Homeಮುಖಪುಟಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ "ರುದ್ರ ನರ್ತನ"

ಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ “ರುದ್ರ ನರ್ತನ”

- Advertisement -
- Advertisement -

ಆಕೆಯ ಹೆಸರು ಅಮೃತ ವರ್ಷಿಣಿ. ತೆಲಂಗಾಣದ ಮಿರಿಯಾಲಗೂಡ ನಗರದ ಆರ್ಯ-ವೈಶ್ಯ ಸಮಾಜದ ಉದ್ಯಮಿ ಟಿ. ಮಾರುತಿ ರಾವ್‍ನ ಏಕೈಕ ಮಗಳು. ತಂದೆಗೆ ಮಗಳ ಮೇಲಿನ ಪ್ರೀತಿ ಸಹಜ.

(ತನ್ನ ತಂದೆ ಮಾರುತಿ ರಾವ್ ಜೊತೆಗೆ ಅಮೃತ ವರ್ಷಿನಿ)

2018ರ ಜನವರಿಯಲ್ಲಿ ಅಮೃತ ಆಕೆಯ ಸಹಪಾಠಿ ಪ್ರಣಯ್‍ ಕುಮಾರ್ ಎಂಬ ದಲಿತ ಕ್ರಿಶ್ಚಿಯನ್ ಹುಡುಗನನ್ನು ಮನೆ ಬಿಟ್ಟು ಹೋಗಿ ಮದುವೆ ಆದಳು. ಹುಡುಗರಿಬ್ಬರೂ ಪ್ರೀತಿಸುತ್ತಿದ್ದರು, ಆಕೆಯ ಮನೆಯಲ್ಲಿ ವಿರೋಧ, ಬೆದರಿಕೆಗಳು. ದಿಟ್ಟವಾಗಿ ಎದುರಿಸಿ ಹೊರನಡೆದು ಮದುವೆ ಆದಳು. ಪ್ರಣಯ್ ಅವರ ಮನೆಯವರೇ ನಿಂತು ಮದುವೆ ಮಾಡಿದರು, ಅವರ ಜೊತೆಯೇ ಜೀವನ ನಡೆಸಲಾರಂಭಿಸಿದಳು. ಕೆಲ ತಿಂಗಳಿನಲ್ಲಿ ಆಕೆ ಬಸಿರಾದಳು. ಇದೇ ಸಂದರ್ಭದಲ್ಲಿ ಆಕೆಯ ಕುಟುಂಬ ಕೈಚಾಚಿತು. ಸಹಜವಾಗಿಯೇ ಹುಡುಗಿ ತಾಯಿಯ ಆಸರೆಗೆ ಹಾತೊರೆಯಿತು. ತಾಯಿಯ ಜೊತೆ ಬಾಂಧವ್ಯ ಮತ್ತೆ ಶುರುವಾಯಿತು. ಆದರೆ ಇದರ ಹಿಂದಿನ ವಿಷ ಅರಿಯದಾದಳು ಹುಡುಗಿ.

(ಪ್ರಣಯ್ ಮತ್ತು ಅಮೃತ ವರ್ಷಿನಿ)

ಸೆಪ್ಟೆಂಬರ್ 2018. ಪ್ರಣಯ್ ಮತ್ತು ಅಮೃತ ವೈದ್ಯರನ್ನು ಕಾಣಲು ಹೋಗಿದ್ದಾಗ ಆಕೆಯ ಮುಂದೆಯೇ ಪ್ರಿಯಕರ ಪ್ರಣಯ್‍ನನ್ನು ಭೀಕರವಾಗಿ ಕೊಚ್ಚಿ ಕೊಲೆಗೈಯ್ಯಲಾಯಿತು. ಸುಪಾರಿ ಕೊಟ್ಟಿದ್ದು ಆಕೆಯ ತಂದೆ ಮಾರುತಿರಾವ್. ತಾಯಿಯ ಜೊತೆ ಅಮೃತ ನಡೆಸಿದ್ದ ಸಂಭಾಷಣೆಗಳೇ ಆಕೆಗೆ ಮುಳುವಾದವು. ಈ ಕರೆಗಳಿಂದ ಅಮೃತ-ಪ್ರಣಯ್ ಎಲ್ಲಿದ್ದಾರೆಂಬ ಮಾಹಿತಿ ಮಾರುತಿರಾವ್ ಮತ್ತು ಕೊಲೆಗಾರರಿಗೆ ಸಿಕ್ಕಿತ್ತು. ಮಾರುತಿರಾವ್ ಪ್ರಣಯ್‍ನನ್ನು ಕೊಲ್ಲಲು ಒಂದು ಕೋಟಿ ಸುಪಾರಿ ಕೊಟ್ಟದ್ದ. ತನ್ನ ತಂದೆತಾಯಿಯೂ ಸಹ ತನ್ನ ಮದುವೆಯನ್ನು ಒಪ್ಪಿಕೊಂಡರು, ಇನ್ನೆಲ್ಲವೂ ಸರಿಹೋಗುತ್ತದೆ ಎಂದು ಕನಸಿದ್ದಳು ಹುಡುಗಿ. ತಾನೆಣಿಸಲಾರದ ದುರಂತವಾಯಿತು ಬದುಕು. ತನ್ನ ತಂದೆಯನ್ನು ಗಲ್ಲಿಗೇರಿಸಬೇಕೆಂದು ಚೀರಿದಳು ಬಸುರಿ ಹುಡುಗಿ. ಜನವರಿ 2019ರಲ್ಲಿ ಗಂಡುಮಗುವಿಗೆ ಜನ್ಮ ನೀಡಿದಳು ಅಮೃತ. ಪ್ರಣಯ್ ಅವರ ಕುಟುಂಬದ ಜೊತೆ ಅವರ ಮಗಳಾಗಿ ಜೀವನ ನಡೆಸುತ್ತಿದ್ದಾಳೆ. ಅವರ ಮನಸ್ಸು ನಿಜಕ್ಕೂ ದೊಡ್ಡದು.

ಈಗ ಜಾಮೀನಿನ ಮೇಲೆ ಹೊರಬಂದಿದ್ದ ಮಾರುತಿರಾವ್ ಹೈದರಾಬಾದಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದ ಅಮೃತ ಬಹುಶಃ ಅಪ್ಪನಿಗೆ ತಾನು ಮಾಡಿದ ತಪ್ಪಿನ ಅರಿವಾಗಿ ಪಶ್ಚಾತ್ತಾಪವಾಗಿ ಹೀಗೆ ಮಾಡಿಕೊಂಡಿರಬಹುದು ಎಂದವಳ ದನಿಯಲ್ಲಿ ದುಗುಡ, ಹತಾಶೆಯ ಜೊತೆ ಒಂದು ಸಣ್ಣ ಆಸೆಯೂ ಇದ್ದಂತಿತ್ತು. ಮಾರುತಿರಾವ್ ತನ್ನ ಜೀವನ ಅಂತ್ಯಗೊಳಿಸಿದ್ದು ಹೈದರಾಬಾದಿನ ಆರ್ಯವೈಶ್ಯ ಭವನದ ರೂಂ ನಂಬರ್ 306ರಲ್ಲಿ! ಆತ ಎರಡು ಸಾಲಿನ ಪತ್ರ ಬರೆದಿಟ್ಟು ಹೋಗಿದ್ದಾನೆ. “ಗಿರಿಜಾ ನನ್ನು ಕ್ಷಮಿಂಚು. ತಲ್ಲಿ ಅಮೃತ ಅಮ್ಮ ದೆಗ್ಗರಿಕಿ ವೆಳ್ಳಿಪೋ” – “ಗಿರಿಜಾ (ಆತನ ಪತ್ನಿ) ನನ್ನನ್ನು ಕ್ಷಮಿಸು. ತಾಯಿ ಅಮೃತ ಅಮ್ಮನ ಬಳಿ ಹೋಗಿಬಿಡು”. ಅಮೃತಳ ಆಸೆ ಹುಸಿಯಾಗಿತ್ತು. ಮಾರುತಿರಾವ್‍ಗೆ ಸಾಯುವಾಗಲೂ ಜಾತಿಯೇ ಮುಖ್ಯವಾಗಿತ್ತು, ಆತ ಸತ್ತದ್ದು ಆರ್ಯವೈಶ್ಯ ಭವನದಲ್ಲಿ ಮತ್ತು ಆ ಕಡೆಯ ಕ್ಷಣದಲ್ಲೂ ಆತನ ಮಗಳು ದಲಿತನೊಬ್ಬನ ಮನೆಯಲ್ಲಿರುವುದು ಆತನಿಗೆ ಸಹಿಸಿಕೊಳ್ಳಲಾಗಲಿಲ್ಲ!

(ತನ್ನ ಮಗುವಿನೊಂದಿಗೆ ಅಮೃತ ವರ್ಷಿನಿ)

ಮಾರುತಿರಾವ್‍ನ ಜಾತಿ ವ್ಯಾಮೋಹ ಮತ್ತು ಹಿಂಸೆಯ ಪ್ರತಿಫಲನ ಈ ದುರಂತ ಕಥೆಗೆ ಸಮಾಜ, ಮಾಧ್ಯಮ ಸ್ಪಂದಿಸಿದ ರೀತಿಯಲ್ಲೂ ಕಾಣಬಹುದು. ಬಹುತೇಕ ಟಿವಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಮೃತಳನ್ನು ವಿಲನ್ ಆಗಿ ಚಿತ್ರಿಸಲಾಗಿದೆ! ಟಿವಿ-9 ತೆಲುಗು ವಾಹಿನಿಯ ಪ್ರಮುಖ ಆಂಕರ್ ರಜನೀಕಾಂತ್ ವಲ್ಲೆಲಚೆರುವು ಟ್ವೀಟ್ ಮಾಡಿದ್ದಾರೆ: “ಆತನ ನೆಗೆಟಿವ್ ಗುಣಗಳನ್ನು ಪಕ್ಕಕ್ಕಿಟ್ಟರೆ, ಮಾರುತಿ ರಾವ್‍ಗೆ ಸಾಯಿಸೋ ಅಷ್ಟು ಮತ್ತು ಸತ್ತು ಹೋಗೋಷ್ಟು ಮಗಳ ಬಗ್ಗೆ ಪ್ರೀತಿ ಇತ್ತು”. ಸಾಮಾಜಿಕ ಮಾಧ್ಯಮಗಳಲ್ಲಿ ಇವತ್ತಲ್ಲ ಮಾರುತಿ ರಾವ್ ಪ್ರಣಯ್‍ನನ್ನು ಕೊಲ್ಲಿಸಿ ಜೈಲು ಸೇರಿದಾಗಲೇ ಆತನಿಗೆ ಅಭಿಮಾನಿ ಪೇಜುಗಳು ಹುಟ್ಟುಕೊಂಡಿದ್ದವು ಮತ್ತು ಇವರೆಲ್ಲರೂ ಆತನ ಮಗಳ ಮೇಲಿನ ಪ್ರೇಮವನ್ನೇ ಐಡಿಯಲೈಸ್ ಮಾಡುತ್ತಿದ್ದರು. ಆಗ ಇದು ಎಷ್ಟು ತಾರಕಕ್ಕೆ ಹೋಗಿತ್ತೆಂದರೆ ಅಮೃತ ತಂದೆ-ತಾಯಿಗಳು ಅವರ ಸುಖಕ್ಕೆ ಸೆಕ್ಸ್‍ನಲ್ಲಿ ಭಾಗವಹಿಸುವುದರಿಂದ ಮಕ್ಕಳಾಗುತ್ತಾರೆಯೇ ಹೊರತು ನಮ್ಮನ್ನು ಹುಟ್ಟಿಸಬೇಕೆಂದೇನೂ ಅಲ್ಲ ಅಂದಿದ್ದಳು ಮತ್ತು ಅದನ್ನು ಎಲ್ಲರೂ ಖಂಡಿಸಿ ದೊಡ್ಡ ರಾದ್ಧಾಂತ ಮಾಡಿದ್ದರು. ಮೊನ್ನೆ ಎಷ್ಟೇ ಆಗಲಿ ತಂದೆ ಅಲ್ಲವೇ ಅಮೃತ ಶವ ನೋಡಲು ಹೋದಾಗ ಜನ ಘೋಷಣೆ ಕೂಗಿ ಆಕೆಯನ್ನು ಹೊರದೂಡಿಬಿಟ್ಟರು. ಇವರೆಲ್ಲರ ಪ್ರಕಾರ ಇಡೀ ದುರಂತ ಕತೆಗೆ ಆಕೆಯೇ ಕಾರಣ! ತಂದೆತಾಯಿಯ ಪ್ರೀತಿಯನ್ನು ಮನಗಾಣದೆ, ತನ್ನ (ತೆಳು ಎಂದು ಅವರ ಭಾವನೆಯೆ?) ಪ್ರೀತಿಗೇ ಕಟ್ಟುಬಿದ್ದು ಇಡೀ ದುರಂತಕ್ಕೆ ಕಾರಣವಾಗಿಬಿಟ್ಟಳು ಎಂದು ಮಾಧ್ಯಮಗಳೂ ಹಲುಬುತ್ತಿರುವುದು ಅವರ ಜಾತಿ ಮನಸ್ಥಿತಿ ಮತ್ತು ಮುಸುಕಿಗೆ ಸ್ಪಷ್ಟ ನಿದರ್ಶನ.

ಮಾರುತಿರಾವ್‍ಗೆ ಪ್ರೀತಿ ಇದ್ದದ್ದು ತನ್ನ ಮಗಳ ಮೇಲೆಯೋ ಇಲ್ಲ ತನ್ನ ಜಾತಿ ಮತ್ತು ಅದರ ಸುತ್ತ ಆತ ಕಟ್ಟುಕೊಂಡಿದ್ದ ತಾನು ಮೇಲೆಂಬ ಹುಸಿ ಭಾವನೆಗಳಿಗೋ? ಆತ ನಿಜಕ್ಕೂ ಆತನ ಮಗಳನ್ನು ಮಾಧ್ಯಮಗಳು ಕಟ್ಟಿಕೊಡಲು ಪ್ರಯತ್ನಿಸುತ್ತಿರುವಂತೆ ಅನ್‍ಕಂಡೀಷನಲ್ ಆಗಿ ಪ್ರೀತಿಸುತ್ತಿದ್ದದ್ದೇ ನಿಜವಾದರೆ ಆಕೆಯ ಆಯ್ಕೆ ಮತ್ತು ಇಷ್ಟವನ್ನು ಗೌರವಿಸಿ ಆಕೆ ಖುಷಿಯಾಗಿರುವುದೇ ತನಗೆ ಮುಖ್ಯ ಎಂದಿರುತ್ತಿದ್ದ. ಬಸುರಿ ಮಗಳ ಮುಂದೆ ಆಕೆಯ ಗಂಡನನ್ನು ಕೊಚ್ಚಿ ಕೊಲೆಗೈಯ್ಯಿಸುತ್ತಿರಲಿಲ್ಲ. ಅದು ಮಗಳ ಮೇಲಿನ ಪ್ರೀತಿ ಅಲ್ಲ. ಅತ್ಯಂತ ಪಿತೃಪ್ರಧಾನ ರೀತಿಯಲ್ಲಿ ಆತ ಮಗಳನ್ನು ತನ್ನ ಸ್ವತ್ತು ಎಂದೇ ನೋಡಿದ್ದ. ಆತನ “ಕುಲಗೌರವ”ವನ್ನು ಆಕೆ ಹಾಳು ಮಾಡಿದಳೆಂದೆಣಿಸಿದ್ದ. ಆದರೆ ಮಗಳ ಮೇಲೆ ಕೋಪ ಬರಲಿಲ್ಲ. ಆಕೆಯನ್ನು ಈ ದಲಿತ ಹುಡುಗ ತಲೆಕೆಡಿಸಿದ್ದಾನೆ ಎಂದೆಣಿಸಿರಬೇಕು, ಆತನನ್ನು ಸಾಯಿಸಿಬಿಟ್ಟ. ಆತ ಮಗಳಿಗೆ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳಬಹುದೆಂದು ಅನ್ನಿಸಿರಲೇ ಇಲ್ಲ ಎನಿಸುತ್ತೆ. ಆಕೆಗೆ ತನ್ನ ಬಾಳಸಂಗಾತಿಯನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವೂ ಇಲ್ಲ ಮತ್ತು ಆಕೆ ಮಾಡಿದ ಆಯ್ಕೆ ಸರಿಯಾದುದಲ್ಲ, ಆಕೆಯನ್ನು ದಿಕ್ಕುತಪ್ಪಿಸಲಾಗಿದೆ ಎಂಬ ನಿರ್ಣಯಗಳು ಮಾರುತಿ ರಾವ್‍ನ ನಡವಳಿಕೆಗಳ ಹಿಂದೆ ಸ್ಪಷ್ಟವಾಗಿ ಕಾಣಿಸುತ್ತಿವೆ. ಅದು ಮಗಳ ಬಗೆಗಿನ ಆರೋಗ್ಯಕರ ಪ್ರೀತಿ ಖಂಡಿತ ಅಲ್ಲ, ಮೀರಲಾರದ ತನ್ನ ವ್ಯರ್ಥ, ಅರ್ಥವಿಲ್ಲದ ಜಾತಿ ಮತ್ತು ಪಿತೃಪ್ರಧಾನ ಗರ್ವ ಅಷ್ಟೆ.

ಮಾರಿ ಸೆಲ್ವರಾಜ್ ಅವರ ನಿರ್ದೇಶನದ ಪರಿಯೆರುಂ ಪೆರುಮಾಳ್ ಚಿತ್ರದಲ್ಲಿ ಒಂದು ವಿಲಕ್ಷಣ ಪಾತ್ರವಿದೆ. ಮೇಲ್ಜಾತಿಯ ಮಕ್ಕಳನ್ನು ಪ್ರೀತಿಸುವ ಕೆಳಜಾತಿಯವರನ್ನು ಸಾಕ್ಷಿ ಉಳಿಯದೆ ಕೊಲ್ಲುವ ಮುದುಕನ ಪಾತ್ರ. ಚಿತ್ರದುದ್ದಕ್ಕೂ ಆತ ಅನೇಕರನ್ನು ಹೀಗೆ ಕೊಲ್ಲುತ್ತಾನೆ, “ಕುಲಗೌರವರ”ದ ಹೆಸರಿನಲ್ಲಿ. ಚಿತ್ರದ ನಾಯಕ ಪೆರುಮಾಳ್ ದಲಿತ, ಮೇಲ್ಜಾತಿಯ ಹುಡುಗಿಯನ್ನು ಪ್ರೀತಿಸುತ್ತಿದ್ದಾನೆ. ಆ ಹುಡುಗಿಯ ಸೋದರ ಸಂಬಂಧಿ ಮತ್ತು ಇಬ್ಬರೂ ಪ್ರೇಮಿಗಳ ಸಹಪಾಠಿ ಮತ್ತು ಹುಡುಗಿಯ ತಂದೆ ಇದೇ ಮುದುಕನಿಗೆ ಪೆರುಮಾಳ್‍ನನ್ನು ಕೊಲ್ಲಲು ಸುಪಾರಿ ನೀಡುತ್ತಾರೆ. ಈ ಮುದುಕ ಪೆರುಮಾಳ್‍ಗೆ ಪರಿಚಿತನೇ. ಆತನ ಸೈಕಲ್‍ನಲ್ಲೇ ಡ್ರಾಪ್ ಕೇಳಿ ಹತ್ತಿಕೊಳ್ಳುತ್ತಾನೆ. ಕಡೆಗೆ ಆತನನ್ನು ರೈಲ್ವೆಹಳಿಗಳ ಮೇಲೆ ನೂಕಿ ರೈಲಿಗೆ ತಲೆಕೊಡಿಸಿ ಕೊಲ್ಲಲೆತ್ನಿಸುತ್ತಾನೆ. ಪೆರುಮಾಳ್ ಮೊದಲ ಬಾರಿಗೆ ತಿರುಗಿ ಬಿದ್ದು ಮುದುಕ ಮತ್ತು ತನ್ನ ಸಹಪಾಠಿಗೆ ಹೊಡೆಯುತಾನೆ. ಅಷ್ಟರಲ್ಲಿ ಹುಡುಗಿಯ ತಂದೆ ಅಲ್ಲಿಗೆ ಕಾರಿನಲ್ಲಿ ಬರುತ್ತಾನೆ. ಒಂದು ಶಾಟ್‍ನಲ್ಲಿ ಕಾರೊಳಗೆ ಕೂತ ತಂದೆ, ಡಾಶ್‍ಬೋರ್ಡ್‍ನಲ್ಲಿರುವ ಮಚ್ಚು ಮತ್ತು ಹೊರಗೆ ನಿಂತಿರುವ ಪೆರುಮಾಳ್ ಇದ್ದಾರೆ. ತಂದೆ ಮಚ್ಚಿಗೆ ಕೈಹಾಕುವುದಿಲ್ಲ. ಮುದುಕ ಸೋತಿದ್ದಾನೆ, ರೈಲಿಗೆ ಎದುರು ಕೂತು ತಾನೇ ಸಾಯುತ್ತಾನೆ. ಆ ಮುದುಕ ಜಾತಿಯ ವೃಥಾ ಗರ್ವ ಮತ್ತು ಅದ ಸ್ಥಾಪಿಸಲು ಹಿಂಸೆಗೆ ಹಪಹಪಿಸುವ ಮನಸ್ಸು.

ಆದರೆ ಇವತ್ತು ಅದೇ ತಮಿಳುನಾಡಿನಲ್ಲಿ ದ್ರೌಪದಿ ಎಂಬ ಚಲನಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ದಲಿತ ಹುಡುಗರು “ಲವ್ ಜಿಹಾದ್”ನ ಮಾದರಿಯಲ್ಲಿ ಮೇಲ್ಜಾತಿಗಳ ಹೆಣ್ಣುಮಕ್ಕಳನ್ನು ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮದುವೆ ಆಗುತ್ತಿದ್ದಾರೆ ಎಂಬಂತಹ ಕಥಾಹಂದರವಿದೆ. ಅದು ಹೇಗೆ ಈ ಚಿತ್ರ ಸೆನ್ಸಾರ್ ಆಗಿ ಬಿಡುಗಡೆಯಾಯಿತೋ ದೇವರೇ ಬಲ್ಲ. ಜಾತ್ಯಹಂಕಾರಗಳ ರುದ್ರನರ್ತನ ಇನ್ನೂ ನಡೆದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...