Homeಮುಖಪುಟಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ "ರುದ್ರ ನರ್ತನ"

ಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ “ರುದ್ರ ನರ್ತನ”

- Advertisement -
- Advertisement -

ಆಕೆಯ ಹೆಸರು ಅಮೃತ ವರ್ಷಿಣಿ. ತೆಲಂಗಾಣದ ಮಿರಿಯಾಲಗೂಡ ನಗರದ ಆರ್ಯ-ವೈಶ್ಯ ಸಮಾಜದ ಉದ್ಯಮಿ ಟಿ. ಮಾರುತಿ ರಾವ್‍ನ ಏಕೈಕ ಮಗಳು. ತಂದೆಗೆ ಮಗಳ ಮೇಲಿನ ಪ್ರೀತಿ ಸಹಜ.

(ತನ್ನ ತಂದೆ ಮಾರುತಿ ರಾವ್ ಜೊತೆಗೆ ಅಮೃತ ವರ್ಷಿನಿ)

2018ರ ಜನವರಿಯಲ್ಲಿ ಅಮೃತ ಆಕೆಯ ಸಹಪಾಠಿ ಪ್ರಣಯ್‍ ಕುಮಾರ್ ಎಂಬ ದಲಿತ ಕ್ರಿಶ್ಚಿಯನ್ ಹುಡುಗನನ್ನು ಮನೆ ಬಿಟ್ಟು ಹೋಗಿ ಮದುವೆ ಆದಳು. ಹುಡುಗರಿಬ್ಬರೂ ಪ್ರೀತಿಸುತ್ತಿದ್ದರು, ಆಕೆಯ ಮನೆಯಲ್ಲಿ ವಿರೋಧ, ಬೆದರಿಕೆಗಳು. ದಿಟ್ಟವಾಗಿ ಎದುರಿಸಿ ಹೊರನಡೆದು ಮದುವೆ ಆದಳು. ಪ್ರಣಯ್ ಅವರ ಮನೆಯವರೇ ನಿಂತು ಮದುವೆ ಮಾಡಿದರು, ಅವರ ಜೊತೆಯೇ ಜೀವನ ನಡೆಸಲಾರಂಭಿಸಿದಳು. ಕೆಲ ತಿಂಗಳಿನಲ್ಲಿ ಆಕೆ ಬಸಿರಾದಳು. ಇದೇ ಸಂದರ್ಭದಲ್ಲಿ ಆಕೆಯ ಕುಟುಂಬ ಕೈಚಾಚಿತು. ಸಹಜವಾಗಿಯೇ ಹುಡುಗಿ ತಾಯಿಯ ಆಸರೆಗೆ ಹಾತೊರೆಯಿತು. ತಾಯಿಯ ಜೊತೆ ಬಾಂಧವ್ಯ ಮತ್ತೆ ಶುರುವಾಯಿತು. ಆದರೆ ಇದರ ಹಿಂದಿನ ವಿಷ ಅರಿಯದಾದಳು ಹುಡುಗಿ.

(ಪ್ರಣಯ್ ಮತ್ತು ಅಮೃತ ವರ್ಷಿನಿ)

ಸೆಪ್ಟೆಂಬರ್ 2018. ಪ್ರಣಯ್ ಮತ್ತು ಅಮೃತ ವೈದ್ಯರನ್ನು ಕಾಣಲು ಹೋಗಿದ್ದಾಗ ಆಕೆಯ ಮುಂದೆಯೇ ಪ್ರಿಯಕರ ಪ್ರಣಯ್‍ನನ್ನು ಭೀಕರವಾಗಿ ಕೊಚ್ಚಿ ಕೊಲೆಗೈಯ್ಯಲಾಯಿತು. ಸುಪಾರಿ ಕೊಟ್ಟಿದ್ದು ಆಕೆಯ ತಂದೆ ಮಾರುತಿರಾವ್. ತಾಯಿಯ ಜೊತೆ ಅಮೃತ ನಡೆಸಿದ್ದ ಸಂಭಾಷಣೆಗಳೇ ಆಕೆಗೆ ಮುಳುವಾದವು. ಈ ಕರೆಗಳಿಂದ ಅಮೃತ-ಪ್ರಣಯ್ ಎಲ್ಲಿದ್ದಾರೆಂಬ ಮಾಹಿತಿ ಮಾರುತಿರಾವ್ ಮತ್ತು ಕೊಲೆಗಾರರಿಗೆ ಸಿಕ್ಕಿತ್ತು. ಮಾರುತಿರಾವ್ ಪ್ರಣಯ್‍ನನ್ನು ಕೊಲ್ಲಲು ಒಂದು ಕೋಟಿ ಸುಪಾರಿ ಕೊಟ್ಟದ್ದ. ತನ್ನ ತಂದೆತಾಯಿಯೂ ಸಹ ತನ್ನ ಮದುವೆಯನ್ನು ಒಪ್ಪಿಕೊಂಡರು, ಇನ್ನೆಲ್ಲವೂ ಸರಿಹೋಗುತ್ತದೆ ಎಂದು ಕನಸಿದ್ದಳು ಹುಡುಗಿ. ತಾನೆಣಿಸಲಾರದ ದುರಂತವಾಯಿತು ಬದುಕು. ತನ್ನ ತಂದೆಯನ್ನು ಗಲ್ಲಿಗೇರಿಸಬೇಕೆಂದು ಚೀರಿದಳು ಬಸುರಿ ಹುಡುಗಿ. ಜನವರಿ 2019ರಲ್ಲಿ ಗಂಡುಮಗುವಿಗೆ ಜನ್ಮ ನೀಡಿದಳು ಅಮೃತ. ಪ್ರಣಯ್ ಅವರ ಕುಟುಂಬದ ಜೊತೆ ಅವರ ಮಗಳಾಗಿ ಜೀವನ ನಡೆಸುತ್ತಿದ್ದಾಳೆ. ಅವರ ಮನಸ್ಸು ನಿಜಕ್ಕೂ ದೊಡ್ಡದು.

ಈಗ ಜಾಮೀನಿನ ಮೇಲೆ ಹೊರಬಂದಿದ್ದ ಮಾರುತಿರಾವ್ ಹೈದರಾಬಾದಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದ ಅಮೃತ ಬಹುಶಃ ಅಪ್ಪನಿಗೆ ತಾನು ಮಾಡಿದ ತಪ್ಪಿನ ಅರಿವಾಗಿ ಪಶ್ಚಾತ್ತಾಪವಾಗಿ ಹೀಗೆ ಮಾಡಿಕೊಂಡಿರಬಹುದು ಎಂದವಳ ದನಿಯಲ್ಲಿ ದುಗುಡ, ಹತಾಶೆಯ ಜೊತೆ ಒಂದು ಸಣ್ಣ ಆಸೆಯೂ ಇದ್ದಂತಿತ್ತು. ಮಾರುತಿರಾವ್ ತನ್ನ ಜೀವನ ಅಂತ್ಯಗೊಳಿಸಿದ್ದು ಹೈದರಾಬಾದಿನ ಆರ್ಯವೈಶ್ಯ ಭವನದ ರೂಂ ನಂಬರ್ 306ರಲ್ಲಿ! ಆತ ಎರಡು ಸಾಲಿನ ಪತ್ರ ಬರೆದಿಟ್ಟು ಹೋಗಿದ್ದಾನೆ. “ಗಿರಿಜಾ ನನ್ನು ಕ್ಷಮಿಂಚು. ತಲ್ಲಿ ಅಮೃತ ಅಮ್ಮ ದೆಗ್ಗರಿಕಿ ವೆಳ್ಳಿಪೋ” – “ಗಿರಿಜಾ (ಆತನ ಪತ್ನಿ) ನನ್ನನ್ನು ಕ್ಷಮಿಸು. ತಾಯಿ ಅಮೃತ ಅಮ್ಮನ ಬಳಿ ಹೋಗಿಬಿಡು”. ಅಮೃತಳ ಆಸೆ ಹುಸಿಯಾಗಿತ್ತು. ಮಾರುತಿರಾವ್‍ಗೆ ಸಾಯುವಾಗಲೂ ಜಾತಿಯೇ ಮುಖ್ಯವಾಗಿತ್ತು, ಆತ ಸತ್ತದ್ದು ಆರ್ಯವೈಶ್ಯ ಭವನದಲ್ಲಿ ಮತ್ತು ಆ ಕಡೆಯ ಕ್ಷಣದಲ್ಲೂ ಆತನ ಮಗಳು ದಲಿತನೊಬ್ಬನ ಮನೆಯಲ್ಲಿರುವುದು ಆತನಿಗೆ ಸಹಿಸಿಕೊಳ್ಳಲಾಗಲಿಲ್ಲ!

(ತನ್ನ ಮಗುವಿನೊಂದಿಗೆ ಅಮೃತ ವರ್ಷಿನಿ)

ಮಾರುತಿರಾವ್‍ನ ಜಾತಿ ವ್ಯಾಮೋಹ ಮತ್ತು ಹಿಂಸೆಯ ಪ್ರತಿಫಲನ ಈ ದುರಂತ ಕಥೆಗೆ ಸಮಾಜ, ಮಾಧ್ಯಮ ಸ್ಪಂದಿಸಿದ ರೀತಿಯಲ್ಲೂ ಕಾಣಬಹುದು. ಬಹುತೇಕ ಟಿವಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಮೃತಳನ್ನು ವಿಲನ್ ಆಗಿ ಚಿತ್ರಿಸಲಾಗಿದೆ! ಟಿವಿ-9 ತೆಲುಗು ವಾಹಿನಿಯ ಪ್ರಮುಖ ಆಂಕರ್ ರಜನೀಕಾಂತ್ ವಲ್ಲೆಲಚೆರುವು ಟ್ವೀಟ್ ಮಾಡಿದ್ದಾರೆ: “ಆತನ ನೆಗೆಟಿವ್ ಗುಣಗಳನ್ನು ಪಕ್ಕಕ್ಕಿಟ್ಟರೆ, ಮಾರುತಿ ರಾವ್‍ಗೆ ಸಾಯಿಸೋ ಅಷ್ಟು ಮತ್ತು ಸತ್ತು ಹೋಗೋಷ್ಟು ಮಗಳ ಬಗ್ಗೆ ಪ್ರೀತಿ ಇತ್ತು”. ಸಾಮಾಜಿಕ ಮಾಧ್ಯಮಗಳಲ್ಲಿ ಇವತ್ತಲ್ಲ ಮಾರುತಿ ರಾವ್ ಪ್ರಣಯ್‍ನನ್ನು ಕೊಲ್ಲಿಸಿ ಜೈಲು ಸೇರಿದಾಗಲೇ ಆತನಿಗೆ ಅಭಿಮಾನಿ ಪೇಜುಗಳು ಹುಟ್ಟುಕೊಂಡಿದ್ದವು ಮತ್ತು ಇವರೆಲ್ಲರೂ ಆತನ ಮಗಳ ಮೇಲಿನ ಪ್ರೇಮವನ್ನೇ ಐಡಿಯಲೈಸ್ ಮಾಡುತ್ತಿದ್ದರು. ಆಗ ಇದು ಎಷ್ಟು ತಾರಕಕ್ಕೆ ಹೋಗಿತ್ತೆಂದರೆ ಅಮೃತ ತಂದೆ-ತಾಯಿಗಳು ಅವರ ಸುಖಕ್ಕೆ ಸೆಕ್ಸ್‍ನಲ್ಲಿ ಭಾಗವಹಿಸುವುದರಿಂದ ಮಕ್ಕಳಾಗುತ್ತಾರೆಯೇ ಹೊರತು ನಮ್ಮನ್ನು ಹುಟ್ಟಿಸಬೇಕೆಂದೇನೂ ಅಲ್ಲ ಅಂದಿದ್ದಳು ಮತ್ತು ಅದನ್ನು ಎಲ್ಲರೂ ಖಂಡಿಸಿ ದೊಡ್ಡ ರಾದ್ಧಾಂತ ಮಾಡಿದ್ದರು. ಮೊನ್ನೆ ಎಷ್ಟೇ ಆಗಲಿ ತಂದೆ ಅಲ್ಲವೇ ಅಮೃತ ಶವ ನೋಡಲು ಹೋದಾಗ ಜನ ಘೋಷಣೆ ಕೂಗಿ ಆಕೆಯನ್ನು ಹೊರದೂಡಿಬಿಟ್ಟರು. ಇವರೆಲ್ಲರ ಪ್ರಕಾರ ಇಡೀ ದುರಂತ ಕತೆಗೆ ಆಕೆಯೇ ಕಾರಣ! ತಂದೆತಾಯಿಯ ಪ್ರೀತಿಯನ್ನು ಮನಗಾಣದೆ, ತನ್ನ (ತೆಳು ಎಂದು ಅವರ ಭಾವನೆಯೆ?) ಪ್ರೀತಿಗೇ ಕಟ್ಟುಬಿದ್ದು ಇಡೀ ದುರಂತಕ್ಕೆ ಕಾರಣವಾಗಿಬಿಟ್ಟಳು ಎಂದು ಮಾಧ್ಯಮಗಳೂ ಹಲುಬುತ್ತಿರುವುದು ಅವರ ಜಾತಿ ಮನಸ್ಥಿತಿ ಮತ್ತು ಮುಸುಕಿಗೆ ಸ್ಪಷ್ಟ ನಿದರ್ಶನ.

ಮಾರುತಿರಾವ್‍ಗೆ ಪ್ರೀತಿ ಇದ್ದದ್ದು ತನ್ನ ಮಗಳ ಮೇಲೆಯೋ ಇಲ್ಲ ತನ್ನ ಜಾತಿ ಮತ್ತು ಅದರ ಸುತ್ತ ಆತ ಕಟ್ಟುಕೊಂಡಿದ್ದ ತಾನು ಮೇಲೆಂಬ ಹುಸಿ ಭಾವನೆಗಳಿಗೋ? ಆತ ನಿಜಕ್ಕೂ ಆತನ ಮಗಳನ್ನು ಮಾಧ್ಯಮಗಳು ಕಟ್ಟಿಕೊಡಲು ಪ್ರಯತ್ನಿಸುತ್ತಿರುವಂತೆ ಅನ್‍ಕಂಡೀಷನಲ್ ಆಗಿ ಪ್ರೀತಿಸುತ್ತಿದ್ದದ್ದೇ ನಿಜವಾದರೆ ಆಕೆಯ ಆಯ್ಕೆ ಮತ್ತು ಇಷ್ಟವನ್ನು ಗೌರವಿಸಿ ಆಕೆ ಖುಷಿಯಾಗಿರುವುದೇ ತನಗೆ ಮುಖ್ಯ ಎಂದಿರುತ್ತಿದ್ದ. ಬಸುರಿ ಮಗಳ ಮುಂದೆ ಆಕೆಯ ಗಂಡನನ್ನು ಕೊಚ್ಚಿ ಕೊಲೆಗೈಯ್ಯಿಸುತ್ತಿರಲಿಲ್ಲ. ಅದು ಮಗಳ ಮೇಲಿನ ಪ್ರೀತಿ ಅಲ್ಲ. ಅತ್ಯಂತ ಪಿತೃಪ್ರಧಾನ ರೀತಿಯಲ್ಲಿ ಆತ ಮಗಳನ್ನು ತನ್ನ ಸ್ವತ್ತು ಎಂದೇ ನೋಡಿದ್ದ. ಆತನ “ಕುಲಗೌರವ”ವನ್ನು ಆಕೆ ಹಾಳು ಮಾಡಿದಳೆಂದೆಣಿಸಿದ್ದ. ಆದರೆ ಮಗಳ ಮೇಲೆ ಕೋಪ ಬರಲಿಲ್ಲ. ಆಕೆಯನ್ನು ಈ ದಲಿತ ಹುಡುಗ ತಲೆಕೆಡಿಸಿದ್ದಾನೆ ಎಂದೆಣಿಸಿರಬೇಕು, ಆತನನ್ನು ಸಾಯಿಸಿಬಿಟ್ಟ. ಆತ ಮಗಳಿಗೆ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳಬಹುದೆಂದು ಅನ್ನಿಸಿರಲೇ ಇಲ್ಲ ಎನಿಸುತ್ತೆ. ಆಕೆಗೆ ತನ್ನ ಬಾಳಸಂಗಾತಿಯನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವೂ ಇಲ್ಲ ಮತ್ತು ಆಕೆ ಮಾಡಿದ ಆಯ್ಕೆ ಸರಿಯಾದುದಲ್ಲ, ಆಕೆಯನ್ನು ದಿಕ್ಕುತಪ್ಪಿಸಲಾಗಿದೆ ಎಂಬ ನಿರ್ಣಯಗಳು ಮಾರುತಿ ರಾವ್‍ನ ನಡವಳಿಕೆಗಳ ಹಿಂದೆ ಸ್ಪಷ್ಟವಾಗಿ ಕಾಣಿಸುತ್ತಿವೆ. ಅದು ಮಗಳ ಬಗೆಗಿನ ಆರೋಗ್ಯಕರ ಪ್ರೀತಿ ಖಂಡಿತ ಅಲ್ಲ, ಮೀರಲಾರದ ತನ್ನ ವ್ಯರ್ಥ, ಅರ್ಥವಿಲ್ಲದ ಜಾತಿ ಮತ್ತು ಪಿತೃಪ್ರಧಾನ ಗರ್ವ ಅಷ್ಟೆ.

ಮಾರಿ ಸೆಲ್ವರಾಜ್ ಅವರ ನಿರ್ದೇಶನದ ಪರಿಯೆರುಂ ಪೆರುಮಾಳ್ ಚಿತ್ರದಲ್ಲಿ ಒಂದು ವಿಲಕ್ಷಣ ಪಾತ್ರವಿದೆ. ಮೇಲ್ಜಾತಿಯ ಮಕ್ಕಳನ್ನು ಪ್ರೀತಿಸುವ ಕೆಳಜಾತಿಯವರನ್ನು ಸಾಕ್ಷಿ ಉಳಿಯದೆ ಕೊಲ್ಲುವ ಮುದುಕನ ಪಾತ್ರ. ಚಿತ್ರದುದ್ದಕ್ಕೂ ಆತ ಅನೇಕರನ್ನು ಹೀಗೆ ಕೊಲ್ಲುತ್ತಾನೆ, “ಕುಲಗೌರವರ”ದ ಹೆಸರಿನಲ್ಲಿ. ಚಿತ್ರದ ನಾಯಕ ಪೆರುಮಾಳ್ ದಲಿತ, ಮೇಲ್ಜಾತಿಯ ಹುಡುಗಿಯನ್ನು ಪ್ರೀತಿಸುತ್ತಿದ್ದಾನೆ. ಆ ಹುಡುಗಿಯ ಸೋದರ ಸಂಬಂಧಿ ಮತ್ತು ಇಬ್ಬರೂ ಪ್ರೇಮಿಗಳ ಸಹಪಾಠಿ ಮತ್ತು ಹುಡುಗಿಯ ತಂದೆ ಇದೇ ಮುದುಕನಿಗೆ ಪೆರುಮಾಳ್‍ನನ್ನು ಕೊಲ್ಲಲು ಸುಪಾರಿ ನೀಡುತ್ತಾರೆ. ಈ ಮುದುಕ ಪೆರುಮಾಳ್‍ಗೆ ಪರಿಚಿತನೇ. ಆತನ ಸೈಕಲ್‍ನಲ್ಲೇ ಡ್ರಾಪ್ ಕೇಳಿ ಹತ್ತಿಕೊಳ್ಳುತ್ತಾನೆ. ಕಡೆಗೆ ಆತನನ್ನು ರೈಲ್ವೆಹಳಿಗಳ ಮೇಲೆ ನೂಕಿ ರೈಲಿಗೆ ತಲೆಕೊಡಿಸಿ ಕೊಲ್ಲಲೆತ್ನಿಸುತ್ತಾನೆ. ಪೆರುಮಾಳ್ ಮೊದಲ ಬಾರಿಗೆ ತಿರುಗಿ ಬಿದ್ದು ಮುದುಕ ಮತ್ತು ತನ್ನ ಸಹಪಾಠಿಗೆ ಹೊಡೆಯುತಾನೆ. ಅಷ್ಟರಲ್ಲಿ ಹುಡುಗಿಯ ತಂದೆ ಅಲ್ಲಿಗೆ ಕಾರಿನಲ್ಲಿ ಬರುತ್ತಾನೆ. ಒಂದು ಶಾಟ್‍ನಲ್ಲಿ ಕಾರೊಳಗೆ ಕೂತ ತಂದೆ, ಡಾಶ್‍ಬೋರ್ಡ್‍ನಲ್ಲಿರುವ ಮಚ್ಚು ಮತ್ತು ಹೊರಗೆ ನಿಂತಿರುವ ಪೆರುಮಾಳ್ ಇದ್ದಾರೆ. ತಂದೆ ಮಚ್ಚಿಗೆ ಕೈಹಾಕುವುದಿಲ್ಲ. ಮುದುಕ ಸೋತಿದ್ದಾನೆ, ರೈಲಿಗೆ ಎದುರು ಕೂತು ತಾನೇ ಸಾಯುತ್ತಾನೆ. ಆ ಮುದುಕ ಜಾತಿಯ ವೃಥಾ ಗರ್ವ ಮತ್ತು ಅದ ಸ್ಥಾಪಿಸಲು ಹಿಂಸೆಗೆ ಹಪಹಪಿಸುವ ಮನಸ್ಸು.

ಆದರೆ ಇವತ್ತು ಅದೇ ತಮಿಳುನಾಡಿನಲ್ಲಿ ದ್ರೌಪದಿ ಎಂಬ ಚಲನಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ದಲಿತ ಹುಡುಗರು “ಲವ್ ಜಿಹಾದ್”ನ ಮಾದರಿಯಲ್ಲಿ ಮೇಲ್ಜಾತಿಗಳ ಹೆಣ್ಣುಮಕ್ಕಳನ್ನು ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮದುವೆ ಆಗುತ್ತಿದ್ದಾರೆ ಎಂಬಂತಹ ಕಥಾಹಂದರವಿದೆ. ಅದು ಹೇಗೆ ಈ ಚಿತ್ರ ಸೆನ್ಸಾರ್ ಆಗಿ ಬಿಡುಗಡೆಯಾಯಿತೋ ದೇವರೇ ಬಲ್ಲ. ಜಾತ್ಯಹಂಕಾರಗಳ ರುದ್ರನರ್ತನ ಇನ್ನೂ ನಡೆದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...