ರದ ನಾಯಕ ಪೆರುಮಾಳ್ ದಲಿತ, ಮೇಲ್ಜಾತಿಯ ಹುಡುಗಿಯನ್ನು ಪ್ರೀತಿಸುತ್ತಿದ್ದಾನೆ. ಆ ಹುಡುಗಿಯ ಸೋದರ ಸಂಬಂಧಿ ಮತ್ತು ಇಬ್ಬರೂ ಪ್ರೇಮಿಗಳ ಸಹಪಾಠಿ ಮತ್ತು ಹುಡುಗಿಯ ತಂದೆ ಇದೇ ಮುದುಕನಿಗೆ ಪೆರುಮಾಳ್‍ನನ್ನು ಕೊಲ್ಲಲು ಸುಪಾರಿ ನೀಡುತ್ತಾರೆ. ಈ ಮುದುಕ ಪೆರುಮಾಳ್‍ಗೆ ಪರಿಚಿತನೇ. ಆತನ ಸೈಕಲ್‍ನಲ್ಲೇ ಡ್ರಾಪ್ ಕೇಳಿ ಹತ್ತಿಕೊಳ್ಳುತ್ತಾನೆ. ಕಡೆಗೆ ಆತನನ್ನು ರೈಲ್ವೆಹಳಿಗಳ ಮೇಲೆ ನೂಕಿ ರೈಲಿಗೆ ತಲೆಕೊಡಿಸಿ ಕೊಲ್ಲಲೆತ್ನಿಸುತ್ತಾನೆ. ಪೆರುಮಾಳ್ ಮೊದಲ ಬಾರಿಗೆ ತಿರುಗಿ ಬಿದ್ದು ಮುದುಕ ಮತ್ತು ತನ್ನ ಸಹಪಾಠಿಗೆ ಹೊಡೆಯುತಾನೆ. ಅಷ್ಟರಲ್ಲಿ ಹುಡುಗಿಯ ತಂದೆ ಅಲ್ಲಿಗೆ ಕಾರಿನಲ್ಲಿ ಬರುತ್ತಾನೆ. ಒಂದು ಶಾಟ್‍ನಲ್ಲಿ ಕಾರೊಳಗೆ ಕೂತ ತಂದೆ, ಡಾಶ್‍ಬೋರ್ಡ್‍ನಲ್ಲಿರುವ ಮಚ್ಚು ಮತ್ತು ಹೊರಗೆ ನಿಂತಿರುವ ಪೆರುಮಾಳ್ ಇದ್ದಾರೆ. ತಂದೆ ಮಚ್ಚಿಗೆ ಕೈಹಾಕುವುದಿಲ್ಲ. ಮುದುಕ ಸೋತಿದ್ದಾನೆ, ರೈಲಿಗೆ ಎದುರು ಕೂತು ತಾನೇ ಸಾಯುತ್ತಾನೆ. ಆ ಮುದುಕ ಜಾತಿಯ ವೃಥಾ ಗರ್ವ ಮತ್ತು ಅದ ಸ್ಥಾಪಿಸಲು ಹಿಂಸೆಗೆ ಹಪಹಪಿಸುವ ಮನಸ್ಸು.

ಆದರೆ ಇವತ್ತು ಅದೇ ತಮಿಳುನಾಡಿನಲ್ಲಿ ದ್ರೌಪದಿ ಎಂಬ ಚಲನಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ದಲಿತ ಹುಡುಗರು “ಲವ್ ಜಿಹಾದ್”ನ ಮಾದರಿಯಲ್ಲಿ ಮೇಲ್ಜಾತಿಗಳ ಹೆಣ್ಣುಮಕ್ಕಳನ್ನು ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮದುವೆ ಆಗುತ್ತಿದ್ದಾರೆ ಎಂಬಂತಹ ಕಥಾಹಂದರವಿದೆ. ಅದು ಹೇಗೆ ಈ ಚಿತ್ರ ಸೆನ್ಸಾರ್ ಆಗಿ ಬಿಡುಗಡೆಯಾಯಿತೋ ದೇವರೇ ಬಲ್ಲ. ಜಾತ್ಯಹಂಕಾರಗಳ ರುದ್ರನರ್ತನ ಇನ್ನೂ ನಡೆದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...